ಈಸ್ಟರ್
ಈಸ್ಟರ್ ಭಾನುವಾರದಂದು ಈಸ್ಟರ್ ಆಚರಿಸಲಾಗುತ್ತದೆ.ಈಸ್ಟರ್ ಕ್ರೈಸ್ತಧರ್ಮೀಯರ ಹಬ್ಬ.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಈಸ್ಟರ್ ಕುರಿತು ತಿಳಿಯುವುದಕ್ಕೂ ಮುನ್ನ ತಿಳಿಯಬೇಕಾದ ಮತ್ತೊಂದು ಮುಖ್ಯವಾದ ದಿನವೆಂದರೆ ಗುಡ್ ಫ್ರೈಡೆ. ಗುಡ್ ಫ್ರೈಡೆ : ಈಸ್ಟರ್ ಹಬ್ಬಕ್ಕೂ ಮುಂಚೆ ಬರುವ ಗುಡ್ ಫ್ರೈಡೆ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬರಿಗೂ ಅನ್ವಯಿಸುವಂಥದ್ದು. ಕಾರಣ ಹಿಂದಿನಿಂದಲೂ ಪಾಪಪ್ರಾಯಶ್ಚಿ ತ್ತಕ್ಕಾಗಿ ಒಂದು ಪ್ರಾಣಿಯನ್ನು ಬಲಿ ಕೊಡುವ ಪದ್ಧತಿ ಇಸ್ರೇಲ್ ಜನಾಂಗದಲ್ಲಿ ರೂಢಿಯಲ್ಲಿತ್ತು. ಆದರೆ ಮಾನವನ ಪಾಪಗಳಿಗೆ ಕೇವಲ ಒಂದು ಪ್ರಾಣಿಯ ರಕ್ತ ಮಾತ್ರ ಸಾಲದು. ಅದಕ್ಕೆ ಪರಿಶುದ್ಧವಾದ ರಕ್ತ ಸುರಿಯಬೇಕಿತ್ತು. ಅದೇ ತಂದೆಯಾದ ದೇವರ ಚಿತ್ತವಾಗಿತ್ತು. ಹಾಗೆ ತಂದೆಯ ಚಿತ್ತವನ್ನು ನೆರವೇರಿಸಲೆಂದೇ ದೇವರ ಒಬ್ಬನೇ ಮಗನಾದ ಯೇಸುಕ್ರಿಸ್ತನು ಭೂಮಿಗೆ ಮನುಷ್ಯಕುಮಾರನಾಗಿ ಬಂದನು. ತಂದೆಯಾದ ದೇವರ ಚಿತ್ತವನ್ನು ನೆರವೇರಿಸಲೆಂದೇ ತನ್ನ ಪರಿಶುದ್ಧವಾದ ರಕ್ತವನ್ನು ಕಲ್ವಾರಿ ಶಿಲುಬೆಯಲ್ಲಿ ಸುರಿಸಿ ತನ್ನನ್ನು ಮರಣಕ್ಕೆ ಒಪ್ಪಿಸಿದನು. ಅಂದು ನಡೆದ ಈ ಕಾರ್ಯದಿಂದ ಮನುಷ್ಯ ಪಾಪದಿಂದ ವಿಮೋಚನೆ ಹೊಂದಿದ್ದಾನೆ. ಅಂದರೆ ಯಾರಾರು ಯೇಸು ಮಾಡಿದ ಈ ವಿಶೇಷ ಕಾರ್ಯವನ್ನು ನಂಬುತ್ತಾರೋ ಅವರೆಲ್ಲರೂ ಪಾಪಗಳಿಂದ ವಿಮೋಚಿಸಲ್ಪಟ್ಟು ದೇವರಿಗೆ ಮಕ್ಕಳಾಗುವ ಅಧಿಕಾರವನ್ನು ಯೇಸುಕ್ರಿಸ್ತನು ಕೊಟ್ಟಿದ್ದಾನೆ. ನಿಜವಾಗಿ ಆತನು ಶಿಲುಬೆಗೆ ಏರಿಸಲ್ಪಟ್ಟಿದ್ದರಿಂದಲೇ ಮನುಷ್ಯರ ಪಾಪವಿಮೋಚನೆಯಾಯಿತು. ಆದ್ದರಿಂದಲೇ ಈ ದಿನವನ್ನು ಗುಡ್ ಫ್ರೈಡೆ (ಶುಭ ಶುಕ್ರವಾರ) ಎನ್ನಲಾಗಿದೆ.
