ಸದಸ್ಯ:Praveen 1310154/sandbox

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಭಾರತೀಯ ರಿಸರ್ವ್ ಬ್ಯಾಂಕ್

ಭಾರತದ ಕೇಂದ್ರೀಯ ಬ್ಯಾಂಕ್. ಇದನ್ನು ಏಪ್ರಿಲ್ ೧ ೧೯೩೫ರಂದು ಸ್ಥಾಪಿಸಲಾಯಿತು. ರಿಸರ್ವ ಬ್ಯಾಂಕಿನ ಕೇಂದ್ರ ಕಛೇರಿಯನ್ನು ಮೊದಲಿಗೆ ಕೊಲ್ಕತ್ತದಲ್ಲಿ ಪ್ರಾರಂಭಿಸಿದರಾದರೂ ನಂತರ ೧೯೩೭ರಲ್ಲಿ ಮುಂಬೈಗೆ ಬದಲಾಯಿಸಲಾಯಿತು. ೧೯೪೯ರಿಂದ ಭಾರತ ಸರ್ಕಾರವು ಇದರ ಒಡೆತನವನ್ನು ಹೊಂದಿದೆ. ರಘುರಾಮ್ ರಾಜನ್ ಬ್ಯಾಂಕ್ನ ಹಾಲಿ ಗವರ್ನರ್ ಆಗಿ ಕಾರ್ಯನಿರ್ವಹಿಸುತ್ತಿದಾರೆ. ಇದು ೨೨ ಪ್ರಾದೇಶಿಕ ಶಾಖೆಗಳನ್ನು ಹೊಂದಿದೆ. ರಿಜರ್ವ್ ಬ್ಯಾಂಕು ದೇಶದ ಅತ್ಯುನ್ನತ ಬ್ಯಾಂಕ್ ಆಗಿದೆ. ರಿಜರ್ವ್ ಬ್ಯಾಂಕನ್ನು ೧೯೩೪ರ ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ ಯನ್ವಯ ಒಂದು ಖಾಸಗಿ ಷೇರುದಾರರ ಬ್ಯಾಂಕ್ ಆಗಿ ೧೯೩೫ ರ ಏಪ್ರಿಲ್ ೧ ರಂದು ಸ್ಥಾಪಿಸಲಾಯಿತು. ಸ್ವಾತಂತ್ಯ ನಂತರ ಸರ್ಕಾರಿ ಸ್ವಾಮ್ಯದ ಕೇಂದ್ರ ಬ್ಯಾಂಕ್ ಒಂದರ ಅವಶ್ಯಕತೆ ಬಿತ್ತಾದ್ದರಿಂದ ಸರ್ಕಾರ ರಿಜರ್ವ್ ಬ್ಯಾಂಕನ್ನು ೧೯೪೭ ರ ಜನವರಿ ೧ ರಂದು ರಾಷ್ಟ್ರೀಕರಿಸಿ ಕೇಂದ್ರ ಬ್ಯಾಂಕನ್ನಾಗಿ ಪರಿವರ್ತಿಸಿತು. ಈ ಬ್ಯಾಂಕು ದೇಶದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಗ್ರಸ್ಥಾನ ಪಡೆದಿದ್ದು ಎಲ್ಲಾ ಬ್ಯಾಂಕ್ ಗಳು ಮತ್ತು ಹಣಕಾಸಿನ ಸಂಸ್ಥೆಗಳ ನೇರ ನಿಯಂತ್ರಣ ಸಾಧಿಸುತ್ತಿದೆ. ಇದು ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಭಾರತೀಯ ಸ್ಟೇಟ್ ಬ್ಯಾಂಕ್ ಭಾರತದ ರಾಷ್ಟ್ರೀಕೃತ ಮತ್ತು ಖಾಸಗಿ ವಲಯದ ಬ್ಯಾಂಕ್ ಗಳ ಪೈಕಿ ಅತಿ ದೊಡ್ಡ ಬ್ಯಾಂಕ್ ಆಗಿದೆ. ೧೮೦೬ರಲ್ಲಿ ಸ್ಥಾಪಿತಗೊಂಡ ಈ ಬ್ಯಾಂಕ್ ನ್ನು 'ಇಂಪೀರಿಯಲ್ ಬ್ಯಾಂಕ್ ಆಫ್ ಇಂಡಿಯಾ' ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು.ಮುಂದೆ ೧೯೫೫ರಲ್ಲಿ ಭಾರತ ಸರ್ಕಾರ ಇದನ್ನು ರಾಷ್ಟ್ರೀಕೃತ ಬ್ಯಾಂಕ್ ಎಂದು ಘೋಷಿಸಿ 'ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ'ದ ಆಧೀನಕ್ಕೆ ಒಳಪಡಿಸಿತು.ಭಾರತದ ಹಳ್ಳಿಹಳ್ಳಿಗಳಲ್ಲಿಯೂ ತನ್ನ ಶಾಖೆಗಳನ್ನು ತೆರೆದಿರುವ ಸ್ಟೇಟ್ ಬ್ಯಾಂಕ್ ತನ್ನ ವಿಶ್ವಾಸದ ಪ್ರತೀಕವಾಗಿ ಜಗತ್ತಿನ ೩೨ ವಿವಿಧ ರಾಷ್ಟ್ರಗಳಲ್ಲಿ ಸುಮಾರು ೯೨ ಶಾಖೆಗಳನ್ನೂ ಕೂಡ ತೆರೆದಿದೆ

ವಾಣಿಜ್ಯ ಬ್ಯಾಂಕುಗಳು

ವಾಣಿಜ್ಯ ಬ್ಯಾಂಕುಗಳು ಹಣಕಾಸಿನ ಸಂಸ್ಥೆಗಳಾಗಿದ್ದು , ವ್ಯಾಪಾರ ಮತ್ತು ಇನ್ನಿತರ ಉದ್ಧೇಶಕ್ಕೈ ಸಾಲ ಕೊಡುವ ಮತ್ತು ಠೇವುಗಳನ್ನು ಸ್ವೀಕರಿಸುವ ಸಂಸ್ಥೆಗಳಾಗಿವೆ. ಈ ಸಂಸ್ಥೆಗಳ ಹುಟ್ಟು ಬೆಳಣೆಗೆಗೆ ಸುಮಾರು ಮೂರು ನೂರು ವರ್ಷಗಳ ಇತಿಹಾಸವಿದೆ. ಬ್ಯಾಂಕ್ ಎಂಬ ಪದವು ಇಟಾಲಿಯನ್ ಪದ `ಬ್ಯಾಂಕೋ' ಎಂಬ ಪದದಿಂದ ಬಂದಿರುತ್ತದೆ. ಬ್ಯಾಂಕೋ ಎಂದರೆ ಹಿಂದಿನ ಕಾಲದ ಸಾಹುಕಾರರ ಉಪಯೋಗಿಸುತ್ತಿದ್ದ ಬೆಂಚು ಅಥವಾ ಬಾಕು ಎಂದಾರ್ಥವಾಗುತ್ತದೆ. ಮಾರುಕಟ್ಟೆಯಲ್ಲಿ ಬೆಂಚು ಹಾಕಿಕೊಂಡು ಅದರ ಮೇಲೆ ಕುಳಿತು ಸಾಹುಕಾರರು ಹಣದ ಲೇವಾ ದೇವಿ ವ್ಯವಹಾರವನ್ನು ಮಾಡುತ್ತಿದ್ದರು. ಇಂಗ್ಲೆಂಡಿನಲ್ಲಿ ಅಕ್ಕಸಾಲಿಗರು ಕೈಗೊಂಡ ಹಣದ ಲೇವಾದೇವಿ ವ್ಯಾವಹಾರಗಳಲ್ಲಿ ಇಂದಿನ ಬ್ಯಾಂಕ್ ವ್ಯವಹಾರ ಪದ್ಧತಿಯ ಉಗಮವನ್ನು ಕಾಣಬಹುದು. ವ್ಯಾಪಾರಸ್ಥರು ತಮ್ಮಲ್ಲಿ ಅಧಿಕ ಇದ್ದ ಹಣವನ್ನು ಸುರಕ್ಶತೆಗಾಗಿ ಅಕ್ಕಸಾಲಿಗರಿಗೆ ಒಪ್ಪಿಸುತ್ತಿದ್ದರು. ಅಕ್ಕಸಾಲಿಗರು ಠೇವಣಿ ಇಟ್ಟ ವ್ಯಾಪಾರಸ್ತರಿಗೆ ಅವರಿಟ್ಟ ಠೇವಣಿಯ ಮೌಲ್ಯದಷ್ತು ರಾಶಿದಿಯನ್ನು ಕೊಡುತ್ತಿದ್ದರು. ರಶೀದಿಗಳಿಗೆ ಅಕ್ಕಸಾಲಿಗರ ಪಾವತಿ ಚೀಟಿ'ಗಳೆಂದು ಕರೆಯುತ್ತಿದ್ದರು. ಈ ಪಾವತಿ ಚೀಟಿಯನ್ನು ಹೊಂದಿದವರಿಗ ಠೇವಣಿಯ ಹಣ ವಾಪಾಸ ಪಡೆಯಲು ಹಕ್ಕು ಇರುತಿತ್ತು. ಬೇಡಿದಾಗ ಹಣವನ್ನು ಹಿಂದಿರುಗಿಸುವ ಹೊಣೆ ಅಕಸಾಲಿಗದಾಗಿತ್ತು. ಅಕ್ಕಸಾಲಿಗರ ಪಾವತಿ ಚೀಟಿಗಳು ಈ ಭರವಸೆಯ ಸಂಕೇತಗಳಾಗಿದ್ದವು. ಈ ಪ್ರಕಾರ ಹಣದ ಲೇವಾದೇವಿ ವ್ಯವಹಾರ ಮಾಡುವಾಗ ಅವರಿಗೆ ಹೊಸ ಅನುಭವದ ಅರಿವಾಯಿತು. ಎಲ್ಲಾ ಠೇವಣಿದಾರರು ಒಂದೇ ವೇಳೆಗೆ ತಾವಿಟ್ಟ ಠೇವಣಿಯ ಹಣವನ್ನು ವಾಪಾಸಕೇಳಲು ಬರುವುದಿಲ್ಲವೆಂಬ ವಿಶ್ವಾಸ ಅವರಗಾಯಿತು. ಅದರಿಂದಅವರ ಠೇವಣಿಯ ಹಣವನ್ನು ತಮ ಬಳಿ ಸೋಮಾರಿಯಾಗಿಡುವುದಕ್ಕೆ ಬದಲು ಅಗತ್ಯವಿದ್ದವರಿಗೆ ಸಾಲ ಕೊಟ್ಟು ಬಡ್ಡಿಯನ್ನು ಸಂಪಾದಿಸಲು ಪ್ರಾರಂಭಿಸಿದರು. ಈ ರೀತಿ ಕೇವಲ ಭದ್ರತೆಗಾಗಿ ಇಟ್ಟ ಠೇವಣಿಯ ರೂಪದಲ್ಲಿನ ಹಣವು ಸಾಲ ಕೊಡುವ ವ್ಯವಹಾರಕ್ಕಾಗಿ ಬಳಸಲ್ಪಡುವ ಸಾಧನವಾಯಿತು.ಕ್ರಮೇಣ ಸ್ವತಂತ್ರ ಬ್ಯಾಂಕಿಗ್ ಸಂಸ್ಥೆಗಳು ವಾಣಿಜ್ಯ ವ್ಯವಹಾರಗಳಿ ಸಾಲ ನೀಡಲು ಅಸ್ತಿತ್ವದಲ್ಲಿ ಬಂದವು.

ಸಹಕಾರಿ ಬ್ಯಾಂಕ್

ಭಾರತದಲ್ಲಿ ಮೊಟ್ಟಮೊದಲಿನ ಸಾಲವಿತರಣ (ಬ್ಯಾಂಕಿಂಗ್) ಸಹಕಾರ ಸಂಘವು ಬಂಗಾಳದಲ್ಲಿ ದಿ. ೨೫-೩-೧೯೦೪ / 25-3-1904ರಂದು/ರಲ್ಲಿ ಬಂಗಾಳ ಸರ್ಕಾರದ ಬೆಂಬಲ ಮತ್ತು ಸಹಾಯದಿಂದ ಆರಂಭವಾಯಿತು. ಸ್ನೇಹಿತರ ಸಹಕಾರ ಸಂಘಗಳ ಕಾನೂನು/ನಿಯಮಗಳ ಅಡಿಯಲ್ಲಿ ಅದು ನೊಂದಾವಣೆಯಾಗಿತ್ತು. ಸಹಕಾರ ಸಂಘದ ನಿಯಮಗಳು ೧೯೧೯/1919 ರಲ್ಲಿ ರಾಜ್ಯಗಳ ಆಡಳಿತ ವಿಷಯಗಳ ಪಟ್ಟಿಯೊಳಗೆ ಸೇರಿತು. ೧೯೫೧ /1951 ರಲ್ಲಿ ೫೦೧/501 ಕೇಂದ್ರ ಸಹಕಾರ ಯೂನಿಯನ್ ಗಳು , ಕೇಂದ್ರ ಸಹಕಾರ ಬ್ಯಾಕುಗಳೆಂದು ಪುನರ್ನಾಮಕರಣ ಮಾಡಲಾಯಿತು.

ಭೂ ಅಭಿವೃದ್ಧಿ ಬ್ಯಾಂಕುಗಳು

ಕರ್ನಾಟಕ ರಾಜ್ಯದಲ್ಲಿ ಪ್ರತಿಯೊಂದು ತಾಲೂಕಿಗೆ ಒಂದು ಭೂ ಅಭಿವೃದ್ಧಿ ಬ್ಯಾಂಕುಗಳಾಗಿ ಕಾರ್ಯನಿರ್ವಹಿಸುತ್ತವೆ. ಇವುಗಳ ಉದ್ದೇಶ ರೈತರ ಭೂ ಅಭಿವೃದ್ಧಿಗಾಗಿ, ಜಮೀನು ದುರಸ್ತಿಗಾಗಿ, ಜಮೀನು ಖರೀದಿಗಾಗಿ, ಬೇರೆ ಬೇರೆ ಸಹಕಾರೇತರ ಬ್ಯಾಂಕ್ಗಳಲ್ಲಿ ಮಾಡಿದ ಸಾಲ ತೀರಿಸುವುದಕ್ಕಾಗಿ, ತೋಟಗಾರಿಕೆ ಅಭಿವೃದ್ಧಿಗಾಗಿ ಪಶುಸಂಗೋಪನಾ ಉದ್ದೇಶಕ್ಕಾಗಿ, ಬಾವಿಗಳನ್ನು ತೋಡಿ ನೀರನ್ನು ಉಪಯೋಗಿಸಲಿಕ್ಕಾಗಿ, ಕೊಳವೆ ಬಾವಿ ತೋಡಲಿಕ್ಕಾಗಿ ಟ್ರಾಕ್ಟರ್ ಖರೀದಿಗಾಗಿ, ಇತ್ಯಾದಿ ವಿವಿಧ ಉದ್ದೇಶಕ್ಕಾಗಿ ದೀರ್ಘಾವಧಿ ಸಾಲ ರೈತರಿಗೆ ನೀಡುವುದೇ ಆಗಿದೆ