ಶಿರಾ
Wikipedia ಇಂದ
ಶಿರಾ ತುಮಕೂರು ಜಿಲ್ಲೆಯ ಒಂದು ತಾಲೂಕು ಕೇಂದ್ರ. ರತ್ನಗಿರಿಯ ರಂಗಪ್ಪ ನಾಯಕನಾಳಿದ ಸ್ಥಳ ೧೬೮೬ರಲ್ಲಿ ಮುಘಲರ ವಶವಾಗಿ ಫೌಜುದಾರಿ ಕೇಂದ್ರವಾಯಿತು. ನಂತರದ ದಿನಗಳಲ್ಲಿ ಹೈದರ್ ಆಲಿಯಿಂದ ಆಳಲ್ಪಟ್ಟಿತು. ಇಲ್ಲಿನ ಬಲಾಢ್ಯವಾದ ಕಲ್ಲಿನ ಕೋಟೆ ಸುತ್ತಲೂ ಕಂದಕವನ್ನು ಹೊಂದಿದೆ. ಕೆರೆಯ ಪಕ್ಕದಲ್ಲೇ ಇರುವುದರಿಂದ ರಾಜರ ಆಳ್ವಿಕೆಯಲ್ಲಿ ಮಳೆಗಾಲದಲ್ಲಿ ಕಂದಕಗಳಿಗೆ ನೀರನ್ನು ಹರಿದು ಬಿಟ್ಟು, ಅದರಲ್ಲಿ ಮೊಸಳೆಯಂತಹ ಜಲಚರಗಳನ್ನು ಸಾಕಿ ಶತ್ರುಗಳಿಂದ ರಕ್ಷಿಸಿಕೊಳ್ಳುತ್ತಿದ್ದರು. ಸಿರಾ ಕೋಟೆಯಲ್ಲಿ ಮುಘಲ್ ಅಧಿಕಾರಿ ದಿಲಾವರ್ ಖಾನ್ ಬೆಳೆಸಿದ ಸುಂದರ ಉದ್ಯಾನವನವೇ ಹೈದರಾಲಿ ಲಾಲ್ ಬಾಗ್ ನಿರ್ಮಿಸಲು ಸ್ಪೂರ್ತಿ ನೀಡಿತ್ತು.
ಇದು ಜಿಲ್ಲಾ ಕೇಂದ್ರದಿಂದ ೫೦ ಕಿ.ಮೀ ದೂರವಿದೆ.
ಬರಗೂರು ಸಿರಾ ತಾಲೂಕಿನ ಪ್ರಮುಖ ಸ್ಥಳ. ಬರಗೂರು ರಾಮಚಂದ್ರಪ್ಪನವರು ಜನಿಸಿದ ಸ್ಥಳ.

