ಸದಸ್ಯ:Subrahmanya Kukkupuni/ನನ್ನ ಪ್ರಯೋಗಪುಟ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಶಾಂತಾದುರ್ಗಾ ದೇವಸ್ಥಾನ ಮತ್ತು ಕಿನ್ನಿಮಾಣಿ-ಪೂಮಾಣಿ ದೈವಸ್ಥಾನ ನಿಡ್ಪಳ್ಳಿ[ಬದಲಾಯಿಸಿ]

ನಿಡ್ಪಳ್ಳಿ[ಬದಲಾಯಿಸಿ]

ನಿಡ್ಪಳ್ಳಿಯು ಕರ್ನಾಟಕ ತಾಲೂಕಿನ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ದಕ್ಷಿಣ ಭಾಗದಲ್ಲಿರುವ ಒಂದು ಪುಟ್ಟ ಗ್ರಾಮ. ತಾಲ್ಲೂಕು ಕೇಂದ್ರವಾದ ಪುತ್ತೂರಿನಿಂದ ಸುಮಾರು ೧೮ ಕಿಲೊಮೀಟರ್ ದಕ್ಷಿಣಕ್ಕಿದೆ. ಕೃಷಿಯೇ ಇಲ್ಲಿನ ಜನರ ಪ್ರಧಾನ ವೃತ್ತಿ. ಮುಖ್ಯವಾಗಿ ಅಡಿಕೆ, ತೆಂಗು, ಬಾಳೆ, ಭತ್ತ, ಕೊಕ್ಕೊ, ರಬ್ಬರ್, ಗೇರು ಬೀಜಗಳ ಬೆಳೆ ಹಾಗೂ ಹೈನುಗಾರಿಕೆ ಇಲ್ಲಿನ ಜನರ ಜೀವನಾಧಾರ. ತುಳು, ಕನ್ನಡ, ಕೊಂಕಣಿ, ಬ್ಯಾರಿ ಮತ್ತು ಹವ್ಯಕ ಭಾಷೆಗಳು ಸಾಮಾನ್ಯವಾಗಿ ಉಪಯೊಗಿಸಲ್ಪಡುತ್ತವೆ. ೨೦೧೧ ರ ಜನಗಣತಿಯ ಪ್ರಕಾರ ಇಲ್ಲಿನ ಜನಸಂಖ್ಯೆ ೩೨೫೭. ಸರ್ವ ಧರ್ಮದವರೂ ಶಾಂತಿ ಸಮನ್ವಯತೆಯಿಂದ ಜೀವಿಸುವ ಇಲ್ಲಿ, ಶಾಂತಾದುರ್ಗಾ ದೇವಸ್ಥಾನ ಮತ್ತು ಕಿನ್ನಿಮಾಣಿ-ಪೂಮಾಣಿ ದೈವಸ್ಥಾನ, ಬದ್ರಿಯಾ ಮಸೀದಿ ತಂಬುತ್ತಡ್ಕ ಮತ್ತು ಹೋಲಿ ರೊಜರಿ ಚರ್ಚ್ ಪ್ರಮುಖ ಧಾರ್ಮಿಕ ಆರಾಧನಾ ಕೇಂದ್ರಗಳು.

ಶಾಂತಾದುರ್ಗಾ ದೇವಸ್ಥಾನ ಮತ್ತು ಕಿನ್ನಿಮಾಣಿ-ಪೂಮಾಣಿ ದೈವಸ್ಥಾನ[ಬದಲಾಯಿಸಿ]

ಶಾಂತಾದುರ್ಗಾ ದೇವಸ್ಥಾನವು ನಿಡ್ಪಳ್ಳಿಯ ಗ್ರಾಮದೇವಸ್ಥಾನ. ಕಿನ್ನಿಮಾಣಿ-ಪೂಮಾಣಿ ಇಲ್ಲಿನ ಗ್ರಾಮ ದೈವಗಳು. ಪುರಾತನ ಕಾಲದಿಂದಲೂ ಆರಿಗ ಮನೆತನದ ಜೈನ ಅರಸರ ಮುಂದಾಳುತ್ವದಲ್ಲಿ ಕ್ರಮಬದ್ಧವಾಗಿ ನಡೆಯುತ್ತಿದ್ದ ದೈವಾರಾಧನೆ, ಜಾತ್ರೊತ್ಸವಗಳು ಕ್ರಿ. ಶ ೧೯೭೨ ರ ಆಸುಪಾಸಿನ ಅನಿರೀಕ್ಷಿತ ಸಾಮಾಜಿಕ ಬದಲಾವಣೆಗಳ ಪರಿಣಾಮವಾಗಿ ಸಂಪೂರ್ಣವಾಗಿ ನಿಂತೇ ಹೊದವು. ದೈವಸ್ಥಾನಗಳೂ ಕಾಲನ ಹೊಡೆತಕ್ಕೆ ಸಿಕ್ಕು ಜೀರ್ಣವಾದವು. ೧೯೯೦ ರ ದಶಕದ ಆದಿಯಿಂದಲೂ ಗ್ರಾಮದ ಪ್ರಮುಖರು ದೈವಸ್ಥಾನಗಳ ಪುನರುಜ್ಜೀವನಕ್ಕಾಗಿ ಪ್ರಯತ್ನ ಪಟ್ಟರೂ, ೨೦೧೮ ರಲ್ಲಷ್ಟೇ ದೇವಸ್ಥಾನ ಮತ್ತು ದೈವಸ್ಥಾನಗಳು ಸಂಪೂರ್ಣವಾಗಿ ರೂಪುಗೊಂಡವು. ಈ ದೆವಸ್ಥಾನ ಸಂಕೀರ್ಣಗಳು ಶಾಂತಾದುರ್ಗಾ ದೇವಸ್ಥಾನ, ಕಿನ್ನಿಮಾಣಿ-ಪೂಮಾಣಿ-ಹುಲಿಭೂತ-ಮಲರಾಯ ಮತ್ತು ಧೂಮಾವತೀ ದೈವಗಳ ದೈವಸ್ಥಾನವನ್ನು ಒಳಗೊಂಡಿದೆ. ೨೦೧೯ನೇ ಇಸವಿಯ ಮಾರ್ಚ್ ತಿಂಗಳಿನಲ್ಲಿ ಬ್ರಹ್ಮಕಲಶೊತ್ಸವ ಮತ್ತು ನೇಮೊತ್ಸವಗಳೊಂದಿಗೆ ನಿಡ್ಪಳ್ಳಿಯ ಗ್ರಾಮ ದೇವಸ್ಥಾನ ಮತ್ತು ದೈವಸ್ಥಾನಗಳು ಪುನರೂರ್ಜಿತಕ್ಕೆ ಬಂದವು.