ಗದಗ

Wikipedia ಇಂದ

(ಗದಗ್ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಗದಗ
ಗದಗ ನಗರದ ಪಕ್ಷಿನೋಟ
ವೀರನಾರಾಯಣ ದೇವಸ್ಥಾನ , ಗದಗ
India-locator-map-blank.svg
Red pog.svg
ಗದಗ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಗದಗ
ನಿರ್ದೇಶಾಂಕಗಳು 15.4167° N 75.6167° E
ವಿಸ್ತಾರ  km²
ಸಮಯ ವಲಯ IST (UTC+5:30)
ಜನಸಂಖ್ಯೆ (೨೦೦೧)
 - ಸಾಂದ್ರತೆ
೧೫೪೮೪೯
 - /ಚದರ ಕಿ.ಮಿ.
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - ೫೮೨ ೧೦೧/೧೦೨/೧೦೩
 - +೯೧ (೦) ೮೩೭೨
 - ಕೆಎ-೨೬
ಅಂತರ್ಜಾಲ ತಾಣ: ಗದಗ-ಬೆಟಗೇರಿಸಿಟಿ.ಗೊವ್.ಇನ್ http://www.gadag-betagericity.gov.in/ ಗದಗ-ಬೆಟಗೇರಿಸಿಟಿ.ಗೊವ್.ಇನ್
ಗದಗ ಜಿಲ್ಲೆ

ಗದಗ (Gadag) (गदग) ಉತ್ತರ ಕರ್ನಾಟಕದ ಒಂದು ಜಿಲ್ಲೆ. ಗದಗ ಪಟ್ಟಣ ಈ ಜಿಲ್ಲೆಯ ಕೇಂದ್ರ. ಕೆಲವು ವರ್ಷಗಳ ಹಿಂದಿನವರೆಗೂ ಗದಗ, ಧಾರವಾಡ ಜಿಲ್ಲೆಯ ಭಾಗವಾಗಿದ್ದಿತು. ಈ ಜಿಲ್ಲೆಯ ಜನಸಂಖ್ಯೆ ಸುಮಾರು ೧೦ ಲಕ್ಷ. ಗದಗ ಜಿಲ್ಲೆಯವರಾದ ಇಬ್ಬರು ಪ್ರಸಿದ್ಧ ವ್ಯಕ್ತಿಗಳೆಂದರೆ ಕನ್ನಡದ ಮಹಾಕವಿ ಕುಮಾರವ್ಯಾಸ ಮತ್ತು ಪ್ರಸಿದ್ಧ ಗಾಯಕರಾದ ಗಾನಯೋಗಿ ಪಂಚಾಕ್ಷರಿ ಗವಾಯಿ.

ಇಲ್ಲಿ ಬೆಳೆಯಲ್ಪಡುವ ಮುಖ್ಯ ಬೆಳೆಗಳು ರಾಗಿ, ಬೇಳೆಗಳು, ನೆಲಗಡಲೆ, ಸೂರ್ಯಕಾಂತಿ, ಹತ್ತಿ, ಈರುಳ್ಳಿ ಮತ್ತು ಮೆಣಸಿನಕಾಯಿ.

ಧಾರ್ಮಿಕ ಪ್ರಾಮುಖ್ಯತೆಯುಳ್ಳ ಇಲ್ಲಿನ ಎರಡು ಮುಖ್ಯ ದೇವಸ್ಥಾನಗಳೆ೦ದರೆ ತ್ರಿಕೂಟೇಶ್ವರ ದೇವಾಲಯ ಮತ್ತು ವೀರನಾರಾಯಣನ ದೇವಸ್ಥಾನ. ಗದಗ ಪಟ್ಟಣದಲ್ಲಿ ಎರಡು ಮುಖ್ಯ ಜೈನ ದೇವಾಲಯಗಳು ಸಹ ಇದ್ದು ಪಾರ್ಶ್ವನಾಥ ತೀರ್ಥಂಕರ ಮತ್ತು ಮಹಾವೀರನಿಗೆ ಅರ್ಪಿತವಾಗಿವೆ.

ಗದಗ ಪಟ್ಟಣ ಬದನೇಕಾಯಿ ಬಜಿ,ಒಗ್ಗರಣೆ ಗಿರ್ಮಿಟ್ ಮತ್ತು ಮೆಣಸಿನಕಾಯಿ ಮಿರ್ಚಿಗೆ ತುಂಬ ಪ್ರಸಿದ್ದ. ಒಂದು ಕಾಲದಲ್ಲಿ ಗದಗ ಶಹರದಲ್ಲಿ ಎಲ್ಲೇ ನಿಂತು ಕಲ್ಲು ತೂರಿದರೂ ಅದು ಯಾವದಾದರೊಂದು ಪ್ರಿಂಟಿಂಗ್ ಪ್ರೆಸ್ ಗೆ ಹೋಗಿ ಬೀಳುತ್ತದೆಂಬ ಪ್ರತೀತಿ ಇತ್ತು. ಅಷ್ಟೊಂದು ಮುದ್ರಣಾಲಯಗಳು ಗದಗನಲ್ಲಿದ್ದವು. ಮುದ್ರಣ ಕ್ಷೇತ್ರದಲ್ಲಿ ಕರ್ನಾಟಕದಲ್ಲೇ ಗದಗನ್ನು ಮೀರಿಸಿದವರಿರಲಿಲ್ಲ. ಭೀಷ್ಮ ಕೆರೆ ಇಲ್ಲಿನ ಅತ್ಯಂತ ದೊಡ್ಡದಾದ ಮತ್ತು ಪುರಾತನ ಕೆರೆಯಾಗಿದೆ. ಗದಗ ಪುರಾತನ ಕಾಲದಲ್ಲಿ "ಕೃತಪುರ" ಎಂದು ಖ್ಯಾತಿಗಳಿಸಿತ್ತು. ಭಾರತ ರತ್ನ ಭೀಮಸೇನ ಜೋಶಿ ಇಲ್ಲಿಯವರೇ. ಗದುಗಿನ ಅನೇಕ ಜನ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ.

ಗದಗ ಮತ್ತು ಬೆಟಗೇರಿ ಅವಳಿ ನಗರಗಳು.

ಗದಗನ ಮೂಲ ಹೆಸರುಗಳು ಕೃತುಕ, ಕೃತುಪುರ, ಕರಡುಗು ನಂತರ ಗಲದುಗು , ಗದುಗು ಮತ್ತು ಈಗ ಗದಗ ಎಂದು ಕರೆಯಲಾಗುತ್ತದೆ. ಕಪ್ಪತ ಗುಡ್ಡ ಸಹ ಇದರ ಸುತ್ತಮುತ್ತಲಲ್ಲೇ ಇವೆ.


ಪರಿವಿಡಿ

[ಬದಲಾಯಿಸಿ] ಭೂಗೋಳ

ಗದಗ ಜಿಲ್ಲೆಯಲ್ಲಿ ಹರಿಯುವ ಎರಡು ಮುಖ್ಯ ನದಿಗಳೆಂದರೆ ಮಲಪ್ರಭಾ ಮತ್ತು ತುಂಗಭದ್ರಾ. ಗದಗ ಪಟ್ಟಣ ಬೆಂಗಳೂರಿನಿಂದ ೪೩೧ ಕಿಮೀ ದೂರದಲ್ಲಿದ್ದು ಧಾರವಾಡದಿಂದ ೮೦ ಕಿಮೀ ದೂರದಲ್ಲಿದೆ.

ಗದಗ ಕರ್ನಾಟಕದ ೨೯ ನೇ ಜಿಲ್ಲೆ ಆಗಿರುತ್ತದೆ.

[ಬದಲಾಯಿಸಿ] ತಾಲೂಕುಗಳು

ಗದಗ ಜಿಲ್ಲೆಯಲ್ಲಿರುವ ತಾಲೂಕುಗಳು:

[ಬದಲಾಯಿಸಿ] ಪ್ರಮುಖ ವ್ಯಕ್ತಿಗಳು

ಪಂಚಾಕ್ಷರಿ ಗವಾಯಿಗಳು

[ಬದಲಾಯಿಸಿ] ಚಾರಿತ್ರಿಕ ಘಟನೆಗಳು

ಪಂಚಾಕ್ಷರಿ ಗವಾಯಿಗಳು

ಗದಗ ಪಟ್ಟಣದ ಕೆಲವು ಸಾಂಸ್ಕೃತಿಕ ಹಾಗು ಸಾಮಾಜಿಕ ಚಾರಿತ್ರಿಕ ಘಟನೆಗಳು ಇಂತಿವೆ:

