ಶಿವಮೊಗ್ಗ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಶಿವಮೊಗ್ಗ
India-locator-map-blank.svg
Red pog.svg
ಶಿವಮೊಗ್ಗ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಶಿವಮೊಗ್ಗ
ನಿರ್ದೇಶಾಂಕಗಳು 13.9167° N 75.5667° E
ವಿಸ್ತಾರ 50 km²
ಸಮಯ ವಲಯ IST (UTC+5:30)
ಜನಸಂಖ್ಯೆ (2001)
 - ಸಾಂದ್ರತೆ

 - /ಚದರ ಕಿ.ಮಿ.
ನಗರಸಭೆ ಅಧ್ಯಕ್ಷರು ಎನ್.ಜೆ. ರಾಜಶೇಖರ್
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - 577 201-೪
 - +91-(0)8182
 - KA-14, KA-15

ಶಿವಮೊಗ್ಗ ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ನಗರ (ಸಂಪರ್ಕ : ೧೩.೫೬ ಉ /೭೫.೩೮ ಪೂ). ಇದು ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರದಿಂದ ೨೭೫ ಕಿಮೀ ದೂರದಲ್ಲಿದೆ. ಶಿವಮೊಗ್ಗ ಮಹಾನಗರವು ಈ ಜಿಲ್ಲೆಯ ರಾಜಧಾನಿಯಾಗಿದೆ. ಶಿವಮೊಗ್ಗ ಜಿಲ್ಲೆ ಕರ್ನಾಟಕದ ನಿಸರ್ಗಭರಿತ ಮಲೆನಾಡಿನ ಒಂದು ಭಾಗವಾಗಿದೆ.

ಮಹಿಷ ಮರ್ಧಿನಿ - ಶಿವಪ್ಪನಾಯಕನ ಅರಮನೆಯ ಹಿಂಭಾಗದಲ್ಲಿರುವ ಒಂದು ಶಿಲ್ಪ

ಸಹ್ಯಾದ್ರಿ ಪರ್ವತಶ್ರೇಣಿ ಮತ್ತು ಅಲ್ಲಿ ಉಗಮಗೊಳ್ಳುವ ನದಿ-ಉಪನದಿಗಳು ಶಿವಮೊಗ್ಗಕ್ಕೆ ಯಥೇಚ್ಛ ನೈಸರ್ಗಿಕ ಸೌಂದರ್ಯವನ್ನು ತಂದುಕೊಟ್ಟಿವೆ. ಶಿವಮೊಗ್ಗದಿಂದ ೧೧೩ ಕಿಮೀ ದೂರದಲ್ಲಿರುವ ಜಗತ್ಪ್ರಸಿದ್ಧ ಜೋಗದ ಜಲಪಾತ ಪ್ರಕೃತಿಯ ಒಂದು ಅಪೂರ್ವ ದೃಶ್ಯ. ಇಲ್ಲಿ ಶರಾವತಿ ನದಿ ೨೩೫ ಮೀ ಎತ್ತರದಿಂದ ಸುಮನೋಹರವಾಗಿ ಧುಮುಕುತ್ತದೆ. ರಾಜ, ರಾಣಿ, ರೋರರ್ ಮತ್ತು ರಾಕೆಟ್ ಎಂಬ ನಾಲ್ಕು ವಿಭಿನ್ನ ಪ್ರವಾಹಗಳಾಗಿ ಧುಮುಕುವ ಶರಾವತಿ ಏಷ್ಯದ ಅತಿ ಎತ್ತರದ ಜಲಪಾತವನ್ನು ನಿರ್ಮಿಸಿದೆ. ಮಳೆಗಾಲದ ಸಮಯದಲ್ಲಿ ಕಾಮನ ಬಿಲ್ಲುಗಳನ್ನು ನಿರ್ಮಿಸಿಕೊಂಡು ಅತ್ಯದ್ಭುತ ದೃಶ್ಯವನ್ನು ಜಲಪಾತ ಪ್ರದರ್ಶಿಸುತ್ತದೆ.

ತುಂಗಭದ್ರಾ, ಶರಾವತಿ, ಕುಮುದ್ವತಿ ಮತ್ತು ಇತರ ನದಿಗಳಿಂದ ಜಲಸರಬರಾಜಿನ ಸೌಕರ್ಯವುಳ್ಳ ಶಿವಮೊಗ್ಗ ಜಿಲ್ಲೆ ಕರ್ನಾಟಕದ ಅನ್ನದ ಬಟ್ಟಲು ಎನ್ನಿಸಿಕೊಂಡಿದೆ.

ಕೂಡ್ಲಿಯ ಸಂಗಮೇಶ್ವರ ದೇವಸ್ಥಾನ - ಪ್ರವಾಸೀ ಆಕರ್ಷಣೆ

ಪರಿವಿಡಿ

ಚರಿತ್ರೆ[ಬದಲಾಯಿಸಿ]

ಶಿವಮೊಗ್ಗ ಎಂಬ ಹೆಸರು 'ಶಿವ-ಮುಖ' ಎಂಬ ಪದಪುಂಜದಿಂದ ಬಂದದ್ದು. ಇನ್ನೊಂದು ವ್ಯುತ್ಪತ್ತಿಯಂತೆ ಇದು 'ಸಿಹಿ-ಮೊಗೆ' (ಸಿಹಿಯಾದ Moggu) ಎಂದಿದ್ದು ಅದು 'ಶಿವಮೊಗ್ಗ'ವಾಗಿ ಮಾರ್ಪಾಟುಹೊಂದಿದೆ.ಈ ಪ್ರದೇಶವು ಕ್ರಿ.ಪೂ. ೩ನೇ ಶತಮಾನದಲ್ಲಿ ಸಾಮ್ರಾಟ್ ಅಶೋಕನ ಮೌರ್ಯ ಸಾಮ್ರಾಜ್ಯದ ದಕ್ಷಿಣದ ತುದಿಯಾಗಿದ್ದಿತು. ಮುಂದಿನ ಶತಮಾನಗಳಲ್ಲಿ ಅನೇಕ ರಾಜಮನೆತನಗಳ ಆಳ್ವಿಕೆಯಲ್ಲಿ ಈ ಪ್ರದೇಶ ಇದ್ದಿತು: ೪ನೇ ಶತಮಾನದಲ್ಲಿ ಕದಂಬರು, ೬ನೇ ಶತಮಾನದಲ್ಲಿ ಚಾಲುಕ್ಯರು ಮತ್ತು ಅವರ ಸಾಮಂತರಾದ ಗಂಗರು, ೮ನೇ ಶತಮಾನದಲ್ಲಿ ರಾಷ್ಟ್ರಕೂಟರು, ೧೧ನೇಯದರಲ್ಲಿ ಹೊಯ್ಸಳರು ಮತ್ತು ೧೫ನೇ ಶತಮಾನದಲ್ಲಿ ವಿಜಯನಗರದ ಅರಸರು ಈ ಪ್ರದೇಶವನ್ನು ಆಳಿದೆ ರಾಜಮನೆತನಗಳಲ್ಲಿ ಪ್ರಮುಖರು. ಶಿವಮೊಗ್ಗ ನಗರಕ್ಕೆ ಸ್ವತಂತ್ರ ವ್ಯಕ್ತಿತ್ವ ಬಂದದ್ದು ೧೬ನೇ ಶತಮಾನದ ಕೆಳದಿ ನಾಯಕರ ಆಳ್ವಿಕೆಯಲ್ಲಿ. ೧೭ನೇ ಶತಮಾನದ ನಂತರ ಭಾರತ ಸ್ವಾತಂತ್ರ್ಯದ ವರೆಗೂ ಶಿವಮೊಗ್ಗ ಮೈಸೂರು ಸಂಸ್ಥಾನದ ಭಾಗವಾಗಿದ್ದಿತು.

ಪ್ರವಾಸೀ ತಾಣಗಳು[ಬದಲಾಯಿಸಿ]

