ಭರತ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ರಾಮನ ಪಾದುಕೆಯನ್ನು ಬೇಡುತ್ತಿರುವ ಭರತ

ರಾಮಾಯಣದಲ್ಲಿ ಬರುವ ಆದರ್ಶಮಯ ಪಾತ್ರಗಳಲ್ಲೊಂದು.

ಭರತನು ದಶರಥನ ಎರಡನೆಯ ಮಗ. ರಾಮನು ಸೀತಾ ಮತ್ತು ಲಕ್ಶ್ಮಣರೊಡನೆ ವನವಾಸ ಹೊರಟಾಗ ಭರತ ಇರುವುದಿಲ್ಲ. ತನ್ನ ತಾಯಿಯೇ ರಾಮನನ್ನು ವನವಾಸಕ್ಕೆ ಕಳಿಸುವುದರ ಮೂಲಕ, ತನ್ನ ತಂದೆ ದಶರಥನ ಸಾವಿಗೆ ಕಾರಣಳಾದ ವಿಷಯ ಭರತನಿಗೆ ನಂತರ ತಿಳಿಯುತ್ತದೆ. ಕೂಡಲೇ ತಾಯಿಯ ಮೇಲೆ ಕೋಪಗೊಂಡು ರಾಮನನ್ನು ಹುಡುಕಲು ಹೊರಡುತ್ತಾನೆ. ಭರತ ಎಷ್ಟೇ ವಿನಂತಿಸಿಕೊಂಡರೂ, ತನ್ನ ತಂದೆಗೆ ಕೊಟ್ಟ ಮಾತಿಗೆ ತಪ್ಪ್ಪಲು ಒಪ್ಪದ ರಾಮ ಭರತನೊಡನೆ ಹಿಂತಿರುಗಲು ಒಪ್ಪುವುದಿಲ್ಲ. ಆಗ ಭರತ ರಾಮನ ಪಾದುಕೆಗಳನ್ನು ಪಡೆದುಕೊಂಡು ಹಿಂತಿರುಗುತ್ತಾನೆ. ತಾನು ಸಿಂಹಾಸನದ ಮೇಲೆ ಕುಳಿತುಕೊಳ್ಳದೆ, ಅಣ್ಣನ ಪಾದುಕೆಗಳನ್ನೇ ಸಿಂಹಾಸನದ ಮೇಲಿಟ್ಟು, ರಾಮನ ಪರವಾಗಿ ರಾಜ್ಯದ ಆಡಳಿತವನ್ನು ನಿರ್ವಹಿಸುತ್ತಿರುತ್ತಾನೆ.










ವಾಲ್ಮೀಕಿ ವಿರಚಿತ ರಾಮಾಯಣ
ಪಾತ್ರಗಳು
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯೆ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕಿ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |ಕಬಂಧ
ಇತರೆ
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು |
"https://kn.wikipedia.org/w/index.php?title=ಭರತ&oldid=722288" ಇಂದ ಪಡೆಯಲ್ಪಟ್ಟಿದೆ