  • ೧೮೮೪ --- ಗದಗ - ಹೊಟಗಿ ರೈಲು ಹಳಿ
  • ೧೯೧೪ --- ಶ್ರೀ ವೀರೇಶ್ವರ ಪುಣ್ಯಾಶ್ರಮ (ಸಂಚಾರಿ ಪಾಠ ಶಾಲೆ)
  • ೧೯೧೪ --- ಶ್ರೀ ಕುಮಾರೇಶ್ವರ ಕೃಪಾ ಕಟಾಕ್ಷ ಪಂಚಾಕ್ಷರಿ ಗವಾಯಿಗಳ ನಾಟ್ಯ ಸಂಘ
  • ೧೯೪೩ --- ಕೃಷಿ ಮಾರುಕಟ್ಟೆ
  • ೧೯೪೭ --- ಶ್ರೀ ವಸಂತ ನಾಟ್ಯಕಲಾ ಸಂಘ
  • ೧೯೫೮ --- ಜೆ.ಟಿ.ಕಾಲೇಜ- ಮಸಾರಿ ಆರಂಭ
  • ೧೯೭೯ --- ಶ್ರೀ. ಡಿ. ಜಿ ಎಮ್. ಆಯುರ್ವೇದ ಕಾಲೇಜ ಆರಂಭ
  • ೧೯೯೭ --- ಗದಗ ಜಿಲ್ಲೆಯ ರಚನೆ (ಪ್ರಕಟಣೆ ಆರ್‌ಡಿ ೪೨ ಎಲ್ಆರ್‌ಡಿ ೮೭ ಭಾಗ ೩ ಕರ್ನಾಟಕ ಸರ್ಕಾರ ಆಗಸ್ಟ್ ೨ ೧೯೯೭ರಂದು ಬೆಂಗಳೂರಿನಲ್ಲಿ ಹೊರಡಿಸಿದ ಒಂದು ಪ್ರಕಟಣೆಯ ಭಾಗವಾಗಿತ್ತು ಮತ್ತು ಇದು ಕರ್ನಾಟಕದಲ್ಲಿ ಏಳು ಹೊಸ ಜಿಲ್ಲೆಗಳ ರಚನೆಯಾಗುವಲ್ಲಿ ಪರಿಣಮಿಸಿತು. ಗದಗ ಜಿಲ್ಲೆ ರಚನೆ ರಚನೆಯಾದ ಹೊಸ ಜಿಲ್ಲೆ).
  • ೧೯೯೭ --- ತೊಂಟದಾರ್ಯ ತಾಂತ್ರಿಕ ವಿದ್ಯಾಲಯ ಆರಂಭ
  • ೨೦೦೧ --- ಭು ದಾಕಲೆಗಳ ಗಣಕೀಕರಣ ವ್ಯವಸ್ಠೆ (೨೯-೦೯-೨೦೦೯ ಪೂರ್ಣ)
  • ೨೦೦೫ --- ಮಕ್ಕಳಿಗಾಗಿ ‘ಸಂಗೀತ ಮತ್ತು ನೃತ್ಯ ಸಮ್ಮೇಳನ ( ಜನವರಿ .8 )
  • ೨೦೦೫ --- ಗದಗ ಹೊಸ ಬಸ್ ನಿಲ್ದಾಣ (ಅಕ್ಟೋಬರ್ ೩೦- ೨೦೦೫)
  • ೨೦೦೨ --- ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆ
  • ೨೦೦೭ --- ಮೀಟರ್ ಗೇಜ್ ರೈಲು ಸಂಚಾರದ ಕೊನೆಯ ಕೊಂಡಿಯಾಗಿ ಉಳಿದುಕೊಂಡಿದ್ದ ಬಾಗಲಕೋಟೆ- ಗದಗ ಪ್ಯಾಸೆಂಜರ್ ರೈಲು ಈದಿನ ತನ್ನ ಕೊನೆಯ ಸಂಚಾರದೊಂದಿಗೆ ಇತಿಹಾಸದ ಪುಟ ಸೇರಿತು.ಸಂಜೆ ೫.೪೫ ಕ್ಕೆ ಗದುಗಿಗೆ ಹೋಗುವ ರೈಲಿಗೆ ಪೂಜೆ ನೆರವೇರಿಸಿದ ರೈಲ್ವೆ ಸಿಬ್ಬಂದಿ ಆರತಿ ಮಾಡುವ ಮೂಲಕ ಕೊನೆಯ ಗಾಡಿಗೆ ಹೃದಯಸ್ಪರ್ಶಿ ವಿದಾಯ ಹೇಳಿದರು.
  • ೨೦೦೭ --- ಶ್ರೀ ಕುಮಾರೇಶ್ವರ ಕೃಪಾ ಕಟಾಕ್ಷ ಪಂಚಾಕ್ಷರಿ ಗವಾಯಿಗಳ ನಾಟ್ಯ ಸಂಘಕ್ಕೆ - ಕೆ. ಹಿರಣ್ಣಯ್ಯ ನಾಟಕ ಅಕಾಡೆಮಿ ಪ್ರಶಸ್ತಿ
  • ೨೦೦೯ --- ಅಖಿಲ ಭಾರತ ೭೬ನೇ ಕನ್ನಡ ಸಾಹಿತ್ಯ ಸಮ್ಮೇಳ (ಡಿಸೆಂಬರ್ ೧೮-೨೦)*
  • ೨೦೦೯ --- ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ)ಯು ಮಾಡುತ್ತಿರುವ ವೈದ್ಯಕೀಯ, ಸಾಮಾಜಿಕ, ಸಾಂಸ್ಕೃತಿಕ, ಮಾನವೀಯ ಕಾರ್ಯಗಳನ್ನು ರಾಜ್ಯ ಐಎಂಎ ಗುರುತಿಸಿ ರಾಜ್ಯದ ಅತ್ಯುತ್ತಮ ಶಾಖೆ
  • ೨೦೦೯ --- ಜಿಲ್ಲೆಯಾದ್ಯಂತ ಆರು ದಿನಗಳಿಂದ ಸುರಿಯುತ್ತಿರುವ ಮಳೆ
  • ೨೦೦೯ --- ಪ್ರವಾಹವೆಂಬ ದುಃಸ್ವಪ್ನ ಶಾಶ್ವತ ಬರ ಪೀಡಿತ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡ ಗದಗ ಜಿಲ್ಲೆ ಮಳೆಯ ಆರ್ಭಟಕ್ಕೆ ಸಿಕ್ಕಿ ನಲುಗಿದೆ.
ಸಂಪಾದಿಸಿ

[ಬದಲಾಯಿಸಿ] ಕೈಗಾರಿಕೆ

ಗದಗನ ಮುಖ್ಯವಾದ ಕೈಗಾರಿಕೆ ಪ್ರಿಂಟಿಂಗ್ ಪ್ರೆಸ್ ಹಾಗು ಸುಮಾರು ೧೦೦ಕ್ಕೂ ಹೆಚ್ಚು ಸಣ್ಣ ಹಾಗೂ ಮಧ್ಯಮ ಗಾತ್ರದ ಉದ್ದಿಮೆಗಳಿವೆ. ಕೈಮಗ್ಗ ಹಾಗೂ ಬಣ್ಣ ಬಣ್ಣದ ಆಕರ್ಷಕ ಸೀರೆಗಳನ್ನು ನೇಯುವ ಹತ್ತಾರು ಮಂದಿ ನೇಕಾರರು ಇಲ್ಲಿದ್ದಾರೆ ಇದು ಗದಗ ಮತ್ತು ಬೆಟಗೇರಿಯ ಇನ್ನೊಂದು ಆಕರ್ಷಣೆ.