ಜೋಗದ ಜಲಪಾತ

[[ಚಿತ್ರ:ಶ್ರೀ ರೇಣುಕಾಂಬ ದೇವಸ್ಥಾನ]ಚಿತ್ರ:ಚಂದ್ರಗುತ್ತಿಯ ಹಳೆಯ ಕೋಟೆ

ಜಲಪಾತಗಳು ಮತ್ತು ಅಣೆಕಟ್ಟುಗಳು

  • ಜೋಗದ ಜಲಪಾತ
  • ಚಂದ್ರಗುತ್ತಿ "ಶ್ರೀ ರೇಣುಕಾಂಬ ದೇವಸ್ಥಾನ" ಮತ್ತು ಕೋಟೆ.
  • ​​ ೧೨ನೇ ಶತಮಾನದ ಲಕ್ಷ್ಮೀ ನರಸಿಂಹ ಸ್ವಾಮೀ ದೇವಸ್ಥಾನ, ಭದ್ರಾವತಿ
  • ಲಿಂಗನಮಕ್ಕಿ ಅಣೆಕಟ್ಟು
  • ವನಕೆ-ಅಬ್ಬೆ ಜಲಪಾತ
  • ಭದ್ರಾ ನದಿ ಯೋಜನೆ, ಲಕ್ಕವಳ್ಳಿ
  • ತು೦ಗಾ ನದಿ ಯೋಜನೆ,ಗಾಜನೂರು ಅಣೆಕಟ್ಟು,
  • ಆಗು೦ಬೆಯ ವಿಶ್ವಪ್ರಸಿದ್ದ ಸೊರ್ಯಾಸ್ತ.
  • ಮ೦ಡಗದ್ದೆಯ ಪಕ್ಷಿದಾಮ.
  • ಅ೦ಬುತೀರ್ಥ, ಶರಾವತಿಯ ಉಗಮ ಸ್ಥಾನ.
  • ಕು೦ದಾದ್ರಿ ಬೆಟ್ಟ.
  • ಕುಪ್ಪಳ್ಳಿಯ ಕವಿಶೈಲ.
  • ಕೋಟೆ ಶ್ರೀ ಸೀತಾರಾಮಾ೦ಜನೇಯ ಸ್ವಾಮಿ ದೇವಸ್ಥಾನ, ಶಿವಮೊಗ್ಗ.
  • ಕೂಡ್ಲಿ - ತುಂಗಾ ಮತ್ತು ಭದ್ರಾ ನದಿಗಳ ಸಂಗಮ ಆಗುವ ಪ್ರದೇಶ.
  • ಹಿಡ್ಲುಮನೆ ಜಲಪಾತ (ನಿಟ್ಟೂರು)
  • ಸಿರಿಮನೆ ಜಲಪಾತ
  • ದಬ್ಬೆ ಜಲಪಾತ
  • ಚೀಲನೂರು ಗ್ರಾಮದ ಜೋಗದ ಜಲಪಾತ
  • ಕೊಡಚಾದ್ರಿ ಬೆಟ್ಟ
  • ಶಿವಪ್ಪನಾಯಕನ ಕೋಟೆ (ಬಿದನೂರು ನಗರ)
  • ಸಿಗಂದೂರು ಮ೦ಜುನಾಥ
  • ತಾವರೆ ಕೊಪ್ಪದ ಸಿಂಹ ಧಾಮ
  • ಚೀಲನೂರು ಸೊರಬ ತಾಲ್ಲೊಕು.
  • ಸೊರಬ ತಾಲೂಕಿನಲ್ಲಿರುವ ಗುಡವಿ ಪಕ್ಷಿಧಾಮ (ಕರ್ನಾಟಕದ ೨ನೇ ಅತಿದೊಡ್ಡ ಪಕ್ಷಿಧಾಮ)

ವಿಮಾನ ನಿಲ್ದಾಣ[ಬದಲಾಯಿಸಿ]

ಶಿವಮೊಗ್ಗ ವಿಮಾನ ನಿಲ್ದಾಣ ,ಶಿವಮೊಗ್ಗ ನಗರದಿಂದ ೧೧ ಕಿ ಮೀ ಗಳು ಮಾತ್ರ. ಆದರೆ ಇದರ ಕಾರ್ಯ ಮಂದಗತಿಯಲ್ಲಿ ಸಾಗಿದೆ ಹಾಗೂ ಪೂರ್ಣಗೊಳ್ಳುವುದೋ ಇಲ್ಲವೋ ಎಂಬ ಅನುಮಾನ ಜನರನ್ನು ಕಾಡುತ್ತಿತ್ತು. ಆದರೆ ಈಗ ಕಾರ್ಯಪ್ರಗತಿ ಅತ್ಯಂತ ವೇಗವಾಗಿದ್ದು, ಈಗಾಗಲೇ ೨ ಕಿಮಿ ವೇಗದ ರನ್ ವೇ ಕಾರ್ಯ ಸಂಪೂರ್ಣಗೊಂಡಿದ್ದು, ಮೇ - ಜೂನ್ ೨೦೧೩ ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಕುವೆಂಪು ವಿಶ್ವವಿದ್ಯಾನಿಲಯ[ಬದಲಾಯಿಸಿ]

ಕುವೆಂಪು ವಿಶ್ವವಿದ್ಯಾನಿಲಯವು ಶಿವಮೊಗ್ಗದಿ೦ದ ೨೭ ಕಿ.ಮಿ, ಶಿವಮೊಗ್ಗದಿಂದ ಭದ್ರಾ ಅಣೆಕಟ್ಟೈಗೆ (ಬಿ.ಆರ್.ಪಿ) ಗೆ ಹೋಗುವ ಮಾರ್ಗದಲ್ಲಿ ಶಂಕರ ಘಟ್ಟ ದಲ್ಲಿದೆ. ಅತ್ಯುತ್ತಮ ವಿದ್ಯಾ ಕೇಂದ್ರವಾಗಿ ಹೆಸರಾಗಿದೆ. ಶಿವಮೊಗ್ಗ ಜಿಲ್ಲೆಯ ಅತ್ಯಂತ ಪ್ರಸಿಧ್ಹ ಸಾಹಿತಿ ಕೆ ವಿ ಪುಟ್ಟಪ್ಪ (ಕುವೆಂಪು) ರವರ ಸ್ಮರಣಾರ್ಥ್ಹ ವಾಗಿ ಈ ವಿಶ್ವ ವಿದ್ಯಾನಿಲಯಕ್ಕೆ ಅವರ ಹೆಸರನ್ನು ಇಡಲಾಗಿದೆ.

ಗಿರಿ-ಶಿಖರಗಳು[ಬದಲಾಯಿಸಿ]

ನದಿಗಳು[ಬದಲಾಯಿಸಿ]

ಚರಿತ್ರೆ ಮತ್ತು ಧರ್ಮ[ಬದಲಾಯಿಸಿ]

  • ಕೆಳದಿ-ಇಕ್ಕೇರಿ, ಕೆಳದಿ ನಾಯಕರ ರಾಜಧಾನಿಗಳು. ಸಾಗರ ತಾಲ್ಲೂಕು
  • ನಗರ, ಬಿದನೂರು ಸಂಸ್ಥಾನದ ರಾಜಧಾನಿ
  • ಬಳ್ಳಿಗಾವಿಯ ಕೇದಾರೇಶ್ವರ ದೇವಾಲಯ
  • ಶಿವಪ್ಪ ನಾಯಕನ ಅರಮನೆ
  • ಸೇಕ್ರೆಡ್ ಹಾರ್ಟ್ ಚರ್ಚ್, ಭಾರತದಲ್ಲಿ ಎರಡನೆ ಅತಿ ದೊಡ್ಡ ಚರ್ಚ್
  • ಕವಲೇದುರ್ಗದ ಕೋಟೆ, ಕೆಳದಿ ಸಂಸ್ಥಾನದ ರಾಜಧಾನಿ. ಈಗ ಕೋಟೆಯ ಪಳಯುಳಿಕೆ ಮಾತ್ರ ಇದೆ.
  • ತೀರ್ಥಹಳ್ಳಿ ತಾಲ್ಲೂಕಿನ ಬೆಟ್ಟಬಸರವಾನಿ ಮತ್ತು ಮರಹಳ್ಳಿ ಗ್ರಾಮಗಳಲ್ಲಿ ಜೈನ ಸಂಪ್ರದಾಯದ ಪಳಿಯುಳಿಕೆ ಇವೆ.
  • ಹೊಸನಗರ ತಾಲ್ಲೂಕಿನ ಹುಂಚ ಗ್ರಾಮದಲ್ಲಿ ಜೈನ ಸಂಪ್ರದಾಯದ ಮಠ ಮತ್ತು ಪದ್ಮಾವತಿ ದೇವಿಯ ದೇವಸ್ಥಾನವಿದೆ
  • ಹಣಗೇರೆಕಟ್ಟೆ ಹಿಂದು ಮುಸ್ಲಿಂ ಧರ್ಮಗಳ ಪವಿತ್ರ ಸ್ಥಳವಾಗಿದೆ.
  • ನಾಡಕಲಸಿ ಸಾಗರ ತಾಲ್ಲೂಕು ; ಪ್ರಾಚೀನ ದೇವಾಲಯ

