ಹೂವಿನ ಹಿಪ್ಪರಗಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಹೂವಿನ ಹಿಪ್ಪರಗಿ
ಹೂವಿನ ಹಿಪ್ಪರಗಿ
village
Population
 (೨೦೧೨)
 • Total೧೫೦೦೦

ಹೂವಿನ ಹಿಪ್ಪರಗಿ ಒಂದು ಗ್ರಾಮ ಹಾಗೂ ಪುಣ್ಯಕ್ಷೇತ್ರ.ಇದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿದೆ. ಗ್ರಾಮವು ವಿಜಯಪುರ - ಮುದ್ದೇಬಿಹಾಳ ರಾಜ್ಯ ಹೆದ್ದಾರಿಯಲ್ಲಿ ಇದೆ. ಜಿಲ್ಲಾ ಕೇಂದ್ರ ವಿಜಯಪುರದಿಂದ ಸುಮಾರು 55 ಕಿ. ಮಿ. ದೂರ ಇದೆ.

ಚರಿತ್ರೆ[ಬದಲಾಯಿಸಿ]

ಗ್ರಾಮದಲ್ಲಿ ಒಳ್ಳೆಯ ಶಿಕ್ಷಣ ಕೇಂದ್ರ, ವ್ಯಾಪಾರ ಕೇಂದ್ರ, ಹಣಕಾಸು ಕೇಂದ್ರ, ಸಾರಿಗೆ ಕೇಂದ್ರ, ನೆಮ್ಮದಿ ಕೇಂದ್ರ, ಉಪ ತಹಶಿಲ್ದಾರರ ಕಚೇರಿ, ಬಿ.ಎಸ್.ಎನ್.ಎಲ್ ಕಚೇರಿ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣ, ಅಂಚೆ ಕಚೇರಿ, ಸಿಂಡಿಕೇಟ್ ಬ್ಯಾಂಕ್ ಹಾಗೂ ಇತರೆ ಕಚೇರಿಗಳಿವೆ.

ಹೂವಿನ ಹಿಪ್ಪರಗಿಯು ಜಿಲ್ಲಾ ಕೇಂದ್ರದಿಂದ ೫೪ ಕಿ.ಮೀ. ದೂರದಲ್ಲಿದೆ. ಹಿಂದೆ ಇದು ರಾಷ್ಟ್ರಕೂಟರ ಕಾಲದ ಅಗ್ರಹಾರವಾಗಿತ್ತು. ರಾಷ್ಟ್ರಕೂಟರ ಅಮೋಘವರ್ಷನ ಕ್ರಿ.ಶ. ೮೬೨ರ ಶಾಸನದಲ್ಲಿ ಈ ಊರಿನ ಉಲ್ಲೇಖವಿದೆ.

ಊರಿನ ಅಗಸಿಯ ಹತ್ತಿರವಿರುವ ಕಲ್ಮೇಶ್ವರ ದೇವಾಲಯವು ಎತ್ತರವಾದ ಅಧಿಷ್ಠಾನ ಹೊಂದಿದ್ದು, ಗರ್ಭಗೃಹ, ನವರಂಗ ಹಾಗೂ ವೃತ್ತಾಕಾರದ ಕಿರುಸ್ತಂಭಗಳಿರುವ ಕಿರಿದಾದ ಮುಖಮಂಟಪಗಳಿವೆ. ಸುಂದರ ವೈಷ್ಣವ ದ್ವಾರಪಾಲಕರಿರುವ ಬಾಗಿಲುವಾಡದಲ್ಲಿ ಗಜಲಕ್ಷ್ಮೀ ಲಲಾಟ ಬಿಂಬವಿದೆ.

ಭೌಗೋಳಿಕ[ಬದಲಾಯಿಸಿ]

ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.

ಹವಾಮಾನ[ಬದಲಾಯಿಸಿ]

  • ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
  • ಬೇಸಿಗೆ - ೩೫°C-೪೨°C ಡಿಗ್ರಿ ಸೆಲ್ಸಿಯಸ್
  • ಚಳಿಗಾಲ ಮತ್ತು
  • ಮಳೆಗಾಲ - ೧೮°C-೨೮°C ಡಿಗ್ರಿ ಸೆಲ್ಸಿಯಸ್.
  • ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ.
  • ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.

ಜನಸಂಖ್ಯೆ[ಬದಲಾಯಿಸಿ]

ಗ್ರಾಮದಲ್ಲಿ ಜನಸಂಖ್ಯೆ(2011) ಸುಮಾರು 6,631 ಇದೆ. ಅದರಲ್ಲಿ 3431 ಪುರುಷರು ಮತ್ತು 3200 ಮಹಿಳೆಯರು ಇದ್ದಾರೆ.

ಧರ್ಮಗಳು[ಬದಲಾಯಿಸಿ]

ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.

ಭಾಷೆಗಳು[ಬದಲಾಯಿಸಿ]

ಗ್ರಾಮದ ಪ್ರಮುಖ ಭಾಷೆ ಕನ್ನಡ. ಕನ್ನಡ ಭಾಷೆ ಒಂದನ್ನೇ ಮಾತನಾಡುತ್ತಾರೆ .

ದೇವಾಲಯಗಳು[ಬದಲಾಯಿಸಿ]

ಶ್ರೀ ಗುರು ಪರಮಾನಂದ ದೇವಸ್ಥಾನ, ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.

ಹೂವಿನ ಹಿಪ್ಪರಗಿಯು ಜಿಲ್ಲಾ ಕೇಂದ್ರದಿಂದ ೫೪ ಕಿ.ಮೀ. ದೂರದಲ್ಲಿದೆ. ಹಿಂದೆ ಇದು ರಾಷ್ಟ್ರಕೂಟರ ಕಾಲದ ಅಗ್ರಹಾರವಾಗಿತ್ತು. ರಾಷ್ಟ್ರಕೂಟರ ಅಮೋಘವರ್ಷನ ಕ್ರಿ.ಶ. ೮೬೨ರ ಶಾಸನದಲ್ಲಿ ಈ ಊರಿನ ಉಲ್ಲೇಖವಿದೆ.

ಊರಿನ ಅಗಸಿಯ ಹತ್ತಿರವಿರುವ ಕಲ್ಮೇಶ್ವರ ದೇವಾಲಯವು ಎತ್ತರವಾದ ಅಧಿಷ್ಠಾನ ಹೊಂದಿದ್ದು, ಗರ್ಭಗೃಹ, ನವರಂಗ ಹಾಗೂ ವೃತ್ತಾಕಾರದ ಕಿರುಸ್ತಂಭಗಳಿರುವ ಕಿರಿದಾದ ಮುಖಮಂಟಪಗಳಿವೆ. ಸುಂದರ ವೈಷ್ಣವ ದ್ವಾರಪಾಲಕರಿರುವ ಬಾಗಿಲುವಾಡದಲ್ಲಿ ಗಜಲಕ್ಷ್ಮೀ ಲಲಾಟ ಬಿಂಬವಿದೆ.

ಸಾಂಸ್ಕೃತಿಕ[ಬದಲಾಯಿಸಿ]

ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.

ಕಲೆ ಮತ್ತು ಸಂಸ್ಕೃತಿ[ಬದಲಾಯಿಸಿ]

ಉತ್ತರ ಕರ್ನಾಟಕದ ಊಟ

ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.

ಮಸೀದಿಗಳು[ಬದಲಾಯಿಸಿ]

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ[ಬದಲಾಯಿಸಿ]

ಗ್ರಾಮದ ಪ್ರತಿಶತ ೩೦ ಭಾಗ ಭೂಮಿ ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಹಬ್ಬಗಳು[ಬದಲಾಯಿಸಿ]

ಪ್ರತಿವರ್ಷ ಶ್ರೀ ಪರಮಾನಂದ ಜಾತ್ರಾ ಮಹೋತ್ಸ ವ, ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಉದ್ಯೋಗ[ಬದಲಾಯಿಸಿ]

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.

ಬೆಳೆಗಳು[ಬದಲಾಯಿಸಿ]

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ

ವಾಣಿಜ್ಯ ಬೆಳೆಗಳು

ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.

ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರಿಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.

ಶಿಕ್ಷಣ[ಬದಲಾಯಿಸಿ]

ಗ್ರಾಮದಲ್ಲಿರುವ ಶಿಕ್ಷಣ ಸಂಸ್ಥೆಗಳು

  • ಶ್ರೀ ಸಿದ್ದಾರೂಢ ಕಿರಿಯ ಪ್ರಾಥಮಿಕ ಶಾಲೆ, ಹೂವಿನ ಹಿಪ್ಪರಗಿ
  • ಎಸ್.ಪಿ.ಕಿರಿಯ ಪ್ರಾಥಮಿಕ ಶಾಲೆ, ಹೂವಿನ ಹಿಪ್ಪರಗಿ
  • ಸರಕಾರಿ ಹಿರಿಯ ಗಂಡು ಮಕ್ಕಳ ಪ್ರಾಥಮಿಕ ಶಾಲೆ, ಹೂವಿನ ಹಿಪ್ಪರಗಿ
  • ಸರಕಾರಿ ಹಿರಿಯ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ, ಹೂವಿನ ಹಿಪ್ಪರಗಿ
  • ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆ, ಹೂವಿನ ಹಿಪ್ಪರಗಿ
  • ಸರಕಾರಿ ಹಿರಿಯ ಆಶ್ರಮ ಪ್ರಾಥಮಿಕ ಶಾಲೆ, ಹೂವಿನ ಹಿಪ್ಪರಗಿ
  • ಶ್ರೀ ಪರಮಾನಂದ ಹಿರಿಯ ಪ್ರಾಥಮಿಕ ಶಾಲೆ, ಹೂವಿನ ಹಿಪ್ಪರಗಿ
  • ವಿಶ್ವಚೇತನ ಪ್ರೌಡ ಶಾಲೆ, ಹೂವಿನ ಹಿಪ್ಪರಗಿ
  • ಶ್ರೀ ಎಮ್.ಜಿ.ಕೋರಿ ಮತ್ತು ಡಾ.ಬಿ.ಜಿ.ಬ್ಯಾಕೋಡ ಸಂಯುಕ್ತ ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಹೂವಿನ ಹಿಪ್ಪರಗಿ
  • ಶ್ರೀ ಬಿ.ಜಿ.ಎಸ್. ಪದವಿ ಪೂರ್ವ ಮಹಾವಿದ್ಯಾಲಯ, ಹೂವಿನ ಹಿಪ್ಪರಗಿ
  • ಶ್ರೀ ಯೋಗೇಶ್ವರಿ ಮಾತಾ ಪದವಿ ಪೂರ್ವ ಮಹಾವಿದ್ಯಾಲಯ, ಹೂವಿನ ಹಿಪ್ಪರಗಿ
  • ಶ್ರೀ ಗುರು ಪರಮಾನಂದ ಕೈಗಾರಿಕಾ ತರಬೇತಿ ಕೇಂದ್ರ, ಹೂವಿನ ಹಿಪ್ಪರಗಿ
  • ಎಮ್.ಕೆ. ಕೈಗಾರಿಕಾ ತರಬೇತಿ ಕೇಂದ್ರ, ಹೂವಿನ ಹಿಪ್ಪರಗಿ
  • ನ್ಯಾಶನಲ್ ಕೈಗಾರಿಕಾ ತರಬೇತಿ ಕೇಂದ್ರ, ಹೂವಿನ ಹಿಪ್ಪರಗಿ
  • ಶ್ರೀ ಸದ್ಗುರು ಸಿದ್ದಾರೂಢ ಮಹಾಸ್ವಾಮಿಜಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಹೂವಿನ ಹಿಪ್ಪರಗಿ
  • ಶ್ರೀ ವಿಶ್ವಕರ್ಮ ಪ್ರಥಮ ದರ್ಜೆ ಕಲಾ ಮಹಾವಿದ್ಯಾಲಯ, ಹೂವಿನ ಹಿಪ್ಪರಗಿ
  • ಶ್ರೀ ಆರ್.ಎಸ್.ವಿ.ಎಲ್.ಬಿ. ಚಿತ್ರಕಲಾ ಶಾಲೆ, ಹೂವಿನ ಹಿಪ್ಪರಗಿ
  • ಸರಕಾರಿ ಆಶ್ರಮ ಶಾಲೆ, ಹೂವಿನ ಹಿಪ್ಪರಗಿ

ಸಾಕ್ಷರತೆ[ಬದಲಾಯಿಸಿ]

ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ.

ರಾಜಕೀಯ[ಬದಲಾಯಿಸಿ]

ಗ್ರಾಮವು ವಿಜಯಪುರ ಲೋಕಸಭಾ ಕ್ಷೇತ್ರ ಮತ್ತು ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.

ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ದೇವರ ಹಿಪ್ಪರಗಿ ಮತಕ್ಷೇತ್ರ(2018)ದಲ್ಲಿ 1,07,407 ಪುರುಷರು, 99,773 ಮಹಿಳೆಯರು ಸೇರಿ ಒಟ್ಟು 2,07,180 ಮತದಾರರಿದ್ದಾರೆ.

ಕ್ಷೇತ್ರದ ಇತಿಹಾಸ

ಪುಣ್ಯಕ್ಷೇತ್ರವಾಗಿ ಪ್ರಸಿದ್ಧಿ ಪಡೆದ ದೇವರ ಹಿಪ್ಪರಗಿ ಗ್ರಾಮ ವಿಜಯಪುರ - ಗುಲ್ಬರ್ಗಾ ಹೆದ್ದಾರಿಯಲ್ಲಿದೆ. ಮೂರು ತಾಲೂಕುಗಳನ್ನೊಳಗೊಂಡಿರೋ ಈ ವಿಧಾನಸಭಾ ಕ್ಷೇತ್ರವಾಗಿದೆ. 2008ರಲ್ಲಿ ಈ ಕ್ಷೇತ್ರದ ಹೆಸರು ದೇವರ ಹಿಪ್ಪರಗಿ ಎಂದು ಬದಲಾಯಿತು. ಮುಂಚೆ ಹೂವಿನಹಿಪ್ಪರಗಿ ಕ್ಷೇತ್ರವಾಗಿತ್ತು. ಬಸವನ ಬಾಗೇವಾಡಿ ತಾಲ್ಲೂಕಿನ ನಿಡಗುಂದಿ ಹೋಬಳಿ ಕೈಬಿಟ್ಟು, ಸಿಂದಗಿ ತಾಲ್ಲೂಕಿನ ದೇವರ ಹಿಪ್ಪರಗಿ ಹೋಬಳಿಯನ್ನು ಈ ಕ್ಷೇತ್ರದಲ್ಲಿ ಸೇರಿಸಲಾಯಿತು.

ತಾಳಿಕೋಟೆ ಕ್ಷೇತ್ರದ ಭಾಗವಾಗಿದ್ದ ಹಳ್ಳಿಗಳೆಲ್ಲ ಸೇರಿ 1967ರಲ್ಲಿ ರಚನೆಗೊಂಡ ಹೂವಿನಹಿಪ್ಪರಗಿ ಕ್ಷೇತ್ರ, 2008ರ ಕ್ಷೇತ್ರ ಮರುವಿಂಗಡಣೆ ಹಂತದಲ್ಲಿ ದೇವರಹಿಪ್ಪರಗಿ ಕ್ಷೇತ್ರವಾಗಿ ರೂಪುಗೊಂಡಿದೆ. 11 ಚುನಾವಣೆ ಕಂಡಿರುವ ಈ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿ, ಸಚಿವರಾಗಿ ಅಧಿಕಾರ ನಡೆಸಿದ ಬಿ.ಎಸ್‌. ಪಾಟೀಲ ಸಾಸನೂರ ಅವರು ಕ್ಷೇತ್ರದ ಅರ್ಧ ಸಮಯವನ್ನು ತಾವೇ ವಿಧಾನಸಭೆಯಲ್ಲಿ ಕಳೆದಿದ್ದಾರೆ. ಜನತಾಪಕ್ಷ ಶಾಸಕರಾಗಿ ರಾಜಕೀಯ ಆರಂಭಿಸಿದ್ದ ಬಿ.ಎಸ್‌. ಪಾಟೀಲ ಸಾಸನೂರು ನಂತರ ನಾಲ್ಕು ಬಾರಿ ಕಾಂಗ್ರೆಸ್‌ ಪಕ್ಷ ಶಾಸಕರಾಗಿ ಒಟ್ಟು ಐದು ಬಾರಿ ವಿಧಾನಸಭೆಯಲ್ಲಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪಾಟೀಲ(ನಡಹಳ್ಳಿ) ಸತತ 2013 ಮತ್ತು 2008ರಲ್ಲಿ ಎರಡು ಬಾರಿ ಗೆದ್ದಿದ್ದಾರೆ. ಬಿ.ಎಸ್.ಪಾಟೀಲ(ಸಾಸನೂರ)ರು ಒಟ್ಟು 6 ಸಲ ಸ್ಪರ್ಧಿಸಿ 4 ಬಾರಿ ಆಯ್ಕೆಯಾಗಿ ವೀರಪ್ಪ ಮೊಯಿಲಿ ಅವರ ಸಂಪುಟದಲ್ಲಿ ಆರೋಗ್ಯ ಖಾತೆ ಹಾಗೂ ಎಸ್.ಎಂ. ಕೃಷ್ಣ ಸಂಪುಟದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾಗಿದ್ದರು. ಶಿವಪುತ್ರಪ್ಪ ದೇಸಾಯಿ ಅವರು ಜೆ.ಎಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭೂಸೇನಾ ಮತ್ತು ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದರು. ಶಿವಪುತ್ರಪ್ಪ ದೇಸಾಯಿ 5 ಬಾರಿ ಸ್ಪರ್ಧಿಸಿ 3 ಬಿ.ಎಸ್.ಪಾಟೀಲ(ಸಾಸನೂರ)ನ್ನು ಸೋಲಿಸಿ ಆಯ್ಕೆಯಾಗಿದ್ದು ಹಾಗೂ ಇಬ್ಬರು ಸಂಬಂಧಿಕರಾಗಿದ್ದು ವಿಶೇಷವಾಗಿದೆ. ಶಿವಪುತ್ರಪ್ಪ ದೇಸಾಯಿಯವರು ಉಗ್ರಾಣ ನಿಗಮದ ಮಾಜಿ ಅಧ್ಯಕ್ಷರು. 1978ರಿಂದ 2004ವರೆಗೆ ಶಿವಪುತ್ರಪ್ಪ ದೇಸಾಯಿ ಹಾಗೂ ಬಿ.ಎಸ್.ಪಾಟೀಲ(ಸಾಸನೂರ) ನಡುವೆ ಸ್ಪರ್ಧೆ ಏರ್ಪಟ್ಟಿತ್ತು.

ಬಿ.ಎಸ್.ಪಾಟೀಲ(ಸಾಸನೂರ) 1978ರಲ್ಲಿ ಜನತಾ ಪಕ್ಷದಿಂದ ಹಾಗೂ 1983ರಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು. ನಂತರ 1986ರಲ್ಲಿ ಚುನಾವಣೆ ಎದುರಾಯಿತು. ಇದು ಮಾವ-ಅಳಿಯನ ಆಖಾಡಕ್ಕೆ ಸಾಕ್ಷಿಯಾಗಿತ್ತು. ಜನತಾ ಪಕ್ಷದಿಂದ ಸ್ಪರ್ಧಿಸಿದ ಅಳಿಯ ಶಿವಪುತ್ರಪ್ಪ ದೇಸಾಯಿ, ಮಾವ ಸಾಸನೂರ ಅವರ ಹ್ಯಾಟ್ರಿಕ್ ಸಾಧನೆಗೆ ಬ್ರೇಕ್ ನೀಡಿದ್ದರು. ಮತ್ತೆ 1989ರಲ್ಲಿ ಮಾವ ಬಿಎಸ್ ಪಾಟೀಲ ಸಾಸನೂರ ಅಳಿಯ ಶಿವಪುತ್ರಪ್ಪ ದೇಸಾಯಿ ಅವರನ್ನು 15395 ಮತಗಳಿಂದ ಪರಾಭವಗೊಳಿಸಿದ್ದರು. ನಂತರ 1994ರಲ್ಲಿ ಅದೇ ಪಕ್ಷದಿಂದ ಶಿವಪುತ್ರಪ್ಪ ದೇಸಾಯಿ ತಮ್ಮ ಮಾವನನ್ನು 12427 ಮತಗಳಿಂದ ಸೋಲಿಸಿದರು. 1999ರಲ್ಲಿ ಎದುರಾದ ಚುನಾವಣೆಯಲ್ಲಿ ಪುನಃ ಬಿಎಸ್ ಪಾಟೀಲ ಸಾಸನೂರ ಅಳಿಯನನ್ನು ಪರಾಭಗೊಳಿಸಿದರೆ, 2004ರಲ್ಲಿ ನಡೆದ ಚುನಾವಣೆಯಲ್ಲಿ ಮುಯ್ಯಿಗೆ ಮುಯ್ಯಿ ಎಂಬಂತೆ ಶಿವಪುತ್ರಪ್ಪ ದೇಸಾಯಿ ಅವರು ಮತ್ತೆ ಮಾವನನ್ನು ಸೋಲಿಸಿದ್ದರು.

