ಕುಣಿಗಲ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಕುಣಿಗಲ್
India-locator-map-blank.svg
Red pog.svg
ಕುಣಿಗಲ್
ರಾಜ್ಯ
 - ಜಿಲ್ಲೆ
ಕರ್ನಾಟಕ
 - ತುಮಕೂರು
ನಿರ್ದೇಶಾಂಕಗಳು 13.02° N 77.03° E
ವಿಸ್ತಾರ
 - ಎತ್ತರ
 km²
 - 773 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (೨೦೦೧)
 - ಸಾಂದ್ರತೆ
30,291
 - /ಚದರ ಕಿ.ಮಿ.
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - 572130
 - +91-8132
 - KA-06

ಕುಣಿಗಲ್ ತುಮಕೂರು ಜಿಲ್ಲೆಯ ಒಂದು ತಾಲೂಕು ಕೇಂದ್ರ. ಬೆಂಗಳೂರಿನಿಂದ ಪಶ್ಚಿಮಕ್ಕೆ ೭೦ ಕಿಮೀ. ದೂರದಲ್ಲಿದೆ. ಇಲ್ಲಿ ಇರುವ ದೊಡ್ಡ ಕೆರೆಯು ಪ್ರಖ್ಯಾತವಾಗಿದೆ.

ಇತಿಹಾಸ [ಬದಲಾಯಿಸಿ]

ಕುಣಿಗಲ್ ತಾಲ್ಲೂಕಿನ ಇತಿಹಾಸವನ್ನು ಗಮನಿಸಿದಾಗ ಶಿಲಾಯುಗದ ನೆಲೆಗಳನ್ನು ಸಹ ನಾವು ಕಾಣಬಹುದಾಗಿದೆ.ಹುಲಿಯೂರುದುರ್ಗದ ಹೇಮಗಿರಿ ತಪ್ಪಲು,ತಿಪ್ಪಸಂದ್ರಗಳಲ್ಲಿ ಶಿಲಾಯುಗದ ಅವಶೇಷಗಳು ಕಾಣಬರುತ್ತವೆ. ಕುಣಿಗಲ್ ನಾಡಿನ ಕೆಲ ಭಾಗ ಕದಂಬರ ಆಳ್ವಿಕೆಗೂ ಸೇರಿರಬಹುದಾದ ಸಾಧ್ಯತೆಯನ್ನು ಎಸ್..ಶ್ರೀಕಂಠಶಾಸ್ತ್ರಿಯವರು ದಾಖಲಿಸಿದ್ದಾರೆ.ನಮಗೆ ನೇರವಾಗಿ ಆಳಿದಬಗ್ಗೆ ನಿಖರ ದಾಖಲೆಗಳು ಕಂಡುಬರುವುದು ಗಂಗರ ಕಾಲದಿಂದ. ಗಂಗಾವಾಡಿ ೯೬೦೦೦ ಕ್ಕೆ ಒಳಪಡುವ ಪ್ರದೇಶದಲ್ಲಿ ಕುಣಿಗಲ್ ಸಹ ಇದೆ.ಗಂಗರ ಪ್ರಸಿದ್ಧನಾದ ದೊರೆ ಶ್ರೀಪುರುಷನು (ಕ್ರಿ.ಶ.೭೨೫-೭೮೮)ಕುಣಿಗಲ್ಲಿನ ಐತಿಹಾಸಿಕ ಪ್ರಸಿದ್ಧ ಕೆರೆ ದೊಡ್ಡಕೆರೆಯನ್ನು ಕ್ರಿ.ಶ.೮ನೇ ಶತಮಾನದ ಕೊನೆಯ ಭಾಗದಲ್ಲಿ ನಿರ್ಮಿಸಿದ ಬಗ್ಗೆ ನಂತರದ ಶಾಸನವೊಂದು ಉಲ್ಲೇಖಿಸುತ್ತದೆ.ಗಂಗರು ರಾಷ್ಟ್ರಕೂಟರಿಗೆ ಸೋತ ನಂತರ ಚಾಲುಕ್ಯ ಮಾಂಧಾತ ಎಂಬ ಸಾಮಂತನು ಕುಣಿಗಲ್ಲನ್ನು ಆಳುತ್ತಿದ್ದನು. ಆಗ ದೊಡ್ಡಕೆರೆಯು ಒಡೆದು ಹೋದಾಗ ಕ್ರಿ.ಶ.೯೬೩ರ ಸುಮಾರಿನಲ್ಲಿ ದುರಸ್ತಿ ಮಾಡಿಸುತ್ತಾನೆ. ನಂತರ ಬಂದ ರಾಷ್ಟ್ರಕೂಟ ಕಂಭರಾಯ ಎಂಬುವವನು ಕುಣಿಗಲ್ಲಿನಲ್ಲಿ ಒಂದು ಕೋಟೆಯನ್ನು ಸುಮಾರು ಕ್ರಿ.ಶ.೯೮೯ರಲ್ಲಿ ನಿರ್ಮಿಸುತ್ತಾನೆ.ಗಂಗರ ಹಾಗೂ ರಾಷ್ಟ್ರಕೂಟರ ಪತನಾನಂತರ ಕುಣಿಗಲ್ ಚೋಳರ ಆಳ್ವಿಕೆಗೆ ಒಳಪಡುತ್ತದೆ. 'ರಾಜೇಂದ್ರ ಚೋಳಪುರಂ' ಎಂದು ಕುಣಿಗಲ್ಲನ್ನು ಶಾಸನಗಳಲ್ಲಿ ಕರೆದಿದೆ. ನಂತರ ಕುಣಿಗಲ್ ಹೊಯ್ಸಳರ ಆಳ್ವಿಕೆಗೆ ಒಳಪಡುತ್ತದೆ. ಇವರ ಕಾಲದ ಸೋಮೇಶ್ವರ ದೇವಾಲಯ ಕೆರೆಯ ಏರಿಯ ಮೇಲೆ ಇರುವುದನ್ನು ಕಾಣಬಹುದು. ಹೊಯ್ಸಳರ ನಂತರ ವಿಜಯನಗರದ ಅರಸರ ಆಳ್ವಿಕೆಗೆ ಕುಣಿಗಲ್ ಒಳಪಟ್ಟ ಬಗ್ಗೆ ಶಾಸನಗಳಿಂದ ತಿಳಿಯಬಹುದು. ಬುಕ್ಕರಾಯನು ಕ್ರಿ.ಶ.೧೩೬೯ರ ಸುಮಾರಿನಲ್ಲಿ ಕುಣಿಗಲ್ ದೊಡ್ಡ ಕೆರೆಗೆ ಒಂದು ತೂಬನ್ನು ಮಾಡಿಸಿ ಶಾಸನವನ್ನು ಹಾಕಿಸಿದ್ದಾನೆ. ವಿಜಯನಗರದ ಸಾಮಂತನಾಗಿದ್ದ ತಮ್ಮೇಗೌಡನೆಂಬ ಸಾಮಂತನು ಕುಣಿಗಲ್ಲನ್ನು ಆಳಿದ ಬಗ್ಗೆ ಜಾನಪದ ಸಾಹಿತ್ಯದಿಂದ ತಿಳಿದುಬರುತ್ತದೆ. ನಂತರ ಇಮ್ಮಡಿ ಕೆಂಪೇಗೌಡ ಮತ್ತು ಮುಮ್ಮಡಿ ಕೆಂಪೇಗೌಡರ ಆಳ್ವಿಕೆಗೆ ಒಳಪಟ್ಟ ಬಗ್ಗೆ ತಿಳಿಯುತ್ತದೆ. ಹುಲಿಯೂರಿನಲ್ಲಿ ಕೆಂಪೇಗೌಡನು ಕ್ರಿ.ಶ.೧೫೮೦ರ ಸುಮಾರಿನಲ್ಲಿ ದುರ್ಗವನ್ನು ಕಟ್ಟುವ ಮೂಲಕ ಅದು ಹುಲಿಯೂರು ದುರ್ಗ ಎಂದಾಯಿತು. ಅದೇ ವೇಳೆಗೆ ಹುತ್ರಿದುರ್ಗದಲ್ಲಿ ಸಹ ಕೋಟೆಯೊಂದನ್ನು ನಿರ್ಮಿಸಿದರು.ಹೀಗಾಗಿ ಕೆಂಪೇಗೌಡನ ಆಳ್ವಿಕೆಗೆ ಈ ಪ್ರದೇಶ ಸೇರಿದ್ದ ಬಗ್ಗೆ ತಿಳಿಯುತ್ತದೆ. ಹಂದಲಗೆರೆ (ತಾವರೆಕೆರೆ ಪಂಚಾಯ್ತಿ)ಗ್ರಾಮದಲ್ಲಿನ ಅಪ್ರಕಟಿತ ಶಾಸನವೊಂದರಲ್ಲಿ (ಕಾಲ ಕ್ರಿ.ಶ.೧೬೬೩) ದತ್ತಿಯನ್ನು ಬಿಟ್ಟ ಬಗ್ಗೆ ತಿಳಿಯಬಹುದಾಗಿದೆ. ಶಾಸನ ಸಾಕಷ್ಟು ತೃಟಿತಗೊಂಡಿರುವುದರಿಂದ ಅದನ್ನು ಓದಲಾಗಿಲ್ಲ. ಕೆಂಪೇಗೌಡನ ನಾಟಕ ಶಾಲೆಯ ಶೃಂಗಾರಮ್ಮನು ಹುಲಿಯೂರುದುರ್ಗದ ಪಕ್ಕದಲ್ಲಿ 'ಶೃಂಗಾರ ಸಾಗರ' ಎಂಬ ಕೆರೆಯನ್ನು, ಅಗ್ರಹಾರವನ್ನು ನಿರ್ಮಿಸಿದ ಬಗ್ಗೆ ಶಾಸನಗಳು ತಿಳಿಸುತ್ತವೆ. ೧೬ನೇಶತಮಾನದಲ್ಲಿ ಎಡೆಯೂರಿನಲ್ಲಿ ಸಿದ್ಧಲಿಂಗೇಶ್ವರ ಯತಿಯು ಪವಾಡ ಮೆರೆದು ಕಗ್ಗೆರೆಯಲ್ಲಿ ಶಿವೈಕ್ಯವಾದ ಬಗ್ಗೆ ಐತಿಹ್ಯವಿದೆ.ನಂತರ ಮೈಸೂರಿನ ಓಡೆಯರ್ ಹಾಗೂ ಹೈದರ್, ಟಿಪ್ಪು ಸಹ ಆಳಿದರು. ಇಲ್ಲಿನ ಅಶ್ವ ವರ್ಧನ ಶಾಲೆ(ಸ್ಟಡ್ ಫಾರ್ಮ್)ಯನ್ನು ಹೈದರ್ ಸ್ಥಾಪಿಸಿದನು.

ಕುಣಿಗಲ್ ಕೆರೆ [ಬದಲಾಯಿಸಿ]


"ಮೂಡಲ್ ಕುಣಿಗಲ್ ಕೆರೆ ನೋಡೋರ್ಗೊಂದೈಬೋಗ ಮೂಡಿ ಬರ್ತಾನೆ ಚಂದಿರಾಮ" ಎಂಬ ಜನಪದ ಗೀತೆ ಕುಣಿಗಲ್ ದೊಡ್ಡ ಕೆರೆಯನ್ನು ಕುರಿತದ್ದಾಗಿದೆ. ಈ ಕೆರೆಯು ೧೫ ಮೈಲಿ ಸುತ್ತಳತೆಯುಳ್ಳದ್ದಾಗಿದ್ದು ಇತ್ತೀಚೆಗೆ ಹೇಮಾವತಿ ಜಲಾಶಯದಿಂದ ನೀರನ್ನು ಹರಿಸಲಾಗುತ್ತಿದೆ. ಕೆರೆಯ ಏರಿಯ ಮೇಲೆ ಹೊಯ್ಸಳರ ಕಾಲದ ಪ್ರಾಚೀನ ಸೋಮೇಶ್ವರ ದೇವಾಲಯವಿದೆ.

ಹುತ್ರಿದುರ್ಗ ಬೆಟ್ಟ, ಮತ್ತು ಮಾಗಡಿ ಕೇಂಪೇಗೌಡರು ಕಟ್ಟಿರುವ ಕೊಟ್ಟೆ ಕೊತ್ತಲುಗಳು:

ಕಲ್ಲುದೇವನಹಳ್ಳಿಯ ಅಂಜನೇಯ ಸ್ವಾಮಿ ದೇವಸ್ಥಾನ, ಕೊಲ್ಲಾಪುರದಮ್ಮ ಮತ್ತು ಸಲ್ಲಾಪುರದಮ್ಮ ದೇವಸ್ಥಾನ, ಗಿಡದಕೆಂಚನಹಳ್ಳಿ, ಹುತ್ರಿದುರ್ಗ ಬೆಟ್ಟದಲ್ಲಿ, ಪಾತಾಳ ಗಂಗೆ, ಈ ಬೆಟ್ಟದಿಂದ ಶಿವಗಂಗೆ ಬೆಟ್ಟಕ್ಕೆ ಸುರಂಗ ಮಾರ್ಗ, ಆದಿ ಹನುಮಂತರಾಯ ಸ್ವಾಮಿಯ ದೇವಸ್ಥಾನ, ಮತ್ತು ಕೆರೆ ಕಾಡಪ್ಪ ನವರ ಮಠ, ಶ್ರೀ ಉರಿಗದ್ದಿಗೇಶ್ವರ ಗ್ರಾಮಾಂತರ ವಸತಿ ಶಾಲೆ ಮತ್ತು ಸಂಸ್ಕೃತ ಶಾಲೆ, ಪದವಿ ಪೂರ್ವ ಕಾಲೇಜು, ಹುತ್ರಿದುರ್ಗ ಬೆಟ್ಟದ ಸುತ್ತಲ್ಲಿರುವ ಗ್ರಾಮಗಳು, ಪೂರ್ವಕ್ಕೆ: ಹೊಢಾಘಟ್ಟ, ಪಶ್ಚಿಮಕ್ಕೆ: ಸಂತೆಪೇಟೆ ಉತ್ತರಕ್ಕೆ: ಹಾಲುವಾಗಿಲು ಮತ್ತು ಕತ್ತರಿಘಟ್ಟ ದಕ್ಷಿಣಕ್ಕೆ: ಬೆಟ್ಟಹಳ್ಳಿ ಮಠ ಮತ್ತು ಗುಳ್ಳಳ್ಳಿಪುರ ಮತ್ತು ಹೊಸಹಳ್ಳಿ

"http://kn.wikipedia.org/w/index.php?title=ಕುಣಿಗಲ್&oldid=330666" ಇಂದ ಪಡೆಯಲ್ಪಟ್ಟಿದೆ