[ಬದಲಾಯಿಸಿ] ಪವನ ವಿದ್ಯುತ್

ಗದಗ ಜಿಲ್ಲೆಯ ೪೦&೫೦ ಕಿಮೀ ಉದ್ದಗಲದ ಕೃಷಿಭೂಮಿಯು ಹೆಚ್ಚು ಗಾಳಿ ಬೀಸುವ ಪ್ರದೇಶವೆಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕೆ.ಆರ್ ಇ.ಡಿ.ಎಲ್) ಗುರುತಿಸಿದೆ. ಪವನ ವಿದ್ಯುತ್ ಶಕ್ತಿ ಉತ್ಪಾದನೆಗೆ ಯೋಗ್ಯ ಸ್ಥಳಗಳೆಂದೂ ಈ ಸಂಸ್ಥೆ ಪಟ್ಟಿ ಮಾಡಿದೆ.

[ಬದಲಾಯಿಸಿ] ಸೇವಂತಿಗೆ ಮತ್ತಿತರ ಹೂ ಬೆಳೆ

ಹೂವಿನ ಕಣಜ : ಜಮೀನಿನಲ್ಲಿ ಸೇವಂತಿಗೆ, ಮಲ್ಲಿಗೆ, ಸುಗಂಧರಾಜ, ಗುಲಾಬಿ, ಚೆಂಡು ಹೂ ಬೆಳೆದಿದ್ದಾರೆ. ವಿಶೇಷವಾಗಿ ಸೇವಂತಿಗೆ ಹೂವನ್ನೇ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಾರೆ. (ವಿಶೇಷವಾಗಿ ದಸರಾ, ದೀಪಾವಳಿಗೆ ಹೂವಿಗೆ ಬೇಡಿಕೆ)

[ಬದಲಾಯಿಸಿ] ಧಾರ್ಮಿಕ

ಸರಸ್ವತಿ ದೇವಾಲಯ

ಧಾರ್ಮಿಕ ಪ್ರಾಮುಖ್ಯತೆಯುಳ್ಳ ಇಲ್ಲಿನ ಎರಡು ಮುಖ್ಯ ದೇವಸ್ಥಾನಗಳೆ೦ದರೆ ತ್ರಿಕೂಟೇಶ್ವರ ದೇವಾಲಯ ಮತ್ತು ವೀರನಾರಾಯಣನ ದೇವಸ್ಥಾನ. ಗದಗ ಪಟ್ಟಣದಲ್ಲಿ ಎರಡು ಮುಖ್ಯ ಜೈನ ದೇವಾಲಯಗಳು ಸಹ ಇದ್ದು ಪಾರ್ಶ್ವನಾಥ ತೀರ್ಥಂಕರ ಮತ್ತು ಮಹಾವೀರನಿಗೆ ಅರ್ಪಿತವಾಗಿವೆ.ಶ್ರೀ ತೊಂಟದಾರ್ಯ ಮಠ ಕೂಡ ಇಲ್ಲಿನ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ತನ್ನದೇ ಆದ ಕೊಡುಗೆಯನ್ನು ನೀಡುತ್ತಲಿದೆ.

[ಬದಲಾಯಿಸಿ] ಶೈಕ್ಷಣಿಕ

ಗದಗ ಪಟ್ಟಣ ಅನೇಕ ಒಳ್ಳೆಯ ವಿದ್ಯಾಲಯ, ಮಹಾವಿದ್ಯಾಲಯಗಳಿವೆ. ಒಂದು ಆಯುರ್ವೇದ ಮತ್ತು ತಾಂತ್ರಿಕ ವಿದ್ಯಾಲಯಗಳಿವೆ.

[ಬದಲಾಯಿಸಿ] ಪ್ರಮುಖ ವಿದ್ಯಾಸಂಸ್ಥೆಗಳು

ಚಿತ್ರ:.jpg
ಶಾಲೆಗಳು-ಕಾಲೇಜು

[ಬದಲಾಯಿಸಿ] ಆಯುರ್ವೇದ

ಶ್ರೀ. ಡಿ. ಜಿ ಎಮ್. ಆಯುರ್ವೇದ ಕಾಲೇಜ

[ಬದಲಾಯಿಸಿ] ತಾಂತ್ರಿಕ ವಿದ್ಯಾಲಯ

ತೊಂಟದಾರ್ಯ ತಾಂತ್ರಿಕ ವಿದ್ಯಾಲಯ

[ಬದಲಾಯಿಸಿ] ಕಾಲೇಜು

[ಬದಲಾಯಿಸಿ] ಶಾಲೆ


ಸಂಪಾದಿಸಿ

[ಬದಲಾಯಿಸಿ] ಖಾದ್ಯ

ಗದಗ ಪಟ್ಟಣ ಬದನೇಕಾಯಿ ಬಜಿ,ಒಗ್ಗರಣೆ ಗಿರ್ಮಿಟ್ ಮತ್ತು ಮೆಣಸಿನಕಾಯಿ ಮಿರ್ಚಿಗೆ(ಮಿರ್ಚಿ ಭಜಿ) ತುಂಬ ಪ್ರಸಿದ್ದ.

[ಬದಲಾಯಿಸಿ] ದಿನ ಪತ್ರಿಕೆ

  • 'ನವೋದಯ' ದಿನಪತ್ರಿಕೆ
  • 'ನಾಗರಿಕ' ದಿನಪತ್ರಿಕೆ

[ಬದಲಾಯಿಸಿ] ಗದಗನ ಪ್ರಮುಖ ಬಡಾವಣೆಗಳು

ಹೊಸ ಬಡಾವಣೆಗಳು, ಮಸಾರಿ ,ಸಿದ್ದಲಿಂಗ ನಗರ , ವಿರೇಶ್ವರ ನಗರ ಊರಿನ ಸರ್ವತೋಮುಖ ಬೆಳವಣಿಗೆಯಾಗಿದೆ.

