ದಾವಣಗೆರೆ

Wikipedia ಇಂದ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ದಾವಣಗೆರೆ: ಸೂರ್ಯಕಾಂತಿ ಹೊಲದ ದೃಶ್ಯ
ದಾವಣಗೆರೆ: ದುರ್ಗಾದೇವಾಲಯದ ಎದುರಿನ ಜಾತ್ರೆಯ ದೃಶ್ಯ
ದಾವಣಗೆರೆ: ದಾವಣಗೆರೆಯಲ್ಲಿ ಮುಹರ್ರಂ
ದಾವಣಗೆರೆ: ಮುಂಜಾನೆಯಲ್ಲಿ ಕುಂದವಾಡ ಕೆರೆಯಿಂದ ದಾವಣಗೆರೆ ನಗರದ ವಿಹಂಗಮ ದೃಶ್ಯ


ದಾವಣಗೆರೆ - ಕರ್ನಾಟಕ ರಾಜ್ಯದ ಮಧ್ಯಕರ್ನಾಟಕದ ಪ್ರಮುಖ ಜಿಲ್ಲೆ, ಊರು. ದಾವಣಗೆರೆ ಜವಳಿ ಉದ್ಯಮಕ್ಕೆ ಜನಪ್ರಿಯ. ಇಲ್ಲಿನ ದಾವಣಗೆರೆ ಕಾಟನ್ ಮಿಲ್ಸ್ ಬಹಳ ಜನಪ್ರಿಯವಾಗಿದ್ದ ಹೆಸರು. ಈಗ ಈ ಊರು ಶರವೇಗದಿಂದ ಬೆಳೆಯುತ್ತಿದೆ. ದಾವಣಗೆರೆಯ ಮೊದಲಿನ ಹೆಸರು "ದವನಗಿರಿ" ಅದು ಕಾಲ ಕ್ರಮೇಣ ದಾವಣಗೆರೆ ಆಯಿತು

ದಾವಣಗೆರೆಯು ಮಧ್ಯ ಕರ್ನಾಟಕದ ಪ್ರಮುಖ ವ್ಯಾಪಾರ ಸ್ಥಳವಾಗಿದ್ದು, ಇಲ್ಲಿ ಹತ್ತಿ, ಮೆಕ್ಕೆಜೋಳ, ಕಡಲೆ, ಸೂರ್ಯಕಾಂತಿ, ಜೋಳ, ಅಕ್ಕಿ/ಭತ್ತ, ಮತ್ತು ಇತರ ಪ್ರಮುಖ ವಾಣಿಜ್ಯ ಬೆಳೆಗಳನ್ನು ಕರ್ನಾಟಕದ ಇತರ ಜಿಲ್ಲೆಗಳಿಂದ ತಂದು ಮಾರುತ್ತಾರೆ.

ದಾವಣಗೆರೆ ಇತ್ತೀಚೆಗೆ ರಾಜ್ಯದ ಪ್ರಮುಖ ವಿದ್ಯಾಕೇಂದ್ರವಾಗಿ ಬೆಳೆದಿದ್ದು, ಇಲ್ಲಿ ಚಿತ್ರಕಲೆ, ವಸ್ತ್ರ ವಿನ್ಯಾಸ ಶಾಸ್ತ್ರ , ಎಂಜಿನಿಯರಿಂಗ್ (ಅಭಿಯ೦ತರ ಶಾಸ್ತ್ರ), ವೈದ್ಯಕೀಯ, ಕಲೆ, ವಾಣಿಜ್ಯ ಹಾಗು ಇತರ ವಿದ್ಯಾ ವಿಭಾಗಗಳನ್ನು ಹೊಂದಿರುವ ಮಹಾವಿದ್ಯಾಲಯಗಳಿವೆ.


