ವಿಷಯಕ್ಕೆ ಹೋಗು

ಅಮರಾವತಿ (ಆಂಧ್ರ ಪ್ರದೇಶ)

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಈ ಲೇಖನವು ಐತಿಹಾಸಿಕ ಪಟ್ಟಣದ್ದಾಗಿದೆ. ಇದೇ ಹೆಸರಿನ ಬೇರೆ ಲೇಖನಗಳಿಗಾಗಿ ಅಮರಾವತಿ (ದ್ವಂದ್ವ ನಿವಾರಣೆ) ನೋಡಿ.
Amaravati
అమరావతి
ಅಮರಾವತಿ
ಧರಣಿಕೋಟ, ಧನ್ಯಕಟಕ, ಆಂಧ್ರನಗರಿ
ಐತಿಹಾಸಿಕ ಪಟ್ಟಣ
ಅಮರಾವತಿಯ ಮಹಾ ಸ್ತೂಪ
ಅಮರಾವತಿಯ ಮಹಾ ಸ್ತೂಪ
Map
ದೇಶ ಭಾರತ
ರಾಜ್ಯಆಂಧ್ರಪ್ರದೇಶ
ಜಿಲ್ಲೆಗುಂಟೂರು
Elevation
೮ m (೨೬ ft)
Population
 (೨೦೦೯)
 • Total
೫೪೯೩೭೦
ಭಾಷೆಗಳು
 • ಅಧಿಕೃತತೆಲುಗು
Time zoneUTC+5:30 (IST)
Telephone code೨೫೪
Vehicle registrationAP 7

ಅಮರಾವತಿ' (ಆಂಧ್ರ ಪ್ರದೇಶ) ಇದು ಆಂಧ್ರ ಪ್ರದೇಶ ರಾಜ್ಯದಲ್ಲಿರುವ ಒಂದು ಐತಿಹಾಸಿಕ ಪಟ್ಟಣ. ಇದು ಕೃಷ್ಣಾನದಿಯ ದಡದಲ್ಲಿ,ಗುಂಟೂರು ಜಿಲ್ಲೆಯಲ್ಲಿದೆ. ಈ ಪಟ್ಟಣದ ಉತ್ತರದಲ್ಲಿರುವ ಧರಣಿಕೋಟ ಎಂಬ ಸ್ಥಳವು ಆಂಧ್ರದಲ್ಲಿ ಬೌದ್ಧರ ರಾಜಧಾನಿಯಾಗಿತ್ತು. ಇಲ್ಲಿ ಮೌರ್ಯರ ಕಾಲಕ್ಕಿಂತಲೂ ಹಿಂದಿನ ಸ್ತೂಪವು ದೊರೆತಿದೆ. ಇಲ್ಲಿರುವ ಅಮೃತೇಶ್ವರ ಗುಡಿಯು ಬಹು ಪ್ರಸಿದ್ಧವಾಗಿದೆ. ಈ ಪಟ್ಟಣವು ಶಾತವಾಹನರ ರಾಜಧಾನಿಯೂ ಆಗಿತ್ತು.

ಆಂಧ್ರಪ್ರದೇಶದ ಪವಿತ್ರ ಸ್ಮಾರಕಗಳ ನಕ್ಷೆ

ಇತಿಹಾಸ

[ಬದಲಾಯಿಸಿ]

ಈ ಸ್ಥಳವು ಸ್ಕಂದ ಪುರಾಣದಲ್ಲಿಯೂ ಉಲ್ಲೇಖವನ್ನು ಹೊಂದಿದೆ. ಬೌದ್ಧರ ವಜ್ರಾಯನ ಶಾಖೆಯ ಪ್ರಕಾರ ಗೌತಮ ಬುದ್ಧ ಇಲ್ಲಿ ಅಂದರೆ ಧರಣಿಕೋಟದಲ್ಲಿ ಉಪದೇಶವನ್ನು ನೀಡಿದ. ಇದರ ಅನ್ವಯ ಇಲ್ಲಿನ ಇತಿಹಾಸವು ಕ್ರಿಸ್ತಪೂರ್ವ ೫೦೦ ರಿಂದಲೇ ಪ್ರಾರಂಭವಾಗುತ್ತದೆ. ಲಿಖಿತ ಉಲ್ಲೇಖಗಳ ಪ್ರಕಾರ ಈ ಪ್ರದೇಶವು ಶಾತವಾಹನರಿಂದ ಆಳಲ್ಪಟ್ಟಿತ್ತು. ಮುಂದೆ ಪಲ್ಲವರು, ಪೂರ್ವ ಚಾಲುಕ್ಯರು, ತೆಲುಗು ಚೋಳರು ಈ ಪ್ರದೇಶದ ಆಧಿಪತ್ಯ ಹೊಂದಿದ್ದರು. ಸುಮಾರು ೧೧ ನೆಯ ಶತಮಾನದಲ್ಲಿ ಈ ಪ್ರದೇಶವು ಕಾಕತೀಯರಿಂದ ಆಳಲ್ಪಟ್ಟು ಮುಂದೆ ವಿಶಾಲ ಆಂಧ್ರದಲ್ಲಿ ವಿಲೀನವಾಯಿತು.

ಕ್ರಿಸ್ತಪೂರ್ವ ೫೦೦ ನೆಯ ಸುಮಾರು ಇಲ್ಲಿ ಬೌದ್ಧಧರ್ಮವು ಪ್ರವರ್ಧಮಾನವಾಗಿತ್ತು. ಇಲ್ಲಿ ದೊರೆತ, ಅಶೋಕ ನಿರ್ಮಿಸಿದ ಸುಂದರ ಸ್ತೂಪವು ಇದಕ್ಕೆ ಸಾಕ್ಷಿಯಾಗಿದೆ. ಇದರ ಫಲಕಗಳಲ್ಲಿ ಗೌತಮಬುದ್ಧನ ಕತೆಯನ್ನು ಕೆತ್ತಲಾಗಿದೆ. ಕ್ರಿಸ್ತಪೂರ್ವ ೨ ನೆಯ ಶತಮಾನದಿಂದ ಕ್ರಿಸ್ತಶಕ ೨ ನೆಯ ಶತಮಾನದವರೆಗೆ ಶಾತವಾಹನರು ಈ ಧರಣಿಕೋಟವನ್ನು ರಾಜಧಾನಿಯನ್ನಾಗಿಸಿಕೊಂಡರು. ಅನಂತರ ಬೌದ್ಧಧರ್ಮವು ಕ್ಷೀಣಗೊಂಡು ಹಿಂದೂಧರ್ಮವು ಪ್ರಬಲವಾದನಂತರ ಈ ಸ್ಥಳವು ಅವಗಣನೆಗೆ ತುತ್ತಾಯಿತು. ಈ ಸ್ಥಳಗಳಲ್ಲಿ ದೊರೆತ ಹಲವಾರು ಚಿತ್ರಿಕೆಗಳು, ವಸ್ತುಗಳು ಚೆನ್ನೈ ಮತ್ತು ಲಂಡನ್ ವಸ್ತುಸಂಗ್ರಹಾಲಯಗಳಲ್ಲಿ ರಕ್ಷಿಸಲ್ಪಟ್ಟಿವೆ.

ಛಾಯಾಂಕಣ

[ಬದಲಾಯಿಸಿ]