ಕುವೆಂಪು

Wikipedia ಇಂದ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ*
Kuvempu.jpg
ಶ್ರೀ ಪುಟ್ಟಪ್ಪನವರು
ಕಾವ್ಯನಾಮ(ಗಳು): ಕುವೆಂಪು
ಜನನ: ೧೯೦೪*
ಕುಪ್ಪಳ್ಳಿ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ
ನಿಧನ: ೧೯೯೪
ಮೈಸೂರು
ವೃತ್ತಿ: ಲೇಖಕ, ಪ್ರಾಧ್ಯಾಪಕ, ಕುಲಪತಿ*
ರಾಷ್ಟ್ರೀಯತೆ: ಭಾರತೀಯ
ಬರವಣಿಗೆಯ ಕಾಲ: (ಮೊದಲ ಪ್ರಕಟಣೆಯಿಂದ ಕೊನೆಯ ಪ್ರಕಟನೆಯ ಕಾಲ)
ಸಾಹಿತ್ಯದ ವಿಧ(ಗಳು): ಕಥೆ, ಕವನ, ಕಾದಂಬರಿ
ವಿಷಯಗಳು: ಕರ್ನಾಟಕ, ರಾಮಾಯಣ, ಜೀವನ, ಶಿವಮೊಗ್ಗ
ಸಾಹಿತ್ಯ ಶೈಲಿ: ಬಂಡಾಯ, ನವೋದಯ
ಪ್ರಥಮ ಕೃತಿ: (ಮೊದಲ ಪ್ರಕಟಿತ ಕೃತಿ/ಗಳು)
ಪ್ರಭಾವಗಳು: ಕಾರ್ಲ್ ಮಾರ್ಕ್ಸ್, ಕುಮಾರವ್ಯಾಸ, ವರ್ಡ್ಸ್ ವರ್ತ್,ರಾಮಕೃಷ್ಣ ಪರಮಹಂಸ
ಅಂತರ್ಜಾಲ ತಾಣ: http://www.kuvempu.com/
(ಇತರ ವಿಷಯಗಳು)

ಕುವೆಂಪು - ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (೧೯೦೪ - ೧೯೯೪) - ಕನ್ನಡವು ಪಡೆದ ಅತ್ಯುತ್ತಮ ಕವಿ, 'ರಾಷ್ಟ್ರಕವಿ'. ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದ ಪ್ರಥಮ ವ್ಯಕ್ತಿ. 'ವಿಶ್ವ ಮಾನವ'. ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ.


ಪರಿವಿಡಿ

[ಬದಲಾಯಿಸಿ] ಜೀವನ

ಡಿಸೆಂಬರ್ ೨೯, ೧೯೦೪, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆಯಲ್ಲಿ ಜನಿಸಿದ ಇವರು, ಕುಪ್ಪಳ್ಳಿ (ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು) ಹಾಗೂ ಮೈಸೂರಿನಲ್ಲಿ ಬೆಳೆದರು. ಮೈಸೂರಿನ 'ಮಹಾರಾಜಾ' ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪಕುಲಪತಿಯಾಗಿ ನಿವೃತ್ತರಾದರು.ಇವರು ಮೈಸೂರಿನ ಒಂಟಿಕೊಪ್ಪಲುವಿನಲ್ಲಿರುವ "ಉದಯರವಿ"ಯಲ್ಲಿ ವಾಸಿಸುತ್ತಿದ್ದರು. ಇವರ ಹೆಂಡತಿಯ ಹೆಸರು ಹೇಮಾವತಿ ಮತ್ತು ಇವರಿಗೆ ನಾಲ್ಕು ಜನ ಮಕ್ಕಳು(ಪೂರ್ಣಚಂದ್ರ ತೇಜಸ್ವಿ, ಕುಕೀಲೋದಯ ಚೈತ್ರ, ಇಂದುಕಲಾ, ತಾರಿಣಿ ಚಿದಾನಂದ).