ಈಸ್ಟರ್ ಹಬ್ಬ ದ ವಿಶೇಷತೆ : ತಂದೆಯಾದ ದೇವರ ಒಬ್ಬನೇ ಮಗನಾದ ಯೇಸು ಕ್ರಿಸ್ತನು ಮನುಷ್ಯರೊಂದಿಗೆ ಸದಾ ಕಾಲ ಜೀವಿಸುವುದಕ್ಕಾಗಿ ಪುನರುತ್ಥಾನ ಹೊಂದಿ ಬಂದ ದಿನವಾಗಿದೆ. ದೇವರಾದ ಯೇಸು ಕ್ರಿಸ್ತನನ್ನು ಶಿಲುಬೆಗೆ ಹಾಕಿದ ದಿನ ದೇಹವನ್ನು ಗುಹೆಯಲ್ಲಿ ನಿರ್ಮಿಸಿದ ಸಮಾಧಿಯಲ್ಲಿರಿಸಲಾಗಿತ್ತು, ಆದರೆ ಇಂದು ಖಾಲಿ ಸಮಾಧಿಯನ್ನು ಕಾಣಬಹುದು ಕಾರಣ ಯೇಸು ಮರಣವನ್ನು ಜಯಿಸಿ ಎದ್ದುಬಂದ ಯೂದಾ ರಾಜಸಿಂಹ. ಮರಣವು ಯೇಸುಕ್ರಿಸ್ತನನ್ನು ಕೊಲ್ಲಲಿಲ್ಲ, ಬದಲಾಗಿ ಯೇಸುಕ್ರಿಸ್ತನು ಮರಣವನ್ನು ಕೊಂದನು. ಅಂದರೆ ಮೂರು ದಿನಗಳ ಕಾಲ ಸಮಾಧಿಯಲ್ಲಿದ್ದ ಯೇಸುಕ್ರಿಸ್ತನು ತನ್ನ ತಂದೆಯಾದ ದೇವರ ಪ್ರಭಾವದಿಂದ ಎದ್ದುಬಂದನು. ಏಕೆಂದರೆ ಯೇಸುಕ್ರಿಸ್ತನ ದೇಹವನ್ನು ತಂದೆಯಾದ ದೇವರು ಪರಲೋಕದಲ್ಲಿಯೇ ಉಂಟು ಮಾಡಿದ್ದನು ಹಾಗೂ ಲೋಕಪಾಪಗಳನ್ನು ಹೊತ್ತುಕೊಂಡು ಹೋಗುವ ದೇವರ ಕುರಿಮರಿಯನ್ನಾಗಿ ಭೂಮಿಗೆ ಕಳುಹಿಸಿದ್ದನು. ಯೇಸುಕ್ರಿಸ್ತನು ತಂದೆ ವಹಿಸಿದ ಕಾರ್ಯವನ್ನು ಶಿಲುಬೆಯಲ್ಲಿ ಸಂಪೂರ್ಣ ಮಾಡಿದ ನಂತರ ಲೋಕಪಾಪವನ್ನು ತನ್ನೊಂದಿಗೆ ಸಮಾಧಿ ಮಾಡಿ ಪುನರುತ್ಥಾನ ಶಕ್ತಿಯೊಂದಿಗೆ ಎದ್ದು ಬಂದನು. ಯಾರಾರು ಈ ಸಂಗತಿಗಳನ್ನು ಹೃದಯದಲ್ಲಿ ನಂಬಿ ಯೇಸುಕ್ರಿಸ್ತನನ್ನು ಅಂಗೀಕರಿಸುತ್ತಾರೋ ಅವರೇ ದೇವರ ಮಕ್ಕಳು. ಅವರನ್ನೇ ನಿಜವಾದ ಅರ್ಥದಲ್ಲಿ ಕ್ರೈಸ್ತವರು ಎನ್ನಲಾಗುತ್ತದೆ.