[ಬದಲಾಯಿಸಿ] ಪರಂಪರೆ

  • ನಮ್ಮೂರ ಜಾತ್ರೆ

ಇಲ್ಲಿ ನಡೆಯುವ ವಾರ್ಷಿಕ ಶ್ರೀ ತೊಂಟದಾರ್ಯ ಮಠದ ಜಾತ್ರೆ ಸಾಕಷ್ಟು ಭಕ್ತರನ್ನು ಆಕರ್ಷಿಸುತ್ತದೆ.

[ಬದಲಾಯಿಸಿ] ಸಾಂಸ್ಕೃತಿಕ

ಮುಖ್ಯ ಭಾಷೆ ಕನ್ನಡ

[ಬದಲಾಯಿಸಿ] ಸಂಗೀತ ಮತ್ತು ಕಲೆ

ವೃತ್ತಿರಂಗಭೂಮಿ ಕಂಪನಿಗಳು

ಸಾಧನೆ:

ಸಂಗೀತ:

ವಾಯಲಿನ್:

  • ಶ್ರೀ ನಾರಾಯನ ಹಿರೆಕೊಲಚೆ

ವೊಕಲ್ :

  • ಶ್ರೀ ರವೀಂದ್ರ ಜಕಾತಿ

ಜಾನಪದ ಕಲೆ:

'ಸ್ವತಂತ್ರ ಹೋರಾಟಗಾರರು ಮತ್ತು ಗಾಂಧೀವಾದಿಗಳು'

[ಬದಲಾಯಿಸಿ] ಪ್ರಮುಖ ಬೆಳೆಗಳು

ಜೋಳ, ಸಜ್ಜೆ, ಸೇಂಗಾ, ಸೂರ್ಯಪಾನ, ಉಳ್ಳಾಗಡ್ಡಿ(ಈರುಳ್ಳೆ). ಪ್ರಮುಖ ಆಹಾರ ಧಾನ್ಯ ಜೋಳ.ಜೊತೆಗೆ ಗೋಧಿ, ಬೇಳೆಕಾಳುಗಳು.

[ಬದಲಾಯಿಸಿ] ಸಮೀಪದ ಸ್ಥಳಗಳು

‍* ಲಕ್ಕುಂಡಿ

[ಬದಲಾಯಿಸಿ] ರಾಜಕೀಯ

[ಬದಲಾಯಿಸಿ] ಶಾಸಕರು

ಇಂದಿನ ೨೦೦೮ ಶಾಸಕರು ಭಾರತೀಯ ಜನತಾ ಪಕ್ಷ (BJP) - ಶ್ರೀ ಶ್ರೀಶೈಲಪ್ಪ ವಿ. ಬಿದರೂರ, ಶಿವನೇಂದ್ರ ನಗರ, ಕಳಸಪುರ ರಸ್ತೆ, ಗದಗ -೫೮೨ ೧೦೧

[ಬದಲಾಯಿಸಿ] ಹಿಂದಿನ ಶಾಸಕರು

  • ೨೦೦೪- ಡಿ. ಆರ್. ಪಾಟೀಲ - (INC)
  • ೧೯೯೯- ಡಿ. ಆರ್. ಪಾಟೀಲ - (INC)
  • ೧೯೯೪- ಡಿ. ಆರ್. ಪಾಟೀಲ - (INC)
  • ೧೯೮೯- ಕೆ. ಹೆಚ್. ಪಾಟೀಲ - (INC)
  • ೧೯೮೫- ಕೆ. ಹೆಚ್. ಪಾಟೀಲ - (INC)
  • ೧೯೮೩- ಸಿ. ಎಸ್. ಮುತ್ತಿನಪೆಂಡಿಮಠ - (INC)
  • ೧೯೭೮- ಸಿ. ಎಸ್. ಮುತ್ತಿನಪೆಂಡಿಮಠ - (JP)
  • ೧೯೭೨- ಪಿ. ಕೆ. ಹನುಮಂತಪ್ಪ - (INC)
  • ೧೯೬೭- ಪಿ. ಕೆ. ಹನುಮಂತಗೌಡ- (IND)
  • ೧೯೬೨- ಕೆ. ಪಿ. ಗದಗ - (INC)
  • ೧೯೫೭- ಕೆ. ಪಿ. ಗದಗ - (INC)

[ಬದಲಾಯಿಸಿ] ಪ್ರಮುಖ ರಾಜಕಾರಣಿಗಳು

ಕೆ. ಹೆಚ್. ಪಾಟೀಲ , ಡಿ. ಆರ್. ಪಾಟೀಲ, ಹೆಚ್.ಕೆ.ಪಾಟೀಲ-ಮಾಜಿ ಸಚಿವರು, ಶ್ರೀಶೈಲಪ್ಪ ವಿ. ಬಿದರೂರ

[ಬದಲಾಯಿಸಿ] ಸಿನಿಮಾ ಚಿತ್ರ ಮಂದಿರಗಳು

ನಗರದಲ್ಲಿ ೬ ಸುಂದರ ಚಿತ್ರ ಮಂದಿರಗಳು ಇರುತ್ತವೆ, ಅವುಗಳು ಮಹಾಲಕ್ಷ್ಮಿ, ಶ್ರೀ ಕೃಷ್ಣ, ಚಿತ್ರಾ, ಕರ್ನಾಟಕ, ವೆಂಕಟೇಶ, ಮತ್ತು ಶಾಂತಿ ಚಿತ್ರ ಮಂದಿರಗಳು.

