ಸಿದ್ದಗಂಗಾ
Wikipedia ಇಂದ
ಶ್ರೀ ಸಿದ್ದಗಂಗಾ ಕ್ಷೇತ್ರವು ತುಮಕೂರು ನಗರದಿಂದ ಸುಮಾರು ಆರು ಕಿಲೋಮೀಟರುಗಳ ದೂರದಲ್ಲಿದೆ. ಅನ್ನ, ವಿದ್ಯೆ ಮತ್ತು ವಸತಿಯ ಉಚಿತ ವ್ಯವಸ್ಥೆ ಇದ್ದು, ಇದೇ ಕಾರಣದಿಂದ ತ್ರಿವಿಧ ದಾಸೋಹದ ಕ್ಷೇತ್ರವೆಂದೇ ಪ್ರಸಿದ್ದಿ ಪಡೆದಿದೆ. ಸುಮಾರು ಆರು ಸಾವಿರ ಮಕ್ಕಳಿಗೆ ತ್ರಿವಿಧ ದಾಸೋಹ ಕಾರ್ಯ ನಡೆಯುತ್ತಿದೆ. ಕರ್ನಾಟಕ ರತ್ನ ಪ್ರಶಸ್ತಿಯನ್ನು ಡಾ|ಶ್ರೀ ಶಿವಕುಮಾರ ಸ್ವಾಮಿಗಳುಗಳವರಿಗೆ ನೀಡಲಾಗಿದೆ.
ಶ್ರೀ ಕ್ಷೇತ್ರದ ಮಠಾಧಿಪತಿಗಳು ಡಾ|ಶ್ರೀ ಶಿವಕುಮಾರ ಸ್ವಾಮಿಗಳು. ಕಿರಿಯ ಸ್ವಾಮಿಜಿ ಶ್ರೀ ಸಿದ್ದಲಿಂಗಸ್ವಾಮಿಗಳು.
ಕ್ಷೇತ್ರದ ಹಿಂದಿನ ಮಠಾಧಿಪತಿಗಳು: ಶ್ರೀ ಉದ್ದಾನ ಶಿವಯೋಗಿಗಳು. ಇವರು ಎಡೆಯೂರು ಸಿದ್ಧಲಿಂಗೇಶ್ವರರ ಶಿಷ್ಯಪರಂಪರೆಗೆ ಸೇರಿದವರಾಗಿದ್ದಾರೆ.
ಕ್ಷೇತ್ರದ ಪ್ರಮುಖ ದೇವಸ್ಥಾನಗಳು: ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನ, ಶ್ರೀ ಸಿದ್ದಗಂಗಾ ಮಾತೆ ದೇವಸ್ಥಾನ.
[ಬದಲಾಯಿಸಿ] ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
೧೯೬೩ರಲ್ಲಿ ೪೪ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಈ ಕ್ಷೇತ್ರದಲ್ಲಿ ನಡೆದಿತ್ತು. ಖ್ಯಾತ ಸಾಹಿತಿ ರಂ.ಶ್ರೀ.ಮುಗಳಿ ಅವರು ಈ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

