ಆದಿಚುಂಚನಗಿರಿ
ವಿಕಿಪೀಡಿಯ ಇಂದ
ಆದಿಚುಂಚನಗಿರಿಯು ಒಂದು ಪುಣ್ಯಕ್ಷೇತ್ರವಾಗಿದ್ದು ಇದನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಎಂದೂ ಕರೆಯುತ್ತಾರೆ. ಇದು ಒಕ್ಕಲಿಗ ಸಮುದಾಯದ ಮಠವಾಗಿದ್ದು ಕರ್ನಾಟಕದ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿದೆ. ಇದು ಬೆಂಗಳೂರಿನಿಂದ ೧೧೦ ಕಿಲೋಮೀಟರ್ ದೂರದಲ್ಲಿದೆ.
ಗಂಗಾಧರೇಶ್ವರನು ಇಲ್ಲಿಯ ಅಧಿದೇವತೆ. ಕಾಲಭೈರವೇಶ್ವರನು ಇಲ್ಲಿಯ ಕ್ಷೇತ್ರಪಾಲಕನು.
ಮಠವು ಒಂದು ಬೆಟ್ಟದ ಮೇಲೆ ಇದ್ದು ಬೆಟ್ಟದ ಶಿಖರವನ್ನು ಆಕಾಶಭೈರವ ಎನ್ನುತ್ತಾರೆ. ಇಲ್ಲಿರುವ ಪವಿತ್ರ ಹೊಂಡವನ್ನು ಬಿಂದುಸರೋವರ ಎಂದು ಕರೆಯುತ್ತಾರೆ.
ಜಗದ್ಗುರುಗಳಾದ ಬಾಲಗಂಗಾಧರನಾಥ ಸ್ವಾಮೀಜಿಯವರು ಈಗ ಮಠದ ಮುಖ್ಯಸ್ಥರಾಗಿದ್ದಾರೆ.
ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅನೇಕ ಸಂಸ್ಥೆಗಳನ್ನು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಡೆಸುತ್ತಿದೆ.