[ಬದಲಾಯಿಸಿ] ಚಲನಚಿತ್ರ

ಗಾನಯೋಗಿ ಪಂಚಾಕ್ಷರಿ ಗವಾಯಿ (ಚಲನಚಿತ್ರ) ಗಾನಯೋಗಿ ಪಂಚಾಕ್ಷರ ಗವಾಯಿ ಪಂಚಾಕ್ಷರಿ ಗವಾಯಿ ಅವರ ಕುರಿತಾದ ಒಂದು ಕನ್ನಡ ಚಲನಚಿತ್ರ. ಇದಕ್ಕೆ ಹಂಸಲೇಖರವರು ಸಂಗೀತ ನೀಡಿದ್ದಾರೆ.

[ಬದಲಾಯಿಸಿ] ಪ್ರವಾಸ

ಪ್ರವಾಸ ಮಾರ್ಗ ೧: ಗದಗದಿಂದ ಪ್ರವಾಸ ಪ್ರಾರಂಭವಾಗಿ ಲಕ್ಕುಂಡಿ, ಗದುಗಿನ ತ್ರಿಕೂಟೇಶ್ವರ ,ವೀರನಾರಾಯಣ ದೇವಸ್ಥಾನ, ವೀರೇಶ್ವರ ಪುಣ್ಯಾಶ್ರಮ, ಸಾಯಿಬಾಬಾ ಮಂದಿರ , ರಾಮಕೃಷ್ಣಾಶ್ರಮ, ಜಿಲ್ಲಾ ಆಡಳಿತ ಭವನ ನಂತರ ಅಣ್ಣಿಗೇರಿಯ ಅಮೃತೇಶ್ವರ ದೇವಸ್ಥಾನ, ನವಲಗುಂದ ನಾಗಲಿಂಗಮಠ, ಇಟಗಿಯ ಭೀಮಾಂಬಿಕಾ ದೇವಸ್ಥಾನ, ಸೂಡಿ ಹಾಗೂ ಕಾಲಕಾಲೇಶ್ವರ ದೇವಸ್ಥಾನ ಮತ್ತು ಕುಕನೂರ ಬಳಿಯ ಇಟಗಿ ಮಹೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ. ಪ್ರವಾಸಕ್ಕೆ ಅಂದಾಜು ೧೯೫ ಕಿ.ಮೀಗಳು.

ಪ್ರವಾಸ ಮಾರ್ಗ ೨: ಗದಗದಿಂದ ಪ್ರವಾಸ ಪ್ರಾರಂಭವಾಗಿ ಲಕ್ಕುಂಡಿ, ಗದುಗಿನ ತ್ರಿಕೂಟೇಶ್ವರ , ವೀರನಾರಾಯಣ ದೇವಸ್ಥಾನ , ವೀರೇಶ್ವರ ಪುಣ್ಯಾಶ್ರಮ, ಸಾಯಿಬಾಬಾ ಮಂದಿರ , ರಾಮಕೃಷ್ಟಾಶ್ರಮ, ಜಿಲ್ಲಾ ಆಡಳಿತ ಭವನ ನಂತರ ಅಣ್ಣಿಗೇರಿಯ ಅಮೃತೇಶ್ವರ ದೇವಸ್ಥಾನ , ಮುಳಗುಂದ ದಾವುಲಮಲಿಕ ದರ್ಗಾ, ಲಕ್ಷ್ಮೇಶ್ವರದ ಸೋಮೇಶ್ವರ ದೇವಸ್ಥಾನ, ಜೈನ್ ಬಸದಿ, ಮಾಗಡಿ ಪಕ್ಷಿಧಾಮ(ಗದುಗಿನ ಪಕ್ಷಿಕಾಶಿ), ಶಿರಹಟ್ಟಿ ಫಕೀರೇಶ್ವರ ಮಠ, ವೆಂಕಟಾಪುರದ ವೆಂಕಟೇಶ ದೇವಸ್ಥಾನ ಹಾಗೂ ಡಂಬಳದ ದೊಡ್ಡ ಬಸಪ್ಪ ದೇವಸ್ಥಾನಕ್ಕೆ ಭೇಟಿ ನೀಡಿ. ಪ್ರವಾಸಕ್ಕೆ ಅಂದಾಜು ೧೬೫ ಕಿ.ಮೀಗಳು.

[ಬದಲಾಯಿಸಿ] ರಸ್ತೆ ಸಾರಿಗೆ

ವಾಯವ್ಯ .ಕ.ರಾ.ಸಾ.ಸಂಸ್ಥೆ ವಿಭಾಗ

ಗದಗ ಪಟ್ಟಣ ಸಾರಿಗೆ ಮತ್ತು ರೈಲು ಸಂಪರ್ಕ ಹೊಂದಿದೆ. ಸರಕಾರೇತರ ಮತ್ತು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಸಾರಿಗೆ ವಾಹನಗಳು (ಬಸ್ ಗಳು) ಜಿಲ್ಲೆಯಾದ್ಯಂತ ಸಂಚರಿಸುತ್ತವೆ. ಗದಗದಿಂದ ಮುಂಬೈ, ಪೂನಾ, ಹೈದರಾಬಾದ, ತಿರುಪತಿ,ಬೆಂಗಳೂರು, ಮೈಸೂರಗಳಿಗೆ ಐಷಾರಾಮಿ ಬಸ್ಸುಗಳಿವೆ, ಹಾಗು ಹೈದರಾಬಾದ, ತಿರುಪತಿ,ಬೆಂಗಳೂರ , ಮುಂಬೈ ರೈಲುಗಳು ಓಡುತ್ತವೆ.

