ವಿಷಯಕ್ಕೆ ಹೋಗು

ಎಸ್. ಎಂ. ಕೃಷ್ಣ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
(ಎಸ್ ಎಮ್ ಕೃಷ್ಣ ಇಂದ ಪುನರ್ನಿರ್ದೇಶಿತ)
ಎಸ್. ಎಂ. ಕೃಷ್ಣ
ಭಾರತದ ವಿದೇಶಾಂಗ ವ್ಯವಹಾರಗಳ ಮಂತ್ರಿಯಾಗಿ ಅಮೇರಿಕಾದಲ್ಲಿ (೨೦೧೦).
ಭಾರತದ ೨೭ನೇ ವಿದೇಶಾಂಗ ವ್ಯವಹಾರಗಳ ಮಂತ್ರಿಯಾಗಿ
In office
೨೩ ಮೇ ೨೦೦೯ – ೨೮ ಅಕ್ಟೋಬರ್ ೨೦೧೨
Prime Ministerಮನಮೋಹನ್ ಸಿಂಘ್
Preceded byಪ್ರಣಬ್ ಮುಖರ್ಜಿ
Succeeded byಸಲ್ಮಾನ್ ಖುರ್ಶೀದ್
ಮಹಾರಾಷ್ಟ್ರದ ೧೮ನೇ ರಾಜ್ಯಪಾಲರಾಗಿ
In office
೧೨ ಡಿಸೆಂಬರ್ ೨೦೦೪ – ೫ ಮಾರ್ಚ್ ೨೦೦೮
ಮುಖ್ಯಮಂತ್ರಿವಿಲಾಸ್ ರಾವ್ ದೇಶ್‌ಮುಖ್
Preceded byಮೊಹ್ಮದ್ ಫಝಲ್
Succeeded byಎಸ್ ಸಿ ಜಮೀರ್
ಕರ್ನಾಟಕದ ೧೬ನೇ ಮುಖ್ಯಮಂತ್ರಿಯಾಗಿ
In office
೧೧ ಅಕ್ಟೋಬರ್ ೧೯೯೯ – ೨೮ ಮೇ ೨೦೦೪
Preceded byಜೆ ಹೆಚ್ ಪಟೇಲ್
Succeeded byಎನ್ ಧರಮ್ ಸಿಂಘ್
ಕರ್ನಾಟಕದ ಮೊದಲ ಉಪ ಮು.ಮಂ.
In office
೨೧ ಜನವರಿ ೧೯೯೩ – ೧೧ ಡಿಸೆಂಬರ್ ೧೯೯೪
ಮುಖ್ಯಮಂತ್ರಿಎಂ ವೀರಪ್ಪ ಮೊಯ್ಲಿ
Preceded byಇಲ್ಲ.
Succeeded byಜೆ ಹೆಚ್ ಪಟೇಲ್
Constituencyಮದ್ದೂರು ವಿಧಾನಸಭಾ ಕ್ಷೇತ್ರ
Personal details
Born (1932-05-01) 1 May 1932 (age 92)
ಸೋಮನಹಳ್ಳಿ, ಮಂಡ್ಯ ಜಿಲ್ಲೆ, ಕರ್ನಾಟಕ (ಆಗಿನ ಮೈಸೂರು ರಾಜ್ಯ)
Died೧೦ ಡಿಸೆಂಬರ್ ೨೦೨೪
ಬೆಂಗಳೂರು
Political partyಭಾರತೀಯ ಜನತಾ ಪಾರ್ಟಿ
(ಮಾರ್ಚ್ ೨೦೧೭ರಿಂದ)
Other political
affiliations
Spouseಪ್ರೇಮಾ
Relativesವಿ ಜಿ ಸಿದ್ಧಾರ್ಥ
(son in-law)
Alma materಮೈಸೂರು ವಿವಿ ಕಾನೂನು ಕಾಲೇಜು
ಡೆಡ್‍ಮನ್ ಕಾನೂನು ಕಾಲೇಜು(ಸದರ್ನ್ ಮೆಥಡಿಸ್ಟ್ ವಿವಿ, ಟೆಕ್ಸಾಸ್)
ಜಾರ್ಜ್ ವಾಷಿಂಗ್‌ಟನ್ ವಿವಿ ಕಾನೂನು ಕಾಲೇಜು