ಪರಿವಿಡಿ

[ಬದಲಾಯಿಸಿ] ಭೂಗೋಳ

ಶಿವಮೊಗ್ಗ, ಚಿತ್ರದುರ್ಗ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳಿಂದ ಸುತ್ತುವರೆದ ಈ ಊರು, ಪ್ರಮುಖ ಪ್ರದೇಶ. ಬೆಂಗಳೂರಿನಿಂದ ಮುಂಬೈಗೆ ಹೋಗುವ ಯಾತ್ರಿಕರು ದಾವಣಗೆರೆ ಮೂಲಕವೇ ಹೋಗಬೇಕು. ದಾವಣಗೆರೆಯು ಕರ್ನಾಟಕದ ಹೃದಯಭಾಗದಲ್ಲಿ 14° 28’ ರೇಖಾಂಶ ಮತ್ತು 75° 59’ ಅಕ್ಷಾಂಶದಲ್ಲಿದ್ದು ಸಮುದ್ರ ಮಟ್ಟದಿಂದ 602.5 ಮೀ ಎತ್ತರದಲ್ಲಿದೆ. ದಾವಣಗೆರೆಯಲ್ಲಿ ಬೆಣ್ನೆ ದೋಸೆ ತುಂಬ ರುಚಿಯಾಗಿರುತ್ತವೆ.

ದಾವಣಗೆರೆ ಜಿಲ್ಲೆಯ ತಾಲ್ಲೂಕುಗಳನ್ನು ತೋರಿಸುವ ನಕ್ಷೆ

[ಬದಲಾಯಿಸಿ] ಇತಿಹಾಸ

1997 ನೇ ಇಸವಿಯಲ್ಲಿ ಅಂದಿನ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್‌, ದಾವಣಗೆರೆಯನ್ನು ಸ್ವತಂತ್ರ ಜಿಲ್ಲೆಯಾಗಿ ಮಾರ್ಪಡಿಸಿದರು. ಇದಕ್ಕೂ ಮೊದಲು ದಾವಣಗೆರೆಯು ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳಲ್ಲೊಂದಾಗಿತ್ತು. ದಾವಣಗೆರೆ ಜಿಲ್ಲೆಯು ಆರು ತಾಲ್ಲೂಕುಗಳಿಂದ ಕೂಡಿದ್ದು ಕರ್ನಾಟಕದ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಒಂದೆಂದು ಪರಿಗಣಿಸಲ್ಪಡುತ್ತದೆ.

[ಬದಲಾಯಿಸಿ] ಪ್ರೇಕ್ಷಣೀಯ ಸ್ಥಳಗಳು

ಹರಿಹರತುಂಗಭದ್ರೆ ಮತ್ತು ಹರಿಹರೇಶ್ವರ ದೇವಾಲಯ, ಶಾಂತಿಸಾಗರ, ಕೊಂಡಜ್ಜಿಯ ಅರಣ್ಯಧಾಮ, ಬಾಗಳಿ ಕಲ್ಲೇಶ್ವರ ದೇವಾಲಯ, ನೀಲಗುಂದದ ದೇವಾಲಯಗಳು, ಸಂತೇಬೆನ್ನೂರಿನ ಪುಷ್ಕರಿಣಿ.ದೊಡ್ಡಬಾತಿ ಪವಿತ್ರವನ. ಕುಂದವಾಡ ಕೆರೆ

[ಬದಲಾಯಿಸಿ] ಪ್ರಾದೇಶಿಕ

ದಾವಣಗೆರೆ ಮೊದಲು ಚಿತ್ರದುರ್ಗ ಜಿಲ್ಲೆಗೆ ಸೇರಿತ್ತು. ಆಗಸ್ಟ್ ೧೫, ೧೯೯೭ರಂದು ಅಂದಿನ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ ಅವರ ನಿರ್ಧಾರದ ಮೇರೆಗೆ ಚಿತ್ರದುರ್ಗ ಜಿಲ್ಲೆಯಿಂದ ದಾವಣಗೆರೆ, ಹರಿಹರ, ಮತ್ತು ಜಗಳೂರು ತಾಲ್ಲೂಕುಗಳನ್ನು, ಶಿವಮೊಗ್ಗ ಜಿಲ್ಲೆಯಿಂದ ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕುಗಳನ್ನು, ಹಾಗೂ ಬಳ್ಳಾರಿ ಜಿಲ್ಲೆಯಿಂದ ಹರಪನಹಳ್ಳಿ ತಾಲ್ಲೂಕುಗಳನ್ನು ಸೇರಿಸಿ ಹೊಸ ದಾವಣಗೆರೆ ಜಿಲ್ಲೆಯನ್ನು ರಚಿಸಲಾಯಿತು.