[ಬದಲಾಯಿಸಿ] ವಿಮಾನ ನಿಲ್ದಾಣ ಹಾಗೂ ಬಂದರು

ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಕಾರವಾರ ಬಂದರು ಗದಗ ಹತ್ತಿರದಲ್ಲಿವೆ.ಹುಬ್ಬಳ್ಳಿ ವಿಮಾನ ನಿಲ್ದಾಣ ಗದಗ ಪಟ್ಟಣದಿಂದ ೫೮ ಕಿ.ಮೀ ಮತ್ತು ಕಾರವಾರ ಬಂದರು ೨೩೫ ಕಿ.ಮೀ ದೂರದಲ್ಲಿವೆ.

[ಬದಲಾಯಿಸಿ] ಹೆದ್ದಾರಿ

ರಾಷ್ಟ್ರೀಯ ಹೆದ್ದಾರಿ ೬೩: ನಗರದ ಹೃದಯ ಭಾಗದಲ್ಲಿ ಹಾಯ್ದು ಹೋಗುವ ರಸ್ತೆಗೆ ಇನ್ನೂ ಹೆಸರಿಡಲಾಗಿಲ್ಲ.

[ಬದಲಾಯಿಸಿ] ಕ್ರೀಡಾಂಗಣ

ಜಿಲ್ಲಾ ಕ್ರೀಡಾಂಗಣ : ಕೆ. ಹೆಚ್. ಪಾಟೀಲ‍‍‍ ಕ್ರೀಡಾಂಗಣ

  • ೨೦೦೯-- ೨೧ನೇ ರಾಷ್ಟ್ರೀಯ ಸಬ್ ಜೂನಿಯರ್ ಕಬಡ್ಡಿ ಚಾಂಪಿ�ಯ�ನ್‌ಷಿಪ್‌ನಲ್ಲಿ ಕ್ರಮವಾಗಿ ಕರ್ನಾ�ಟಕ ಬಾಲಕ ಮತ್ತು ಬಾಲಕಿಯರ ತಂಡಗಳಲ್ಲಿ ಮಂಜುನಾಥ ಬಡಿಗೇರ, ಹಾಗು ರೇಖಾ ಹಿರೇಮಠ ವಹಿಸಲಿದ್ದಾರೆ.

[ಬದಲಾಯಿಸಿ] ಪುರಸ್ಕಾರ

ಕರ್ನಾಟಕ ರತ್ನ

  • ಕರ್ನಾಟಕ ರತ್ನ : ೨೦೦೫ ಪದ್ಮಶ್ರೀ ಗೋವಿಂದ ಭೀಮಾಚಾರ್ಯ ಜೋಶಿ

ಕರ್ನಾಟಕ ಸರಕಾರ ರಾಜ್ಯೋತ್ಸವ ಪ್ರಶಸ್ತಿ ವಿಜೇತರು

  • ಮಾಹಿತಿ ತಂತ್ರಜ್ಞಾನ: ೨೦೦೮ ಅನಂತ ಕೊಪ್ಪರ
  • ಸಂಗೀತ ಕ್ಷೇತ್ರ : ೧೯೮೬ ಗೋವಿಂದ ಭೀಮಾಚಾರ್ಯ ಜೋಶಿ, ೨೦೦೫ ಪಂ.ವೀರೇಶ್ವರ ಹಿರೇಮಠ , ೨೦೦೨ ರವೀಂದ್ರ ಹಂದಿಗನೂರು
  • ಕ್ರೀಡೆ : ೨೦೦೫ ಸುನಿಲ್‌ ಜೋಷಿ (ಕ್ರಿಕೆಟ್‌), ೨೦೦೫ ನೀಲಮ್ಮ ಎಂ. ಮಲ್ಲಿಗ್ವಾಡ್‌ (ಸೈಕ್ಲಿಂಗ್‌),

ಕರ್ನಾಟಕ ಸರಕಾರ ಏಕೀಕರಣ ಪ್ರಶಸ್ತಿ : ೨೦೦೮ವಿರೂಪಾಕ್ಷಪ್ಪ ಸೂಡಿ

ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೆತರು :[[]]ಅಮೃತೇಶ್ವರ ತಂಡರ

ರಾಜ್ಯ ಸಂಗೀತ ನೃತ್ಯ ಅಕಾಡೆಮೆ ಪ್ರಶಸ್ತಿ 2008-09

  • ಹಿಂದೂಸ್ತಾನಿ ಸಂಗೀತ : ಶೋಭಾ ಹುಯಿಲ (ಗಾಯನ)
  • ನೃತ್ಯ: ಕೆ. ಹರಿದಾಸ್

ಕೇಂದ್ರ ಸಮಾಜ ಕಲ್ಯಾಣ ಇಲಾಖೆ ಶ್ರೇಷ್ಠ ಸಾಧಕ ಪ್ರಶಸ್ತಿ : ೨೦೦೯ ಪುಟ್ಟರಾಜ ಗವಾಯಿಗೆ ವಿಶೇಷ ಸಾಧಕ ಪ್ರಶಸ್ತಿ

ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಸಕ್ತ ೨೦೦೭ ಸಾಲಿನ ಗೌವರ ಪ್ರಶಸ್ತಿ ಹಾಗೂ ಕಲಾವಿದರ ವಾರ್ಷಿಕ ಪ್ರಶಸ್ತಿ :೨೦೦೭ ಮಾರುತೆಪ್ಪ ಬಲವಂತಪ್ಪ ಭಜಂತ್ರಿ (ಕರಡಿಮಜಲು)

[ಬದಲಾಯಿಸಿ] ಪ್ರಮುಖ ದಿನಗಳು ಗದಗ ೨೦೦೯

  • ಪೆಬ್ರವರಿ ೨೫- ಶಿವಾನಂದ ರಥ
  • ಮಾರ್ಚ್ ೦೩ - ಪುಟ್ಟರಾಜ ಗವಾಯಿಗಳ ಹುಟ್ಟುಹಬ್ಬ
  • ಎಪ್ರಿಲ್ ೯- ಜಗದ್ಗುರು ತೊಂಟದಾರ್ಯ ರಥ
  • ಎಪ್ರಿಲ್ ೨೭- ಗಂಜಿ ಬಸವೇಶ್ವರ ರಥ
  • ಜೂನ್ ೭ - ಕಾರ ಹುಣ್ಣಿಮೆ
  • ಜೂನ್ ೧೩ - ಗಾನಯೋಗಿ ಪಂಚಾಕ್ಷರಿ ಗವಯಿಗಳ ಪುಣ್ಯದಿನ
  • ಜೂನ್ ೨೨ - ಮಣ್ಣೆತ್ತಿನ ಅಮವಾಸ್ಯೆ
  • ಅಗಸ್ಟ ೧೦ - ಬಸವೇಶ್ವರ ನಗರ ವೀರಭದ್ರ ಜಾತ್ರೆ

[ಬದಲಾಯಿಸಿ] ಜಿಲ್ಲಾಧಿಕಾರಿ

ಪ್ರಸ್ತುತ ಜಿಲ್ಲಾಧಿಕಾರಿ ಸಿ. ಸಿಖಾ

[ಬದಲಾಯಿಸಿ] ಹಿಂದಿನ ಜಿಲ್ಲಾಧಿಕಾರಿಗಳು

  • ಡಾ. ಎನ್. ವ್ಹಿ. ಪ್ರಸಾದ (ಐ.ಎ.ಸ್)
  • ಶ್ರೀ. ಶುಭೋದ ಯಾದವ
  • ಶ್ರೀ.ಎನ್. ಶ್ರೀರಾಮನ
  • ಶ್ರೀ. ಮೊಹಮ್ಮದ ಮೊಹಸಿನ್
  • ಶ್ರೀ. ಜಿ. ಎಮ್. ಧನಂಜಯ

[ಬದಲಾಯಿಸಿ] ನಗರ ಆಡಳಿತ

ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ಪದ್ಧತಿ

[ಬದಲಾಯಿಸಿ] ವಾರ್ಡ್ ಗಳು

ನಗರದಲ್ಲಿ ಒಟ್ಟು ೩೫ ವಾರ್ಡ್ ಗಳು ಇರುತ್ತವೆ.

[ಬದಲಾಯಿಸಿ] ಯೋಜನೆಗಳು

ಘೋಷಣೆ ೧೫/ಅಗಸ್ಟ/೨೦೦೮

  • ಗದಗ ವಿಮಾನ ನಿಲ್ದಾಣ -ಜಿಲ್ಲೆಗೆ ಅಗತ್ಯವಿರುವ ವಾಯುಸಂಪರ್ಕ ವಿಮಾನ ನಿಲ್ದಾಣ ರಚನೆಗೆ ೨೦೦ ಎಕರೆ ವಿಸ್ತೀರ್ಣದ ಸ್ಥಳ ಗುರುತಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ
  • ಸುಸಜ್ಜಿತ ಆಸ್ಪತ್ರೆ - ೨೫೦ ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೂ ಚಾಲನೆ
  • ಟ್ರಕ್ ಟರ್ಮಿನಲ್ -
  • ನಗರದ ಭೀಷ್ಮಕೆರೆ ಆವರಣದಲ್ಲಿ ೧೧೧ ಅಡಿ ಎತ್ತರದ ಬಸವೇಶ್ವರರ ಬೃಹತ್ ಪ್ರತಿಮೆ ನಿರ್ಮಾಣ
  • ಸುವರ್ಣ ರಂಗಮಂದಿರ ನಿರ್ಮಾಣ

[ಬದಲಾಯಿಸಿ] ಹವಾಮಾನ

  • ಬೆಸಿಗೆ-ಚಳಿಗಾಲ- ಜಿಲ್ಲೆಯ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ ೩೭.೩ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೧೬.೫ ಡಿಗ್ರಿವರೆಗೆ (ಡಿಸೆಂಬರನಲ್ಲಿ) ಉಷ್ಣತೆ ಇರುತ್ತದೆ. ಬೆಸಿಗೆ - ೩೦°C-೩೯°C , ಚಳಿಗಾಲ - ೧೮°C-೨೮°C
  • ಮಳೆ - ಪ್ರತಿ ವರ್ಷ ಮಳೆ ಸರಾಸರಿ ೧೬.೬ ಮಿಮಿ ಗಳಸ್ಟು ಆಗಿರುತ್ತದೆ.
  • ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ) ಇರುತ್ತದೆ.

[ಬದಲಾಯಿಸಿ] ಇವನ್ನೂ ನೋಡಿ

[ಬದಲಾಯಿಸಿ] ಬಾಹ್ಯ ಸಂಪರ್ಕಗಳು

[ಬದಲಾಯಿಸಿ] ಉಲ್ಲೇಖಗಳು

Saaptaajika.png ಈ ವಾರದ ಸಹಯೋಗ


GadagUser.png
ಗದಗ | ಶಿರಹಟ್ಟಿ | ಮುಂಡರಗಿ | ರೋಣ | ನರಗುಂದ
Karnataka-icon.jpg
ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿಕ್ಕಬಳ್ಳಾಪುರ | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ರಾಯಚೂರು | ರಾಮನಗರ | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ
"http://kn.wikipedia.org/wiki/%E0%B2%97%E0%B2%A6%E0%B2%97" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು