ಬಸವ ಜಯಂತಿ
ವಿಕಿಪೀಡಿಯ ಇಂದ
ವೈಶಾಖ ಶುದ್ಧ ತದಿಗೆಯಂದು, ಲಿಂಗಾಯತ ಮತದ ಸ್ಥಾಪಕರಾದ ಬಸವಣ್ಣನವರ ಜನ್ಮದಿನವಾದ ಬಸವ ಜಯಂತಿಯನ್ನು ಆಚರಿಸಲಾಗುತ್ತದೆ. ಬಸವ ಜಯಂತಿಯು ಲಿಂಗಾಯತರ ಅತ್ಯಂತ ಪ್ರಮುಖ ಹಬ್ಬ. ಕರ್ನಾಟಕದಾದ್ಯಂತ ಇದನ್ನು ಬಹಳ ವೈಭವ ಹಾಗೂ ಉಲ್ಲಾಸದಿಂದ ಆಚರಿಸಲಾಗುತ್ತದೆ.
ಹನ್ನೆರಡನೆಯ ಶತಮಾನದಲ್ಲಿ ಕರ್ನಾಟಕರಾಜ್ಯದಲ್ಲಿ ನಡೆದ ಸಾಮಾಜಿಕ ಕ್ರಾಂತಿಯ ರೂವಾರಿ ಬಸವಣ್ಣನವರು. ಅಲ್ಲಮಪ್ರಭು, ಅಕ್ಕಮಹಾದೇವಿ, ಮಡಿವಾಳಮಾಚಯ್ಯ ಮುಂತಾದ ಶಿವಶರಣರ ಕಾಲದಲ್ಲಿಯೇ ಜೀವಿಸಿದ್ದ ಜಗಜ್ಯೋತಿ ಬಸವಣ್ಣನವರ ಪ್ರಭಾವದ ಕಾರಣ ಆ ಕಾಲವನ್ನು ಬಸವಯುಗವೆಂದೇ ಕರೆಯುತ್ತಾರೆ.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |