ಕನ್ನಡ ಸಾಹಿತ್ಯ ಪರಿಷತ್ತು

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಕನ್ನಡ ಸಾಹಿತ್ಯ ಪರಿಷತ್ತು
ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು
ವಿಳಾಸ: ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು - ೫೬೦೦೧೮
ಫೋನ್: +೯೧ ೦೮೦ ೨೬೬೧೨೯೯೧ (+91 080 26612991)
ಈಗಿನ ಅಧ್ಯಕ್ಷರು: ಡಾ. ನಲ್ಲೂರು ಪ್ರಸಾದ್

ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ. ಕನ್ನಡ ಸಾಹಿತ್ಯವನ್ನು ನಾಡಿನ ಮೂಲೆ ಮೂಲೆಗಳಲ್ಲಿ ಹಬ್ಬಿಸಲು ಈ ಹಿಂದೆ ಸಾಧ್ಯವಾಗಿಸಿದೆ.

ಈ ಸಂಸ್ಥೆಯ ಈಗಿನ ಅಧ್ಯಕ್ಷರಾಗಿ ನಲ್ಲೂರು ಪ್ರಸಾದರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಪರಿವಿಡಿ

[ಬದಲಾಯಿಸಿ] ಕನ್ನಡ ಸಾಹಿತ್ಯ ಸಮ್ಮೇಳನಗಳು

[ಬದಲಾಯಿಸಿ] ಪರೀಕ್ಷೆಗಳು

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಕೆಲವು ಪರೀಕ್ಷೆಗಳನ್ನ ನಡೆಸುತ್ತದೆ. ಕನ್ನಡ ಓದಬಯಸುವ ಕನ್ನಡಿಗರಿಗೆ ಕನ್ನಡ 'ಕಾವ', 'ಜಾಣ' ಮುಂತಾದ ಪರೀಕ್ಷೆಗಳನ್ನು ಪ್ರತಿ ವರ್ಷ ನಡೆಸುತ್ತದೆ.

[ಬದಲಾಯಿಸಿ] ವೆಬ್‌ಸೈಟ್‌ಗೆ ಚಾಲನೆ

ಕನ್ನಡ ಸಾಹಿತ್ಯ ಪರಿಷತ್ ತನ್ನ ಅಧಿಕೃತ ವೆಬ್‌ಸೈಟ್ ಸಿದ್ಧಪಡಿಸಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಮನು ಬಳಿಗಾರ್ ಅವರು ಸೋಮವಾರ ವೆಬ್‌ಸೈಟ್‌ಗೆ ಚಾಲನೆ ನೀಡಿದರು. ಈ ವೆಬ್‌ಸೈಟ್‌ನಲ್ಲಿ ಸಾಹಿತ್ಯ ಸಮ್ಮೇಳನದ ವಿವರಗಳೇ ಅಲ್ಲದೆ, ಎಲ್ಲ ಸಾಹಿತಿಗಳ ಮಾಹಿತಿ ಇರಲಿದೆ. ವೆಬ್‌ಸೈಟ್ ವಿಳಾಸ: kasapa.kar.nic.in

[ಬದಲಾಯಿಸಿ] ಹೊರಗಿನ ಸಂಪರ್ಕಗಳು

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು