ಯಕ್ಷಗಾನ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಬಡಗು ತಿಟ್ಟು ಯಕ್ಷಗಾನ ವೇಷದ ಒಂದು ಮಾದರಿ
ತೆಂಕು ತಿಟ್ಟು ಯಕ್ಷಗಾನ ವೇಷದ ಒಂದು ಮಾದರಿ

ಯಕ್ಷಗಾನ - ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷಭೂಷಣಗಳನ್ನೊಳಗೊಂಡ ಒಂದು ಸ್ವತ೦ತ್ರವಾದ ಶಾಸ್ತ್ರೀಯ ಕಲೆ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ಕರಾವಳಿ ಜಿಲ್ಲೆಗಳು (ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ) , ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯಕ್ಷಗಾನವು ಮನೆ ಮಾತಾಗಿದೆ.

ಪರಿವಿಡಿ

[ಬದಲಾಯಿಸಿ] ಯಕ್ಷಗಾನದ ಪ್ರಮುಖ ಅಂಶಗಳು

ಯಕ್ಷಗಾನದಲ್ಲಿ ಈ ಕೆಳಗಿನ ಪ್ರಮುಖ ಅಂಶಗಳನ್ನು ಕಾಣಬಹುದು.

  • ಪ್ರಸಂಗ: ಯಕ್ಷಗಾನದಲ್ಲಿ ಯಾವುದಾದರೊಂದು ಕಥಾನಕವನ್ನು ಆಯ್ದುಕೊಂಡು ಅದನ್ನು ಜನರಿಗೆ ಹಾಡು, ಅಭಿನಯ, ನೃತ್ಯಗಳೊಂದಿಗೆ ತೋರಿಸಲಾಗುತ್ತದೆ. ಹೀಗೆ ಆಯ್ದುಕೊಂಡ ಕಥಾನಕವನ್ನು ಪ್ರಸಂಗ ಎಂದು ಕರೆಯುತಾರೆ. ಉದಾಹರಣೆಗೆ ಮಹಾಭಾರತದಲ್ಲಿ ಭೀಮ ಮತ್ತು ದುರ್ಯೋಧನರ ನಡುವೆ ನಡೆಯುವ ಗಧಾಯುದ್ಧದ ಕಥೆಯನ್ನು ಆಯ್ದುಕೊಂಡರೆ ಆಗ ಅದನ್ನು "ಗಧಾಯುದ್ದ ಪ್ರಸಂಗ" ಎಂಬುದಾಗಿ ಕರೆಯುತ್ತಾರೆ. ಹೆಚ್ಚಾಗಿ ಪೌರಾಣಿಕ ಪ್ರಸಂಗಗಳನ್ನೇ ಆಯ್ದು ಕೊಳ್ಳುವುದು ಯಕ್ಷಗಾನದ ವಾಡಿಕೆಯಾದರೂ ಪ್ರಸಂಗವು ಪೌರಾಣಿಕವೇ ಆಗಬೇಕು ಎಂಬ ನಿಯಮವೇನೂ ಇಲ್ಲ. ಇದು ಐತಿಹಾಸಿಕವೂ, ಸಾಮಾಜಿಕಾವೂ ಆಗಿರಬಹುದು.
  • ಪಾತ್ರಧಾರಿಗಳು:ಪ್ರಸಂಗದಲ್ಲಿ ಬರುವ ಕಥೆಯನ್ನು ಅಭಿನಯಿಸುವವರೇ ಪಾತ್ರಧಾರಿಗಳು. ಸ್ತ್ರೀ ಪಾತ್ರ, ಖಳ ನಟನ ಪಾತ್ರ, ಹಾಸ್ಯ ಕಲಾವಿದನ ಪಾತ್ರ, ನಾಯಕನ ಪತ್ರ - ಹೀಗೆ ಪ್ರಸಂಗಕ್ಕೆ ಅನುಗುಣವಾಗಿ ಪಾತ್ರಗಳನ್ನು ಆಯ್ಕೆ ಮಾಡಲಾಗುತ್ತದೆ. ನೃತ್ಯ, ಅಭಿನಯ ಹಾಗೂ ಮಾತುಗಾರಿಕೆಗಳೊಂದಿಗೆ ಕಥೆಯನ್ನು ಪ್ರೇಕ್ಷಕರಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ಪಾತ್ರಧಾರಿಗಳ ಮೇಲಿರುತ್ತದೆ.
  • ವೇಷಭೂಷಣ:ಯಕ್ಷಗಾನದ ಪ್ರಮುಖ ಪ್ರಭೇದವಾದ ಬಯಲಾಟಗಳಲ್ಲಿ ವೇಷಭೂಷಣಗಳು ಪ್ರಮುಖವಾದದ್ದು. ಪಾತ್ರಗಳಿಗೆ ತಕ್ಕಂತೆ ವೇಷಭೂಷಣಗಳಿರುತ್ತವೆ. ಉದಾಹರಣೆಗೆ ಪ್ರಮುಖ ಖಳನಟ ಮತ್ತು ರಾಜ (ನಾಯಕ)ನ ಪಾತ್ರಕ್ಕೆ ಬಳಸುವ ಕಿರೀಟವು ಸಾಮಾನ್ಯ ಪಾತ್ರಧಾರಿಗೆ ಬಳಸುವ ಕಿರೀಟಗಳಿಗಿಂತ ವಿಭಿನ್ನ ವಿನ್ಯಾಸದ್ದಾಗಿರುತ್ತದೆ. ಹಾಗೆಯೇ ಸ್ತ್ರೀ ಪಾತ್ರಗಳಿಗೆ ಬಳಸುವ ಕಿರೀತವು ತುಂಬಾ ಚಿಕ್ಕದಾಗಿರುತ್ತದೆ. ಅಲ್ಲದೇ ತೆಂಕು ತಿಟ್ಟು ಶೈಲಿಯ ಯಕ್ಷಗಾನದಲ್ಲಿ ಉಪಯೋಗಿಸುವ ವೇಷಭೂಷಣಗಳು ಬಡಗು ತಿಟ್ಟಿನಲ್ಲಿ ಉಪಯೋಗಿಸುವ ವೇಷಭೂಷಣಗಳಿಗಿಂತ ಭಿನ್ನವಾಗಿರುತ್ತವೆ.
  • ಭಾಗವತಿಕೆ: ಯಕ್ಷಗಾನದ ಜೀವಾಳವೇ ಭಾಗವತಿಕೆ ಅಥವಾ ಹಾಡುಗಾರಿಕೆ. ಅವರು ಈ ರಂಗ ಪ್ರಕಾರದ ನಿರ್ದೇಶಕರಿದ್ದಂತೆ. ಇಲ್ಲಿ ಪಾತ್ರಧಾರಿಗಳು ಅಭಿನಯಿಸುವ ಕಥಾನಕವನ್ನು ಕಾವ್ಯ ರೂಪದಲ್ಲಿ ಹಾಡಲಾಗುತ್ತದೆ. ಹೀಗೆ ಹಾಡುವವರನ್ನು ಭಾಗವತರು ಎಂದು ಕರೆಯುತ್ತಾರೆ. ಭಾಗವತರು ಹಾಡುವ ಪದಗಳಿಗೆ ತಕ್ಕಂತೆ ಪಾತ್ರಧಾರಿಗಳು ನೃತ್ಯದ ಮೂಲಕ ಅಭಿನಯಿಸುತ್ತಾರೆ. ನೃತ್ಯದೊಂದಿಗೆ ಹಾಡಿನಲ್ಲಿ ಬರುವ ಕಥಾನಕದ ಸಂದರ್ಭಕ್ಕನುಗುಣವಾಗಿ ಭಾವಾಭಿನಯವೂ ಸಹ ಅತ್ಯಂತ ಅಗತ್ಯವಾದುದು.
  • ಮಾತುಗಾರಿಕೆ:ಭಾಗವತರು ಹಾಡುವುದನ್ನು ಪೂರ್ಣಗೊಳಿಸಿದ ಕೂಡಲೇ ಆ ಹಾಡಿನ ಸಾರಾಂಶವನ್ನು ಪಾತ್ರಧಾರಿಗಳು ಚರ್ಚಿಸುತ್ತಾರೆ. ಹಾಡಿನಲ್ಲಿ ಕಥಾನಕದ ಯಾವ ಭಾಗವನ್ನು ಪ್ರಸ್ತುತ ಪಡಿಸಲಾಗುತ್ತದೋ ಅದೇ ಭಾಗದ ಅರ್ಥವನ್ನು ಜನ ಸಾಮಾನ್ಯರೆಲ್ಲರಿಗೂ ಸ್ಪಷ್ಟವಾಗುವಂತೆ ಆಡುಮಾತಿನಲ್ಲಿ ಪಾತ್ರಧಾರಿಗಳು ಸಂಭಾಷಿಸುತ್ತಾರೆ.
  • ಹಿಮ್ಮೇಳ:ಹಿಮ್ಮೇಳವೆಂದರೆ ಚಂಡೆ, ಮದ್ದಲೆ, ಮೃದಂಗ, ತಾಳ, ಜಾಗಟೆ ಮುಂತಾದ ಸಂಗೀತ ಉಪಕರಣಗಳನ್ನು ಇಲ್ಲಿನ ನೃತ್ಯ, ಭಾಗವತಿಕೆ ಮತ್ತು ಮಾತುಗಾರಿಕೆಯ ವೇಳೆ ಸಂದರ್ಭೋಚಿತವಾಗಿ ಬಳಸುವಿಕೆ. ಒಂದು ಯಕ್ಷಗಾನವು ಪರಿಣಾಮಕಾರಿಯಾಗಿ ಮೂಡಿಬರಬೇಕಾದರೆ ಪಾತ್ರಧಾರಿಗಳ ಅಭಿನಯ, ನೃತ್ಯ, ಭಾಗವತಿಕೆ ಎಷ್ಟು ಮುಖ್ಯವೋ, ಹಿಮ್ಮೇಳವೂ ಸಹಾ ಅಷ್ಟೇ ಪ್ರಮುಖವಾದುದು. ಪಾತ್ರಧಾರಿಗಳ ಅಭಿನಯವು ಇನ್ನಷ್ಟು ಛಾಪು ಮೂಡಿಸಲು, ಭಾಗವತರ ಹಾಡು ಇನ್ನಷ್ಟು ಸುಂದರವಾಗಿ ಹೊರಹೊಮ್ಮಲು ಸರಿಯಾದ ಹಿಮ್ಮೇಳ ಬೇಕೇ ಬೇಕು.

[ಬದಲಾಯಿಸಿ] ಉಗಮ

ಯಕ್ಷಗಾನದ ಮೊದಲ ಉಲ್ಲೇಖ ಸಾರ್ಣದೇವನ "ಸ೦ಗೀತ ರತ್ನಾಕರ"ದಲ್ಲಿ (೧೨೧೦ ಕ್ರಿಶ) "ಜಕ್ಕ" ಎ೦ದು ಆಗಿದ್ದು ಮು೦ದೆ "ಯಕ್ಕಲಗಾನ" ಎ೦ದು ಕರೆಯಲ್ಪಟ್ಟಿತ್ತು ಎ೦ಬುದು ಒ೦ದು ಅಭಿಪ್ರಾಯ. ಗ೦ಧರ್ವ ಗ್ರಾಮ ಎ೦ಬ ಈಗ ನಶಿಸಿ ಹೋಗಿರುವ ಗಾನ ಪದ್ದತಿಯಿ೦ದ ಗಾನ ಮತ್ತು ಸ್ವತ೦ತ್ರ ಜಾನಪದ ಶೈಲಿಗಳಿ೦ದ ನೃತ್ಯ ರೂಪಗೊ೦ಡಿತೆ೦ದು ಶಿವರಾಮ ಕಾರ೦ತರ "ಯಕ್ಷಗಾನ ಬಯಲಾಟ" ಎ೦ಬ ಸ೦ಶೋಧನಾ ಪ್ರಭ೦ದಗಳ ಸ೦ಕಲನದಲ್ಲಿ ಹೇಳಿದೆ. ೧೫೦೦ ರಷ್ಟರಲ್ಲಿ ವ್ಯವಸ್ತಿತವಾಗಿ ಯಕ್ಷಗಾನ ರೂಢಿಯಲ್ಲಿತ್ತು ಎ೦ಬುದು ಬಹಳ ವಿದ್ವಾ೦ಸರು ಒಪ್ಪುವ ವಿಚಾರ.

[ಬದಲಾಯಿಸಿ] ಯಕ್ಷಗಾನದ ಪ್ರಭೇದಗಳು

ಯಕ್ಷಗಾನದಲ್ಲಿ ಅನೇಕ ರೀತಿಯ ಪ್ರಭೇದಗಳಿದ್ದು ಅವುಗಳಲ್ಲಿ ಯಕ್ಷಗಾನ ಬಯಲಾಟವು ಅತ್ಯಂತ ಜನಪ್ರಿಯವಾದುದು. ಬಯಲಾಟವೆಂದರೆ ವೇಷಭೂಷಣಗಳೊಂದಿಗೆ ರಂಗಭೂಮಿಯಲ್ಲಿ ಆಡುವ ಯಕ್ಷಗಾನ ಪ್ರಭೇದ. ಮೊದ ಮೊದಲು ಹಬ್ಬ ಹರಿ ದಿನಗಳಂದು ಊರಿನ ಬಯಲಿನಲ್ಲಿ ರಾತ್ರಿಯಿಡೀ ಈ ಬಯಲಾಟ ಹೆಚ್ಚಾಗಿ ನಡೆಯಿತ್ತಿದ್ದ ಕಾರಣ "ಬಯಲಾಟ" ಎಂಬ ಹೆಸರು ರೂಢಿಯಲ್ಲಿದೆ. ಜನರು ಇದನ್ನು ಸರಳವಾಗಿ "ಆಟ" ಎಂದೂ ಕರೆಯುತ್ತಾರೆ ===== . ಆದರೆ ಈಗೀಗ ರಾತ್ರಿಯಿಡೀ ನಡೆಯುವ ಬಯಲಾಟದೊಂದಿಗೆ ೨-೩ ಘಂಟೆಗಳ ಕಾಲ ನಡೆಯುವ ಯಕ್ಷಗಾನವೂ ಬಳಕೆಯಲ್ಲಿದೆ.ಬಯಲಾಟದಲ್ಲಿ ವೇಷಭೂಷಣ, ರಂಗಸ್ಥಳ, ಭಾಗವತಿಕೆ (ಹಾಡುಗಾರಿಕೆ), ಅಭಿನಯ, ಮಾತುಗಾರಿಕೆ, ನೃತ್ಯ - ಹೀಗೆ ಸಾಂಪ್ರದಾಯಿಕ ಯಕ್ಷಗಾನದ ಎಲ್ಲ ಮಜಲುಗಳನ್ನೂ ಕಾಣಬಹುದು. ಯಕ್ಷಗಾನದಲ್ಲಿ ಮೂಡಲಪಾಯ ಮತ್ತು ಪಡುವಲಪಾಯ ಎಂಬ ಎರಡು ಮ್ರಮುಖ ಪ್ರಭೇದಗಳಿವೆ. ಪಶ್ಚಿಮ ಘಟ್ಟದ ಪೂರ್ವಕ್ಕೆ ಪ್ರಚಲಿತವಿರುವದು ಮೂಡಲಪಾಯ. ಉತ್ತರ ಕರ್ನಾಟಕದಲ್ಲಿ ಬಹು ಜನಪ್ರಿಯವಾಗಿರುವ ಶ್ರೀಕೃಷ್ಣ ಪಾರಿಜಾತ ಮೂಡಲಪಾಯದಲ್ಲಿ ಗಮನಾರ್ಹ. ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರಚಲಿತವಿರುವುದು ಪಡುವಲಪಾಯ. ಪಡುವಲಪಾಯದಲ್ಲಿ ೩ ವಿಭಾಗಗಳಿವೆ.ಅವು "'ತೆಂಕುತಿಟ್ಟು'ಬಡಗುತಿಟ್ಟುಮತ್ತು ಉತ್ತರದ ತಿಟ್ಟು. ಉತ್ತರ ಕನ್ನಡ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತರದ ತಿಟ್ಟು ಶೈಲಿಯ ಬಯಲಾಟಗಳು ಕಂಡುಬಂದರೆ ಉಡುಪಿಯಲ್ಲಿ ಬಡಗುತಿಟ್ಟು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ತೆಂಕು ತಿಟ್ಟು ಶೈಲಿಯ ಯಕ್ಷಗಾನವನ್ನು ಕಾಣಬಹುದು. ವೇಷಭೂಷಣಗಳ ವಿನ್ಯಾಸ, ನೃತ್ಯದ ಶೈಲಿ, ಭಾಗವತಿಕೆ ಮತ್ತು ಹಿಮ್ಮೇಳಗಳಲ್ಲಿ ಕಂಡುಬರುವ ಕೆಲವು ವ್ಯತ್ಯಾಸಗಳ ಆಧಾರದ ಮೇಲೆ ಈ ವಿಂಗಡನೆಯನ್ನು ಮಾಡಲಾಗಿದೆಯೇ ಹೊರತು ಯಕ್ಷಗಾನದ ಮೂಲ ತತ್ವ, ಆಶಯಗಳು ೩ ಶೈಲಿಗಳಲ್ಲಿಯೂ ಒಂದೇ ಆಗಿರುತ್ತದೆ.

[ಬದಲಾಯಿಸಿ] ತಾಳ ಮದ್ದಲೆ

ಯಕ್ಷಗಾನದ ಇನ್ನೊಂದು ಪ್ರಮುಖ ವಿಭಾಗವೆಂದರೆ "ತಾಳ ಮದ್ದಲೆ". ಬಯಲಾಟಗಳಿಗಿಂತ ಇವು ವಿಭಿನ್ನವಾದವುಗಳು. ಇಲ್ಲಿ ವೇಷಭೂಷಣ, ನೃತ್ಯ ಮತ್ತು ಭಾವಾಭಿನಯಗಳು ಕಂಡು ಬರುವುದಿಲ್ಲ. ಭಾಗವತಿಕೆ, ಹಿಮ್ಮೇಳ ಹಾಗೂ ಮಾತುಗಾರಿಕೆಗಳು ಮಾತ್ರ ಇಲ್ಲಿರುತ್ತವೆ. ಬಯಲಾಟದಂತೆ ಇಲ್ಲಿಯೂ ಒಂದು ಪ್ರಸಂಗವನ್ನು ಆಯ್ದುಕೊಳ್ಳಲಾಗುತ್ತದೆ. ಭಾಗವತರು ಹಾಡುಗಾರಿಕೆಯ ಮೂಲಕ ಕಥಾನಕವನ್ನು ಹೇಳುತ್ತಾ ಹೋಗುತ್ತಾರೆ. ಇಲ್ಲಿ ಪಾತ್ರಧಾರಿಗಳ ಬದಲು ಅರ್ಥಧಾರಿಗಳಿರುತ್ತಾರೆ. ಅರ್ಥಧಾರಿಗಳು ಹಾಡುಗಾರಿಕೆಯಲ್ಲಿ ಹೇಳಲ್ಪಟ್ಟ ಕಥೆಯ ಭಾಗವನ್ನು ಮಾತುಗಾರಿಕೆಯ ಮೂಲಕ ಚರ್ಚಿಸುತ್ತಾರೆ. ಬಯಲಾಟಕ್ಕೂ ತಾಳ ಮದ್ದಲೆಗೂ ಪ್ರಮುಖ ವ್ಯತ್ಯಾಸವಿರುವುದೇ ಈ ಮಾತುಗಾರಿಕೆಯಲ್ಲಿ. ಬಯಲಾಟಗಳಲ್ಲಿ ನೃತ್ಯ ಮತ್ತು ಅಭಿನಯಗಳೇ ಪ್ರಧಾನ. ಮಾತುಗಾರಿಕೆ ಇದ್ದರೂ ಅದು ಕೇವಲ ಹಾಡುಗಾರಿಕೆಯಲ್ಲಿ ಹೇಳಲ್ಪಟ್ಟ ಕಥಾನಕದ ಸಾರಾಂಶವಷ್ಟೇ ಆಗಿರುತ್ತದೆಯೇ ವಿನಃ ವಾದ ಮಂಡನೆಗೆ ಹೆಚ್ಚು ಅವಕಾಶವಿರುವುದಿಲ್ಲ. ಅದೂ ಅಲ್ಲದೇ ಬಯಲಾಟದಲ್ಲಿ ಬರುವ ಸಂಭಾಷಣೆಗಳನ್ನು ಸಾಮಾನ್ಯವಾಗಿ ಮೊದಲೇ ಸಿಧ್ಧಪಡಿಸಿರುತ್ತಾರೆ. ಹಾಗಾಗಿ ಈ ಮಾತುಗಾರಿಕೆಯು ಭಾಗವತಿಕೆಯಲ್ಲಿ ಹೇಳಲ್ಪಟ್ಟ ಕಥೆಯ ಚೌಕಟ್ಟನ್ನು ದಾಟಿ ಆಚೆ ಹೋಗುವುದಿಲ್ಲ. ಆದರೆ ತಾಳ ಮದ್ದಲೆಗಳು ಹಾಗಲ್ಲ. ತಾಳ ಮದ್ದಲೆಯಲ್ಲಿ ವಾದವೇ ಪ್ರಮುಖವಾದದ್ದು. ಇಲ್ಲಿ ಈ ಭಾಗವತರು ಹೇಳುವ ಒಂದು ಹಾಡಿಗೆ ಇಂತಿಷ್ಟೇ ಸಂಭಾಷಣೆಗಳನ್ನು ಹೇಳಬೇಕು ಎಂದು ಪೂರ್ವ ನಿರ್ಧಾರವಾಗಿರುವಿದಿಲ್ಲ. ಭಾಗವತರು ಹಾಡುಗಾರಿಕೆಯ ಮೂಲಕ ವಾದಕ್ಕೆ ಒಂದು ಪೀಠಿಕೆ ಹಾಕಿ ಕೊಡುತ್ತಾರೆ. ಆಮೇಲೆ ಆ ಕಥಾನಕದ ಭಾಗದ ಮೇಲೆ ಅರ್ಥಧಾರಿಗಳಿಂದ ವಾದ ಆರಂಭವಾಗುತ್ತದೆ. ಈ ವಾದ ಸಂಧರ್ಭಕ್ಕನುಗುಣವಾಗಿ ಪ್ರಸಂಗದಿಂದ ಪ್ರಸಂಗಕ್ಕೆ ಬದಲಾಗುತ್ತಲೂ ಹೋಗಬಹುದು. ವಾದವೇ ತಾಳ ಮದ್ದಲೆಗಳ ಜೀವಾಳವಾಗಿರುತ್ತದೆ.

