ಚಿಕ್ಕಮಗಳೂರು

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಚಿಕ್ಕಮಗಳೂರು ಕರ್ನಾಟಕ ರಾಜ್ಯದ ಒಂದು ನಗರ ಮತ್ತು ಅದೇ ಹೆಸರಿನ ಜಿಲ್ಲಾ ಕೇಂದ್ರ. ಇದು ಬೆಂಗಳೂರಿನಿಂದ ೨೫೧ ಕಿಮೀ ದೂರದಲ್ಲಿದೆ. ಇದು ಕಾಫಿ ತೋಟಗಳಿಗೆ ಹೆಸರುವಾಸಿಯಾಗಿದೆ. ಚಿಕ್ಕಮಗಳೂರು ಜಿಲ್ಲೆ ೭ ತಾಲೂಕುಗಳನ್ನು ಒಳಗೊಂಡಿದೆ.

ಚಿಕ್ಕಮಗಳೂರು ಜಿಲ್ಲಾ ಕೆಂದ್ರದಲ್ಲಿ ಸುಮಾರು ಒಂದು ಲಕ್ಶಕ್ಕೂ ಹೆಚ್ಚು ಜನ ವಾಸಿಸುತ್ತಾರೆ. ಇಲ್ಲಿನ ವಾತಾವರಣವು ಅತಿ ಮಧುರವಾದಗಿದ್ದು ಇಲ್ಲಿನ ಗಿರಿವನಗಳ ನಡುವೆ ಒಂದು ಚಿಕ್ಕ ಪಟ್ಟಣವಾಗಿ ಸಂತಸ ಕೊಡುವ ಜಾಗ ಆಗಿದೆ. ವರ್ಷ್ ಕ್ಕೋಮ್ಮೇ ಈ ಪಟ್ಟಣದ ಬಳಿ ಇರುವ ದೇವೀರಮ್ಮನ ಬೆಟ್ಟದಲ್ಲಿ ನೆಡೆಯುವ ಪೊಜೆಗಾಗಿ ಜನ ರಾಷ್ಟ್ರದ ಹಾಗೂ ರಾಜ್ಯದ ಎಲ್ಲಾಕಡೆಯಿಂದ ಬರುತ್ತಾರೆ. ಕೆಲವು ವರ್ಷಗಳಿಂದ ಇಲ್ಲಿನ ಜನರ ಸ್ಥಿಥಿ ಅಭಿವ್ರುದ್ಧಿ ಆಗುತ್ತಾ ಬಂದಿದೆ...

