ಕಲಾ ತಪಸ್ವಿ ರಾಷ್ಟ್ರೀಯ ಪ್ರಶಸ್ತಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಡಿ.ವಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನಿಂದ ಪ್ರಶಸ್ತಿ[ಬದಲಾಯಿಸಿ]

  • ದಿ.೨೯-೧೧-೨೦೧೪ ರಂದು
  • ಚಿತ್ರಕಲಾ ಶಿಲ್ಪಿ ಡಿ.ವಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ವತಿಯಿಂದ ಜೀವಮಾನ ಸಾಧನೆಗಾಗಿ ನೀಡುವ ಕಲಾ ತಪಸ್ವಿ ರಾಷ್ಟ್ರೀಯ ಪ್ರಶಸ್ತಿಯನ್ನು ಹಿರಿಯ ಕಲಾವಿದ ಕೆ.ಟಿ.ಶಿವಪ್ರಸಾದ್ ಅವರಿಗೆ ಹಾಗೂ ಕುಂಚ ಕಲಾಶ್ರೀ ಪ್ರಶಸ್ತಿಯನ್ನು ಚಿ.ಸು.ಕೃಷ್ಣ ಸೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.
  • ಧಾರವಾಡ ನಗರದ ಸೃಜನಾ ರಂಗ ಮಂದಿರದಲ್ಲಿ ಶನಿವಾರ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಇವರೊಂದಿಗೆ ಯುವ ಕುಂಚ ಕಲಾಶ್ರೀ ಪ್ರಶಸ್ತಿಯನ್ನು ಒಡಿಶಾದ ಮಾನಶ ರಂಜನ್‌ ಜೇನಾ ಹಾಗೂ ಚೆನ್ನೈನ ಇಳಯರಾಜ ಅವರಿಗೆ ನೀಡಿ ಗೌರವಿಸಲಾಯಿತು. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಿಗೆ ₨ 1 ಲಕ್ಷ, ಕುಂಚ ಕಲಾಶ್ರೀ ಪ್ರಶಸ್ತಿ ₨ 50 ಸಾವಿರ ಹಾಗೂ ಯುವ ಪ್ರಶಸ್ತಿ ಪಡೆದ ಕಲಾವಿದರಿಗೆ ತಲಾ ₨ 25 ಸಾವಿರ ನಗದು ಹಾಗೂ ಫಲಕವನ್ನು ನೀಡಿ ಗೌರವಿಸಲಾಯಿತು.
  • ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಿವಪ್ರಸಾದ್‌, ತಮ್ಮ ಕಲಾ ಜೀವನದ ಪೋಷಕರಾದ ಘಾಣೇಕರ್‌ ಹಾಗೂ ನಂತರದಲ್ಲಿ ಪ್ರಭಾವ ಬೀರಿದ ಪ್ರೊ.ನಂಜುಂಡಸ್ವಾಮಿ, ಪೂರ್ಣಚಂದ್ರ ತೇಜಸ್ವಿ ಅವರನ್ನು ನೆನೆದರು.

ನೋಡಿ[ಬದಲಾಯಿಸಿ]

ಆಧಾರ[ಬದಲಾಯಿಸಿ]

ಪ್ರಜಾವಾಣಿ -೩೦-೧೧-೨೦೧೪