[ಬದಲಾಯಿಸಿ] ದಾವಣಗೆರೆಯ ಆಹಾರ ವೈಶಿಷ್ಟ್ಯ

ದಾವಣಗೆರೆ ಮಧ್ಯ ಕರ್ನಾಟಕದ ನಗರವಾಗಿರುವುದರಿಂದ ಇದು ಉತ್ತರ ಮತ್ತು ದಕ್ಷಿಣ ಕರ್ನಾಟಕದ ಆಹಾರ ವೈಶಿಷ್ಟ್ಯಗಳ ಅನನ್ಯ ಸಂಗಮವಾಗಿದೆ. ದಾವಣಗೆರೆಯಲ್ಲಿ ಉತ್ತರ ಕರ್ನಾಟಕದ ರಾಗಿ,ಜೋಳದ ರೊಟ್ಟಿ, ಶೇಂಗಾ ಚಟ್ನಿ ಪುಡಿ,ಕುರಶನಿ(ಗುರೆಳ್ಳು, ಹುಚ್ಚೆಳ್ಲು)ಪುಡಿ ಹೊಂದಿರುವ ಆಹಾರ ತಿನಿಸುಗಳೂ ದೊರೆಯುತ್ತವೆ ಮತ್ತು ದಕ್ಷಿಣ ಕರ್ನಾಟಕದ(ಮೈಸೂರು ಪ್ರಾಂತ್ಯದ)ರಾಗಿ, ರಾಗಿ ಮುದ್ದೆಗಳೂ ಇಲ್ಲಿನ ಪ್ರಮುಖ ಆಹಾರ ಪದಾರ್ಥಗಳಾಗಿವೆ. ರೊಟ್ಟಿಯೊಂದಿಗೆ ಅನ್ನವೂ ಬಳಸಲ್ಪಡುತ್ತದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಅನ್ನದ ಬಳಕೆ ಕೊಂಚ ಕಡಿಮೆ. ಆದರೆ, ದಕ್ಷಿಣದಲ್ಲಿ ಕೊಂಚ ಜಾಸ್ತಿ. ಇವುಗಳೆಲ್ಲದರೊಂದಿಗೆ ದೋಸೆ(ಹಲವು ಪ್ರಕಾರಗಳನ್ನು ಕೆಳಗೆ ವರ್ಗೀಕರಿಸಲಾಗಿದೆ) ಒಂದು ವಿಶಿಷ್ಟ ತಿನಿಸಾಗಿದೆ.

[ಬದಲಾಯಿಸಿ] ದಾವಣಗೆರೆಯ ವಿಶಿಷ್ಟ ತಿನಿಸುಗಳು

ಬೆಣ್ಣೆದೋಸೆ, ಖಾರ ಮಂಡಕ್ಕಿ, ಗುಲ್ಲಡಕಿ ಉ೦ಡಿ, ಅತ್ತಿಕಾಯಿ, ಮೆಣಸಿನಕಾಯಿ, ನರ್ಗೀಸ್, ಮಸಾಲೆ ಮಂಡಕ್ಕಿ

[ಬದಲಾಯಿಸಿ] ಪ್ರಮುಖ ವಿದ್ಯಾಸಂಸ್ಥೆಗಳು

[ಬದಲಾಯಿಸಿ] ಪ್ರಮುಖ ವ್ಯಕ್ತಿಗಳು

[ಬದಲಾಯಿಸಿ] ಹೊರಗಿನ ಸಂಪರ್ಕಗಳು

Karnataka-icon.jpg
ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿಕ್ಕಬಳ್ಳಾಪುರ | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ರಾಯಚೂರು | ರಾಮನಗರ | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ
ವೈಯಕ್ತಿಕ ಉಪಕರಣಗಳು