ಭಗವದ್ಗೀತೆ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಭಗವದ್ಗೀತೆ

Aum
ಅಧ್ಯಾಯಗಳು
  1. ಅರ್ಜುನವಿಷಾದಯೋಗಃ
  2. ಸಾಂಖ್ಯಯೋಗಃ
  3. ಕರ್ಮಯೋಗಃ
  4. ಜ್ಞಾನಯೋಗಃ
  5. ಸಂನ್ಯಾಸಯೋಗಃ
  6. ಧ್ಯಾನಯೋಗಃ
  7. ಜ್ಞಾನವಿಜ್ಞಾನಯೋಗಃ
  8. ಅಕ್ಷರಬ್ರಹ್ಮಯೋಗಃ
  9. ರಾಜವಿದ್ಯಾರಾಜಗುಹ್ಯಯೋಗಃ
  10. ವಿಭೂತಿಯೋಗಃ
  11. ವಿಶ್ವರೂಪದರ್ಶನಯೋಗಃ
  12. ಭಕ್ತಿಯೋಗಃ
  13. ಕ್ಷೇತ್ರಕ್ಷೇತ್ರಜ್ಞಯೋಗಃ
  14. ಗುಣತ್ರಯವಿಭಾಗಯೋಗಃ
  15. ಪುರುಷೋತ್ತಮಯೋಗಃ
  16. ದೈವಾಸುರಸಂಪದ್ವಿಭಾಗಯೋಗಃ
  17. ಶ್ರದ್ಧಾತ್ರಯವಿಭಾಗಯೋಗಃ
  18. ಮೋಕ್ಷಸಂನ್ಯಾಸಯೋಗಃ

ಹಿಂದೂ ಧರ್ಮಗ್ರಂಥಗಳು

Aum

ಋಗ್ವೇದ · ಯಜುರ್ವೇದ · ಸಾಮವೇದ · ಅಥರ್ವವೇದ

ಐತರೇಯ · ಬೃಹದಾರಣ್ಯಕ · ಈಶಾವಾಸ್ಯ · ತೈತ್ತಿರೀಯ · ಛಾಂದೋಗ್ಯ · ಕೇನ · ಮುಂಡಕ · ಮಾಂಡೂಕ್ಯ · ಕಠ · ಪ್ರಶ್ನ · ಶ್ವೇತಾಶ್ವತರ

ಗರುಡ · ಅಗ್ನಿ . ನಾರದ . ಪದ್ಮ . ಸ್ಕಾಂದ . ಭವಿಷ್ಯ . ಬ್ರಹ್ಮ . ಭಾಗವತ . ಬ್ರಹ್ಮವೈವರ್ತ . ಬ್ರಹ್ಮಾಂಡ . ವಾಯು . ಲಿಂಗ . ವಿಷ್ಣು . ವಾಮನ . ಮಾರ್ಕಂಡೇಯ . ವರಾಹ . ಕೂರ್ಮ . ಮತ್ಸ್ಯ

ಮಹಾಭಾರತ · ರಾಮಾಯಣ

ಭಗವದ್ಗೀತೆ · ಆಗಮ· ಶೂನ್ಯ ಸಂಪಾದನ· ಶ್ರೀಮಧ ಸಿದ್ಧಾಂತ ಶಿಖಾಮಣಿ · ವೀರಶೈವ ಪುರಾಣ · ವಿಷ್ಣು ಸಹಸ್ರನಾಮ . ಬಸವರಾಜ ವಿಜಯಂ


ಭಗವದ್ಗೀತೆಯು ಮಹಾಭಾರತದಲ್ಲಿನ ಕುರುಕ್ಷೇತ್ರ ಯುಧ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ಕೃಷ್ಣನಿಂದ ಅರ್ಜುನನಿಗೆ ಮಾಡಲ್ಪಟ್ಟ ಉಪದೇಶ. ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು.

ಪಂಚಮವೇದ [ಬದಲಾಯಿಸಿ]

ಭಗವದ್ಗೀತೆ ಮಹಾಭಾರತ ಮಹಾಕಾವ್ಯದ ಭೀಷ್ಮಪರ್ವದ ೨೩ ನೇ ಅಧ್ಯಾಯದಿಂದ ೪೦ ನೇ ಅಧ್ಯಾಯದ ನಡುವೆ ಬರುವ ಭಾಗ. ಹಿಂದೂ ಧರ್ಮ ಮತ್ತು ತತ್ವಶಾಸ್ತ್ರದ ಮುಖ್ಯ ಪಠ್ಯಗಳಲ್ಲಿ ಒಂದಾದ ಸುಮಾರು ೭೦೦ ಶ್ಲೋಕಗಳ ಭಗವದ್ಗೀತೆ, ಹಿಂದೂ ಚಿಂತನೆ ಮತ್ತು ವೈದಿಕ, ಅಧ್ಯಾತ್ಮಿಕ, ಯೋಗಿಕ ಹಾಗೂ ತಾಂತ್ರಿಕ ತತ್ವಶಾಸ್ತ್ರಗಳ ಒಟ್ಟು ಸಮಾಗಮವೆನ್ನಬಹುದು. ಕೆಲವೊಮ್ಮೆ ಯೋಗೋಪನಿಷತ್, ಅಥವಾ ಗೀತೋಪನಿಷತ್, ಪಂಚಮವೇದವೆಂದೂ ಭಗವದ್ಗೀತೆಯನ್ನು ಕರೆಯಲಾಗುತ್ತದೆ.



.

ಗೀತೋಪದೇಶ [ಬದಲಾಯಿಸಿ]

'ಭಗವದ್ಗೀತೆ' ಆರಂಭವಾಗುವುದು ಮಹಾಭಾರತ ಯುದ್ಧದ ಆರಂಭವಾಗುವ ಮೊದಲು. ತಮ್ಮ ಸೈನ್ಯಕ್ಕೆ ರಣಭೂಮಿಯಲ್ಲಿ ಇದಿರಾದ ಕೌರವರ ಸೇನೆಯಲ್ಲಿ ತನ್ನ ಬಹಳಷ್ಟು ಬಂಧುಗಳನ್ನು ಕಂಡು ಅರ್ಜುನ ಉತ್ಸಾಹ ಕಳೆದುಕೊಂಡು ಮಾರ್ಗದರ್ಶನಕ್ಕಾಗಿ ಕೃಷ್ಣನತ್ತ ತಿರುಗಿದಾಗ. ಆತ್ಮದ ಅಮರತ್ವದ ಬಗ್ಗೆ ಪ್ರಸ್ತಾಪಿಸುತ್ತ ಕೃಷ್ಣ 'ಗೀತೋಪದೇಶ'ವನ್ನು ಆರಂಭಿಸುತ್ತಾನೆ. ಇದರ ನಂತರ ನಾಲ್ಕು ಯೋಗಮಾರ್ಗಗಳಾದ ಭಕ್ತಿ, ಕರ್ಮ, ಧ್ಯಾನ ಮತ್ತು ಜ್ಞಾನ ಮಾರ್ಗಗಳನ್ನು ವಿವರಿಸುತ್ತಾನೆ.

ಇವನ್ನೂ ನೋಡಿ [ಬದಲಾಯಿಸಿ]