ಕೆ.ಬಿ.ಚೌಧರಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕೆ.ಬಿ.ಚೌಧರಿ
ಜನನ21ನೇ ನವೆಂಬರ್, 1933
ದೇವಣಗಾಂವ, ಸಿಂದಗಿ ತಾಲ್ಲೂಕು, ವಿಜಯಪುರ ಜಿಲ್ಲೆ, ಕರ್ನಾಟಕ
ವೃತ್ತಿರಾಜಕೀಯ
ರಾಷ್ಟ್ರೀಯತೆಭಾರತೀಯ

ಕೆ.ಬಿ.ಚೌಧರಿ(ಕಾಳಿಂಗಪ್ಪ ಭೀಮಣ್ಣ ಚೌಧರಿ)ಯವರು ಮಾಜಿ ಸಂಸದರು ಹಾಗೂ ರಾಜಕೀಯ ಧುರೀಣರು.

ಜನನ[ಬದಲಾಯಿಸಿ]

ಚೌಧರಿಯವರು 21ನೇ ನವೆಂಬರ್, 1933ರಂದು ವಿಜಯಪುರ ಜಿಲ್ಲೆಸಿಂದಗಿ ತಾಲ್ಲೂಕಿನ ದೇವಣಗಾಂವ ಗ್ರಾಮದಲ್ಲಿ ಜನಿಸಿದರು.

ಶಿಕ್ಷಣ[ಬದಲಾಯಿಸಿ]

ವಿಜಯಪುರದ ವಿಜಯ ಕಾಲೇಜಿನಿಂದ ಬಿ.ಎ. ಪದವಿ ಪಡೆದಿದ್ದಾರೆ.

ನಿರ್ವಹಿಸಿದ ಖಾತೆಗಳು[ಬದಲಾಯಿಸಿ]

  • 1977ರಲ್ಲಿ ನಡೆದ ಲೋಕಸಭೆ 6ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದರು.
  • 1980ರಲ್ಲಿ ನಡೆದ ಲೋಕಸಭೆ 7ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಲೋಕಸಭೆಗೆ ವಿಜಯಿಯಾದರು.[೧]
  • ವಿಜಯಪುರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ. ಸದಸ್ಯರಾಗಿದ್ದರು.
  • ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸದಸ್ಯರಾಗಿದ್ದರು.
  • ಕರ್ನಾಟಕ ವಿದ್ಯುತ್ ಮಂಡಳಿ ಸಲಹಾ ಸಮಿತಿ ಸದಸ್ಯರಾಗಿದ್ದರು.
  • ಸಿಂದಗಿ ತಾಲ್ಲೂಕಿನ ಕೃಷಿ ನ್ಯಾಯಮಂಡಳಿಯ ಉಪಾಧ್ಯಕ್ಷರಾಗಿದ್ದರು.
  • ಅಖಿಲ ಭಾರತ ಶಾಂತಿ ಮತ್ತು ಒಕ್ಕೂಟ ಸಂಘಟನೆಯ ಉಪಾಧ್ಯಕ್ಷರಾಗಿದ್ದರು.
  • ವಿಜಯಪುರ ಜಿಲ್ಲಾ ರೈತರ ವೇದಿಕೆಯ ಉಪಾಧ್ಯಕ್ಷರಾಗಿದ್ದರು.
  • ವಿಜಯಪುರ ಜಿಲ್ಲಾ ಡಿ.ಸಿ.ಸಿ. ಬ್ಯಾಂಕ್ ಸದಸ್ಯರಾಗಿದ್ದರು.
  • 1962 - ವಿಜಯಪುರ ನಗರ ಸಭೆಯ ಉಪಾಧ್ಯಕ್ಷರಾಗಿದ್ದರು.[೨]

ಉಲ್ಲೇಖಗಳು[ಬದಲಾಯಿಸಿ]