ಪರಿವಿಡಿ

[ಬದಲಾಯಿಸಿ] ಪ್ರವಾಸಿ ತಾಣಗಳು

ಚಿಕ್ಕಮಗಳೂರು;ಬಿಂಡಿಗ ದೀಪೋತ್ಸವ

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಬಿಂಡಿಗ ದೇವಿರಮ್ಮ ದೀಪೋತ್ಸವ ದೀಪಾವಳಿಯಂದು ನಡೆಯುವ ವಿಶೇಷ ಚಂದ್ರದ್ರೋಣ ಪರ್ವತ ಶ್ರೇಣಿಗೆ ಹೊಂದಿಕೊಂಡಿರುವ ಬಿಂಡಿಗ ದೇವಿರಮ್ಮ ಬೆಟ್ಟದಲ್ಲಿ ದೀಪಾವಳಿ ದಿನದಂದು ನಡೆಯುವ ಉತ್ಸವ, ಸಂಪ್ರದಾಯ, ದೀಪ ಹಚ್ಚುವುದು ಕಾಪಿsಯ ತವರಿನ ವಿಶೇಷಗಳಲ್ಲಿ ಒಂದು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡ ಭಾಗದಲ್ಲಿ ಅನೇಕ, ಆಚರಣೆ, ಸಂಪ್ರದಾಯ, ನಂಬಿಕೆಗಳು ಇವೆ. ಇದರಲ್ಲಿ ಒಂದು ಮಲ್ಲೇನಹಳ್ಳಿ ಸಮೀಪದಲ್ಲಿ ಇರುವ ದೇವಿರಮ್ಮ ಬೆಟ್ಟದಲ್ಲಿ ದೀಪಾವಳಿಯಂದು ನಡೆಯುವ ವಿಶೇಷ ಪೂಜೆ. ವರ್ಷಪೂರ್ತಿ ತಣ್ಣಗೆ ಇರುವ ಈ ಬೆಟ್ಟವನ್ನು ಏರಲು ಮಧ್ಯರಾತ್ರಿಯಿಂದಲೇ ಭಕ್ತರು ಹಾತೊರೆಯುತ್ತಾರೆ. ಕಡಿದಾದ ಅಂಕು ಡೊಂಕಿನ ಹಾದಿಯಲ್ಲಿ ಅಬಾಲವೃದ್ಧರಾಗಿ ಸಾಲು-ಸಾಲಾಗಿ ಜನ ಬೆಟ್ಟ ಹತ್ತುವುದೇ ಒಂದು ರೋಮಂಚನ ಅನುಭವ. ಮಳೆ, ಛಳಿ, ಗಾಳಿಯನ್ನು ಲೆಕ್ಕಿಸದೆ ಜನ ಬೆಟ್ಟವೇರಿ, ದೇವಿಯ ದರ್ಶನ ಪಡೆದು ಧನ್ಯರಾಗುತ್ತಾರೆ. ಬೆಟ್ಟದ ಕೆಳಭಾಗದಲ್ಲಿ ದೇವಿರಮ್ಮ ದೇವಾಲಯ ಇದ್ದು ಪ್ರತಿ ದೀಪಾವಳಿ ದಿನದಂದು ಉತ್ಸವ ಮೂರ್ತಿಯನ್ನು ಬೆಟ್ಟಕ್ಕೆ ತಂದು ಇಡುತ್ತಾರೆ. ಇಲ್ಲಿಗೆ ಆಗಮಿಸುವ ಭಕ್ತರು ದೇವಿ ಪೂಜೆಯಲ್ಲಿ ಭಾಗವಹಿಸಿ ಕೆಳಕ್ಕೆ ಇಳಿಯುತ್ತಾರೆ. ಬೆಟ್ಟ ಏರಿದಷ್ಟೇ ಇಳಿಯುವುದೂ ಸಾಹಸದ ಕೆಲಸ. ದಣಿವು, ಆಯಸವನ್ನು ಲೆಕ್ಕಿಸದೆ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಇಂದು ಭೇಟಿ ನೀಡಿ ತೆರಳುತ್ತಾರೆ. ಈ ದೃಶ್ಯ ಇರುವೆಗಳು ಸಾಲಾಗಿ ಹರಿದು ಹೋಗುತ್ತಿರುವಂತೆ ಭಾಸವಾಗುತ್ತದೆ. ಜಿಲ್ಲಾ ಕೇಂದ್ರದಿಂದ ವಿಶೇಷ ಬಸ್ಸಿನ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ. ಬೆಳಗ್ಗೆ ಪೂಜೆ ಬಳಿಕ ರಾತ್ರಿ ದೀಪವನ್ನು ಹಚ್ಚುತ್ತಾರೆ. ಇಲ್ಲಿನ ದೀಪ ನೋಡಿ ಮನೆ ಮನೆಗಳಲ್ಲಿ ದೀಪ ಬೆಳಗುವುದು ಅನೂಚಾನವಾಗಿ ನಡೆದು ಬಂದ ಪದ್ಧತಿ. ಮೈಸೂರು ಅರಸರೂ ಇದನ್ನು ಪಾಲಿಸುತ್ತಾರೆ ಎನ್ನಲಾಗುತ್ತದೆ. ಇದಾದ ೨ ದಿನಗಳಲ್ಲಿ ದೇವಿರಮ್ಮ ದೇವಾಲಯದಲ್ಲಿ ಉತ್ಸವ ಜರುಗಿ ತನ್ನಿಂದ ತಾನೇ ಬಾಗಿಲು ತೆರೆದುಕೊಳ್ಳುತ್ತದೆ ಎನ್ನುವ ನಂಬಿಕೆಯೂ ಪ್ರಚಲಿತವಾಗಿದೆ. ಕೊನೆಯ ದಿನ ಕೆಂಡಾರ್ಚನೆ ನಡೆಯುವ ಮೂಲಕ ದೇವಿರಮ್ಮ ವಾರ್ಷಿಕ ಉತ್ಸವಕ್ಕೆ ತೆರೆ ಬೀಳುತ್ತದೆ.

ಚಿಕ್ಕಮಗಳೂರು,



[ಬದಲಾಯಿಸಿ] ಕೆಮ್ಮಣ್ಣುಗುಂಡಿ ಮತ್ತು ಕಲ್ಹತ್ತಿಗಿರಿ

ಕೆಮ್ಮಣ್ಣುಗುಂಡಿ ಚಿಕ್ಕಮಗಳೂರಿನ ಸಮೀಪದಲ್ಲಿರುವ (೫೫ ಕಿಮೀ)ಒಂದು ಗಿರಿಧಾಮ. ಸಹ್ಯಾದ್ರಿ ಪರ್ವತಶ್ರೇಣಿಯ ಎತ್ತರದ ಶಿಖರಗಳು ಸಹ ಇದರ ಸುತ್ತಮುತ್ತಲಲ್ಲೇ ಇವೆ. ಇಲ್ಲಿ ಮಾಣಿಕ್ಯಧಾರಾ ಜಲಪಾತವಿದೆ. ಕೆಮ್ಮಣ್ಣುಗುಂಡಿ ತನ್ನ ನೈಸರ್ಗಿಕ ಸೌಂದರ್ಯಕ್ಕೆ ಹೆಸರಾಗಿದೆ.

ಕೆಮ್ಮಣ್ಣುಗುಂಡಿಯ ಸಮೀಪದಲ್ಲೇ ಇರುವ ಇನ್ನೊಂದು ಪ್ರವಾಸಿ ಆಕರ್ಷಣೆ ಕಲ್ಹತ್ತಿಗಿರಿ ಜಲಪಾತ.

[ಬದಲಾಯಿಸಿ] ಮುಳ್ಳಯ್ಯನಗಿರಿ

ಕರ್ನಾಟಕದ ಅತಿ ಎತ್ತರದ ಗಿರಿಶಿಖರ ಎಂದು ಖ್ಯಾತಿ ಪಡೆದಿರುವ ಮುಳ್ಳಯ್ಯನಗಿರಿಯು 6,330 ಆಡಿ ಎತ್ತರವಿದ್ದು ಪಶ್ಚಿಮ ಘಟ್ಟದ ಚಂದ್ರದ್ರೋಣ ಪರ್ವತ ಶ್ರೇಣಿ ಸಾಲಿಗೆ ಸೇರುತ್ತದೆ. ಬೆಟ್ಟದ ತುದಿಯಲ್ಲಿ ಮುಳ್ಳಯ್ಯನ ದೇವಸ್ಥಾನ ಹಾಗೂ ಮಠವಿದೆ. ಚಾರಣಿಗರಿಗೆ ಮುಳ್ಳಯ್ಯನಗಿರಿ ಪ್ರಶಸ್ತವಾದ ಸ್ಥಳ. ಚಿಕ್ಕಮಗಳೂರಿನಿಂದ ಬೆಟ್ಟದ ಬುಡಕ್ಕೆ ಬಸ್ ಸೌಕರ್ಯ ಇದ್ದು, ತದನಂತರ "ಸರ್ಪನ ದಾರಿ" ಎಂದು ಕರೆಯಲಾಗುವ ಕಡಿದಾದ ಕಾಲುಹಾದಿಯಲ್ಲಿ ನಡೆದು ಬೆಟ್ಟದ ತುದಿ ತಲುಪಬೇಕು. ಮುಳ್ಳಯ್ಯನ ಗಿರಿಯ ಮೇಲಿನಿಂದ ಸಿಗುವ ವಿಹಂಗಮ ನೋಟ ಅತ್ಯಂತ ಆಹ್ಲಾದಕರ.

[ಬದಲಾಯಿಸಿ] ಶೃಂಗೇರಿ

ನೋಡಿ: ಶೃಂಗೇರಿ

ಶೃಂಗೇರಿ ಪಟ್ಟಣ ಬಹಳ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಅದ್ವೈತ ಮಠಗಳಲ್ಲಿ ಮೊದಲನೆಯದು ಇರುವುದು ಇಲ್ಲಿಯೇ. ಇಲ್ಲಿರುವ ವಿದ್ಯಾಶಂಕರ ದೇವಸ್ಥಾನ ಖ್ಯಾತವಾದದ್ದು. ಈ ದೇವಸ್ಥಾನದ ಸುತ್ತಲೂ ಇರುವ ಹನ್ನೆರಡು ಕಂಬಗಳಲ್ಲಿ ಪ್ರತಿಯೊಂದರ ಮೇಲೆಯೂ ಬೇರೆ ಬೇರೆ ತಿಂಗಳುಗಳಲ್ಲಿ ಸೂರ್ಯರಶ್ಮಿ ಬೀಳುತ್ತದೆ!

[ಬದಲಾಯಿಸಿ] ಭದ್ರಾ ಅಭಯಾರಣ್ಯ

ಲಕ್ಕವಳ್ಳಿಯ ಬಳಿ ಭದ್ರಾ ನದಿಗೆ ಕಟ್ಟಿರುವ ಅಣೆಕಟ್ಟಿನ ಸುತ್ತಲೂ ಇರುವ ಅಭಯಾರಣ್ಯ.ಲಕ್ಕವಳ್ಳಿಯ ಬಳಿ ಕುವೆಂಪು ವಿಶ್ವ ವಿಶ್ವವಿಧ್ಯಾಲಯವು ಇದೆ. ಚಿಕ್ಕಮಗಳೂರಿನ ಸವಿ ನೆನಪುಗಳನ್ನು ಸ್ವಲ್ಪ ದಿನ ಮೆಲುಕಹಾಕಲು ಚಿಕ್ಕಮಗಳೂರಿನ ಬಾಳೆಹೂನ್ನೂರು ವರೆಗೂ ಆವರಿಸಿದೆ.

[ಬದಲಾಯಿಸಿ] ದೇವರಮನೆ

ದೇವರ ಮನೆ ಮೂಡಿಗೆರೆ ಪ್ರವಾಸಿಗರನ್ನು ಆಕರ್ಶಿಸುತ್ತಿರುವ ದೇವಾಲಯ. ಇಲ್ಲಿಯ ಪರಿಸರ,ಬೆಟ್ಟ,ಗುಡ್ಡಗಳು ವರ್ಣನಾತೀತ.

[ಬದಲಾಯಿಸಿ] ಇತರ ಪಟ್ಟಣಗಳು

ಚಿಕ್ಕಮಗಳೂರು ಜಿಲ್ಲೆಯ ಕೆಲ ಇತರ ಮುಖ್ಯ ಪಟ್ಟಣಗಳೆಂದರೆ ಬೀರೂರು, ಕಡೂರು, ನರಸಿಂಹರಾಜಪುರ, ಕೊಪ್ಪ, ಮೂಡಿಗೆರೆ, ತರೀಕೆರೆ.

[ಬದಲಾಯಿಸಿ] ತಾಲೂಕುಗಳು

  • ಚಿಕ್ಕಮಗಳೂರು

[ಬದಲಾಯಿಸಿ] ಇವನ್ನೂ ನೋಡಿ

ಕರ್ನಾಟಕ

[ಬದಲಾಯಿಸಿ] ಬಾಹ್ಯ ಸಂಪರ್ಕಗಳು

ಚಿಕ್ಕಮಗಳೂರು ಜಿಲ್ಲೆಯ ಅಧಿಕೃತ ಸರ್ಕಾರಿ ತಾಣ

ಚಿಕ್ಕಮಗಳೂರು ಪ್ರವಾಸ

ಚಿಕ್ಕಮಗಳೂರು ಜಿಲ್ಲೆಯ ನಕ್ಷೆ

[ಬದಲಾಯಿಸಿ] ಪ್ರಜಾವಾಣಿಯಲ್ಲಿ ವಿಶೇಷ ಲೇಖನಗಳು

[ಬದಲಾಯಿಸಿ] ದಟ್ಸ್ ಕನ್ನಡ.ಕಾಂನಲ್ಲಿನ ಸಮಗ್ರ ಲೇಖನಗಳು

Karnataka-icon.jpg
ಕರ್ನಾಟಕದ ಜಿಲ್ಲೆಗಳು
ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿಕ್ಕಬಳ್ಳಾಪುರ | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ಯಾದಗಿರಿ | ರಾಯಚೂರು | ರಾಮನಗರ | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