ಸೋಮನಹಳ್ಳಿ ಮಲ್ಲಯ್ಯ ಕೃಷ್ಣ (೧ ಮೇ ೧೯೩೨- ೧೦ ಡಿಸೆಂಬರ್ ೨೦೨೪) ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. ೧೯೯೯ ರಿಂದ ೨೦೦೪ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು ೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕದ ೧೬ ನೇ ಮುಖ್ಯಮಂತ್ರಿಯಾಗಿದ್ದರು ಮತ್ತು ೨೦೦೪ ರಿಂದ ೨೦೦೮ ರವರೆಗೆ ಮಹಾರಾಷ್ಟ್ರದ ೧೯ ನೇ ರಾಜ್ಯಪಾಲರಾಗಿದ್ದರು. ಎಸ್.ಎಂ.ಕೃಷ್ಣ ಅವರು ಡಿಸೆಂಬರ್ ೧೯೮೯ ರಿಂದ ಜನವರಿ ೧೯೯೩ ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.[] ೧೯೭೧ ರಿಂದ ೨೦೧೪ ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ ೨೦೨೩ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.[]

ವಿದ್ಯಾಭ್ಯಾಸ

[ಬದಲಾಯಿಸಿ]

ಎಸ್ ಎಂ ಕೃಷ್ಣ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವೀಧರರಾದ ನಂತರ ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಓದಿದರು. ಇದರ ನಂತರ ಅಮೆರಿಕದ ಟೆಕ್ಸಸ್ ರಾಜ್ಯದಲ್ಲಿರುವ ಸದರ್ನ್ ಮೆಥಡಿಸ್ಟ್ ವಿಶ್ವವಿದ್ಯಾಲಯದಲ್ಲಿ ಓದಿ ನಂತರ ವಾಷಿಂಗ್ಟನ್ ನಲ್ಲಿರುವ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಪ್ರತಿಷ್ಠಿತ ಫುಲ್‍ಬ್ರೈಟ್ ವಿದ್ಯಾರ್ಥಿವೇತನವನ್ನು ಪಡೆದರು.

ರಾಜಕೀಯ ಜೀವನ

[ಬದಲಾಯಿಸಿ]

ಭಾರತಕ್ಕೆ ಮರಳಿದ ನಂತರ ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಸ್ವಲ್ಪ ಕಾಲ ಅಂತಾರಾಷ್ಟ್ರೀಯ ನ್ಯಾಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು. ವಿಧಾನ ಸಭೆಗೆ ಮೊದಲ ಬಾರಿ ೧೯೬೨ ರಲ್ಲಿ ಚುನಾಯಿತರಾದರು. ೧೯೬೮ರಲ್ಲಿ ಲೋಕಸಭೆಗೆ ಚುನಾಯಿತರಾದರು. ೧೯೭೧ರಲ್ಲಿ ಅಲ್ಲಿಗೆ ಮರು ಚುನಾಯಿತರಾಗಿ ಮತ್ತೆ ೧೯೭೨ ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾಯಿತರಾದರು. ಇದೇ ಸಮಯದಲ್ಲಿ ವಾಣಿಜ್ಯ, ಉದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದರು. ೧೯೮೩ರಲ್ಲು ಉದ್ಯಮ ಖಾತೆ ಮತ್ತು ೧೯೮೪ ರಲ್ಲಿ ವಿತ್ತ ಖಾತೆಯ ಸಚಿವರಾದರು. ೧೯೮೯ ರಿಂದ ೧೯೯೨ರ ವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ನೇಮಿತರಾದರು. ೧೯೯೨ ರಿಂದ ೧೯೯೪ರ ವರೆಗೆ ಕರ್ನಾಟಕದ ಉಪ-ಮುಖ್ಯಮಂತ್ರಿಗಳಾದರು. ೧೯೯೬ರಲ್ಲಿ ರಾಜ್ಯಸಭೆಗೆ ನೇಮಕಗೊಂಡ ಕೃಷ್ಣ, ೧೯೯೯ ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ೧೯೯೯ರಿಂದಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿದ್ದರು. ವಿದೇಶಗಳಲ್ಲಿ ಎರಡು ಬಾರಿ (ವಿಶ್ವಸಂಸ್ಥೆಯಲ್ಲಿ ಒಮ್ಮೆ, ಮತ್ತು ಕಾಮನ್ ವೆಲ್ತ್ ಒಕ್ಕೂಟದಲ್ಲಿ ಒಮ್ಮೆ) ಭಾರತವನ್ನು ಪ್ರತಿನಿಧಿಸಿದ್ದಾರೆ.

  • ೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕ ರಾಜ್ಯದ ೧೬ನೇ ಮುಖ್ಯಮಂತ್ರಿಗಳಾಗಿದ್ದರು.
  • ೨೦೦೪ ರಿಂದ ೨೦೦೮ರ ವರೆಗೆ ಮಹಾರಾಷ್ಟ್ರದ ೧೯ನೇ ರಾಜ್ಯಪಾಲರಾಗಿದ್ದರು.
  • ಕೇಂದ್ರ ವಿದೇಶಾಂಗ ಸಚಿವರಾಗಿದ್ದರು.
  • ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವ ಪಡೆದರು.
  • ದಶಂಬರ ೧೯೮೯ ರಿಂದ ಜನವರಿ ೧೯೯೩ರ ವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.
  • ೧೯೭೧ ರಿಂದ ೨೦೧೪ರ ವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು.

ಪ್ರಶಸ್ತಿ

[ಬದಲಾಯಿಸಿ]
  • ೨೦೨೩ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ

ಎಸ್.ಎಂ.ಕೃಷ್ಣ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

[ಬದಲಾಯಿಸಿ]
  • ಜನವರಿ ೨೮ ೨೦೧೭ಬೆಳಿಗ್ಗೆ ೧೧ ಗಂಟೆಗೆ ಎಸ್.ಎಂ.ಕೃಷ್ಣ ಅಧಿಕೃತವಾಗಿ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಣೆ ಮಾಡಿದರು.[] ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ತುರ್ತು ಪತ್ರಿಕಾ ಗೋಷ್ಠಿ ನಡೆಸಿ ‘ ಕಾಂಗ್ರೆಸ್ ಪಕ್ಷವನ್ನು ತ್ಯಜಿಸುತ್ತಿದ್ದೇನೆ’ ಎಂದು ಎಸ್‌. ಎಂ. ಕೃಷ್ಣ ಅಧಿಕೃತವಾಗಿ ಘೋಷಣೆ ಮಾಡಿದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಸ್.ಎಂ.ಕೃಷ್ಣ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ ಎಂದು ಟಿ.ವಿ.ನೈನ್ ವರದಿ ಮಾಡಿದೆ.[][]

ವಿಧಿವಶ

[ಬದಲಾಯಿಸಿ]

ತಮ್ಮ ೯೨ನೇ ವರ್ಷ ವಯಸ್ಸಿನಲ್ಲಿ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ೨.೪೫ರ ಸಮಯದಲ್ಲಿ ಹೃದಯಾಘಾತದಿಂದ ನಿಧನರಾದರು. ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ.[]

ಉಲ್ಲೇಖಗಳು

[ಬದಲಾಯಿಸಿ]
  1. "Posthumous Padma Vibhushan for Mulayam Singh Yadav, ORS pioneer Dilip Mahalanabis". thehindu.com. ದ ಹಿಂದೂ. Retrieved 26 January 2023.
  2. https://zeenews.india.com/kannada/karnataka/karnataka-assembly-speakers-list-೬೭೨೪
  3. ಪದ್ಮವಿಭೂಷಣ ಪ್ರಶಸ್ತಿ ಘೋಷಣೆ, ಕನ್ನಡಪ್ರಭ, ೨೬ ಜನವರಿ ೨೦೨೩
  4. ಕಾಂಗ್ರೆಸ್‌ನಲ್ಲಿ ಹಿರಿತನ, ಆತ್ಮಗೌರವಕ್ಕೆ ಬೆಲೆ ಕಾಣಿಸದೆ ಇದ್ದುದರಿಂದ ಪಕ್ಷ ತ್ಯಜಿಸುತ್ತಿದ್ದೇನೆ’ : ಕೃಷ್ಣ
  5. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಸ್.ಎಂ.ಕೃಷ್ಣ ಸಕ್ರಿಯ ರಾಜಕಾರಣದಿಂದ ನಿವೃತ್ತಿ
  6. "ಸಂಗತ;ಕೃಷ್ಣ ಅವರಿಗೆ ಬಹಿರಂಗ ಪತ್ರ;ಟಿ.ಕೆ. ತ್ಯಾಗರಾಜ್;2 Feb, 2017". Archived from the original on 2017-02-01. Retrieved 2017-02-03.
  7. ಕರ್ನಾಟಕ ಮಾಜಿ ಸಿಎಂ ಎಸ್​ಎಂ ಕೃಷ್ಣ ನಿಧನ