ಬಾಲಕೃಷ್ಣ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಟಿ.ಎನ್.ಬಾಲಕೃಷ್ಣ (ಬಾಲಣ್ಣ) - ಕನ್ನಡ ಚಿತ್ರರಂಗದ ಅತ್ಯಂತ ಪ್ರತಿಭಾವಂಥ ನಟರಲ್ಲೊಬ್ಬರು. ಇವರು ಕನ್ನಡದ ಜನತೆಯನ್ನು ಹಲವು ದಶಕಗಳ ಕಾಲ ತಮ್ಮ ತೀಕ್ಷ್ಣ ಹಾಗು ನೈಜ ಅಭಿನಯದಿಂದ ರಂಜಿಸಿದ್ದಾರೆ. ಕನ್ನಡ ಚಿತ್ರರಂಗದ ವಲಯದಲ್ಲಿ, ಹಾಗು ಚಿತ್ರಪ್ರೇಮಿಗಳಲ್ಲಿ ಬಾಲಣ್ಣ ಎಂದೇ ಪರಿಚಿತರಾಗಿದ್ದ ಇವರಿಗೆ ಹುಟ್ಟಿನಿಂದಲೇ ಕಿವಿಯು ಸರಿಯಾಗಿ ಕೇಳಿಸುತ್ತಿರಲಿಲ್ಲ.

ಪರಿವಿಡಿ

[ಬದಲಾಯಿಸಿ] ಹಿನ್ನೆಲೆ

ಬಾಲಕೃಷ್ಣರ ಜನನ ನವೆಂಬರ್ ೨,೧೯೧೧ರಂದು ಹಾಸನ ಜಲ್ಲೆಯ ಅರಸೀಕೆರೆಯಲ್ಲಿ ಆಯಿತು.ಇವರ ತಂದೆ ತಾಯಿಯರು ದಿನಗೂಲಿಯಲ್ಲಿ ಜೀವಿಸುತಿದ್ದರು. ಈ ಶ್ರಮಜೀವಿಗಳಿಗೆ ಒಬ್ಬನೇ ಮಗ ಬಾಲಕೃಷ್ಣ.ಇದ್ದಕ್ಕಿದ್ದಂತೆ ತಂದೆಯು ಕಾಯಿಲೆ ತೀವ್ರ ಸ್ವರೂಪ ಪಡೆದಾಗ ತಾಯಿ ಕಂಡ ಕಂಡಲ್ಲಿ ಬಿಕ್ಷೆ ಬೇಡಿ ಹಣ ಹೊಂದಿಸಲು ಶ್ರಮ ಪಟ್ಟಳು,ಅದೂ ಸಾಲದಾದಾಗ ಬೇರೆ ದಾರಿ ಕಾಣದೆ ಅರಸೀಕೆರೆಯ ಮಂಡಿ ವ್ಯಾಪಾರಿಯ ಉಪ ಪತ್ನಿಗೆ ಮಗು ಬಾಲಕೃಷ್ಣನನ್ನು ಎಂಟು ರೂಪಾಯಿಗೆ ಮಾರಿದಳು.ಆ ಸಾಕು ತಾಯಿ ಬಾಲಕನನ್ನು ಅರಸೀಕೆರೆಯ ಶಾಲೆಗೆ ಸೇರಿಸಿದಳು.

ಆದರೆ ಎಂಟನೆ ವಯಸ್ಸಿಗೆ ಬಾಲಣ್ಣನ ಶ್ರವಣಶಕ್ತಿ ಸಂಪೂರ್ಣ ಮಾಯವಾಯಿತು.ಕಲಿಕೆ ಕಷ್ಟವಾಯಿತು.ಲೋಯರ್ ಸೆಕಂಡರಿ ದಾಟುವುದೇ ಕಷ್ಟವಾದಾಗ ಕಲೆಯ ಕಡೆಗೆ ಆಸಕ್ತಿ ಹೊರಳಿತು.ಸ್ನೇಹಿತರ ಜೊತೆಗೂಡಿ ನಾಟಕವಾಡುವ ಹವ್ಯಾಸ ಬಲವಾಯಿತು.ಒಮ್ಮೆ ಸಾಕು ತಂದೆಯ ಜೇಬಿನಿಂದ ದುಡ್ಡು ಕದ್ದು ಸಿಕ್ಕಿ ಬಿದ್ದಾಗ ಸಾಕು ತಾಯಿ ಮನೆಯಿಂದಲೇ ದೂರ ಕಳುಹಿಸಿದಳು.

ಅಲ್ಲಿಗೆ ಇದ್ದ ಮನೆಯ ಋಣ ತೀರಿತು.ಜಗತ್ತೇ ಮನೆಯಾಯಿತು. ನಾಟಕ ಕಂಪೆನಿಯ ಗೇಟು ಕಾಯುವುದು,ಬೋರ್ಡು ಬರೆಯುವುದು,ಪೋಸ್ಟರ್ ಅಂಟಿಸುವುದು...ಹೀಗೆ ಆರಂಭವಾದ ಇವರ ವೃತ್ತಿಜೀವನ ಮುಂದೆ ರಂಗಭೂಮಿಯ ನಟನೆಗೆ ತಿರುಗಿತು.’ಕೃಷ್ಣಲೀಲಾ ’ ಇವರು ಅಭಿನಯಿಸಿದ ಮೊದಲ ನಾಟಕ. ಚಾಮುಂಡೇಶ್ವರಿ,ಗುಬ್ಬಿ ಕಂಪೆನಿಗಳಲ್ಲಿ ಅಭಿನಯಿಸಿದ್ದ ಬಾಲಣ್ಣ ನೀಲಾಂಜನೆ,ಚಿತ್ರಾಂಗದೆ ಮುಂತಾದ ೫೦ ನಾಟಕಗಳನ್ನು ಬರೆದಿದ್ದಾರೆ.