[ಬದಲಾಯಿಸಿ] ಯಕ್ಷಗಾನದ ಪ್ರಮುಖರು

ಭಾಗವತಿಕೆ':ರಾಘವೇ೦ದೃ ಮಯ್ಯ್ಯ ನೆಬ್ಬೂರು ನಾರಾಯಣ, ದಿ. ಉಪ್ಪೂರು ನಾರಣಪ್ಪ, ಕಡತೋಕ ಮಂಜುನಾಥ ಭಾಗವತ,ಕೊಳಗಿ ಕೇಶವ ಹೆಗಡೆ, ದಿ. ಗುಂಡ್ಮಿ ಕಾಳಿಂಗ ನಾವಡ, ಸುಬ್ರಹ್ಮಣ್ಯ ಧಾರೇಶ್ವರ,ಕೆ.ಪಿ. ಹೆಗಡೆ, ಉಮೇಶ ಭಟ್ಟ ಬಾಡಾ, ನಾರಾಯಣ ಶಬರಾಯ, ಬಲಿಪ ನಾರಾಯಣ ಭಾಗವತರು, ಹೊಸ್ತೋಟ ಮಂಜುನಾಥ ಭಾಗವತ,ದಾಮೋದರ ಮಂಡೆಚ್ಚ, ಪೋಳ್ಯ ಲಕ್ಷ್ಮೀನಾರಾಯಣ ಶೆಟ್ಟಿ, ಕೊಳಗಿ ಕೇಶವ ಹೆಗಡೆ, ಲೀಲಾವತಿ ಬೈಪಾಡಿತ್ತಾಯ (ಏಕೈಕ ವೃತ್ತಿಪರ ಮಹಿಳಾ ಭಾಗವತರು), ಪದ್ಯಾಣ ಗಣಪತಿ ಭಟ್, ದಿನೇಶ ಅಮ್ಮಣ್ಣಾಯ, ಪುತ್ತಿಗೆ ರಘುರಾಮ ಹೊಳ್ಳ.ಮರವಂತೆ ನರಸಿಂಹ ದಾಸ್ ಭಾಗವತರು, ಮರವಂತೆ ಶ್ರೀನಿವಾಸ ದಾಸ್ ಭಾಗವತರು, ಮರವಂತೆ ಕೃಷ್ಣ ದಾಸ್, ಮರವಂತೆ ದೇವರಾಜ್ ದಾಸ್, ಹೆರಂಜಾಲು ಗೋಪಾಲ ಗಾಣಿಗ, ಬಲಿಪ ಪ್ರಸಾದ ಭಾಗವತರು, ಬಲಿಪ ಗೋಪಾಲಕೃಷ್ಣ ಭಾಗವತರು, ಕುಬಣೂರು ಶ್ರೀಧರ ರಾವ್, ಅಂಡಾಲ ದೇವಿಪ್ರಸಾದ ಶೆಟ್ಟಿ, ಬೊಟ್ಟಿಕೆರೆ ಪುರುಷೊತ್ತಮ ಪೂಂಜ, ಕುರಿಯ ವಿಠಲ ಶಾಸ್ಥ್ರಿ,

