ದಕ್ಷಿಣ ಕನ್ನಡ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ದಕ್ಷಿಣಕನ್ನಡ ಜಿಲ್ಲೆ
ಬಾರಿಸು ಕನ್ನಡ ಡಿಂಡಿಮವ, ಓ ಕರ್ನಾಟಕ ಹೃದಯ ಶಿವ
ಹಕ್ಕಿ ನೋಟ
ಕುಕ್ಕೆ ಸುಬ್ರಹ್ಮಣ್ಯ
ಸಾವಿರ ಕಂಬದ ದೇವಾಲಯ
ಕುದುರೆಮುಖ
ಭೂಮಿ
ಕರ್ನಾಟಕ ಭೂಪಟದಲ್ಲಿ ದಕ್ಷಿಣಕನ್ನಡ ಜಿಲ್ಲೆ
ದೇಶಭಾರತ
ನಾಡುಕರ್ನಾಟಕ
ಒಟ್ಟು ಭೂ ಅಳತೆ೪,೮೬೧ ಚ.ಕಿ.ಮೀ
ಕಾಡು೬೩.೦೫ %
(೩,೦೬೪.೬೬ ಚ.ಕಿ.ಮೀ)
ಕಡಲ ತೀರ೬೨ ಕಿ.ಮೀ
ಆಡಳಿತ
ಜಿಲ್ಲಾಡಳಿತ
ಜಿಲ್ಲಾಕೇಂದ್ರಮಂಗಳೂರು
ತಾಲೂಕುಗಳು
  • ಮಂಗಳೂರು
  • ಪುತ್ತೂರು
  • ಬಂಟ್ವಾಳ
  • ಮೂಡುಬಿದಿರೆ
  • ಸುಳ್ಯ
  • ಬೆಳ್ತಂಗಡಿ
ಭಾಷೆ
ನುಡಿಕನ್ನಡ
ಲಿಪಿಕನ್ನಡ ಲಿಪಿ
ಪ್ರತಿನಿಧಿ
ಜನ
ಗಣತಿ೨೦೧೧
ಒಟ್ಟು ಜನರು೨೦,೮೯,೬೪೯
ಪಟ್ಟಣದವರು೪೭.೬೭ %
ಹಳ್ಳಿಯವರು೫೨.೩೩ %
ಜನದಟ್ಟಣೆ೪೩೦/km²
ಹೆಣ್ಣು/ಗಂಡು೧,೦೨೦♀/೧,೦೦೦♂
ಓದು ಬರಹ ಗೊತ್ತಿರುವವರು೮೮.೫೭%
ಇತರೆ ಮಾಹಿತಿ
ಸಮಯಯುಟಿಸಿ+5:30
ದಿನಾಂಕ ಬರೆಯುವ ರೀತಿದಿನ-ತಿಂಗಳು-ಇಸವಿ
ಗಾಡಿ ಓಡಿಸುವ ಬದಿಎಡಬದಿ
ಗಾಡಿ ಅಂಕಿ
  • ಕೆಎ ೧೯ ಮಂಗಳೂರು ದಕ್ಷಿಣ
  • ಕೆಎ ೨೧ ಪುತ್ತೂರು
  • ಕೆಎ ೬೨ ಮಂಗಳೂರು ಉತ್ತರ
  • ಕೆಎ ೭೦ ಬಿ.ಸಿ ರಸ್ತೆ
ಕರೆ ಮಾಡುವ ಅಂಕಿ+೯೧
ಸಂಪರ್ಕ
ತುರ್ತು ಸಹಾಯವಾಣಿ೧೧೨
ಜಾಲತಾಣdk.nic.in

ದಕ್ಷಿಣ ಕನ್ನಡ (ತುಳು: ಕುಡ್ಲ) ಕರ್ನಾಟಕ ರಾಜ್ಯದ ಒಂದು ಕರಾವಳಿ ಜಿಲ್ಲೆ. ಈ ಜಿಲ್ಲೆಯ ಕೇಂದ್ರಸ್ಥಳ ಹಾಗೂ ಮುಖ್ಯ ನಗರ ಮಂಗಳೂರು. ದಕ್ಷಿಣ ಕನ್ನಡ ಜಿಲ್ಲೆಯ ಜನಸಂಖ್ಯೆ ೨೦,೮೯,೬೪೯ ಆಗಿದ್ದು ಇದರಲ್ಲಿ ಪುರುಷರು ೧೦,೩೪,೭೧೪ ಹಾಗೂ ಮಹಿಳೆಯರು ೧೦,೫೪,೯೩೫ (೨೦೧೧ರ ಜನಗಣತಿಯಂತೆ)[೧] . ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ತಾಲ್ಲೂಕುಗಳಿವೆ. ಅವೆಂದರೆ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಬೆಳ್ತಂಗಡಿ, ಮೂಡಬಿದಿರೆ,ಹಾಗೂ ಕಡಬ.

ಕೆಲವು ವರ್ಷಗಳ ಹಿಂದೆ ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳೂ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ್ದವು . ಆಗಸ್ಟ್ ೧೯೯೭ ರಲ್ಲಿ ಈ ತಾಲೂಕುಗಳನ್ನು ಉಡುಪಿ ಜಿಲ್ಲೆಯ ಭಾಗವಾಗಿ ಘೋಷಿಸಲಾಯಿತು.

ಪಣಂಬೂರಿನಲ್ಲಿ ಸೂರ್ಯಾಸ್ತಮಾನ

ಇತಿಹಾಸ[ಬದಲಾಯಿಸಿ]

ಕುಕ್ಕೆ ಸುಬ್ರಮಣ್ಯ ದೇವಸ್ಠಾನ

ಹಿಂದೆ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಟ್ಟಾಗಿ ಕೆನರಾ '(ಕನ್ನಡ ಶಬ್ದದ ಆಂಗ್ಲೀಕೃತ ರೂಪ)[೨] ಎಂದು ಕರೆಯಲಾಗುತ್ತಿತ್ತು. ೧೮೬೦ ರಲ್ಲಿ ಬ್ರಿಟಿಷರು ಈ ಭಾಗವನ್ನು ಉತ್ತರ ಕೆನರ(North Canara) ಮತ್ತು ದಕ್ಷಿಣ ಕೆನರ(South Canara)ಎಂದು ವಿಂಗಡಿಸಿದರು. ೧೮೬೨ ರಲ್ಲಿ ಉತ್ತರ ಕೆನರವನ್ನು ಬೋಂಬೆ ಪ್ರೆಸಿಡೆನ್ಸಿ ಹಾಗೂ ದಕ್ಷಿಣ ಕೆನರವನ್ನು ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿಸಲಾಯಿತು. ಕುಂದಾಪುರ ತಾಲೂಕು ಮೊದಲು ಉತ್ತರ ಕೆನರದಲ್ಲಿದ್ದರೂ ನಂತರ ದಕ್ಷಿಣ ಕೆನರಕ್ಕೆ ಸೇರಿಸಲಾಯಿತು.ಸ್ವಾತಂತ್ರ್ರ್ಯಾನಂತರ ಈ ಎರಡೂ ಜಿಲ್ಲೆಗಳು ದಕ್ಷಿಣ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾಗಿ ಬದಲಾದವು.

ಸ್ವಾತಂತ್ರ್ಯದ ನಂತರ ಈ ಜಿಲ್ಲೆ ಈಗಿನ ದಕ್ಷಿಣ ಕನ್ನಡ, ಉಡುಪಿ ಹಾಗು ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡಿತ್ತು. ೧೯೫೬ರ ಪುನರ್ ವಿಂಗಡನೆ ಸಂದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡವನ್ನು ಮೈಸೂರು ರಾಜ್ಯಕ್ಕೆ ಹಾಗೂ ಕಾಸರಗೋಡು ಜಿಲ್ಲೆಯನ್ನು ಕೇರಳ ರಾಜ್ಯಕ್ಕೆ ಸೇರಿಸಲಾಯಿತು.

ಕರ್ನಾಟಕ ಸರ್ಕಾರ ಆಗಸ್ಟ್ ೧೯೯೭ರಲ್ಲಿ, ಆಡಳಿತ ದೃಷ್ಟಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಾಗಿ ವಿಂಗಡಿಸಿತು.

ಜನ ನಂಬುಗೆಯಂತೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಪಶ್ಚಿಮ ಘಟ್ಟದಿಂದ ಕರಾವಳಿವರೆಗಿನ ’ಪರಶುರಾಮ ಸೃಷ್ಟಿ’ಯ ಭಾಗವಾಗಿದೆ. ಈ ನಂಬುಗೆಯಂತೆ, ಕ್ಷತ್ರಿಯರನ್ನು ಭೂಲೋಕದಿಂದ ನಿರ್ಮೂಲನ ಮಾಡುವ ಪ್ರತಿಜ್ಙೆ ಕೈಗೊಂಡ ಪರಶುರಾಮನು ಭೂಮಿಯನ್ನು ೨೧ ಬಾರಿ ಸುತ್ತಿ ಸಕಲ ಕ್ಷತ್ರಿಯರನ್ನೂ ನಿರ್ಮೂಲನ ಮಾಡಿದ ನಂತರ ತಾನು ನೆಲೆಸಲು ಕ್ಷತ್ರಿಯರು ಕಾಲಿಡದ ಜಾಗವೊಂದನ್ನು ಸೃಷ್ಟಿಸಬಯಸುತ್ತಾನೆ. ಅದರಂತೆ ಪಶ್ಚಿಮ ಘಟ್ಟದ ಶಿಖರವೊಂದರ ಮೇಲೆ ನಿಂತು ರಕ್ತದಿಂದ ಮಲಿನವಾದ ತನ್ನ ಕೊಡಲಿ(ಪರಶು)ಯನ್ನು ಸಮುದ್ರದೆಡೆಗೆ ಎಸೆಯಲು ಸಮುದ್ರ ರಾಜನು ಕೊಡಲಿ ಬಿದ್ದಲ್ಲಿಯವರೆಗೆ ಹಿಂದೆ ಸರಿದು ಸೃಷ್ಟಿಯಾದ ಭೂಭಾಗವೇ ಈ ಪರಶುರಾಮ ಸೃಷ್ಟಿ. ಬಹುಶಃ ಪಶ್ಚಿಮ ಘಟ್ಟದ ಕೆಳಗಿನ ಭೂಭಾಗದಲ್ಲಿ ಈ ಜಿಲ್ಲೆ ಇರುವುದರಿಂದ ಈ ನಂಬಿಕೆಗೆ ಪುಷ್ಟಿ ಬಂದಿರಬಹುದು.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು ೧೫೦ ಕಿಲೋ ಮೀಟರ್ ಕರಾವಳಿ ಪ್ರದೇಶವನ್ನು ಹೊಂದಿದೆ. ಇಲ್ಲಿನ ಮುಖ್ಯ ಕಸುಬು ಮೀನುಗಾರಿಕೆ. ಇಲ್ಲಿ ಆಳವಾದ ಮೀನುಗಾರಿಕೆಯನ್ನು ಮಾಡುತ್ತಾರೆ. ಭತ್ತ ಮತ್ತು ತೆಂಗು ಇಲ್ಲಿಯ ಮುಖ್ಯ ಬೆಳೆಗಳು.

ಜಿಲ್ಲೆಗಳಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯು ಅತ್ಯಂತ ಅಭಿವೃದ್ದಿ ಹೊಂದಿದ ಜಿಲ್ಲೆ.ಮಂಗಳೂರು ನಗರವು ಇಲ್ಲಿಯ ಜಿಲ್ಲಾ ಕೇಂದ್ರವಾಗಿದೆ. ಮಂಗಳೂರು ನಗರವು ತ್ವರಿತಗತಿಯಲ್ಲಿ ಅಭಿವೃದ್ದಿ ಹೊಂದುತ್ತ ಇದೆ.ಬೆಂಗಳೂರಿನ ನಂತರ ೨ನೇ ಅಭಿವೃದ್ದಿ ಹೊಂದುತ್ತಿರುವ ನಗರ. ಇಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ,ಪ್ರಮುಖ ಬಂದರು ಇದೆ ಇದು ದೇಶದಲ್ಲಿಯೇ ೭ ಬೃಹತ್ ಬಂದರು. ಇಲ್ಲಿನ ರೈಲು ನಿಲ್ದಾಣವು ದೇಶದ ಪ್ರಮುಖ ನಿಲ್ದಾಣಗಳಲ್ಲಿ ಒಂದು.ಈ ಜಿಲ್ಲೆಯನ್ನು ಬುದ್ದಿವಂತರ ಜಿಲ್ಲೆಯೆಂದು ಕರೆಯುತ್ತಾರೆ. ಶೈಕ್ಷಣಿಕವಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಕ್ರಾಂತಿಯಲ್ಲಿ ಬಹಳ ಮುಂದುವರಿದಿದೆ. ಜಿಲ್ಲೆಯು ನೈಸಗಿ೯ಕವಾಗಿ ನೋಡಲು ಚೆಂದ ಇಲ್ಲಿಯ ಪ್ರಕೃತಿ ಸೌಂದಯ೯ವನ್ನು ನೋಡಲು ದೇಶ ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ರಮಣೀಯವಾದಂತ ಗುಡ್ಡ ಬೆಟ್ಟಗಳು, ಬಯಲು ಸೀಮೆಗಳು, ನಿತ್ಯಹರಿದ್ವಣ೯ದ ಕಾಡುಗಳು,ಸಂಜೆಯ ಹೊತ್ತಿಗೆ ಕಡಲ ತೀರದಲ್ಲಿ ಸೂಯ೯ನು ಸಮುದ್ರವನ್ನು ತನ್ನ ಅಂತರಂಗದಲ್ಲಿ ಅದುಮಿಟ್ಟಾಗೆ ಪ್ರವಾಸಿಗರಿಗೆ ಗೋಚರಿಸಲ್ಪಡುತ್ತದೆ.

ಜಿಲ್ಲೆಯು ಮುಖ್ಯವಾಗಿ ಶೈಕ್ಷಣಿಕವಾಗಿ ಬಹಳ ಮುಂದುವರಿದಿದೆ. ಇಲ್ಲಿ ಅತ್ಯಂತ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತದೆ ವೈದ್ಯಕೀಯ, ದಂತ, ನಸಿ೯ಂಗ್, ಬಿ.ಪಿ.ಟಿ, ಇಂಜಿನಿಯರಿಂಗ್, ಯಮ್.ಬಿ.ಎ, ಮುಂತಾದ ಕೋಸ್೯ಗಳು ಇಲ್ಲಿ ಲಭ್ಯವಿದೆ, ಅತೀ ಕಡಿಮೆ ವೆಚ್ಚದಲ್ಲಿ ಶಿಕ್ಷಣವನ್ನು ನೀಡಲಾಗುತ್ತಿದೆ.

ಸ್ವಾತಂತ್ರ್ಯದ ನಂತರ ಈ ಜಿಲ್ಲೆ ಈಗಿನ ದಕ್ಷಿಣ ಕನ್ನಡ, ಉಡುಪಿ ಹಾಗು ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡಿತ್ತು. ೧೯೫೬ರ ಪುನರ್ ವಿಂಗಡನೆ ಸಂದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡವನ್ನು ಮೈಸೂರು ರಾಜ್ಯಕ್ಕೆ ಹಾಗೂ ಕಾಸರಗೋಡು ಜಿಲ್ಲೆಯನ್ನು ಕೇರಳ ರಾಜ್ಯಕ್ಕೆ ಸೇರಿಸಲಾಯಿತು.

ದಕ್ಷಿಣ ಕನ್ನಡವನ್ನು ಬುದ್ದಿವಂತರ ನಾಡು ಎಂದು ಕರೆಯಲಾಗುತ್ತದೆ.

ಭಾಷೆಗಳು[ಬದಲಾಯಿಸಿ]

ತುಳು ಮಾತನಾಡುವ ಜನ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಉಡುಪಿ ಜಿಲ್ಲೆಯ ತೆಂಕು ಭಾಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೇರಳಕಾಸರಗೋಡು ಜಿಲ್ಲೆಯ ಬಡಗು ಭಾಗವನ್ನು ಒಟ್ಟಾಗಿ ತುಳುನಾಡು ಎಂದು ಕರೆಯುತ್ತಾರೆ.

ಇಲ್ಲಿನ ಇತರ ಭಾಷೆಗಳೆಂದರೆ[ಬದಲಾಯಿಸಿ]

ದಕ್ಷಿಣ ಕನ್ನಡದ ಭಾಷೆಗಳು (2011)[೩]

  ತುಳು (90.5%)
  ಮಲಯಾಳಂ (0.01%)
  ಕೊಂಕಣಿ (0.01%)
  ಕನ್ನಡ (4.459%)
  ಉರ್ದು (0.01%)
  ತಮಿಳು (0.01%)
  ಇತರ (0.001%)

ಐತಿಹಾಸಿಕ ಸ್ಥಳಗಳು[ಬದಲಾಯಿಸಿ]

