ಮಡಿಕೇರಿ
| ಮಡಿಕೇರಿ | |
| ಮಡಿಕೇರಿಯ ರಾಜಾಸೀಟ್ | |
| ರಾಜ್ಯ - ಜಿಲ್ಲೆ |
ಕರ್ನಾಟಕ - ಕೊಡಗು |
| ನಿರ್ದೇಶಾಂಕಗಳು | |
| ವಿಸ್ತಾರ | km² |
| ಸಮಯ ವಲಯ | IST (UTC+5:30) |
| ಜನಸಂಖ್ಯೆ (2001) - ಸಾಂದ್ರತೆ |
32,286 - /ಚದರ ಕಿ.ಮಿ. |
| ಕೋಡ್ಗಳು - ಪಿನ್ ಕೋಡ್ - ಎಸ್.ಟಿ.ಡಿ. - ವಾಹನ |
- 571 201 - +0827 - KA-12 |
ಮಡಿಕೇರಿ ಕೊಡಗು ಜಿಲ್ಲೆಯ ಒಂದು ತಾಲೂಕು ಹಾಗೂ ಜಿಲ್ಲಾ ಕೇಂದ್ರ. ಕೊಡಗಿನ ರಾಜಧಾನಿ ಎಂದರೂ ತಪ್ಪಾಗಲಾರದು. ಎಲ್ಲಾ ಪ್ರಮುಖ ವ್ಯವಹಾರಗಳು ನಡೆಯುವ ಸ್ಥಳ. ಎಲ್ಲಾ ಸರ್ಕಾರಿ ಕಛೇರಿಗಳು ಮುಖ್ಯವಾಗಿ ಮಡಿಕೇರಿಯಲ್ಲಿದೆ. ಅಲ್ಲದೆ ಮಡಿಕೇರಿ ಒಂದು ಪ್ರಮುಖ ಪ್ರವಾಸಿ ಕೇಂದ್ರವೂ ಹೌದು, ಮಡಿಕೇರಿಯನ್ನು ಮೊದಲು ಲಿಂಗರಾಜ ಮಹಾರಾಜನು ತನ್ನ ಕಾಲಾಡಳಿತದಲ್ಲಿ ರಾಜಧಾನಿಯನ್ನಾಗಿ ಮಾಡಿಕೊಂಡಿದ್ದನು. ಮಡಿಕೇರಿಯಲ್ಲಿರುವ ಓಂಕಾರೇಶ್ವರ ದೇವಸ್ಠಾನವನ್ನು ಎರಡನೇ ಲಿಂಗರಾಜನು ಕಟ್ಟಿಸಿದನು. ಇಂದು ಇದು ಇಲ್ಲಿಯ ಒಂದು ಪ್ರಮುಖ ದೇವಾಸ್ಥಾನವೂ, ಪ್ರವಾಸಿ ತಾಣವೂ ಅಗಿದೆ,ಅದೇ ರೀತಿ ರಾಜಾಸೀಟ್, ಅರಮನೆ,ಗದ್ದಿಗೆಯು ಸಹ ಇಂದಿನ ಪ್ರವಾಸಿ ತಾಣಗಳಲ್ಲಿ ಹೆಸರಾಗಿದೆ.ಅಬ್ಬಿ ಜಲಪಾತವು ಮೈ ತುಂಬಿದಾಗ ಸಂಭ್ರಮದ ನೋಟ.ಈ ಜಲಪಾತವನ್ನು ನೋಡಲು ರಾಜ್ಯದ ಎಲ್ಲಾ ಭಾಗಗಳಿಂದಲೂ ಜನರ ಬರುತ್ತಾರೆ.ಹಾಗೆ ಬಂದ ಪ್ರವಾಸಿಗರ ಮನ ತಣಿಸಿ ಅಬ್ಬಿ ಅವರನ್ನು ಬೀಳ್ಗೊಡುತ್ತದೆ.ಮಡಿಕೇರಿಯ ಮಂಜನ್ನು ಕವಿ ಶ್ರೀ ಜಿ ಪಿ ರಾಜರತ್ನಮ್ ಅವರು `ಮಡಿಕೇರೀಲಿ ಮಂಜು' ಎಂಬ ಕವಿತೆಯಲ್ಲಿ ವರ್ಣಿಸಿದ್ದಾರೆ. ಮ್ಯೆಸೂರಿನಲ್ಲಿ ಅತಿ ವಿಜೃಂಭಣೆಯಿಂದ ನಡೆಯುವ ದಸರಾ,ಮಡಿಕೇರಿಯಲ್ಲಿಯೂ ನಡೆಯುತ್ತದೆ.ಮಡಿಕೇರಿಯ ತಲ ಕಾವೇರಿಯಲ್ಲಿ,ಕಾವೇರಿ ನದಿಯು ಹುಟ್ಟಿ ಅಲ್ಲಿಂದ ಸುಮಾರು ೧,೨ ಕಿ ಮಿ ವರೆಗೆ ಅಂತರ್ಗಾಮಿಯಾಗಿ ಹರಿದು ಮುಂದೆ ಭಾಗಮಂಡಲದಲ್ಲಿ ಪುನಃ ತನ್ನ ದರ್ಶನವನ್ನು ನೀಡುತ್ತದೆ.ಇದು ಜಿಲ್ಲೆಯ ಮತ್ತು ರಾಜ್ಯದ ಪ್ರಮುಖ ನದಿಯು ಸಹ ಅಗಿದೆ.ತಲ ಕಾವೇರಿಯಲ್ಲಿ ಪ್ರತಿ ವರ್ಷವು ತೀರ್ಥೊದ್ಭವವು ಸಂಭವಿಸುತ್ತದೆ,ಇದರ ದರ್ಶನಕ್ಕೆ ಸಾವಿರರು ಭಕ್ತರು ಅಲ್ಲಿ ಬಂದು ಸೇರುತ್ತಾರೆ,(ಮತ್ತು ಕೆಲವು ಸಂಘ ಸಂಸ್ಥೆಗಳು ತೀರ್ಥವನ್ನು ಜಿಲ್ಲೆಯ ಎಲ್ಲಾ ಭಾಗದ ಜನರಿಗೆ ತಲುಪಿಸಲು ಸಹಕರಿಸುತ್ತಾರೆ.) ಈ ನದಿಯು ಮುಂದೆ ತಮೀಳುನಾಡು ರಾಜ್ಯದ ಮೂಲಕ ಬಂಗಾಳಕೊಲ್ಲಿಯನ್ನು ಸೇರುತ್ತದೆ.