[ಬದಲಾಯಿಸಿ] ಸಂದೇಶ

ಓ ನನ್ನ ಚೇತನ, ಆಗು ನೀ ಅನಿಕೇತನ

[ಬದಲಾಯಿಸಿ] ಸಾಹಿತ್ಯ

ಕುವೆಂಪುರವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಅಪಾರ. ಇವರು ಧಾರವಾಡದಲ್ಲಿ ನಡೆದ ೧೯೫೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ೧೯೫೫ ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದರು. ಇವರ ಶ್ರೀ ರಾಮಾಯಣ ದರ್ಶನಂ ಕೃತಿಯು ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿಯನ್ನು ದೊರಕಿಸಿ ಕೊಟ್ಟಿತು. ಭಾರತ ಸರ್ಕಾರದ ಪದ್ಮವಿಭೂಷಣದಿಂದಲೂ ಪುರಸ್ಕೃತಗೊಂಡ ಇವರು 'ಜೈ ಭಾರತ ಜನನಿಯ ತನುಜಾತೆ...' ಕನ್ನಡ ನಾಡ ಗೀತೆಯನ್ನು ರಚಿಸಿದ ಮೇರು ಕವಿ. ಇವರು ಬರೆದ 'ಸ್ವಾಮಿ ವಿವೇಕಾನಂದ'ರ ಬಗೆಗಿನ ಕೃತಿ ಬಹಳ ಜನಪ್ರಿಯವಾದದ್ದು.

ಇವರ ವಿಶ್ವಮಾನವ ಸಂದೇಶ ಅತಿ ಪ್ರಸಿದ್ಡವಾಗಿದೆ.

[ಬದಲಾಯಿಸಿ] ಶ್ರೀ ರಾಮಾಯಣ ದರ್ಶನಂ

ಕುವೆಂಪುರವರು ಬರೆದ ಈ ಕೃತಿಯು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತವಾಗಿದೆ. ಕನ್ನಡದ ಅತ್ಯಮೂಲ್ಯ ಗ್ರಂಥಗಳಲ್ಲಿ ಒಂದು, ಈ ಕೃತಿ. ಈ ಕೃತಿ ಕನ್ನಡದ ಮೊದಲ ಆಧುನಿಕ ಮಹಾಕಾವ್ಯ; ಸರಳರಗಳೆಯನ್ನು ಕನ್ನಡದಲ್ಲಿ ಮೊತ್ತಮೊದಲ ಬಾರಿಗೆ ಬಳಸಲಾಗಿದೆ.

[ಬದಲಾಯಿಸಿ] ಕೃತಿಗಳು

ಕಾದಂಬರಿ:

ನಾಟಕಗಳು:

ಚಿತ್ರ ಪ್ರಬಂಧ:

ವಿಚಾರ:

ಆತ್ಮ ಚರಿತ್ರೆ:

ಕಾವ್ಯಗಳು:

  • ಶ್ರೀ ರಾಮಾಯಣ ದರ್ಶನ೦
  • ಕೊಳಲು
  • ಅಗ್ನಿಹಂಸ
  • ಅನಿಕೇತನ
  • ಅನುತ್ತರಾ
  • ಇಕ್ಶುಗಂಗೋತ್ರಿ
  • ಕದರಡಕೆ
  • ಕಥನ ಕವನಗಳು
  • ಕಲಾಸುಂದರಿ
  • ಕಿಂಕಿಣಿ
  • ಕೃತ್ತಿಕೆ
  • ಜೇನಾಗುವ
  • ನವಿಲು
  • ಪಕ್ಷಿಕಾಶಿ
  • ಚಿತ್ರಾಂಗದಾ
  • ಪ್ರೇತಕ್ಯು
  • ಪ್ರೇಮಕಾಶ್ಮೀರ
  • ಮಂತ್ರಾಕ್ಷತೆ
  • ಷೋಡಶಿ
  • ಹಾಳೂರು
  • ಕೋಗಿಲೆ
  • ಪಾಂಚಜನ್ಯ
  • ಕುಟೀಚಕ

ಕಥಾಸಂಕಲನ:

  • ನನ್ನ ದೇವರು ಮತ್ತು ಇತರ ಕಥೆಗಳು

ವಿಮರ್ಶೆ:

  • ದ್ರೌಪದಿಯ ಶ್ರೀಮುಡಿ

ಜೀವನ ಚರಿತ್ರೆ:

  • ಸ್ವಾಮಿ ವಿವೇಕಾನಂದ
  • ಶ್ರೀ ರಾಮಕೃಷ್ಣ ಪರಮಹಂಸ

[ಬದಲಾಯಿಸಿ] ಕುವೆಂಪುರವರ ಬಗ್ಗೆ ಇತರರು ಬರೆದ ಪುಸ್ತಕಗಳು

  • ಮಗಳು ಕಂಡ ಕುವೆಂಪು - ಲೇ: ತಾರಿಣಿ ಚಿದಾನಂದ ಪ್ರಕಾಶಕರು:ಪುಸ್ತಕ ಪ್ರಕಾಶನ
  • ಅಣ್ಣನ ನೆನಪು - ಲೇ: ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರಕಾಶಕರು:ಪುಸ್ತಕ ಪ್ರಕಾಶನ
  • ಯುಗದ ಕವಿ-ಲೇ: ಡಾ.ಕೆ.ಸಿ.ಶಿವಾರೆಡ್ಡಿ
  • ಹೀಗಿದ್ದರು ಕುವೆಂಪು - ಲೇ:ಪ್ರಭುಶಂಕರ

[ಬದಲಾಯಿಸಿ] ಪ್ರಶಸ್ತಿ ಪುರಸ್ಕಾರಗಳು

ಕುಪ್ಪಳಿಯಲ್ಲಿ ಕುವೆಂಪು ಮನೆ (ಈಗ ವಸ್ತು ಸಂಗ್ರಹಾಲಯವಾಗಿದೆ)

[ಬದಲಾಯಿಸಿ] ಇತರೆ ಸಂಬಂಧಪಟ್ಟ ಪುಟಗಳು

[ಬದಲಾಯಿಸಿ] ಹೊರಗಿನ ಸಂಪರ್ಕಗಳು

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು

ಕನ್ನಡ
ಕುವೆಂಪು | ದ.ರಾ.ಬೇಂದ್ರೆ | ವಿನಾಯಕ ಕೃಷ್ಣ ಗೋಕಾಕ | ಶಿವರಾಮ ಕಾರಂತ | ಮಾಸ್ತಿ ವೆಂಕಟೇಶ ಅಯ್ಯಂಗಾರ್ | ಯು.ಆರ್.ಅನಂತಮೂರ್ತಿ | ಗಿರೀಶ್ ಕಾರ್ನಾಡ್
ಹಿಂದಿ
ಮಹಾದೇವಿ ವರ್ಮ | ನಿರ್ಮಲಾ ವರ್ಮ | ಸುಮಿತ್ರಾ ನಂದನ್ ಪಂತ್ | ರಾಮ್‍ಧಾರಿ ಸಿಂಘ್ ದಿನಕರ್ | ಅಜ್ಞೇಯ | ನರೇಶ್ ಮೆಹ್ತಾ
ಬೆಂಗಾಲಿ
ಟಿ.ಎಸ್.ಬಂದ್ಯೋಪಾಧ್ಯಾಯ | ಬಿಷ್ಣು ಡೆ | ಆಶಾಪೂರ್ಣ ದೇವಿ | ಸುಭಾಷ್ ಮುಖ್ಯೋಪಾಧ್ಯಾಯ | ಮಹಾಶ್ವೇತಾದೇವಿ
ಮಲಯಾಳಂ
ಎಂ.ಟಿ.ವಾಸುದೇವನ್ ನಾಯರ್ | ಜಿ. ಶಂಕರ ಕುರುಪ್ | ಎಸ್.ಕೆ.ಪೊಟ್ಟೆಕ್ಕಾಡ್ | ಟಿ. ಶಿವಶಂಕರ ಪಿಳ್ಳೈ
ಗುಜರಾತಿ
ಉಮಾಶಂಕರ್ ಜೋಶಿ | ಪನ್ನಾಲಾಲ್ ಪಟೇಲ್ | ರಾಜೇಂದ್ರ ಕೇಶವ್‌ಲಾಲ್ ಷಾ
ಒರಿಯಾ
ಗೋಪಿನಾಥ್ ಮೊಹಾಂತಿ | ಎಸ್. ರೌತ್ ರಾಯ್ | ಸೀತಾಕಾಂತ್ ಮಹಾಪಾತ್ರ
ಉರ್ದು
ಫಿರಾಕ್ ಗೋರಕ್ ಪುರಿ | ಕುರ್ರಾತುಲೈನ್ ಹೈದರ್ | ಅಲಿ ಸರ್ದಾರ್ ಜಾಫ್ರಿ
ತೆಲುಗು
ವಿಶ್ವನಾಥ ಸತ್ಯನಾರಾಯಣ | ಸಿ. ನಾರಾಯಣ ರೆಡ್ಡಿ
ತಮಿಳು
ಪಿ.ವಿ. ಅಕಿಲಾಂಡಮ್ | ಡಿ. ಜಯಕಾಂತನ್
ಪಂಜಾಬಿ
ಅಮೃತ ಪ್ರೀತಮ್ | ಗುರ್ದಿಯಲ್ ಸಿಂಘ್
ಅಸ್ಸಾಮೀಸ್
ಬಿ.ಕೆ. ಭಟ್ಟಾಚಾರ್ಯ | ಇಂದಿರಾ ಗೋಸ್ವಾಮಿ
ಮರಾಠಿ
ವಿಂದಾ ಕರಂದೀಕರ್ | ಕುಸುಮಾಗ್ರಜ್

ವೈಯಕ್ತಿಕ ಉಪಕರಣಗಳು
ಇತರ ಭಾಷೆಗಳು