ಕೂಡ್ಲಿ

Wikipedia ಇಂದ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ತುಂಗಾ ನದಿ ಸಂಗಮಕ್ಕೆ ಹರಿದುಬರುತ್ತಿರುವ ಒಂದು ನೋಟ

ಕೂಡ್ಲಿ ಶಿವಮೊಗ್ಗ ಜಿಲ್ಲೆಯ, ಒಂದು ಪುಟ್ಟ ಊರು. ಈ ಊರು ಭಾರತ ದೇಶದ ಕರ್ನಾಟಕ ರಾಜ್ಯಕ್ಕೆ ಸೇರುತ್ತದೆ.

ತುಂಗಾ ಮತ್ತು ಭದ್ರಾ - ಇವೆರಡು ಜೀವನದಿಗಳು ಸಂಗಮವಾಗುವಲ್ಲಿರುವ ಈ ಊರು ತುಂಗಭದ್ರಾ ನದಿಗೆ ಜನ್ಮ ನಿಡುವ ಸ್ಥಳ.

ಸಂಗಮೇಶ್ವರ ದೇವಾಲಯ, ಕೂಡ್ಲಿ

[ಬದಲಾಯಿಸಿ] ಪ್ರಾಮುಖ್ಯತೆ

ಆದಿ ಕಾಲದ ಸಂಗಮೇಶ್ವರ ದೇವಾಲಯ, ಸಂಗಮ ಹಾಗೂ ಪರಿಸರದ ವಿಹಂಗಮ ನೋಟ ಈ ಪ್ರದೇಶವನ್ನು ಸುಂದರಗೊಳಿಸಿದೆ. ಮಗದೊಂದು ಪ್ರವಾಸಿ ತಾಣವೆಂದೂ ಹೇಳಿದರೆ ತಪ್ಪಾಗದು. ಇಲ್ಲಿಯ 'ರಂಗನಾಥ ಸ್ವಾಮಿ' ದೇವಾಲಯವೂ ಜನಪ್ರಿಯ. ಸಂಗಮ ಸ್ಥಳದಲ್ಲಿ ನಂದಿಯ ಗುಡಿ ಇರುವುದುಂಟು. ಈ ಪುಟ್ಟ ಗುಡಿ ಸಂಗಮ ಸ್ಥಳವನ್ನು ಪ್ರತಿಪಾದಿಸುತ್ತದೆ. ಸಂಗಮೇಶ್ವರ ದೇವಾಲಯಕ್ಕೆ ಮಹತ್ತರ ಇತಿಹಾಸವಿರುವುದು. ಈ ದೇವಾಲಯ ಹೊಯ್ಸಳರ ಕಾಲದ್ದೆಂದು ಹೇಳಲಾಗುತ್ತದೆ. ಪ್ರಾಚೀನ ಶಿಲ್ಪಕಲೆಗಳಿಂದ ರಾರಾಜಿಸುವ ಈ ದೇವಾಲಯ ಕೂಡ್ಲಿಯ ಪ್ರಮುಖ ಆಕಷಣೆಗಳಲ್ಲೊಂದು.

[ಬದಲಾಯಿಸಿ] ಇತಿಹಾಸ

ಸಂಗಮ ಸ್ಥಳದಲ್ಲಿ ನಂದಿಯ ಗುಡಿ ಇರುವುದುಂಟು. ಈ ಪುಟ್ಟ ಗುಡಿ ಸಂಗಮ ಸ್ಥಳವನ್ನು ಪ್ರತಿಪಾದಿಸುತ್ತದೆ.

ಇಲ್ಲಿಯ ಪ್ರಾಚೀನ ಸಂಗಮೇಶ್ವರ ದೇವಾಲಯ ಹೊಯ್ಸಳರ ಕಾಲದ್ದೆಂದು ಹೇಳಲಾಗುತ್ತದೆ. ಇಲ್ಲಿ ಕೆಲವು ಪ್ರಾಚೀನ ಶಾಸನಗಳಿರುವುದುಂಟು. ದೇವಾಲಯದ ಸುಂದರ ಶಿಲ್ಪಕಲೆ ಜನರ ಮನ ಸೂರೆಗೊಳಿಸುತ್ತದೆ. ಇದಲ್ಲದೆ ಇನ್ನೂ ಕೆಲವು ಚಿಕ್ಕ ಪುಟ್ಟ ಪ್ರಾಚೀನ ದೇವಾಲಯಗಳು ಇಲ್ಲಿ ಇರುವುದುಂಟು.

ಕೂಡ್ಲಿಯಲ್ಲಿ ಆರ್ಯ ಅಕ್ಷೋಭ್ಯ ತೀರ್ಥರ ಮಠವಿದೆ

[ಬದಲಾಯಿಸಿ] ಭೂಗೋಳ

ಶಿವಮೊಗ್ಗ ದಿಂದ ಕೆಲವೇ ೧೬ ಕಿ.ಮೀ. ದೂರದಲ್ಲಿರುವ ಈ ಊರಿಗೆ ಸುಲಭ ಬಸ್ಸು ಸೌಕರ್ಯವಿರುವುದುಂಟು. ಪ್ರಕೃತಿಯ ಮಡಿಲಾದ ಮಲೆನಾಡಿನ ಗಡಿಯಿದು - ಕೂಡ್ಲಿ.

ವೈಯಕ್ತಿಕ ಉಪಕರಣಗಳು
ಇತರ ಭಾಷೆಗಳು