  • ಹಿಮ್ಮೇಳ ಕಲಾವಿದರು: ದಿ.ಚಿಪ್ಪಾರು ಕೃಷ್ಣಯ್ಯ ಬಲ್ಲಾಳರು.ದಿ. ನೆಡ್ಲೆ ನರಸಿಂಹ ಭಟ್, ಕೆ.ಹರಿನಾರಾಯಣ ಬೈಪಾಡಿತ್ತಾಯ, ಕುದ್ರೆಕೂಡ್ಲು ರಾಂ ಭಟ್, ಕೇಶವ ಬೈಪಾಡಿತ್ತಾಯ, ಮೋಹನ ಬೈಪಾಡಿತ್ತಾಯ, ಪದ್ಯಾಣ ಶಂಕರನಾರಾಯಣ ಭಟ್, ಅಡೂರು ಗಣೇಶ್ ರಾವ್. ಹಿರಿಯಡ್ಕ ಗೋಪಾಲ ರಾವ್,ಮರವಂತೆ ರಾಮಚಂದ್ರ ದಾಸ್, ದಿ. ಹುಂಚದಕಟ್ಟೆ ಶ್ರೀನಿವಾಸ ಆಚಾರ್, ದಿ. ದುರ್ಗಪ್ಪ ಗುಡಿಗಾರ್, ಶಂಕರ ಭಾಗವತ್ ಯಲ್ಲಾಪುರ, ಕವ್ವಾಳೆ ಗಣಪತಿ ಭಟ್, ರಾಮಕೃಷ್ಣ ಮಂದಾರ್ತಿ,
  • ಪಾತ್ರಧಾರಿಗಳು: ದಿ. ಕೆರೆಮನೆ ಶಿವರಾಮ ಹೆಗಡೆ, ದಿ.ಕೆರೆಮನೆ ಮಹಾಬಲ ಹೆಗಡೆ, ದಿ,ಕೆರೆಮನೆ ಶಂಭು ಹೆಗಡೆ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಕೊಂಡದಕುಳಿ ರಾಮಚಂದ್ರ ಹೆಗಡೆ, ಐರೋಡಿ ರಾಮ ಗಾಣಿಗ, ಮಂಟಪ ಪ್ರಭಾಕರ ಉಪಾಧ್ಯಾಯ, ಗೋಡೆ ನಾರಾಯಣ ಹೆಗಡೆ, ಬಳ್ಕೂರು ಕೃಷ್ಣಯಾಜಿ, ಕೆರೆಮನೆ ಶಿವಾನ೦ದ ಹೆಗಡೆ, ಹಡಿನಬಾಳ ಶ್ರೀಪಾದ ಹೆಗಡೆ, ಜಲವಳ್ಳಿ, ಕಣ್ಣಿಮನೆ ಗಣಪತಿ ಹೆಗಡೆ, ಸುಬ್ರಹ್ಮಣ್ಯ ಹೆಗಡೆ ಚಿಟ್ಟಾಣಿ, ,ತೀರ್ಥಹಳ್ಳಿ ಗೋಪಾಲಚಾರಿ, ಮಂಕಿ ಈಶ್ವರ ನಾಯ್ಕ್, ನೀಲ್ಕೋಡ್ ಶಂಕರ ಹೆಗಡೆ, ಸುಬ್ರಮಣ್ಯ ಯಲಗುಪ್ಪ, ವಿಶ್ವನಾಥ ಆಚಾರ್ಯ ತೊಂಬತ್ತು ಭಾಸ್ಕರ ಜೋಶಿ ಮುಂತಾದವರು. ತೆಂಕುತಿಟ್ಟು ಪ್ರಮುಖರಾದ ದಿ.ಕುರಿಯ ವಿಠಲ ಶಾಸ್ತ್ರಿ ,ದಿ. ಕಟೀಲು ಪುರುಷೋತ್ತಮ ಭಟ್, ದಿ.ಶೇಣಿ ಗೋಪಾಲಕೃಷ್ಣ ಭಟ್, ದಿ.ಕದ್ರಿ ವಿಷ್ಣು, ದಿ.ಗುಡ್ದಪ್ಪ ಗೌಡ, ದಿ.ಕಿಶಾನ್ ಬಾಬು, ದಿ.ಅಳಕೆ ರಾಮಯ್ಯ ರೈ, ದಿ.ಎಂಪೆಕಟ್ಟೆ ರಾಮಯ್ಯ ರೈ, ದಿ.ಗುಬ್ಬೆ ರಾಮಯ್ಯ ರೈ, ದಿ.ಗುಂಪೆ ರಾಮಯ್ಯ ಶೆಟ್ಟಿ, ದಿ.ಪುತ್ತೂರು ಕೃಷ್ಣ ಭಟ್, ದಿ. ಪುತ್ತೂರುನಾರಾಯಣ ಹೆಗ್ದೆ, ದಿ.ಬೋಳಾರ ನಾರಾಯಣ ಶೆಟ್ಟಿ, ದಿ.ದೊಡ್ಡ ಅಂಬು, ದಿ.ಚಿಕ್ಕ ಅಂಬು, ಶಿವರಾಮ ಜೋಗಿ, ಪುಷ್ಪರಾಜ ಜೋಗಿ, ಪುತ್ತೂರು ಶೀನಪ್ಪ ಭಂಡಾರಿ, ಪುತ್ತೂರು ಶ್ರೀಧರ ಭಂಡಾರಿ , ದಿ.ಪಡ್ರೆ ಚಂದ್ರು, ಪಡ್ರೆ ಕುಮಾರ, ಕುಂಬ್ಳೆ ಸುಂದರ ರಾವ್, ವಾಸುದೇವ ಸಾಮಗ, ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ, ಕೆ. ಗೋವಿಂದ ಭಟ್, ಪಾತಾಳ ವೆಂಕಟರಮಣ ಭಟ್, ಕೋಳ್ಯೂರು ರಾಮಚಂದ್ರ ರಾವ್. ಪುಂಡರೀಕ್ಷಾ ಉಪಾದ್ಯಾಯ, ಭೀಮ ಭಟ್, ಎಕ್ಕಾರು ಉಮೇಶ ಶೆಟ್ಟಿ, ತೊಡಿಕಾನ ವಿಶ್ವನಾಥ ಗೌಡ, ಬಾಯಾರು ರಮೇಶ ಭಟ್, ಎಂ.