ಸಮುದ್ರ ಮಂಥನ
ಹಿಂದೂ ಧರ್ಮದಲ್ಲಿ, ಸಮುದ್ರಮಂಥನ ಅಥವಾ ಕ್ಷೀರಸಮುದ್ರವನ್ನು ಕಡೆದ ಘಟನೆ ಪುರಾಣಗಳಲ್ಲಿ ಒಂದು ಅತ್ಯಂತ ಪ್ರಸಿದ್ದ ಪ್ರಸಂಗ ಹಾಗೂ ಇದನ್ನು ಅತ್ಯಂತ ವೈಭವದಿಂದ ೧೨ ವರ್ಷಗಳಿಗೊಮ್ಮೆ ಕುಂಭಮೇಳ ಎಂಬ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಕಥೆಯು ಭಾಗವತಪುರಾಣ, ಮಹಾಭಾರತ ಹಾಗೂ ವಿಷ್ಣು ಪುರಾಣದಲ್ಲಿ ಕಂಡುಬರುತ್ತದೆ.
ಸಮುದ್ರಮಂಥನದ ಇತರ ಹೆಸರುಗಳು —
- ಸಮುದ್ರಮಂಥನಂ — ಮಂಥನಂ ಎಂದರೆ ಸಂಸ್ಕೃತದಲ್ಲಿ ಮಂಥನ ಅಥವಾ 'ಕಡೆಯುವುದು' ಎಂದರ್ಥ.
- ಸಾಗರ ಮಂಥನ — ಸಾಗರ ಸಮುದ್ರ ಕ್ಕೆ ಇನ್ನೊಂದು ಹೆಸರು.
- ಕ್ಷೀಷಿರಸಾಗರ ಮಂಥನ — ಕ್ಷೀರಸಾಗರ ಎಂದರೆ ಹಾಲಿನ ಸಮುದ್ರವೆಂದು. ಕ್ಷೀರಸಾಗರ = ಕ್ಷೀರ (ಹಾಲು) + ಸಾಗರ (ಸಮುದ್ರ).
ಪರಿವಿಡಿ |
ಸಮುದ್ರಮಂಥನದ ಕಥೆ[ಬದಲಾಯಿಸಿ]
ದೇವತೆಗಳ ರಾಜ ಇಂದ್ರ, ತನ್ನ ಆನೆಯ ಮೇಲೆ ಸವಾರಿ ಮಾಡುವಾಗ , ದೂರ್ವಾಸಎಂಬ ಋಷಿ ಸಿಕ್ಕಿ ಇಂದ್ರನಿಗೆ ಒಂದು ವಿಶೇಷ ಮಾಲೆಯನ್ನು ಕೊಟ್ಟರು. ಇಂದ್ರ ಮಾಲೆಯನ್ನು ಸ್ವೀಕರಿಸಿ ಅದನ್ನು ಆನೆಯ ಸೊಂಡಿಲಿನ ಮೇಲೆ ಇಟ್ಟನು. ಆನೆಗೆ ಹೂಮಾಲೆಯ ಗಂಧದಿಂದ ಕಿರುಕುಳ ಉಂಟಾಗಿ ಮಾಲೆಯನ್ನು ನೆಲಕ್ಕೆ ಹಾಕಿತು. ಈ ಹಾರವು ಸಿರಿ ಮತ್ತು ಭಾಗ್ಯದ ಸಂಕೇತವಾಗಿದ್ದು, ಅದನ್ನು ಪ್ರಸಾದವಾಗಿ ಕಾಣಬೇಕಿತ್ತು, ಅಪಮಾನದಿಂದ ಕ್ರೋಧಿತರಾದ ದೂರ್ವಾಸ ಮುನಿಗಳು ಇಂದ್ರ ಹಾಗೂ ಎಲ್ಲ ದೇವತೆಗಳ ಶಕ್ತಿ, ಸಾಮರ್ಥ್ಯ ಹಾಗೂ ಭಾಗ್ಯಗಳು ಕಳೆದುಹೋಗಲಿ ಎಂದು ಶಾಪ ನೀಡಿದರು.
ನಂತರ ದೇವರುಗಳು ಅಸುರರೊಂದಿಗೆ ಯುದ್ಧದಲ್ಲಿ ಸೋಲನಪ್ಪಿದರು. ಅಸುರರರಾಜ ಬಲಿ ಲೋಕವನ್ನು ತನ್ನ ವಶಕ್ಕೆ ತೆಗೆದುಕೊಂಡ. ದೇವರು ವಿಷ್ಣುವಿನ ಮೊರೆಹೋದರು. ವಿಷ್ಣು ರಾಜತಾಂತ್ರಿಕತೆಯಿಂದ ಅಸುರರೊಡನೆ ವ್ಯವಹರಿಸಲು ಹೇಳಿದ. ದೇವರು ಅಸುರರೊಂದಿಗೆ ಒಪ್ಪಂದ ಮಾಡಿಕೊಂಡು ಸಮುದ್ರವನ್ನು ಅಮೃತಕ್ಕಾಗಿ ಕಡೆದು ಅದನ್ನು ತಮಲ್ಲಿ ಹಂಚಿಕೊಳಲು ಒಪ್ಪಿಕೊಂಡರು. ಆದರೆ ಅಮೃತವು ದೇವತೆಗಳಿಗೆ ಮಾತ್ರ ದಕ್ಕುವಂತೆ ಮಾಡುವುದಾಗಿ ವಿಷ್ಣು ದೇವತೆಗಳಿಗೆ ಹೇಳಿದ.
ಕ್ಷೀರಸಾಗರದ ಮಂಥನ[ಬದಲಾಯಿಸಿ]
ಕ್ಷೀರಸಾಗರದ ಮಥನ ಒಂದು ಸುದೀರ್ಘವಾದ ಪ್ರಕ್ರಿಯೆ. ಕಡೆಗೋಲಾಗಿ ಮಂದರಾಚಲವನ್ನೂ, ಹಗ್ಗವಾಗಿ ಸರ್ಪಗಳ ರಾಜ ವಾಸುಕಿಯನ್ನೂ ಬಳಸಲಾಯಿತು. ದೇವತೆಗಳು ಹಾವಿನ ಬಾಲವನ್ನು ಮತ್ತು ಅಸುರರು ಹಾವಿನ ಹೆಡೆಯನ್ನು ಹಿಡಿದರು. ಹಾವನ್ನು ಒಮ್ಮೆ ಅಸುರರು ಒಮ್ಮೆ ದೇವತೆಗಳು ಎಳೆದರು. ಇದರಿಂದ ಬೆಟ್ಟವು ತಿರುಗತೊಡಗಿತು. ಸಮುದ್ರಮಂಥನ ಪ್ರಾರಂಭವಾಯಿತು. ಆದರೆ, ಬೆಟ್ಟವು ಸಾಗರದಲ್ಲಿ ಕುಸಿಯತೊಡಗಿತು. ವಿಷ್ಣು ಒಂದು ಆಮೆಯಾಗಿ ತನ್ನ ಎರಡನೇ ಕೂರ್ಮಆವತಾರ ತಾಳಿ ತನ್ನ ಬೆನ್ನಿನ ಮೇಲೆ ಬೆಟ್ಟವನ್ನು ಹೊತ್ತನು.
ಗಮನಿಸಿ, ಮಹಾಭಾರತದಲ್ಲಿನ ಕಥೆ ಪುರಾಣಗಳಲ್ಲಿನವುಗಳಿಗಿಂತ (ಭಾಗವತ, ಬ್ರಹ್ಮವೈವರ್ತ) ಭಿನ್ನವಾಗಿದೆ. ಉದಾಹರಣೆಗೆ, ಮಹಾಭಾರತದಲ್ಲಿ ಆಮೆಯ ರೂಪವನ್ನು ವಿಷ್ಣು ಧರಿಸುವುದಿಲ್ಲ. ಅಲ್ಲಿ ಆಮೆಗಳ ರಾಜನಾದ ಅಕೂಪಾರನು, ದೇವತೆಗಳ ಹಾಗು ಅಸುರರ ಬೇಡಿಕೆಯ ಮೇರೆಗೆ ಅದನ್ನು ನಿಭಾಯಿಸುತ್ತಾನೆ.
ಹಾಲಾಹಲ ('ಕಳಕುಟ')[ಬದಲಾಯಿಸಿ]
ದೇವತೆಗಳು ಹಾಗೂ ಅಸುರರು ಸಮುದ್ರಮಥನ ಮಾಡುವಾಗ, ಒಂದು ಕೊಡ ವಿಷವು , ಹಾಲಾಹಲ, ಸಮುದ್ರದಿಂದ ಹೊರಬಂತು. ಇದರಿಂದ ದೇವತೆಗಳು ಹಾಗೂ ಅಸುರರು ಭಯಭೀತರಾದರು, ಏಕೆಂದರೆ ಈ ವಿಷವು ಸೃಷ್ಟಿಯನ್ನೇ ನಾಶ ಮಾಡುವಷ್ಟು ಪ್ರಭಾವಶಾಲಿ. ವಿಷ್ಣುವಿನ ಸಲಹೆಮೇಲೆ, ದೇವತೆಗಳು ಶಿವನ ಬಳಿ ರಕ್ಷಣೆ ಹಾಗೂ ಸಹಾಯಕೇಳಲು ಹೋದರು. ಜೀವಕೋಟಿಯ ಮೇಲಿನ ಅನುಕಂಪದಿಂದ ಶಿವ ವಿಷವನ್ನು ನುಂಗಿ ತನ್ನ ಕಂಠದಲ್ಲಿ ಹಿಡಿದಿಟ್ಟ.. ಇದು ಎಷ್ಟು ತೀಕ್ಷ್ಣವಾದ ವಿಷವೆಂದರೆ ಶಿವನ ಕಂಠವು ನೀಲಿಯಾಗಿ ಹೋಯಿತು. ಈ ಕಾರಣದಿಂದ, ಶಿವನನ್ನು ನೀಲಕಂಠ (ಕಪ್ಪು ಅಥವಾ ನೀಲಿ - ಗಂಟಲಿನವ,ನೀಲ = "ನೀಲಿ", ಕಂಠ = "ಗಂಟಲು") ಎನ್ನುತ್ತಾರೆ.
ರತ್ನಗಳು[ಬದಲಾಯಿಸಿ]
ಎಲ್ಲ ರೀತಿಯ ಗಿಡಮೂಲಿಕೆಯನ್ನು ಸಮುದ್ರದಲ್ಲಿ ಹಾಕಲಾಯಿತು ಹಾಗೂ ಹದಿನಾಲ್ಕು ರತ್ನಗಳು ಸಮುದ್ರದಿಂದ ಹೊರಬಂದವು, ಇದನ್ನು ದೇವತೆಗಳು ಹಾಗು ಅಸುರರು ಹಂಚಿಕೊಂಡರು. ಸಾಮಾನ್ಯವಾಗಿ ರತ್ನಗಳು ಹದಿನಾಲ್ಕು ಎಂದು ಹೇಳಲ್ಪಟರೂ, ಗ್ರಂಥಗಳಲ್ಲಿ ಒಂಬತ್ತರಿಂದ ಹದಿನಾಲ್ಕರವರಗೆ ಉಲ್ಲೇಖಿಸಲಾಗುತದೆ. ಪಟ್ಟಿ:[೧]
- ಹಾಲಾಹಲ, ಶಿವನು ನುಂಗಿದ ವಿಷ
- ವರುನಿ ಅಥವಾ ಸುರ, ಮದ್ಯದ ದೇವತೆ. ಇವನ್ನು ದೇವತೆಗಳು ಕರೆದುಕೊಂಡಿದರಿಂದ, ಅವರನ್ನು ಸುರರೆಂದು ಹಾಗು ಇತರರನ್ನು ಅಸುರರೆಂದು ಕರೆಯಲಾಗುತ್ತದೆ.
- ಉಚ್ಹೈಶ್ರವಸ್ಸು, ಅತಿಶ್ರೇಷ್ಠವಾದ ೭-ತಲೆಯುಳ್ಳ ಕುದರೆ
- ಕೌಸ್ತುಭ, ಜಗತ್ತಿನ ಅತಿಶ್ರೇಷ್ಠ ರತ್ನಾಭರಣ, ಇದನ್ನು ವಿಷ್ಣು ಧರಿಸುತ್ತಾನೆ
- ಚಂದ್ರ
- ಲಕ್ಷ್ಮಿ, ಭಾಗ್ಯ ಹಾಗು ಸಂಪತ್ತಿನ ದೇವತೆ -ವಿಷ್ಣುವಿನ ಪತ್ನಿ
- ಅಪ್ಸರೆಯರು,ರಂಭಾ, ಮೇನಕ, ಪುನ್ಜಿಕಸ್ಥಳ ಇತರರು
- ಕಾಮಧೇನು ಅಥವಾ ಸುರಭಿ, ಕೋರಿದುದನ್ನು ನೀಡುವ ಹಸು
- ಪಾರಿಜಾತ, ಅತಿಶ್ರೇಷ್ಠವಾದ ಹೂವಿನ ಮರ. ಇದರ ಮೊಗ್ಗು ಎಂದಿಗೂ ಬಾಡುವುದಿಲ್ಲ, ಇದನ್ನು ಕಲ್ಪವೃಕ್ಷದೊಂದಿಗೆ ಗುರುತಿಸಲಾಗುತ್ತದೆ.
- ಅಯ್ರವತ, ಇಂದ್ರನ ಆನೆ
- ಧನ್ವಂತರಿ, ದೇವತೆಗಳ ವೈದ್ಯ ಅಮೃತದೊಂದಿಗೆ. (ಕೆಲವೊಮ್ಮೆ, ಎರಡು ಬೇರೆ ಬೇರೆ ರತ್ನಗಳಾಗಿ ಪರಿಗಣಿಸಲಾಗುತ್ತವೆ.)
ಈ ಪಟ್ಟಿ ಒಂದು ಪುರಾಣದಿಂದ ಇನ್ನೊಂದು ಪುರಾಣಕ್ಕೆ ಸ್ವಲ್ಪ ಬಿನ್ನವಾಗಿರುತ್ತದೆ,ಹಾಗೂ ರಾಮಾಯಣ ಮತ್ತು ಮಹಾಭಾರತಗಳಲ್ಲಿಯೂ ಭಿನ್ನವಾಗಿವೆ. ಪಟ್ಟಿಯನ್ನು ಪೂರ್ಣಗೊಳಿಸಲು ಈ ರತ್ನಗಳನ್ನು ಸೇರಿಸಲಾಗುತ್ತದೆ:[೧]
- ಶಾರಂಗ,ವಿಷ್ಣುವಿನ ಬಿಲ್ಲು
- ಶಂಖ ವಿಷ್ಣುವಿನ ಶಂಖ
- ಜ್ಯೆಸ್ಥ -ದೌರ್ಭಾಗ್ಯದ ದೇವತೆ
- ವರುಣನು ತೆಗೆದುಕೊಂಡ ಕೊಡೆ
- ಅದಿತಿಯು ತನ್ನ ಮಗನಾದ ಇಂದ್ರನಿಗೆ ಕೊಟ್ಟ ಕಿವಿಹೊಲೆ
- ತುಳಸಿ ಗಿಡ
- ನಿದ್ರಾ ಅಥವಾ ಮೈಗಳ್ಳತನ
ಚಿರಂತನತೆಯ ಪಾನೀಯ[ಬದಲಾಯಿಸಿ]
ಕೊನೆಯಲ್ಲಿ , ಧನ್ವಂತರಿ, ಸ್ವರ್ಗಲೋಕದ ವೈದ್ಯ, ಅಮೃತ ಉಳ್ಳ ಕೊದದೊಂದಿಗೆ ಹೊರಬಂದ, ದೇವತೆಗಳು ಹಾಗು ಅಸುರರ ನಡುವೆ ಅಮ್ರುತಕಾಗಿ ಘೋರ ಯುಧನಡೆಯಿತು. ಅಮೃತವನ್ನು ಅಸುರರಿಂದ ರಕ್ಷಿಸಲು, ದೇವತೆಗಳು ಅಮೃತದ ಕೊಡವನ್ನು ಬೂಮಿಮೇಲೆ ನಾಲ್ಕು ಜಾಗಗಳಲ್ಲಿ ಬಚ್ಚಿಟ್ಟರು - ಪ್ರಯಾಗ (ಅಲ್ಲಹಾಬಾದ್), ಹರಿದ್ವಾರ, ಉಜ್ಜೈನಿ ಹಾಗು ನಾಸಿಕ. ಈ ನಾಲ್ಕು ಜಾಗಗಳಲ್ಲಿ ಒಂದೊಂದು ಹನಿ ಅಮೃತ ಚೆಲ್ಲಿ ಈ ಜಾಗಗಳು ಪುಣ್ಯ ಕ್ಷೇತ್ರಗಳಾದವು. ಈ ಕಾರಣದಿಂದ ಹನ್ನೆರಡು ವರ್ಷಕೊಮ್ಮೆ ಇಲ್ಲಿ ಕುಂಭ ಮೇಳವನ್ನು ಆಚರಿಸಲಾಗುತ್ತದೆ.
ಆದರೆ, ಕೊನೆಗೂ ಅಸುರರ ಕೈಗೆ ಅಮೃತ ಸಿಕ್ಕಿ ಅವರು ಹರ್ಷದಿಂದ ಆಚರಿಸತೊಡಗಿದರು. ಭಯಬಿತರಾದ, ದೇವತೆಗಳು ವಿಷ್ಣುವಿಗೆ ಮನವಿ ಮಾಡಿದರು,ವಿಷ್ಣು ಮೋಹಿನಿ ಅವತಾರವನ್ನು ತಾಳಿ ಅಸುರರನ್ನು ವಿಚಲಿತಗೊಳಿಸಿ ಅಮ್ರುಹವನ್ನು ದೇವತೆಗಳಿಗೆ ಹಂಚಿದನು . ರಾಹುಎಂಬ ಅಸುರನು ದೇವತಾ ರೂಪ ತಾಳಿ ಅಮೃತವನ್ನು ಸೇವಿಸಿದ. ತಮ್ಮ ತೆಜಸಿನಿಂದ, ಸೂರ್ಯ ಹಾಗು ಚಂದ್ರ ಇದನ್ನು ಗಮನಿಸಿ, ಮೋಹಿನಿಗೆ ವಿಷಯ ತಿಳಿಸಿದರು. ಅಮೃತವು ಗಂಟಲಿನ ಕೆಳೆಗಿಳಿಯುವ ಮುನ್ನ, ಮೋಹಿನಿಯು ಸುದರ್ಶನ ಚಕ್ರದಿಂದ ರಾಹುವಿನ ತೆಲೆ ಉರುಲಿಸಿದಳು. ಅಮೃತ ಸೇವಿಸಿದ ತಲೆ ಚಿರಂಜೀವಿ ಆಯಿತು. ಸೇಡು-ತೀರಿಸಿಕೊಳಲ್ಲು ರಾಹುವಿನ ತಲೆ ಸೂರ್ಯ ಹಾಗು ಚಂದ್ರನನ್ನು ನುಂಗಿ ಗ್ರಹಣವುಂಟು ಮಾಡುತಾನೆ. ನಂತರ ಸೂರ್ಯ ನಂತರ ಸೂರ್ಯ ಅಥವಾ ಚಂದ್ರ ಗಂಟಲಿನಿಂದ ಹೊರಬಂದು ಗ್ರಹಣ ಮುಕ್ತಯಗೊಳುತ್ತದೆ.
ಕಥೆಯಾ ಕೊನೆಯಲ್ಲಿ ಪುನರ್ಚೆತನಗೊಂಡ ದೇವತೆಗಳು ಅಸುರರನ್ನು ಸೋಲಿಸುತಾರೆ.
ಆಕರಗಳು[ಬದಲಾಯಿಸಿ]
- ↑ ೧.೦ ೧.೧ Wilson, Horace Hayman (1840). The Vishnu Purana.