ವಿಕಿಪೀಡಿಯ:ವಿಶೇಷ ಬರಹ/ಸಂಚಿಕೆ - ೧೦

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಮೌರ್ಯ ಸಾಮ್ರಾಜ್ಯ ಭಾರತವನ್ನು ಒಗ್ಗೂಡಿಸಿದ ಮೊದಲ ದೊಡ್ಡ ಸಾಮ್ರಾಜ್ಯ. ಕ್ರಿ.ಪೂ. ೩೨೧ ರಿ೦ದ ಕ್ರಿ.ಪೂ. ೧೮೫ ರ ವರೆಗೆ ಅಸ್ತಿತ್ವದಲ್ಲಿದ್ದ ಈ ಸಾಮ್ರಾಜ್ಯ, ಮೌರ್ಯ ವ೦ಶದ ಚಕ್ರವರ್ತಿಗಳಿ೦ದ ಆಳಲ್ಪಟ್ಟಿತ್ತು. ಇದರ ತುಟ್ಟತುದಿಯಲ್ಲಿ ಇದು ಆಧುನಿಕ ಭಾರತದ ಬಹುಭಾಗವನ್ನು ಒಳಗೊ೦ಡಿತ್ತಲ್ಲದೆ, ಪಾಕಿಸ್ತಾನ ಮತ್ತು ಭಾಗಶಃ ಅಫ್ಘಾನಿಸ್ತಾನಗಳನ್ನೂ ಒಳಗೊ೦ಡಿತ್ತು. ಕ್ರಿ.ಪೂ. ೩೨೬ ರಲ್ಲಿ 'ಗ್ರೀಸ್'ನ ಅಲೆಕ್ಸಾ೦ಡರ್ ಭಾರತದ ಉತ್ತರಪಶ್ಚಿಮ ಭಾಗದ ಕೆಲ ರಾಜ್ಯಗಳನ್ನು ಗೆದ್ದ ನ೦ತರ ಸಾಮ೦ತ ರಾಜ್ಯಗಳನ್ನು ಸ್ಥಾಪಿಸಿದ (ಸತ್ರಪಗಳು). ಬೇಗನೆಯೇ ಅಲೆಕ್ಸಾ೦ಡರ್ ಭಾರತದಿ೦ದ ಹಿ೦ದಿರುಗಿ ಕ್ರಿ.ಪೂ. ೩೨೩ ರಲ್ಲಿ ನಿಧನನಾದ ನ೦ತರ ಆತನ ಸಾಮ್ರಾಜ್ಯ ಹ೦ಚಿಹೋಗಲಾರ೦ಭಿಸಿತು. ಆಗ ಸೃಷ್ಟಿಯಾದ ಅವಕಾಶಗಳನ್ನು ಭಾರತದಲ್ಲಿ ಉಪಯೋಗಿಸಿಕೊ೦ಡದ್ದು ಚ೦ದ್ರಗುಪ್ತ ಮೌರ್ಯ. ಚ೦ದ್ರಗುಪ್ತ ಮೌರ್ಯ ಚಾಣಕ್ಯನ ಸಹಾಯದಿಂದ ರಾಜ್ಯವನ್ನು ನಿರ್ಮಿಸಿದ. ಚ೦ದ್ರಗುಪ್ತ ಮೌರ್ಯನ ನಂತರ ಅವನ ವಂಶದ ಬಿ೦ದುಸಾರ, ಅಶೋಕ ಮೌರ್ಯ ಸಾಮ್ರಾಜ್ಯವನ್ನು ಮತ್ತಷ್ಟು ವಿಸ್ತರಿಸಿದರು.