ಲಕ್ಷ್ಮೀಶ
ವಿಕಿಪೀಡಿಯ ಇಂದ
ಲಕ್ಷ್ಮೀಶನು ೧೬ನೆಯ ಶತಮಾನದಲ್ಲಿದ್ದ ಕವಿ. ಈತನ ಊರು ಚಿಕ್ಕಮಗಳೂರು ಜಿಲ್ಲೆಯ ದೇವನೂರು. ಅಲ್ಲಿಯ ಲಕ್ಷ್ಮೀಕಾಂತ ದೇವಾಲಯದಲ್ಲಿ ಲಕ್ಷ್ಮೀಶನ ವಿಗ್ರಹವನ್ನು ಸ್ಥಾಪಿಸಲಾಗಿದೆ. ಜೈಮಿನಿ ಭಾರತ ಲಕ್ಷ್ಮೀಶನ ಪ್ರಸಿದ್ಧ ಕಾವ್ಯ. ಇದು ಸಂಸ್ಕೃತ ಜೈಮಿನಿ ಭಾರತದ ಕನ್ನಡ ರೂಪವಾಗಿದ್ದು ವಾರ್ಧಕ ಷಟ್ಪದಿಯಲ್ಲಿದೆ.ಈತನಿಗೆ 'ಕರ್ನಾಟಕ ಕವಿಚೈತ್ರವನ ಚೂತ'ಎಂಬ ಬಿರುದಿದ್ದಿತು.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಈತನು ಉಪಮಾಲಂಕಾರವನ್ನು ಹೆಚ್ಚಾಗಿ ಬಳಸಿದ್ದರಿಂದ "ಉಪಮಾಲೋಲ" ಎಂಬ ಅಭಿದಾನಕ್ಕೆ ಪಾತ್ರನಾಗಿದ್ದಾನೆ.