ಕ್ಷೇತ್ರದ ವಿಶೇಷತೆ

  • ಬಸವನ ಬಾಗೇವಡಿ, ಸಿಂದಗಿ ಮತ್ತು ಮುದ್ದೇಬಿಹಾಳ ಮೂರು ತಾಲೂಕುಗಳನ್ನೊಳಗೊಂಡಿರೋ ವಿಧಾನಸಭಾ ಕ್ಷೇತ್ರವಾಗಿದೆ.
  • ಬಿ.ಎಸ್.ಪಾಟೀಲ(ಸಾಸನೂರ)ರು ವೀರಪ್ಪ ಮೊಯಿಲಿ ಅವರ ಸಂಪುಟದಲ್ಲಿ ಆರೋಗ್ಯ ಖಾತೆ ಹಾಗೂ ಎಸ್.ಎಂ. ಕೃಷ್ಣ ಸಂಪುಟದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾಗಿದ್ದರು.
  • ಶಿವಪುತ್ರಪ್ಪ ದೇಸಾಯಿ ಅವರು ಜೆ.ಎಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭೂಸೇನಾ ನಿಗಮ ಮತ್ತು ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದರು.
  • ಶಿವಪುತ್ರಪ್ಪ ದೇಸಾಯಿ ಮತ್ತು ಬಿ.ಎಸ್.ಪಾಟೀಲ(ಸಾಸನೂರ)ರು ಮಾವ-ಅಳಿಯನ ಆಖಾಡಕ್ಕೆ ಸಾಕ್ಷಿಯಾಗಿತ್ತು.
  • ಬಿ.ಎಸ್.ಪಾಟೀಲ(ಸಾಸನೂರ)ರು ಒಟ್ಟು 6 ಸಲ ಸ್ಪರ್ಧಿಸಿ 4 ಬಾರಿ ಆಯ್ಕೆಯಾಗಿದ್ದಾರೆ.
  • ಶಿವಪುತ್ರಪ್ಪ ದೇಸಾಯಿಯವರು ಒಟ್ಟು 5 ಸಲ ಸ್ಪರ್ಧಿಸಿ 3 ಬಾರಿ ಆಯ್ಕೆಯಾಗಿದ್ದಾರೆ. ಒಟ್ಟಾರೆಯಾಗಿ 1978 - 2008ರವರೆಗೆ ಸುಮಾರು 3 ದಶಕಗಳ ಕಾಲ ಮಾವ-ಅಳಿಯನ ಆಖಾಡಕ್ಕೆ ಸಾಕ್ಷಿಯಾಗಿತ್ತು.
  • ಎ.ಎಸ್.ಪಾಟೀಲ(ನಡಹಳ್ಳಿ) ಸತತ 2008 ಮತ್ತು 2013ರಲ್ಲಿ ಎರಡು ಬಾರಿ ಗೆದ್ದಿದ್ದಾರೆ.

ಜನಪ್ರತಿನಿಧಿಗಳ ವಿವರ

ವರ್ಷ ವಿಧಾನ ಸಭಾ ಕ್ಷೆತ್ರ ವಿಜೇತ ಪಕ್ಷ ಮತಗಳು ಉಪಾಂತ ವಿಜೇತ ಪಕ್ಷ ಮತಗಳು
ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ಕರ್ನಾಟಕ ರಾಜ್ಯ
2018 ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಸೋಮನಗೌಡ ಪಾಟೀಲ ಬಿ.ಜೆ.ಪಿ 48245 ರಾಜುಗೌಡ ಪಾಟೀಲ ಜೆ.ಡಿ.ಎಸ್. 44892
2013 ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಎ.ಎಸ್.ಪಾಟೀಲ(ನಡಹಳ್ಳಿ) ಕಾಂಗ್ರೇಸ್ 36231 ಸೋಮನಗೌಡ ಪಾಟೀಲ ಬಿ.ಜೆ.ಪಿ 28135
2008 ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಎ.ಎಸ್.ಪಾಟೀಲ(ನಡಹಳ್ಳಿ) ಕಾಂಗ್ರೇಸ್ 54879 ಬಸನಗೌಡ ಪಾಟೀಲ(ಯತ್ನಾಳ) ಬಿ.ಜೆ.ಪಿ 23986
2004 ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಶಿವಪುತ್ರಪ್ಪ ದೇಸಾಯಿ ಬಿ.ಜೆ.ಪಿ 39224 ಬಿ.ಎಸ್.ಪಾಟೀಲ(ಸಾಸನೂರ) ಕಾಂಗ್ರೇಸ್ 32927
1999 ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಬಿ.ಎಸ್.ಪಾಟೀಲ(ಸಾಸನೂರ) ಕಾಂಗ್ರೇಸ್ 46088 ಶಿವಪುತ್ರಪ್ಪ ದೇಸಾಯಿ ಜೆ.ಡಿ.ಯು 28492
1994 ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಶಿವಪುತ್ರಪ್ಪ ದೇಸಾಯಿ ಜೆ.ಡಿ. 35849 ಬಿ.ಎಸ್.ಪಾಟೀಲ(ಸಾಸನೂರ) ಕಾಂಗ್ರೇಸ್ 23422
1989 ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಬಿ.ಎಸ್.ಪಾಟೀಲ(ಸಾಸನೂರ) ಕಾಂಗ್ರೇಸ್ 36588 ಶಿವಪುತ್ರಪ್ಪ ದೇಸಾಯಿ ಜೆ.ಡಿ. 21193
1985 ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಶಿವಪುತ್ರಪ್ಪ ದೇಸಾಯಿ ಜೆ.ಎನ್.ಪಿ 31748 ಬಿ.ಎಸ್.ಪಾಟೀಲ(ಸಾಸನೂರ) ಕಾಂಗ್ರೇಸ್ 27949
1983 ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಬಿ.ಎಸ್.ಪಾಟೀಲ(ಸಾಸನೂರ) ಕಾಂಗ್ರೇಸ್ 30320 ಬಸನಗೌಡ ಲಿಂಗನಗೌಡ ಪಾಟೀಲ ಜೆ.ಎನ್.ಪಿ 17872
1978 ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಬಿ.ಎಸ್.ಪಾಟೀಲ(ಸಾಸನೂರ) ಜೆ.ಎನ್.ಪಿ 26814 ಕುಮಾರಗೌಡ ಪಾಟೀಲ ಕಾಂಗ್ರೇಸ್(ಐ) 22531
ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಮೈಸೂರು ರಾಜ್ಯ
1972 ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಕೆ.ಡಿ.ಪಾಟೀಲ(ಉಕ್ಕಲಿ) ಎನ್.ಸಿ.ಓ. 18331 ಎಲ್.ಆರ್.ನಾಯಕ ಕಾಂಗ್ರೇಸ್ 12855
1967 ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಜಿ.ಎನ್.ಪಾಟೀಲ ಕಾಂಗ್ರೇಸ್ 15189 ಹೆಚ್.ಕೆ.ಮಾರ್ತಂಡಪ್ಪ ಎಸ್.ಡಬ್ಲೂ.ಎ 7050
1962 ತಾಳಿಕೋಟ ವಿಧಾನಸಭಾ ಕ್ಷೇತ್ರ ಜಿ.ಎನ್.ಪಾಟೀಲ ಕಾಂಗ್ರೇಸ್ ಅವಿರೋದ ಆಯ್ಕೆ
1957 ತಾಳಿಕೋಟ ವಿಧಾನಸಭಾ ಕ್ಷೇತ್ರ ಕುಮಾರಗೌಡ ಪಾಟೀಲ ಪಕ್ಷೇತರ 15200 ಶರಣಯ್ಯ ವಸ್ತದ ಕಾಂಗ್ರೇಸ್ 12804
ಬಾಗೇವಾಡಿ-ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಬಾಂಬೆ ರಾಜ್ಯ
1951 ಬಾಗೇವಾಡಿ-ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಶಂಕರಗೌಡ ಪಾಟೀಲ ಕಾಂಗ್ರೇಸ್ 17752 ಸಾವಳಗೆಪ್ಪ ನಂದಿ ಕೆ.ಎಂ.ಪಿ.ಪಿ 5507

ಆರೋಗ್ಯ[ಬದಲಾಯಿಸಿ]

ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ.

ಪಶು ಚಿಕಿತ್ಸಾಲಯ[ಬದಲಾಯಿಸಿ]

ಗ್ರಾಮದಲ್ಲಿ ಪಶು ಚಿಕಿತ್ಸಾಲಯವಿದೆ.

ವಿದ್ಯುತ್ ಪರಿವರ್ತನಾ ಕೇಂದ್ರ[ಬದಲಾಯಿಸಿ]

೩೩ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರವು ಗ್ರಾಮದ ಹಾಗೂ ಸುತ್ತಲಿನ ಹಳ್ಳಿಗಳಿಗೆ ವಿದ್ಯುತ್ ಒದಗಿಸುತ್ತದೆ.

ಕೃಷಿ ಮಾರುಕಟ್ಟೆ[ಬದಲಾಯಿಸಿ]

ಗ್ರಾಮದಲ್ಲಿ ಕೃಷಿ ಮಾರುಕಟ್ಟೆಯಿದೆ.

ರೈತ ಸಂಪರ್ಕ ಕೇಂದ್ರ[ಬದಲಾಯಿಸಿ]

ಗ್ರಾಮದಲ್ಲಿ ರೈತ ಸಂಪರ್ಕ ಕೇಂದ್ರವಿದೆ.

ಮಳೆ ಮಾಪನ ಕೇಂದ್ರ[ಬದಲಾಯಿಸಿ]

ಗ್ರಾಮದಲ್ಲಿ ಮಳೆ ಮಾಪನ ಕೇಂದ್ರವಿದೆ.

ಬ್ಯಾಂಕುಗಳು[ಬದಲಾಯಿಸಿ]

  • ಸಿಂಡಿಕೇಟ್ ಬ್ಯಾಂಕ್
  • ಐ.ಡಿ.ಐ.ಬಿ.ಬ್ಯಾಂಕ್
  • ಡಿ.ಸಿ.ಸಿ.ಬ್ಯಾಂಕ
  • ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್
  • ಕರ್ನಾಟಕ ಸಹಕಾರಿ ಬ್ಯಾಂಕ್

ಗ್ರಾಮ ಪಂಚಾಯತಿ ಕಾರ್ಯಾಲಯ[ಬದಲಾಯಿಸಿ]

ಗ್ರಾಮದಲ್ಲಿ ಗ್ರಾಮ ಪಂಚಾಯತಿ ಕಾರ್ಯಾಲಯವಿದೆ.

ನೆಮ್ಮದಿ (ಹೋಬಳಿ) ಕೇಂದ್ರ[ಬದಲಾಯಿಸಿ]

ಗ್ರಾಮದಲ್ಲಿ ನೆಮ್ಮದಿ ಕೇಂದ್ರವಿದೆ.

ನಾಡ ಕಚೇರಿ[ಬದಲಾಯಿಸಿ]

ಗ್ರಾಮದಲ್ಲಿ ನಾಡ ಕಚೇರಿಯಿದೆ.

  • ಉಪ ತಹಶಿಲ್ದಾರ ಕಚೇರಿ, ಹೂವಿನ ಹಿಪ್ಪರಗಿ

ಕಂದಾಯ ಕಚೇರಿ[ಬದಲಾಯಿಸಿ]

ಗ್ರಾಮದಲ್ಲಿ ಕಂದಾಯ ಕಚೇರಿಯಿದೆ.

ದೂರವಾಣಿ ವಿನಿಮಯ ಕೇಂದ್ರ[ಬದಲಾಯಿಸಿ]

ಗ್ರಾಮದಲ್ಲಿ ದೂರವಾಣಿ ವಿನಿಮಯ ಕೇಂದ್ರ(ಬಿ.ಎಸ್.ಎನ್.ಎಲ್)ವಿದೆ.

ಗ್ರಾಮ ಪಂಚಾಯತಿ ಗ್ರಂಥಾಲಯ[ಬದಲಾಯಿಸಿ]

ಗ್ರಾಮದಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯವಿದೆ.

ಅಂಚೆ ಕಚೇರಿ ಮತ್ತು ಅಂಚೆ ಸೂಚ್ಯಂಕ ಸಂಖ್ಯೆ[ಬದಲಾಯಿಸಿ]

  • ಹೂವಿನ ಹಿಪ್ಪರಗಿ - 586208 (ಬೂದಿಹಾಳ, ಬ್ಯಾಕೋಡ, ಹುಣಶ್ಯಾಳ ಪಿ.ಬಿ., ಕುದರಿ ಸಾಲವಾಡಗಿ, ಕೊಣ್ಣೂರ, ಸೋಮನಾಳ, ವಡವಡಗಿ).

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ[ಬದಲಾಯಿಸಿ]

ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವಿದೆ.

ಕೆರೆ[ಬದಲಾಯಿಸಿ]

ಗ್ರಾಮದ ಹತ್ತಿರ ಕೆರೆಯಿದೆ.

ಹಾಲು ಉತ್ಪಾದಕ ಸಹಕಾರಿ ಸಂಘ[ಬದಲಾಯಿಸಿ]

ಗ್ರಾಮದಲ್ಲಿ ಹಾಲು ಉತ್ಪಾದಕ ಸಹಕಾರಿ ಸಂಘವಿದೆ.

ರಾಜ್ಯ ಹೆದ್ದಾರಿ[ಬದಲಾಯಿಸಿ]

ರಾಜ್ಯ ಹೆದ್ದಾರಿ - 41 => ಶಿರಾಡೋಣ - ಚಡಚಣ - ಝಳಕಿ - ಇಂಡಿ - ದೇವರ ಹಿಪ್ಪರಗಿ - ಹೂವಿನ ಹಿಪ್ಪರಗಿ - ಮುದ್ದೇಬಿಹಾಳ - ನಾರಾಯಣಪುರ - ಲಿಂಗಸಗೂರ.

ರಾಜ್ಯ ಹೆದ್ದಾರಿ - 61 => ಮನಗೊಳಿ - ಬಸವನ ಬಾಗೇವಾಡಿ - ಹೂವಿನ ಹಿಪ್ಪರಗಿ - ತಾಳಿಕೋಟೆ - ಹುಣಸಗಿ - ದೇವಾಪುರ - ದೇವದುರ್ಗ - ಶಿರವಾರ - ನೀರಮಾನ್ವಿ - ಬಾಚಿಹಾಳ

ಸರಕಾರಿ ವಾಹನ ನಿಲ್ದಾಣ[ಬದಲಾಯಿಸಿ]

ಗ್ರಾಮದಲ್ಲಿ ಸರಕಾರಿ ವಾಹನ ನಿಲ್ದಾಣವಿದೆ.