ಎಸ್.ಕೆ.ಬೆಳ್ಳುಬ್ಬಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಎಸ್.ಕೆ.ಬೆಳ್ಳುಬ್ಬಿ(ಪೂರ್ಣ ಹೆಸರು: ಸಂಗಣ್ಣ ಕಲ್ಲಪ್ಪ ಬೆಳ್ಳುಬ್ಬಿ)ಯವರು ಹಿರಿಯ ರಾಜಕಾರಿಣಿ ಮತ್ತು ಮಾಜಿ ಸಚಿವರು. ಇವರು ವಿಜಯಪುರ ಜಿಲ್ಲೆಬಸವನಬಾಗೇವಾಡಿ ತಾಲ್ಲೂಕಿನ ಕೊಲ್ಹಾರ ಗ್ರಾಮದವರು.

ಜನನ[ಬದಲಾಯಿಸಿ]

1955ರಲ್ಲಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಕೊಲ್ಹಾರ ಗ್ರಾಮದಲ್ಲಿ ಜನಿಸಿದ ಎಸ್.ಕೆ.ಬೆಳ್ಳುಬ್ಬಿಯವರು ಮೂಲತಃ ಒಕ್ಕಲುತನ ಕುಟುಂಬದಿಂದ ಬಂದವರು.

ಶಿಕ್ಷಣ[ಬದಲಾಯಿಸಿ]

ಬೆಳ್ಳುಬ್ಬಿಯವರು ವಿಜಯಪುರ ಜಿಲ್ಲೆಬಸವನಬಾಗೇವಾಡಿ ತಾಲ್ಲೂಕಿನ ಕೊಲ್ಹಾರ ಗ್ರಾಮದ ಶ್ರೀ ಸಂಗಮೇಶ್ವವ ಪ್ರೌಢ ಶಾಲೆಯಲ್ಲಿ ಹತ್ತನೇಯ ತರಗತಿಯಲ್ಲಿ ತೆರ್ಗಡೆ ಹೊಂದಿದ್ದಾರೆ.

ರಾಜಕೀಯ[ಬದಲಾಯಿಸಿ]

  • ಬಸವನಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್‌ ಭದ್ರಕೋಟೆ ಛಿದ್ರಗೊಳಿಸಿ ಎರಡು ಬಾರಿ ಬಿಜೆಪಿಯಿಂದ ಗೆದ್ದವರು.
  • ಎಸ್.ಕೆ.ಬೆಳ್ಳುಬ್ಬಿಯವರು ಪಂಚಾಯಿತಿ ಮಟ್ಟದಿಂದಲೇ ವಿಧಾನಸಭೆ ತನಕ ರಾಜಕಾರಣದಲ್ಲಿ ಯಶಸ್ಸು ಕಂಡವರು. 1978ರಲ್ಲಿ ಗ್ರಾಪಂ ಸದಸ್ಯರಾಗಿ ಆಯ್ಕೆಯಾದರು.
  • 1983ರಲ್ಲಿ ಕೊಲ್ಹಾರ ಗ್ರಾಪಂ ಅಧ್ಯಕ್ಷರಾಗಿದ್ದರು.
  • 1987ರಲ್ಲಿ ಮಂಡಲ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿ ಮಂಡಲ ಪಂಚಾಯಿತಿ ಅಧ್ಯಕ್ಷ ಹುದ್ದೆಯನ್ನೂ ಗಿಟ್ಟಿಸಿಕೊಂಡರು.
  • 1994ರಲ್ಲಿ ಕೆಸಿಪಿ ಪಕ್ಷದಿಂದ ಬಸವನಬಾಗೇವಾಡಿ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸುವ ಮೊದಲ ಪ್ರಯತ್ನ ಫಲಿಸಲಿಲ್ಲ.
  • 1999ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕರಾಗಿ ಆಯ್ಕೆಯಾದರು.[೧]
  • 2008ರಲ್ಲಿ 2ನೇ ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಕೆಲ ತಿಂಗಳು ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ತೋಟಗಾರಿಕಾ ಮಂತ್ರಿಸ್ಥಾನವನ್ನೂ ಅಲಂಕರಿಸಿದ್ದರು.
  • 2012ರಲ್ಲಿ ಜಗದೀಶ ಶೆಟ್ಟರ ಸಂಪುಟದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಮಂತ್ರಿಯಾಗಿದ್ದರು.
  • 1994, 2004, 2013 ಹಾಗೂ 2018ರ ಚುನಾವಣೆಯಲ್ಲಿ ಸೋಲಿನ ಕಹಿ ಅನುಭವಿಸಿದ್ದಾರೆ.[೨][೩]

ಸಚಿವರು[ಬದಲಾಯಿಸಿ]

  • 2008ರಲ್ಲಿ 2ನೇ ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಕೆಲ ತಿಂಗಳು ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ತೋಟಗಾರಿಕಾ ಮಂತ್ರಿಸ್ಥಾನವನ್ನೂ ಅಲಂಕರಿಸಿದ್ದರು.
  • 2012ರಲ್ಲಿ ಜಗದೀಶ ಶೆಟ್ಟರ ಸಂಪುಟದಲ್ಲಿ ಎಪಿಎಂಸಿ ಮಂತ್ರಿಯಾಗಿದ್ದರು.


ಉಲ್ಲೇಖಗಳು[ಬದಲಾಯಿಸಿ]