[ಬದಲಾಯಿಸಿ] ಕನ್ನಡ ಚಿತ್ರರಂಗದಲ್ಲಿ ಬಾಲಕೃಷ್ಣ

ವರ್ಷ ೧೯೪೩ ರಲ್ಲಿ ರಾಧಾರಮಣ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಇವರು ಸುಮಾರು ೫೧೦ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.ಹಾಸ್ಯ ನಟ,ಖಳ ನಟ,ಪೋಷಕ ನಟ ..-ಹೀಗೆ ಎಲ್ಲ ಬಗೆಯ ಪಾತ್ರಗಳಲ್ಲೂ ನಟಿಸಿ ಸೈ ಅನಿಸಿಕೊಂಡಿದ್ದಾರೆ.ಕನ್ನಡ ಚಿತ್ರರಂಗಕ್ಕೆ ಇವರ ಕೊಡುಗೆ ಚಿರಸ್ಮರಣೀಯ. ಕಣ್ತೆರೆದು ನೋಡು,ಬಂಗಾರದ ಮನುಷ್ಯ,ತ್ರಿಮೂರ್ತಿ,ಸಂಪತ್ತಿಗೆ ಸವಾಲ್, ಗಂಧದ ಗುಡಿ, ಭಾಗ್ಯದ ಲಕ್ಷ್ಮಿ ಬಾರಮ್ಮ ಇವರು ಅಭಿನಯಿಸಿದ ಕೆಲವು ಪ್ರಮುಖ ಚಿತ್ರಗಳು.ಯಮಕಿಂಕರ ಅವರ ಅಭಿನಯದ ಕೊನೆಯ ಚಿತ್ರ. ಪರ ಭಾಷೆಯ ಸ್ಟುಡಿಯೋದವರು ಕನ್ನಡ ಚಿತ್ರಗಳ ಬಗ್ಗೆ ತೋರಿಸುವ ನಿರ್ಲಕ್ಷ ಅರಿತಿದ್ದ ಬಾಲಣ್ಣ ತಾವೇ ಸ್ವಂತ ಸ್ಟುಡಿಯೋ ನಿರ್ಮಿಸುವ ಸಂಕಲ್ಪ ಮಾಡಿದರು.ಕನ್ನಡಿಗರ ಅಭಿಮಾನದ ಸಾಕಾರವಾಗಲಿ ಎಂದು ಅದಕ್ಕೆ "ಅಭಿಮಾನ್"ಎಂದು ಹೆಸರಿಟ್ಟರು.ನಮನ

[ಬದಲಾಯಿಸಿ] ನಿರ್ಮಾಪಕರಾಗಿ ಬಾಲಕೃಷ್ಣ

ಬಾಲಕೃಷ್ಣ ಅವರು ಕೆಲವು ಚಿತ್ರಗಳಿಗೆ ಸಹನಿರ್ಮಾಪಕರಾಗಿದ್ದರು.

ಪಂಚರತ್ನ,ಭಕ್ತ ಮಲ್ಲಿಕಾರ್ಜುನ ಚಿತ್ರಗಳಿಗೆ ಹಾಡು,ಸಂಭಾಷಣೆ ಬರೆದಿದ್ದರು.

[ಬದಲಾಯಿಸಿ] ಪ್ರಶಸ್ತಿ /ಪುರಸ್ಕಾರಗಳು

  • ೧೯೮೯ -೯೦ - ಪುಟ್ಟಣ್ಣ ಕಣಗಾಲ್ ಪ್ರಶಸ್ತಿ.
  • ಬಂಗಾರದ ಮನುಷ್ಯ ಚಿತ್ರದ ಅಭಿನಯಕ್ಕೆ ಶ್ರೇಷ್ಠ ಪೋಷಕ ನಟ ಪ್ರಶಸ್ತಿ.

ಬಾಲಕೃಷ್ನ ಅವರು ಜುಲೈ ೧೯,೧೯೯೫ರಂದು ಕ್ಯಾನ್ಸರ್ ನಿಂದ ನಿಧನರಾದರು.ಬಾಲ್ಯದಲ್ಲಿಯೇ ಶ್ರವಣ ಶಕ್ತಿ ಸಂಪೂರ್ಣ ಹೋದರೂ ೫೧೫ ಚಿತ್ರಗಳಲ್ಲಿ ಅಭಿನಯಿಸಿದ ಬಾಲಣ್ಣನ ಜನ್ಮ ಶತಮಾನೋತ್ಸವದ (೨೦೧೧)ಸಂದರ್ಬದಲ್ಲಿ ಅವರಿಗೊಂದು "ನಮನ".

"http://kn.wikipedia.org/w/index.php?title=ಬಾಲಕೃಷ್ಣ&oldid=245935" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