ಶ್ರವಣಬೆಳಗೊಳ

Wikipedia ಇಂದ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಶ್ರವಣ ಬೆಳಗೊಳ ಹಾಸನ ಜಿಲ್ಲೆಯ ಐತಿಹಾಸಿಕ ಧಾರ್ಮಿಕ, ಪ್ರವಾಸಿ ತಾಣ. ಶ್ರವಣ ಬೆಳಗೊಳದಲ್ಲಿ ವಿಶ್ವವಿಖ್ಯಾತ ೫೮ ಅಡಿ ಎತ್ತರದ ಬಾಹುಬಲಿಯ ಮೂರ್ತಿಯಿರುವುದು. ಜೈನರ ಧಾರ್ಮಿಕ ಕೇಂದ್ರವಾದರೂ, ಇತೆರೆ ಹಲವರು ಕೂಡ ಬಂದು ಪೂಜೆ ಸಲ್ಲಿಸುತ್ತಾರೆ.

ಗೊಮ್ಮಟೇಶ್ವರ, ಶ್ರವಣಬೆಳಗೊಳ

ಏಷ್ಯ ಖಂಡದಲ್ಲಿಯೇ ಅತಿ ಎತ್ತರದ(೫೭ ಅಡಿ) ಗೊಮ್ಮಟನ ಶಿಲೆಯಿರುವ ಶ್ರವಣಬೆಳಗೊಳ ಪ್ರಸಿದ್ಧ ಜೈನ ಪುಣ್ಯಕ್ಷೇತ್ರ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹೋಬಳಿ ಕೇಂದ್ರವು ಬೆಂಗಳೂರಿನಿಂದ ೧೪೫ ಕಿ.ಮೀಗಳ ದೂರದಲ್ಲಿದೆ.ಶ್ರವಣ ಬೆಳಗೊಳದ ಚಂದ್ರಗಿರಿಯ ಮೇಲೆ ಗ್ರಾನೈಟಿನಲ್ಲಿ ಕಡೆಯಲಾಗಿರುವ ಈ ಶಿಲ್ಪ್ಬನ್ನು ಸುಮಾರು ೯೮೧ರಲ್ಲಿ ಅರಿಷ್ಟ ನೇಮಿ ಎಂಬವ ಕೆತ್ತಿದನೆಂದು ಹೇಳಲಾಗುತ್ತದೆ. ಚಂದ್ರಗಿರಿಯ ಬೆಟ್ಟದ ತಪ್ಪಲಿನಿಂದ ಮೇಲಕ್ಕೆ ಹೋಗಲು ಸುಮಾರು ೭೦೦ ಮೆಟ್ಟಿಲುಗಳನ್ನು ಹತ್ತಬೇಕಾಗುತ್ತದೆ. ಹತ್ತಲಾಗದವರಿಗೆ ಡೋಲಿ ವ್ಯವಸ್ಥೆಯೂ ಲಭ್ಯವಿದೆ. ಇಲ್ಲಿ ಜೈನ ಮಠವಿದ್ದು, ಮಠದ ಪಕ್ಕದಲ್ಲಿಯೇ ಪ್ರಾಚೀನವಾದ ಭಂಡಾರಿ ಹುಳ್ಳ ಬಸದಿ ಹಾಗೂ ಚಂದ್ರನಾಥ ಸ್ವಾಮಿಯ ಬಸದಿಯಿದೆ. ಜೈನ ಮಠದ ಈಗಿನ ಭಟ್ಟಾರಕರಾದ ಶ್ರೀ ಚಾರುಕೀರ್ತಿ ಸ್ವಾಮೀಜಿಯವರು ವಿದ್ವತ್‌ಪೂರ್ಣರು ಹಾಗೂ ಸಾಕಷ್ಟು ಶೈಕ್ಷಣಿಕ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ. ಹನ್ನೆರಡು ವರ್ಷಗಳಿಂದ ಕಠಿಣ ವ್ರತದ ಕಾರಣ ಸಂಚಾರಕ್ಕೆ ವಾಹನವನ್ನೂ ಸಹ ಬಳಸದ ಸ್ವಾಮೀಜಿಯವರು ಇತ್ತೀಚೆಗೆ ತಾನೆ ಧರ್ಮಪ್ರಚಾರಕ್ಕೋಸ್ಕರ ಮತ್ತೆ ವಾಹನವನ್ನು ಬಳಸಿ ಧರ್ಮಪ್ರಚಾರ ಕೈಗೊಳ್ಳುತ್ತಿದ್ದಾರೆ.

ಶ್ರೀ ಕ್ಷೇತ್ರದ ವತಿಯಿಂದ ನಡೆಸುತ್ತಿರುವ ಶ್ರೀ ಬಾಹುಬಲಿ ಇಂಜಿನಿಯರಿಂಗ್ ಕಾಲೇಜ್ ಸಹ ಇಲ್ಲಿದ್ದು, ಸಾಕಷ್ಟು ಹೊರ ರಾಜ್ಯದ ವಿದ್ಯಾರ್ಥಿಗಳು ಈ ಗ್ರಾಮೀಣ ಪ್ರದೇಶದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಜೊತೆಗೆ ಪಾಲಿಟೆಕ್ನಿಕ್, ವಿಜ್ಞಾನ ಕಾಲೇಜು, ಪ್ರೌಢ ಮತ್ತು ಪ್ರಾಥಮಿಕ ಶಾಲೆಯನ್ನೂ ಶ್ರೀಕ್ಷೇತ್ರದ ವತಿಯಿಂದ ನಡೆಸಲಾಗುತ್ತಿದೆ.


ಇತಿಹಾಸ:

ಮಹಾಮಸ್ತಕಾಭಿಷೇಕ: ಪ್ರತಿ ೧೨ ವರ್ಷಕ್ಕೊಮ್ಮೆ ನಡೆಯುತ್ತದೆ. ಇತ್ತೀಚೆಗೆ ೨೦೦೬ ರಲ್ಲಿ ನಡೆಯಿತು.

ಪ್ರವಾಸಿಗಳಿಗೆ ಸಲಕರಣೆಗಳು: ವಿಶೇಷ ಸಲಕರಣೆಗಳು ಏನೂ ಬೇಡ.

ವಸತಿ ವ್ಯವಸ್ಥೆ : ಯಾತ್ರಾರ್ಥಿಗಳಿಗೆ ಉಳಿದುಕೊಳ್ಳಲು ಸಾಕಷ್ಟು ಧರ್ಮಶಾಲೆಗಳ ವ್ಯವಸ್ಥೆಯಿದ್ದು, ವಸತಿ ಗೃಹಗಳ ಮುಖ್ಯ ಕಛೇರಿ ಬಸ್ ನಿಲ್ಧಾಣದ ಪಕ್ಕದಲ್ಲಿರುವ ವಿದ್ಯಾನಂದ ನಿಲಯದ ಹಿಂಬದಿಯಲ್ಲಿದೆ.


ಹತ್ತಿರದಲ್ಲಿರುವ ಇತರೆ ಪ್ರವಾಸ ಸ್ಥಳಗಳು: ಬೇಲೂರು (ಸುಮಾರು ೮೦ ಕಿಮೀ),ಹಳೇಬೀಡು(ಸುಮಾರು ೬೦ ಕಿಮೀ),ಯಡಿಯೂರು(ಸುಮಾರು ೪೦ ಕಿಮೀ), ಆದಿ ಚುಂಚನಗಿರಿ(ಸುಮಾರು ೨೫ ಕಿಮೀ), ಶೃಂಗೇರಿ (ಸುಮಾರು ೨೦೦ ಕಿಮೀ), ಮೈಸೂರು (ಸುಮಾರು ೮೦ ಕಿಮೀ), ಶ್ರೀರಂಗಪಟ್ಟಣ (ಸುಮಾರು ೬೫ ಕಿಮೀ), ಮೇಲುಕೋಟೆ(ಸುಮಾರು ೫೦ ಕಿಮೀ) ಇತ್ಯಾದಿ.


ಹೋಗುವ ದಾರಿ: ಬೆಂಗಳೂರಿನಿಂದ ಬರುವವರಿಗೆ:ಬೆಂಗಳೂರಿನಿಂದ ಸದ್ಯಕ್ಕಿರುವುದು ರಸ್ತೆ ಮಾರ್ಗ ಮಾತ್ರ.ಬೆಂಗಳೂರಿನಿಂದ ಹೊರಟು ರಾ. ಹೆ. ೪೮ (N H 48)ಯಲ್ಲಿ ಸಾಗಬೇಕು. ದಾರಿಯಲ್ಲಿ ಸಿಗುವ ಪ್ರಮುಖ ಪಟ್ಟಣಗಳೆಂದರೆ..ನೆಲಮಂಗಲ,ಕುಣಿಗಲ್,ಯಡಿಯೂರು,ಬೆಳ್ಳೂರ್ ಕ್ರಾಸ್,ಕದಬಹಳ್ಳಿ ನಂತರ ಹಿರೀಸಾವೆ. ಹಿರೀಸಾವೆಯಲ್ಲಿ ಎಡಕ್ಕೆ ತಿರುವಿದರೆ ೧೮ ಕಿ ಮೀ ನಂತರ ನೀವು ಶ್ರವಣಬೆಳಗೊಳದಲ್ಲಿ ಇರುತ್ತೀರಿ. ರಾಜ್ಯ ಸಾರಿಗೆ ಮೂಲಕ ಬರುವಂತವರು ಬೆಂಗಳೂರಿನಿಂದ ಶ್ರವಣಬೆಳಗೊಳಕ್ಕೆ ನೇರ ಬಸ್ ಸಂಪರ್ಕ ತೀರಾ ಕಡಿಮೆ ಇರುವುದರಿಂದ ಹಾಸನ, ಮಂಗಳೂರು ಅಥವಾ ಧರ್ಮಸ್ಥಳಕ್ಕೆ ತೆರಳುವ ಯಾವುದೇ ರಾಜ್ಸ ರಸ್ತೆ ಸಾರಿಗೆ ಬಸ್ಸನ್ನು ಹಿಡಿದು ಚನ್ನರಾಯಪಟ್ಟಣದಲ್ಲಿ ಇಳಿದು, ಅಲ್ಲಿಂದ ೧೨ ಕಿಮೀ ದೂರವಿರುವ ಶ್ರವಣಬೆಳಗೊಳವನ್ನು ತಲುಪಬಹುದು.(ಬೆಂಗಳೂರಿನಿಂದ ಸುಮಾರು ೧೫೦ ಕಿ ಮೀ)

ಮೈಸೂರಿನಿಂದ ಬರುವವರು ಶಿವಮೊಗ್ಗ, ದಾವಣಗೆರೆ ಅಥವಾ ಅರಸೀಕೆರೆ ಕಡೆಗೆ ತೆರಳುವ ಯಾವುದೇ ರಸ್ತೆ ಸಾರಿಗೆ ಬಸ್ಸಿನಲ್ಲಿ ಚನ್ನರಾಯಪಟ್ಟಣಕ್ಕೆ ಬಂದು ಅಲ್ಲಿಂದ ಶ್ರವಣಬೆಳಗೊಳ ತಲುಪಬಹುದು. ಸ್ವಂತ ವಾಹನದಲ್ಲಿ ಬರುವವರು ಮೈಸೂರು- ಚನ್ನರಾಯಪಟ್ಟಣ ಮಾರ್ಗದಲ್ಲಿ ಬರುವ ಕಿಕ್ಕೇರಿಯಲ್ಲಿ ಎಡಕ್ಕೆ ತಿರುಗಿ ನೇರವಾಗಿ ಶ್ರವಣಬೆಳಗೊಳ ತಲುಪಬಹುದು(ಮೈಸೂರಿನಿಂದ ದೂರ ಸುಮಾರು ೧೦೦ ಕಿ ಮೀ.)

ವೈಯಕ್ತಿಕ ಉಪಕರಣಗಳು