ಕೇದಾರನಾಥ
| ಕೇದಾರನಾಥ ದೇವಾಲಯ | |
|---|---|
| ಹೆಸರು: | ಕೇದಾರನಾಥ ದೇವಾಲಯ |
| ಪ್ರಮುಖ ದೇವತೆ: | ಶಿವ |
| ಸ್ಥಳ: | ಕೇದಾರನಾಥ |
ಕೇದಾರನಾಥ ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ. ಇದು ಹಿಮಾಲಯ ಪರ್ವತ ಶ್ರೇಣಿಯಲ್ಲಿ ಉತ್ತರಾಖಂಡ ರಾಜ್ಯದ ಚಮೋಲಿ (ಉತ್ತರಕಾಶಿ) ಜಿಲ್ಲೆಯಲ್ಲಿ ಮಂದಾಕಿನಿ ನದಿಯ ದಂಡೆಯ ಮೇಲಿರುವ ಶಿವನ ದೇವಾಲಯ. ಸುಮಾರು ೩೫೬೪ ಮೀಟರ್ ಎತ್ತರದಲ್ಲಿರುವ ಈ ಸ್ಥಳದ ವಿಪರೀತ ಚಳಿಯ ವಾತಾವರಣದಿಂದಾಗಿ ದೇವಾಲಯವು ಕೇವಲ ಏಪ್ರಿಲ್ ಕೊನೆಯ ಭಾಗದಿಂದ ನವೆಂಬರ್ ಮೊದಲ ವಾರದವರೆಗೆ ಮಾತ್ರ ಭಕ್ತಾದಿಗಳ ದರ್ಶನಕ್ಕೆ ಮುಕ್ತವಾಗಿರುತ್ತದೆ.
ಪರಿವಿಡಿ |
[ಬದಲಾಯಿಸಿ] ಮಂದಿರದ ಹಿನ್ನೆಲೆ ಮತ್ತು ಪ್ರಾಮುಖ್ಯತೆ
ಕೇದಾರನಾಥದಲ್ಲಿ ಮೂಲ ದೇವಾಲಯವು ಕಲ್ಲಿನ ಸುಂದರ ಶಿಲ್ಪವಾಗಿದ್ದು ಇದನ್ನು ಸುಮಾರು ೮ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ಸ್ಥಾಪಿಸಿದರೆಂದು ಹೇಳಲಾಗುತ್ತಿದೆ. ಇದು ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲೊಂದು. ಚತುರ್ಧಾಮ ಯಾತ್ರೆಯಲ್ಲಿ ಇದೊಂದು ಮುಖ್ಯ ಯಾತ್ರಾ ಸ್ಥಳ. ಕೇದಾರನಾಥ ಯಾತ್ರೆಯು ‘ಭಾರತ-ಚೀನಾ’ ಗಡಿಗೆ ಅಂಟಿಕೊಂಡಂತಿರುವ ‘ಗೌರಿಕುಂಡ’ವೆಂಬ ಪ್ರದೇಶದಿಂದ ಪ್ರಾರಂಭವಾಗುತ್ತದೆ. ಸಮತಟ್ಟಾದ ಪ್ರದೇಶವಾದ ಇಲ್ಲಿಂದ ಸುಮಾರು ೧೪ ಕಿ.ಮೀ. ಕಾಲ್ನಡಿಗೆ, ಕುದುರೆಸವಾರಿ ಅಥವಾ ಡೋಲಿಯಲ್ಲಿ ಪಯಣಿಸಬೇಕು. ದೇವಾಲಯದ ಮುಖ್ಯದ್ವಾರದಿಂದ ಒಳಗೆ ಬಂದೊಡನೆ ಪ್ರಾಕಾರದಲ್ಲಿ ಪಾಂಡವರ, ಕೃಷ್ಣ, ನಂದಿ ಮತ್ತು ವೀರಭದ್ರನ ಮೂರ್ತಿಗಳಿವೆ. ಈ ದೇವಾಲಯ ವಿಚಿತ್ರವೆಂದರೆ ತ್ರಿಕೋನಾಕಾರದ ಕಲ್ಲಿನ ಮೇಲೆ ಕೆತ್ತಿರುವ ಮಾನವನ ತಲೆ. ಈ ದೇವಸ್ಥಾನದ ಹಿಂದೆಯೇ ಶಂಕರರ ಸಮಾಧಿ ಮಂದಿರವಿದೆ. ಗೌರಿಕುಂಡವು ಸಮುದ್ರಮಟ್ಟದಿಂದ ೬೫೦೦ ಅಡಿ ಎತ್ತರದಲ್ಲಿದೆ. ಇಲ್ಲಿನ ಪ್ರಾಚೀನ ಶೈವ ಪೀಠಗಳ್ಲಲೊಂದಾದ ಏಕೋರಾಮಾರಾಧ್ಯ ಪೀಠವು ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದು ಖ್ಯಾತಿ ಗಳಿಸಿದೆ. ಇದರ ಮುಖ್ಯಸ್ಥರು ಕರ್ನಾಟಕದವರೆಂಬುದು ಹೆಮ್ಮೆಯ ಸಂಗತಿ.