ಕೆ.ರಮೇಶ ಆಚಾರ್ಯ, ರೆಂಜಾಳ ರಾಮಕೃಷ್ಣ ರಾವ್, ಸುಣ್ಣಂಬಳ ವಿಶ್ವೇಶ್ವರ ಭಟ್, ಪೆರುವಾಯಿ ನಾರಾಯಣ ಶೆಟ್ಟಿ, ಬೆಳ್ಳಾರೆ ವಿಶ್ವನಾಥ ರೈ, ಬೆಳ್ಳಾರೆ ಮಂಜುನಾಥ ಭಟ್, ಪೆರಾರ ಲಕ್ಷ್ಮಣ ಕೋಟ್ಯಾನ್, ಕಾವಳಕಟ್ಟೆ ದಿನೇಶ ಶೆಟ್ಟಿ, ಕೈರಂಗಳ ಕೃಷ್ಣ ಮೂಲ್ಯ, ವಿಟ್ಲ ವಿಷ್ಣು ಶರ್ಮ, ದಿ.ಬಣ್ಣದ ಕುಟ್ಯಪ್ಪು, ದಿ.ಬಣ್ಣದ ಅರ್ಬಿ ಅಣ್ಣಪ್ಪ ಚೌಟ, ದಿ.ಬಣ್ಣದ ಚಂದ್ರಗಿರಿ ಅಂಬು, ದಿ.ಬಣ್ಣದ ಮಹಾಲಿಂಗ, ದಿ.ಸಂಜೀವ ಚೌಟ, ಅಲ್ಲದೆ ಬಣ್ಣದ ಗೇರುಕಟ್ಟೆ ಗಂಗಯ್ಯ ಶೆಟ್ಟಿ, ಬಣ್ಣದ ಡಿ. ಗೋಪಾಲ ಭಟ್, ಬಣ್ಹದ ಕುಪ್ಪೆಪದವು ಸುರೇಶ ಶೆಟ್ಟಿ, ಬಣ್ಣದ ಕೊಯಿಕುಡೆ ಮೂಡುಮನೆ ಶಶಿಧರ ಶೆಟ್ಟಿ, ಬಣ್ಣದ ಸುಬ್ರಾಯ ಪಾಟಾಳಿ, ಬಣ್ಣದ ಎಡನೀರು ಹರಿನಾರಾಯಣ ಭಟ್, ಬಣ್ಣದ ಶಿವಪ್ರಸಾದ್ ಭಟ್, ಬಣ್ಣದ ರಾಮ ಕುಲಾಲ್, ಬಣ್ಣದ ಐತಪ್ಪ ಗೌಡ, ಬಣ್ಣದ ನಗ್ರಿ ಮಹಾಬಲ ರೈ, ಚಂದ್ರಶೇಖರ ಶೆಟ್ಟಿ ಧರ್ಮಸ್ಥಳ, ಉಬರಡ್ಕ ಉಮೇಶ ಶೆಟ್ಟಿ, ಸಂಜಯಕುಮರ ಗೋಣಿಬೀಡು, ನಿಡ್ಲೆ ಗೋವಿಂದ ಭಟ್, ಕುಂಬ್ಳೆ ಶ್ರೀಧರ್ ರಾವ್, ಕಾರ್ಯತಡ್ಕ ವಸಂತ ಗೌಡ, ದಿ.ನಯನ ಕುಮಾರ್, ಮಹೇಶ ಮಣಿಯಾಣಿ ಹಾಗು ಮುಂತಾದವರು.
  • ತಾಳ ಮದ್ದಲೆ: ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್,ಶೇಣಿ ಗೋಪಾಲಕೃಷ್ಣ ಭಟ್, ಮಲ್ಪೆ ಲಕ್ಷ್ಮೀನಾರಾಯಣ ಸಾಮಗ, ವಾಸುದೇವ ಸಾಮಗ, ಡಾ.ಪ್ರಭಾಕರ ಜೋಶಿ, ಕುಂಬ್ಳೆ ಸುಂದರ ರಾವ್, ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ, ಕೋಳ್ಯೂರು ರಾಮಚಂದ್ರ ರಾವ್, ದೇರಾಜೆ ಸೀತಾರಾಮಯ್ಯ, ಡಾ. ರಮಾನಂದ ಬನಾರಿ, ಯು. ಬಿ. ಗೋವಿಂದ ಭಟ್, ಜಬ್ಬರ್ ಸಮೋ ಸಂಪಾಜೆ, ಸುಣ್ಣಂಬಳ ವಿಶ್ವೇಶ್ವರ ಭಟ್, ಅಶೋಕ್ ಭಟ್ ಉಜಿರೆ, ಪೆರ್ಮುದೆ ಜಯಪ್ರಕಾಶ ಶೆಟ್ಟಿ ಮುಂತಾದವರು.
  • ಫ್ರಮುಖ ಯಕ್ಷಗಾನ ಮೇಳಗಳು:ಶ್ರೀ ದುರ್ಗಾಪರಮೆಶ್ವರೀ ದಶಾವತಾರ ಯಕ್ಷಗಾನ ಮಂಡಳಿ, ಶ್ರೀ ಇಡಗುಂಜಿ ಮಹಾಗನಪತಿ ಯಕ್ಷಗಾನ ಮಂಡಳಿ ಕೆರೆಮನೆ keremane mela, ಸಾಲಿಗ್ರಾಮ ಮೇಳ, ಪೆರ್ಡುರು ಮೇಳ, ಕೊಂಡದಕುಳಿ ಮೇಳ, ಧರ್ಮಸ್ಥಳ ಮೇಳ

[ಬದಲಾಯಿಸಿ] ಚಿತ್ರಶಾಲೆ


ವೈಯಕ್ತಿಕ ಉಪಕರಣಗಳು
ನಾಮವರ್ಗಗಳು
ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು