ಬೆಳ್ಳಾವೆ ವೆಂಕಟನಾರಣಪ್ಪ
ರಾಜಸೇವಾಸಕ್ತ ಬೆಳ್ಳಾವೆ ವೆಂಕಟನಾರಣಪ್ಪನವರು ತುಮಕೂರು ತಾಲೂಕಿನ ಬೆಳ್ಳಾವೆಯಲ್ಲಿ ೧೦-೨-೧೮೭೨ರಲ್ಲಿ ಜನಿಸಿದರು.ಇವರ ತಂದೆ ವೆಂಕಟ ಕೃಷ್ಣಯ್ಯ ಮತ್ತು ತಾಯಿ ಲಕ್ಷ್ಮೀದೇವಿ.
ವಿದ್ಯಾಭ್ಯಾಸ[ಬದಲಾಯಿಸಿ]
ವಿದ್ಯಾಭ್ಯಾಸ ಪ್ರಾರಂಭವಾದುದು ಕೂಲಿ ಮಠದಲ್ಲಿ. ತುಮಕೂರು ಹಾಗು ಬೆಂಗಳೂರುಗಳಲ್ಲಿ ವ್ಯಾಸಂಗ ಮಾಡಿ, ಎಮ್.ಎ. ಪದವಿ ಪಡೆದರು.
ಕೆಲಸ[ಬದಲಾಯಿಸಿ]
ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಭೌತಶಾಸ್ತ್ರದ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು .[೧] ಮುಲಕನಾಡು ಸಂಘದ ಅಧ್ಯಕ್ಷರಾಗಿ, ಅಗ್ರಿಕಲ್ಚರ್ ಅಂಡ್ ಎಕ್ಟಿವ್ಮೆಂಟ್ ಯೂನಿಯನ್ ಸದಸ್ಯರಾಗಿ, ಮೈಸೂರು-ತಮಿಳುನಾಡಿನ ಕಾವೇರಿ ನೀರಿನ ಹಂಚಿಕೆಯ ನಿಷ್ಪಕ್ಷಪಾತ ತೀರ್ಪು ಕೊಡಲು ನೇಮಿಸಿದ ಸಮಿತಿಯ ಸದಸ್ಯರಾಗಿ, ಬೆಂಗಳೂರಿನ ಸಿಟಿ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.ಇವರು ೧೯೩೭ರಲ್ಲಿ ಜಮಖಂಡಿಯಲ್ಲಿ ಜರುಗಿದ ೨೨ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ವಿಶೇಷ ಸಾಧನೆ[ಬದಲಾಯಿಸಿ]
ಕನ್ನಡದ ಮೊದಲ ವಿಜ್ಞಾನ ಪತ್ರಿಕೆ “ವಿಜ್ಞಾನ”ವನ್ನು ಹೊರತಂದ ಹೆಗ್ಗಳಿಕೆ ಇವರದು. ಕನ್ನಡ ಸಾಹಿತ್ಯ ಪರಿಷತ್ತಿನ “ಪರಿಷತ್ ಪತ್ರಿಕೆ’’ಯಲ್ಲಿ ಸಹ ಇವರು ಗಣನೀಯ ಸೇವೆ ಸಲ್ಲಿಸಿದ್ದಾರೆ. ಕೆಳಕಂಡ ಪ್ರಾಚೀನ ಕೃತಿಗಳ ಸಂಪಾದನೆಯಲ್ಲಿ ಇವರು ಸಲ್ಲಿಸಿದ ಸೇವೆ ಅಪಾರ.
- ಪಂಪರಾಮಾಯಣ
- ಪಂಪಭಾರತ
- ಚಾವುಂಡರಾಯ ಪುರಾಣ
- ಸೋಮೇಶ್ವರ ಶತಕ
- ಕುಸುಮಾವಳಿ ಕಾವ್ಯ
- ಶಬ್ದಮಣಿ ದರ್ಪಣ
ನಿಧನ[ಬದಲಾಯಿಸಿ]
ಬೆಳ್ಳಾವೆ ವೆಂಕಟನಾರಣಪ್ಪನವರು ೩-೮-೧೯೪೩ರಲ್ಲಿ ನಿಧನರಾದರು.
ಉಲ್ಲೇಖಗಳು[ಬದಲಾಯಿಸಿ]
- ↑ "ಆರ್ಕೈವ್ ನಕಲು". Archived from the original on 2016-06-10. Retrieved 2021-08-10.