ದ್ವೀಪವ ಬಯಸಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ದ್ವೀಪವ ಬಯಸಿ
cover
ಲೇಖಕರುಎಂ.ಆರ್.ದತ್ತಾತ್ರಿ
ದೇಶಭಾರತ
ಭಾಷೆಕನ್ನಡ
ಪ್ರಕಾರಕಾದಂಬರಿ
ಪ್ರಕಾಶಕರುಛಂದ ಪುಸ್ತಕ

ದ್ವೀಪವ ಬಯಸಿ' ಕಾದಂಬರಿಯನ್ನು ಚಿಕ್ಕಮಗಳೂರಿನ ಲೇಖಕ ಎಂ.ಆರ್.ದತ್ತಾತ್ರಿಯವರು ಬರೆದಿದ್ದಾರೆ. ಚಿಕ್ಕಮಗಳೂರು ಸೀಮೆಯ ಗೊಲ್ಲರಹಳ್ಳಿಯಲ್ಲಿ ಹುಟ್ಟಿ ಬೆಳೆದು ದೊಡ್ಡವನಾಗಿ ಬೆಂಗಳೂರು, ನಂತರ ಅಮೆರಿಕ ಸೇರಿ ಬದುಕು ಕಂಡುಕೊಳ್ಳಲು ಹೆಣಗುವ ’ಜೋಯಿಸರ ಹುಡುಗ’ ಶ್ರೀಕಾಂತ್ ರಾವ್ ಕತೆಯನ್ನು ಈ ಕಾದಂಬರಿಯಲ್ಲಿ ಹೆಣೆಯಲಾಗಿದೆ. ಸಾಫ್ಟ್‌ವೇರ್ ಉದ್ಯೋಗಿಯೊಬ್ಬನ ಬದುಕಿನ ಹೆಣಗಾಟದ ಚಿತ್ರಣ ಇದರಲ್ಲಿ ಕಾಣಸಿಗುತ್ತದೆ. ದಿ.ಸೂರ್ಯ ನಾರಾಯಣ ಚಡಗ ಸ್ಮಾರಕ ಪ್ರಶಸ್ತಿ ಹಾಗೂ ಅಮ್ಮ ಪ್ರಶಸ್ತಿ ಗಳನ್ನು ಈ ಕಾದಂಬರಿ ತನ್ನ ಮುಡಿಲಿಗೇರಿಸಿಕೊಂಡಿದೆ.

ಈ ಪುಸ್ತಕಕ್ಕೆ ಬೆನ್ನುಡಿಯನ್ನು ಎಚ್.ಎಸ್.ವೆಂಕಟೇಶಮೂರ್ತಿ ಬರೆದಿದ್ದಾರೆ.

ಪ್ರಶಸ್ತಿಗಳು[ಬದಲಾಯಿಸಿ]

ಬಾಹ್ಯ ಕೊಂಡಿಗಳು[ಬದಲಾಯಿಸಿ]