ಸತ್ಯಮೇವ ಜಯತೆ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
(ಸತ್ಯಮೇವ ಜಯತೇ ಇಂದ ಪುನರ್ನಿರ್ದೇಶಿತ)
ಭಾರತದ ರಾಷ್ಟ್ರೀಯ ಚಿಹ್ನೆಯು ಸತ್ಯಮೇವ ಜಯತೆ ಎಂಬ ಪದವನ್ನು ಒಳಗೊಂಡಿದೆ

ಸತ್ಯಮೇವ ಜಯತೆ (सत्यमेव जयते; ಅಂದರೆ ಸತ್ಯವೊಂದೇ ಸದಾ ಗೆಲ್ಲುತ್ತದೆ) ಇದು ಪ್ರಾಚೀನ ಭಾರತೀಯ ಗ್ರಂಥ ಮುಂಡಕ ಉಪನಿಷತ್ತಿನಲ್ಲಿನ ಒಂದು ಮಂತ್ರ.[೧] ಭಾರತ ದೇಶವು ಸ್ವಾತಂತ್ರ್ಯ ಪಡೆದಾಗ, ಇದನ್ನು ಭಾರತದ ರಾಷ್ಟ್ರೀಯ ಧ್ಯೇಯ ವಾಕ್ಯವನ್ನಾಗಿ ಅಳವಡಿಸಿಕೊಂಡಿತು.[೨]. ರಾಷ್ಟ್ರೀಯ ಲಾಂಛನದ ತಳಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ಇದನ್ನು ಕೆತ್ತಲಾಗಿದೆ. ಲಾಂಛನ ಮತ್ತು "ಸತ್ಯಮೇವ ಜಯತೆ" ಪದಗಳನ್ನು ಎಲ್ಲಾ ಭಾರತೀಯ ನಾಣ್ಯ ಮತ್ತು ನಗದು ನೋಟುಗಳಲ್ಲಿ ಅಚ್ಚು ಮಾಡಲಾಗುತ್ತದೆ. ಭಾರತದ ಉತ್ತರ ಪ್ರದೇಶ ರಾಜ್ಯದ ವಾರಣಾಸಿ ಸಮೀಪದ ಸಾರಾನಾಥದಲ್ಲಿ ಕ್ರಿ.ಪೂ. ೨೫೦ರ ಸುಮಾರಿನಲ್ಲಿ ನಿಲ್ಲಿಸಲಾದ ಅಶೋಕ ಸ್ತಂಭದಲ್ಲಿರುವ ಸಿಂಹಲಾಂಛನದ ರೂಪಾಂತರ ಈ ವಾಕ್ಯವಾಗಿದೆ.

ಮೂಲ[ಬದಲಾಯಿಸಿ]

ಈ ಧ್ಯೇಯವಾಕ್ಯದ ಮೂಲವು ಮಂಡೂಕ ಉಪನಿಷತ್ತಿನ ಪ್ರಸಿದ್ಧ ಮಂತ್ರ 3.1.6 ಆಗಿದೆ. ಆ ಮಂತ್ರದ ಲಿಪ್ಯಂತರ ಈ ಕೆಳಗಿನಂತೆ ಇದೆ.

ಸಂಸ್ಕೃತ

ಸತ್ಯಮೇವ ಜಯತೆ ನಾನೃತಂ
ಸತ್ಯೇನ ಪಂಥಾ ವಿತತೋ ದೇವಯಾನಃ
ಯೇನಾಕ್ರಮಂತಿ ಋಷಯೋ ಹ್ಯಾಪ್ತಕಾಮಾ
ಯತ್ರ ತತ್ ಸತ್ಯಸ್ಯ ಪರಮಂ ನಿಧಾನಂ[೩]

ದೇವನಾಗರಿ ಲಿಪಿಯಲ್ಲಿ

सत्यमेव जयते नानृतं
सत्येन पन्था विततो देवयानः ।
येनाक्रमन्त्यृषयो ह्याप्तकामा
यत्र तत् सत्यस्य परमं निधानम् ॥६॥

ಕನ್ನಡದಲ್ಲಿ ಅರ್ಥ

ಸತ್ಯ ಮಾತ್ರ ಗೆಲ್ಲುವುದು ಸುಳ್ಳುತನ ಅಲ್ಲ ಯಾವುದರ ಮೂಲಕ ಆಸೆಗಳನ್ನು ಸಂಪೂರ್ಣವಾಗಿ ಗೆದ್ದ ಋಷಿಗಳು ನಡೆದು ಸತ್ಯದ ಪರಮ ನಿಧಿಯನ್ನು ಹೊಂದುವರೋ ಆ ದೈವಿಕ ಪಥವು ಸತ್ಯದ ಮೂಲಕವೇ ಸಾಗುವುದು ಸತ್ಯದಲ್ಲಿ ಪರಮಾತ್ಮನ ನಿಧಿ ವಾಸಿಸುತ್ತದೆ.[೪]

ಈ ಘೋಷಣಾ ವಾಕ್ಯವನ್ನು ೧೯೧೮ ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪಂಡಿತ್ ಮದನ ಮೋಹನ ಮಾಳವೀಯರು ಜನಪ್ರಿಯಗೊಳಿಸಿದರು .[೫]

ಉಲ್ಲೇಖಗಳು[ಬದಲಾಯಿಸಿ]

  1. "Hindus laud Mick Jagger for singing in Sanskrit - Times Of India". Timesofindia.indiatimes.com. 2011-08-12. Retrieved 2012-05-23.
  2. Department related parliamentary standing committee on home affairs (2005-08-25). "One hundred and sixteenth report on the state emblem of India (Prohibition of improper use) Bill, 2004". New Delhi: Rajya Sabha Secretariat, New Delhi: 6.11.1. Retrieved 2008-09-26. {{cite journal}}: Cite journal requires |journal= (help)
  3. Sanskrit Documents. "muṇḍakopaniṣat" (PDF).
  4. Swami Krishnananda. "The Mundaka Upanishad:Third Mundaka, First Khanda".
  5. nic.in/indiaculture /pdf /Final%20Minutes_MMM-26july,%202011.pdf "Minutes of the first meeting of the National Committee for Commemoration of 150th Birth Anniversary of Mahamana Pandit Madan Mohan Malaviya 26 July 2011 at 6.00 pm - 7, Race Course Road, New Delhi" (PDF). {{cite web}}: Check |url= value (help)[ಶಾಶ್ವತವಾಗಿ ಮಡಿದ ಕೊಂಡಿ]