ಆಲೂಗಡ್ಡೆ
ಆಲೂಗಡ್ಡೆ | |
---|---|
![]() | |
ಆಲೂಗಡ್ಡೆ | |
Scientific classification | |
Kingdom: | plantae
|
(unranked): | |
Order: | |
Family: | |
Genus: | |
Species: | S. tuberosum
|
Binomial name | |
ಸೊಲನಮ್ ಟುಬೆರೋಸಮ್ |
ಆಲೂಗಡ್ಡೆಯು ಸೊಲ್ಯಾನೇಸೀ ಕುಟುಂಬದ ಬಹುವಾರ್ಷಿಕ ಸಲೇನಮ್ ಟ್ಯೂಬರೋಸಮ್ನ ಒಂದು ಪಿಷ್ಟವುಳ್ಳ, ಗೆಡ್ಡೆ ಬೆಳೆ. ಆಲೂಗಡ್ಡೆ ಶಬ್ದ ಆ ಸಸ್ಯವನ್ನೂ ನಿರ್ದೇಶಿಸಬಹುದು. ಆಂಡೀಸ್ನ ಪ್ರದೇಶದಲ್ಲಿ, ಕೆಲವು ಇತರ ನಿಕಟವಾಗಿ ಸಂಬಂಧಿತ ಸಾಗುವಳಿ ಮಾಡಲಾದ ಆಲೂಗಡ್ಡೆ ಜಾತಿಗಳಿವೆ. ಆಲೂಗಡ್ಡೆಗಳು, ಅಕ್ಕಿ, ಗೋಧಿ, ಮತ್ತು ಮೆಕ್ಕೆ ಜೋಳದ ನಂತರ, ವಿಶ್ವದ ನಾಲ್ಕನೇ ಅತಿ ದೊಡ್ಡ ಆಹಾರ ಬೆಳೆಯಾಗಿವೆ.
ಸಸ್ಯಮೂಲ-ಪರಿಚಯ[ಬದಲಾಯಿಸಿ]
ಬಡವರಿಗೂ, ಬಳಲ್ಲಿದರಿಗೂ ಆಲೂಗಡ್ಡೆ ರುಚಿ ಅಂಟಿಕೊಂಡಿದೆ.ಆದ್ದರಿಂದ ಬಿ.ಜಿ.ಎಲ್.ಸ್ವಾಮಿಯವರು ಇದಕ್ಕೆ 'ಕಲ್ಪಕಂದ' ಎಂದು ಹೆಸರಿಸಿದ್ದಾರೆ. ಈ ಕಲ್ಪಕಂದವು ವಿದೇಶೀಯರ ದೈನಂದಿನ ಆಹಾರಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಕರ್ನಾಟಕದ ಹಲವು ಪ್ರದೇಶಗಲ್ಲಿ ಬಟಾಟೆ ಎಂದು ಕರೆಯಲ್ಪಡುವ ಈ ಹೆಸರು ಮೂಲದ ಪೊಟಾಟೋದಿಂದಲೇ ಬಂದದ್ದು. ನಾವು ಅಕ್ಕಿಯನ್ನೂ, ಉತ್ತರ ಭಾರತೀಯರು ಗೋಧಿಯನ್ನು ಬಳಸುವಂತೆ, ಬೇಯಿಸಿದ, ಬಾಡಿಸಿದ, ಹುರಿದ ಆಲೂ ಪಾಶ್ಚಾತ್ಯರಿಗೆ ಅನ್ನದಂತೆ.
ಔಷಧೀಯ ಗುಣಗಳು[ಬದಲಾಯಿಸಿ]
ನಾವು ಸಾಮಾನ್ಯವಾಗಿ ಆಲೂಗಡ್ಡೆಯನ್ನು ಆರೋಗ್ಯಕರ ಆಹಾರವೆಂದು ಪರಿಗಣಿಸುವುದಿಲ್ಲ, ಆದರೆ ಫೈಬರ್, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ಸೇರಿದಂತೆ ಹಣ್ಣುಗಳು ಮತ್ತು ತರಕಾರಿಗಳಿಂದ ನೀವು ಪಡೆಯುವ ಅದೇ ಪೋಷಕಾಂಶಗಳಲ್ಲಿ ಆಲೂಗಡ್ಡೆ ನಿಜವಾಗಿಯೂ ಸಮೃದ್ಧವಾಗಿವೆ. ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸಲು ಮತ್ತು ಕ್ಯಾನ್ಸರ್-ಉಂಟುಮಾಡುವ ಸ್ವತಂತ್ರ ರಾಡಿಕಲ್ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.[೧]
- ಈ ಪೋಷಕಾಂಶಗಳಲ್ಲದೆ ಅವಶ್ಯಕ ಅಮೈನೋ ಆಮ್ಲಗಳು ಕೂಡ ಇರುವುದರಿಂದ ರುಚಿ ಹಿತರಕವಾಗಿದ್ದು ಎಲ್ಲಾ ತಿಂಡಿತಿನಿಸುಗಳಲ್ಲಿ ಬಳಸಬಹುದಾದ, ಸುಲಭವಾಗಿ ದೊರೆಯುವ, ಪ್ರಪಂಚದಾದ್ಯಂತ ಬಳಕೆಯಲ್ಲಿರುವ ಗೆಡ್ಡೆ ತರಕಾರಿ.
- ಆಲೂಗಡ್ಡೆಯನ್ನು ೩ ಭಾಗಗಳಾಗಿ ವಿಂಗಡಿಸಬಹುದು.
- ಮೊದಲನೆಯದು,ಮೇಲ್ಭಾಗದ ಸಿಪ್ಪೆ,ಎರಡನೆಯದು,ಸಿಪ್ಪೆಯ ಮೇಲ್ಬಾಗದಲ್ಲಿರುವ ತೆಳುವಾದ ಪೊರೆ,ಮೂರನೆಯದು, ಒಳ ಪಿಷ್ಟ ಭಾಗ.
- ಮೊದಲನೆಯ ಭಾಗದಲ್ಲಿ ಖನಿಜಾಂಶಾ ಮತ್ತು ಜೀವಸತ್ವಗಳಿರುತ್ತವೆ.
- ಎರಡನೆಯ ಪದರದಲ್ಲಿ ಸಸಾರಜನಕ ಮತ್ತು ವರ್ಣದ್ರವ್ಯ ಇರುತ್ತವೆ.
- ಈ ವರ್ಣದ್ರವ್ಯ ನಾವು ಆಲೂಗಡ್ಡೆಯನ್ನು ಕತ್ತರಿಸಿದಾಗ ಗಾಳಿಯ ಸಂಪರ್ಕಕ್ಕೆ ಬಂದು ಆಲೂಗಡ್ಡೆಯ ಬಣ್ಣವನ್ನು ಬದಲಾಯಿಸುತ್ತದೆ.
- ಮೂರನೇಯ ಭಾಗವು ಪಿಷ್ಟ ಮತ್ತು ನೀರಿನಿಂದ ಕೂಡಿರುತ್ತದೆ.
- ಆದುದರಿಂದಲೇ ಆಲೂಗಡ್ಡೆಯ ಸಿಪ್ಪೆಯನ್ನು ತೆಗೆಯುದರಿಂದ ಅಥವಾ ತೊಳೆಯುದರಿಂದ ಪೋಷಕಾಂಶಗಳು ನಷ್ಟವಾಗಿ ಕೇವಲ ಪಿಷ್ಟ ಪದಾರ್ಥ ಮಾತ್ರ ಉಳಿಯುತ್ತದೆ.
ತಿಂಡಿಗಳು[ಬದಲಾಯಿಸಿ]
- ಆಲೂ ಪಾಯಸ:ಬೇಯಿಸಿದ ಆಲೂಗಡ್ಡೆಯನ್ನು ರುಬ್ಬಿ ಹಾಲಿಗೆ ಸೇರಿಸಿ ಕುದಿಸಿ, ರುಚಿಗೆ ತಕ್ಕಷ್ಟು ಸಕ್ಕರೆ ಸೇರಿಸಬೇಕು.ಹುರಿದ ಗೋಡಂಬಿ ಮತ್ತು ದ್ರಾಕ್ಷಿ ಸೇರಿಸಬಹುದು. ಹೆಚ್ಚಿನ ರುಚಿ ಬೇಕಾದರೆ ಹಾಲಿನೊಂದಿಗೆಖೋವಾ ಸೇರಿಸಿದರೆ ವಿಶೇಷ ರುಚಿ ಬರುತ್ತದೆ.
- ಆಲೂ ಹಲ್ವ:ಆಲೂಗಡ್ಡೆಯನ್ನು ಶುಚಿಮಾಡಿ ಬೇಯಿಸಿ ಚೆನ್ನಾಗಿ ಮಸೆದು ಸಕ್ಕರೆ ಬೆರೆಸಿ ಬಾಣಲೆಯಲ್ಲಿ ಹಾಕಿ ಒಲೆಯ ಮೇಲಿಟ್ಟು ಮಗಚುತ್ತಾ ತುಪ್ಪ ಸೇರಿಸಿದರೆ ಒಳ್ಳೆಯ ವಾಸನೆ ಬಂದು ಪಾತ್ರೆ ಬಿಡುವಾಗ ತುಪ್ಪ ಸವರಿದ ತಟ್ಟೆಗೆ ಹರಡಿ ಇಡಬೇಕು.ಆರಿದ ಮೇಲೆ ಬೇಕಾದ ಆಕಾರಕ್ಕೆ ಕತ್ತರಿಸಿ ಉಪಯೋಗಿಸಬವುದು.
ತಳಿಗಳು[ಬದಲಾಯಿಸಿ]
ಇದು ಬಹುಬೇಗ ೯೦ ದಿನಗಳಲ್ಲಿ ಇಳುವರಿಗೆ ಬರುವ ಮತ್ತು ವಿವಿಧ ಹವಾಗುಣಗಳಿಗೆ ಹೊಂದಿಕೊಂಡು ಬೇಳೆಯುವ ಭಾರತದ ಉತ್ತಮ ತಳಿ.ಚಪ್ಪಟೆಯದ ಗೆಡ್ಡೆಗಳು ವಿಶಾಲವಾದ, ನಯವಾದ ಮೇಲ್ಮೈ ಹೊಂದಿರುತ್ತವೆ.
ಬೀಜ ಮತ್ತು ಬಿತ್ತನೆ[ಬದಲಾಯಿಸಿ]
ಈ ಬೆಳೆಯನ್ನು ಗೆಡ್ಡೆಗಳ ಮುಖಾಂತರ ಸಸ್ಯಾಭಿವ್ರದ್ಧಿ ಮಾಡಲಾಗುವುದು. ಈ ಉದೇಶಕ್ಕೆ ಇಡೀ ಗೆಡ್ಡೆ ಅಥವಾ ಗೆಡ್ಡೆಯ ಚೂರುಗಳನ್ನು ಬೀಜವಾಗಿ ಬಳಸುತ್ತಾರೆ. ಆಲೂಗಡ್ಡೆಗೆ ಮಾರಕವಾದ ರೋಗಗಳು ಗೆಡ್ಡೆಗಳ ಮುಖಾಂತರ ಹರಡುವುದರಿಂದ ರೋಗರಹಿತ ಗೆಡ್ಡೆಗಳನ್ನು ಮಾತ್ರ ಬಳಸಬೇಕು.
ನೀರಾವರಿ ಮತ್ತು ಅಂತರಬೇಸಾಯ[ಬದಲಾಯಿಸಿ]
ನಾಟಿಮಾಡಿದ ಕೂಡಲೆ ತೆಳು ನೀರಾವರಿ ಒದಗಿಸಬೇಕು.ನಂತರದ ನೀರಾವರಿಗಳನ್ನು ಮಣ್ಣು ಮತ್ತು ಹವಾಗುಣಗಳಿಗನುಗುಣವಾಗಿ ೫-೭ ದಿನಗಳ ಅಂತರದಲ್ಲಿ ಕೊಡಬೇಕು ಮತ್ತು ಕಳೆ ಬರದಂತೆ ಎಚ್ಚರ ವಹಿಸಬೇಕು.[೨]
ಉಲ್ಲೇಖ[ಬದಲಾಯಿಸಿ]
- ↑ "ಆರೋಗ್ಯಕರ ಜೀವನಕ್ಕಾಗಿ 8 ಆಲೂಗಡ್ಡೆ ಪ್ರಯೋಜನಗಳು –". kannadanews.today.
- ↑ ಡಾ||ಪಿ.ನಾರಾಯಣ ಸ್ವಾಮಿ,ಡಾ||ಎಲ್.ವಸಂತ ನವಕರ್ಣಾಟಕ ಪ್ರಕಾಶನ ಪುಟಸಂಖ್ಯೆ ೫