ವನ್ಯಜೀವಿ[ಬದಲಾಯಿಸಿ]

  • ತಾವರೆಕೊಪ್ಪ, ಹುಲಿ ಮತ್ತು ಸಿಂಹಧಾಮ
  • ಸಕ್ಕರೆಬೈಲು, ಆನೆ ತರಬೇತಿ ಶಿಬಿರ
  • ಮಂಡಗದ್ದೆ ಪಕ್ಷಿಧಾಮ, ಕುಕ್ಕನ ಗುಡ್ಡಾ, ಗುಡವಿ
  • ಸೊರಬ ತಾಲೂಕೀನ ಚೀಲನೂರು ಕಾಡು ನವಿಲುಗಳಿಗೆ ವಾಸಸ್ಥಾನವಾಗಿದೆ.

ಐತಿಹಾಸಿಕ ವ್ಯಕ್ತಿಗಳು[ಬದಲಾಯಿಸಿ]

ರಾಜಕೀಯ ವ್ಯಕ್ತಿಗಳು[ಬದಲಾಯಿಸಿ]

ಪ್ರಮುಖ ವ್ಯಕ್ತಿಗಳು[ಬದಲಾಯಿಸಿ]

ತಾಲ್ಲೂಕುಗಳು[ಬದಲಾಯಿಸಿ]

ತಾಲ್ಲೂಕು ಎತ್ತರ (ಮಿ.) ಹೋಬಳಿಗಳ ಸಂಖ್ಯೆ ನಿವಾಸಿತ ಹಳ್ಳಿಗಳ ಸಂಖ್ಯೆ ಅನಿವಾಸಿತ ಹಳ್ಳಿಗಳ ಸಂಖ್ಯೆ ವಿಸ್ತಿರಣ (ಚ. ಕಿ.ಮಿ)
 ತೀರ್ಥಹಳ್ಳಿ  ೬೧೦  ೫  ೨೪೫  ೨  ೧೨೪೭
 ಭಧ್ರಾವತಿ  ೫೯೪  ೬  ೧೪೬  ೭  ೬೯೦
 ಶಿಕಾರಿಪುರ  ೬೦೩  ೫  ೧೫೩  ೨೨  ೯೦೯
 ಶಿವಮೊಗ್ಗ  ೫೭೧  ೮  ೧೯೮  ೨೪  ೧೧೦೮
 ಸಾಗರ  ೫೭೯  ೬  ೨೩೩  ೫  ೧೯೪೦
 ಸೊರಬ  ೫೭೯  ೬  ೨೬೮  ೩೮  ೧೧೪೮
 ಹೊಸನಗರ  ೫೭೨  ೪  ೧೯೭  ೫  ೧೪೨೩

ಕೆ. ವಿ. ಸುಬ್ಬಣ್ಣ್, ತಪ್ಪು. ಕೆ. ವಿ. ಸುಬ್ಬಣ್ಣ - ಸರಿಯಾದ ಹೆಸರು. ಕನ್ನಡದ ಹೆಚ್ಚಿನ ಪದಗಳು ಹಾಗೂ ಹೆಸರುಗಳು 'ಅ' 'ಇ' 'ಉ' ಉಚ್ಚಾರದಿ೦ದ ಕೊನೆಗೊಳ್ಳುತ್ತವೆ.

ಕೆಳಗಿನ ಲೇಖನಗಳನ್ನೂ ನೋಡಿ[ಬದಲಾಯಿಸಿ]

ಇದನ್ನೂ ನೋಡಿ[ಬದಲಾಯಿಸಿ]

ಹೊರಗಿನ ಸಂಪರ್ಕಗಳು[ಬದಲಾಯಿಸಿ]


Karnataka-icon.jpg
ಕರ್ನಾಟಕದ ಜಿಲ್ಲೆಗಳು
ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿಕ್ಕಬಳ್ಳಾಪುರ | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ಯಾದಗಿರಿ | ರಾಯಚೂರು | ರಾಮನಗರ | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ
"http://kn.wikipedia.org/w/index.php?title=ಶಿವಮೊಗ್ಗ&oldid=333108" ಇಂದ ಪಡೆಯಲ್ಪಟ್ಟಿದೆ