ಗುರುಪುರ
ಗುರುಪುರ | |
|---|---|
town | |
| Coordinates: 12°56′20″N 74°55′52″E / 12.938828°N 74.931107°E | |
| Country | |
| State | ಕರ್ನಾಟಕ |
| District | ದಕ್ಷಿಣ ಕನ್ನಡ |
| Government | |
| • Body | ಮೂಳೂರು ಗ್ರಾಮ ಪಂಚಾಯತ್ |
| Population (೨೦೧೧) | |
• Total | ೫೪೬೫ |
| ಭಾಷೆಗಳು | |
| • Official | ತುಳು |
| Time zone | UTC+5:30 (IST) |
| PIN | ೫೭೪೧೪೫[೧] |
| Nearest city | ಮಂಗಳೂರು |
| Lok Sabha constituency | ಮಂಗಳೂರು |
| Vidhan Sabha constituency | ಮಂಗಳೂರು ಉತ್ತರ |
| Civic agency | ಮೂಳೂರು ಗ್ರಾಮ ಪಂಚಾಯತ್ |
ಗುರುಪುರವು ಫಾಲ್ಗುಣಿ ಅಥವಾ ಗುರುಪುರ ನದಿಯಲ್ಲಿರುವ ಒಂದು ಸಣ್ಣ ಪಟ್ಟಣ.[೨] ಇದು ಕರ್ನಾಟಕ ರಾಜ್ಯದ ರಾಜಧಾನಿಯಾದ ಬೆಂಗಳೂರಿನಿಂದ ಪಶ್ಚಿಮಕ್ಕೆ ಸುಮಾರು ೩೪೫ ಕಿಲೋಮೀಟರ್ (೨೧೪ ಮೈಲು) ಮತ್ತು ಕರ್ನಾಟಕದ ಮುಖ್ಯ ಬಂದರು ನಗರವಾದ ಮಂಗಳೂರಿನಿಂದ ಪೂರ್ವ ದಿಕ್ಕಿಗೆ ಸುಮಾರು ೧೩ ಕಿಲೋಮೀಟರ್ (೮ ಮೈಲು) ದೂರದಲ್ಲಿದೆ.[೩]
ಅಲ್ಲಿನ ನಿವಾಸಿಗಳು ವಿವಿಧ ಸಾಂಸ್ಕೃತಿಕ ಹಿನ್ನೆಲೆಯುಳ್ಳವರು. ಅದರಲ್ಲಿ ಬಿಲ್ಲವ, ಬಂಟ್ಸ್, ಗೌಡ, ಮತ್ತು ಸರಸತ್ವ ಬ್ರಾಹ್ಮಣರು ಸೇರಿದ್ದಾರೆ. ಸಾಮಾನ್ಯ ಸಂವಹನಕ್ಕಾಗಿ ತುಳು ಪ್ರಾಥಮಿಕ ಭಾಷೆಯಾಗಿದೆ. ಆದರೆ ಕೊಂಕಣಿ, ಬ್ಯಾರಿ ಮತ್ತು ಕನ್ನಡ ಭಾಷೆ ಗಳಲ್ಲೂ ಜನರು ಮಾತನಾಡುತ್ತಾರೆ.[೪]
ಪರಿಚಯ
[ಬದಲಾಯಿಸಿ]ಗುರುಪುರ ಭಾರತದ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನಲ್ಲಿರುವ ಒಂದು ಸಣ್ಣ ಗ್ರಾಮ / ಕುಗ್ರಾಮ. ಇದು ಗುರುಪುರ ಪಂಚಾಯತ್ ಅಡಿಯಲ್ಲಿ ಬರುತ್ತದೆ. ಇದು ಮೈಸೂರು ವಿಭಾಗಕ್ಕೆ ಸೇರಿದೆ ಹಾಗೂ ಜಿಲ್ಲಾ ಕೇಂದ್ರವಾದ ಚಿಕ್ಕಮಗಳೂರಿನಿಂದ ಉತ್ತರಕ್ಕೆ ೪೧ ಕಿ.ಮೀ ದೂರದಲ್ಲಿದೆ. ತರೀಕೆರೆಯಿಂದ ೧೮ ಕಿ.ಮೀ. ಮತ್ತು ರಾಜ್ಯದ ರಾಜಧಾನಿ ಬೆಂಗಳೂರಿನಿಂದ ೨೫೨ ಕಿ.ಮೀ. ದೂರದಲ್ಲಿದೆ.
ಇತಿಹಾಸ
[ಬದಲಾಯಿಸಿ]ಸ್ಥಳೀಯ ದೇವಾಲಯಗಳ ದಾಖಲೆಗಳ ಪ್ರಕಾರ, ಗುರುಪುರ ಪಟ್ಟಣವನ್ನು ಹಿಂದೆ ಗುಲಿಪುರ ಎಂದು ಕರೆಯುತ್ತಿದ್ದರು. ಫಾಲ್ಗುಣಿ ನದಿಯ ದಡದಲ್ಲಿ ನೆಲೆಗೊಂಡಿರುವ ಗುಲಿಪುರ ವಾಣಿಜ್ಯ ಪಟ್ಟಣವಾಗಿದ್ದು, ನದಿಯ ಇತರ ಭಾಗಗಳಿಗೆ ಅದರ ಸಂಪರ್ಕ ಹೊಂದಿದೆ.[೫] ಬಂಡಸಾಲೆ ಎಂಬುದು ಅಲ್ಲಿನ ಒಂದು ಸ್ಥಳ [೬], ಅಲ್ಲಿನ ಸಿಗುವ ಸರುಕುಗಳನ್ನು ಸಂಗ್ರಹಿಸಿ ಅನೇಕ ಸ್ಥಳಗಳಿಗೆ ವಿತರಿಸಲಾಗುತ್ತದೆ. ಕುಡಿಯುವ ನೀರಿನ ಸರಬರಾಜು ಗಾಗಿ ನಿರ್ಮಿಸಲಾದ ಅಣೆಕಟ್ಟಿನಂತಹ ರಚನೆಯುಳ್ಳ 'ಬಾಂಗ್ಲಾ ಗುಡ್ಡೆ' ಯನ್ನು ಗುರುಪುರದಲ್ಲಿ ಟಿಪ್ಪು ಸುಲ್ತಾನ್ ರವರು ನಿರ್ಮಿಸಿದ್ದಾರೆ.[೭] [೮]
ಹತ್ತಿರದ ಸ್ಥಳಗಳು
[ಬದಲಾಯಿಸಿ]ಗುರುಪುರವು ಮಂಗಳೂರು ನಗರದಿಂದ - ೧೨ ಕಿ.ಮಿ(೭.೫ ಮೈಲು).[೯][೧೦] ; ಕೈಕಂಬದಿಂದ - ೦೫ ಕಿ.ಮೀ. (೩.೧ ಮೈಲು).[೧೧]; ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕದಿಂದ - ೨೮ ಕಿ.ಮೀ(೧೭ ಮೈಲು).[೧೨]; ಸುರತ್ಕಲ್ ನಿಂದ - ೨೯ ಕಿ.ಮೀ(೧೮ ಮೈಲು).[೧೩]; ಫಾಲ್ಗುಣಿ ನದಿತಿಂದ - ೦೦ ಕಿ.ಮೀ(೦ ಮೈಲು); ಉಡುಪಿಯಿಂದ - ೬೬ ಕಿ.ಮೀ(೪೧ ಮೈಲು).[೧೪] ದೂರದಲ್ಲಿದೆ.
ಗುರುಪುರ ತಲುಪಲು ದಾರಿ
[ಬದಲಾಯಿಸಿ]ರಸ್ತೆ ಮೂಲಕ
[ಬದಲಾಯಿಸಿ]ತರೀಕೆರೆ ಗುರುಪುರಕ್ಕೆ ಹತ್ತಿರದ ಪಟ್ಟಣ. ತರೀಕೆರೆ ಗುರುಪುರದಿಂದ ೨೩ ಕಿ.ಮೀ ದೂರದಲ್ಲಿದೆ. ತರೀಕೆರೆದಿಂದ ಗುರುಪುರದವರೆಗೆ ರಸ್ತೆ ಸಂಪರ್ಕವಿದೆ.
ರೈಲು ದಾರಿ
[ಬದಲಾಯಿಸಿ]ಗುರುಪುರ ಬಳಿ ೧೦ ಕಿ.ಮೀ.ಗಿಂತ ಕಡಿಮೆ ದೂರದಲ್ಲಿ ಯಾವುದೇ ರೈಲು ನಿಲ್ದಾಣವಿಲ್ಲ. ಪಟ್ಟಣದ ತರೀಕೆರೆ ಹತ್ತಿರದಲ್ಲಿ ರೈಲ್ವೆ ನಿಲ್ದಾಣಗಳಿವೆ. ಅಲ್ಲಿಂದ ಗುರುಪುರಕ್ಕೆ ತಲುಪಬಹುದು.[೧೫]
ಧಾರ್ಮಿಕ ತಾಣಗಳು
[ಬದಲಾಯಿಸಿ]ಗುರುಪುರವು ಧಾರ್ಮಿಕ ಚಟುವಟಿಕೆಗಳಿಗೆ ಹೆಸರುವಾಸಿಯಾಗಿದೆ ಮತ್ತು ಈ ಪಟ್ಟಣದ ನಂತರ ಫಾಲ್ಗುಣಿ ನದಿಯನ್ನು ಗುರುಪುರ ಎಂದು ಹೆಸರಿಸಲಾಗಿದೆ. ಇದು ವಾಮಂಜೂರು ಮತ್ತು ಕಾಳಿಕಾಂಬ ಸ್ಥಳಕ್ಕೂ ಹತ್ತಿರದಲ್ಲಿದೆ.[೧೬] ದಕ್ಷಿಣ ಕನ್ನಡ ಜಿಲ್ಲೆಯ ತ್ವರಿತ ನಗರೀಕರಣದೊಂದಿಗೆ ಈ ಗ್ರಾಮವು ಒಂದು ಸಣ್ಣ ಪಟ್ಟಣವಾಗಿ ಮಾರ್ಪಟ್ಟಿದೆ. ಹಿಂದೂ ದೇವತೆಗಳಾದ ವರದ್ರಾಜ, ವೆಂಕಟರಮಣ ಮತ್ತು ಶ್ರೀ ಸತ್ಯದೇವತೆ ಧರ್ಮದೇವತೆ[೧೭] ಯ ದೇವಾಲಯಗಳು ಇಲ್ಲಿ ಕಂಡುಬರುತ್ತವೆ.[೧೮] ಹಬ್ಬಗಳು ವರ್ಷದ ಬಹುಪಾಲು ಇಲ್ಲಿ ನಡೆಯುತ್ತವೆ, ಆದರೆ ಮುಖ್ಯ ಹಬ್ಬವು ಸಾಮಾನ್ಯವಾಗಿ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯುತ್ತದೆ. ಭಾರತೀಯ ಕ್ಯಾಲೆಂಡರ್ ತಿಂಗಳಲ್ಲಿ ಗುರುಪುರ ತೆರು[೧೯], ಓಕುಲ್, ಒಡು ತೆರು ಎಂದು ಹೆಸರಿಸಲಾಗುತ್ತದೆ. ಶ್ರೀ ಸತ್ಯದೇವತಾ ಧರ್ಮದೇವತಾ ದೇವಸ್ಥಾನದ ಸ್ವಲ್ಪ ದೂರದಲ್ಲಿ ದೊಡ್ಡ ಮಸೀದಿ ಇದೆ.
ಉಲ್ಲೇಖಗಳು
[ಬದಲಾಯಿಸಿ]- ↑ ಪಿನ್ ಕೋಡ್
- ↑ ಗುರುಪುರ ನದಿ
- ↑ "Indian express". Archived from the original on 2022-07-17. Retrieved 2019-06-20.
- ↑ Explore India
- ↑ [೧]
- ↑ ಬಂಡಸಲೆ
- ↑ Megamedia news
- ↑ ಟಿಪ್ಪು ಸುಲ್ತಾನ್ ರವರು ನಿರ್ಮಿಸಿದ ಬಾಂಗ್ಲಾ ಗುಡ್ಡೆ
- ↑ ಗುರುಪುರ
- ↑ ಮಂಗಳೂರಿನಿಂದ ಗುರುಪುರಕ್ಕೆ
- ↑ ಗುರುಪುರದಿಂದ ಕೈಕಂಬಕ್ಕಿರುವ ಅಂತರ
- ↑ ಎನ್ಐಟಿಕೆ ಯಿಂದ ಗುರುಪುರಕ್ಕಿರುವ ಅಂತರ
- ↑ ಗುರುಪುರದಿಂದ ಸುರತ್ಕಲ್ ಗೆ ಇರುವ ಅಂತರ
- ↑ ಉಡುಪಿಯಿಂದ ಗುರುಪುರಕ್ಕಿರುವ ಅಂತರ
- ↑ https://www.onefivenine.com/india/villages/Chikmagalur/Tarikere/Gurupura
- ↑ ಗುರುಪುರ ಮತ್ತು ವಾಮಂಜೂರಿಗೆ ಇರುವ ಅಂತರ
- ↑ ಶ್ರೀ ಸತ್ಯದೇವತೆ ಮಂದಿರ
- ↑ "ಗುರುಪುರದಲ್ಲಿನ ದೇವಾಲಯ". Archived from the original on 2021-12-24. Retrieved 2019-06-20.
- ↑ ಗುರುಪುರ ತೆರು