  • ಶ್ರೀ ದುಗಾ೯ಪರಮೇಶ್ವರಿ ದೇವಸ್ಥಾನ, ಕಟೀಲು
  • ಸ್ವಾಮಿ ಕೊಡಮಣಿತ್ತಾಯ ದೈವಸ್ಥಾನ, ಶಿಭರೂರು
  • ಬೋಳಾರ: ಹಳೇಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನ.
  • ಬೋಳಾರ: ಶ್ರೀ ಮಂಗಳಾದೇವಿ ದೇವಸ್ಥಾನ.
  • ಬೋಳಾರ: ಶ್ರೀ ಹನುಮಾನ್ ದೇವಸ್ಥಾನ.
  • ಕುದ್ರೋಳಿ: ಶ್ರೀ ಗೋಕರ್ನಾಥೇಶ್ವರ ದೇವಸ್ಥಾನ.
  • ಮುಲ್ಕಿ: ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ.
  • ಮೂಡುಬಿದಿರೆ: ಸಾವಿರ ಕಂಬದ ಬಸದಿ (ತ್ರಿಭುವನ ತಿಲಕ ಚೂಡಾಮಣಿ ಬಸದಿ), ಶ್ರೀ ಹನುಮಂತ ದೇವಸ್ಥಾನ, ಗುರು ಬಸದಿ (ಸಿದ್ಧಾಂತ ಬಸದಿ)
  • ಉರ್ವ : ಶ್ರೀ ಮಾರಿಯಮ್ಮ ದೇವಸ್ಥಾನ
  • ಹಂಪನಕಟ್ಟೆ : ಶ್ರೀ ಶರವು ಮಹಾ ಗಣಪತಿ ದೇವಸ್ಥಾನ
  • ಕದ್ರಿ: ಕದ್ರಿ ಶ್ರೀ ಮಂಜುನಾಥ ದೇವಸ್ಥಾನ.
  • ಮರೋಳಿ : ಇತಿಹಾಸ ಪ್ರಸಿದ್ಧ ಶ್ರೀ ಸೂರ್ಯ ನಾರಾಯಣ ಸ್ವಾಮಿ ದೇವಸ್ಥಾನ
  • ಧರ್ಮಸ್ಥಳ:ಶ್ರೀ ಮಂಜುನಾಥ ಸ್ವಾಮಿ ದೇವಾಸ್ಥಾನ.
  • ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ.
  • ಕುತ್ತಾರ್: ಕೊರಗಜ್ಜ ಆದಿಸ್ಥಳ( ಶ್ರೀ ಪಂಜಂದಾಯ ಬಂಟ ದೈವಸ್ಥಾನ ಭಂಡಾರ ಬೈಲ್).
  • ಕೊಂಡಾಣ: ಕೊಂಡಾಣ ಶ್ರೀ ಪಿಲಿಚಂಡಿ ಬಂಟ ದೈವಸ್ಥಾನ).
  • ಮಂಜನಾಡಿ: ಶ್ರೀ ಮಾಲರಾಯ ದೈವಸ್ಥಾನ).
  • ಮಂಜನಾಡಿ ಅಸಯ್ಯಿದ್ ಇಸ್ಮಾಯಿಲ್ ವಳಿಯುಲ್ಲಾಹಿ ದರ್ಗಾ ಷರೀಫ್
  • ಕರ್ಬಿಂಸ್ತಾನ ದೈವಸ್ಥಾನ.
  • ನೆಲ್ಲಿತೀರ್ಥ:ಶ್ರೀ ಸೋಮನಾಥೇಶ್ವರ ಗುಹಾಲಯ.
  • ಕುಕ್ಕೆ ಸುಬ್ರಹ್ಮಣ್ಯ: ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಕುಕ್ಕೆ.
  • ಶ್ರೀ ಸುಬ್ರಹ್ಮಣ್ಯ: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ .
  • ಪುತ್ತೂರು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ಲ್, ಕೋಟಿ ಚೆನ್ನಯರ ಮೂಲಸ್ಥಾನ.
  • ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ.
  • ಪುತ್ತೂರು ಕರವಡ್ತ ವಲಿಯುಲ್ಲಾಹಿ ದರ್ಗಾ ಶರೀಫ್.
  • ಕಾರ್ಕಳ: ಗೊಮ್ಮಟೇಶ್ವರ ಬೆಟ್ಟ, ಚತುರ್ಮುಖ ಬಸದಿ, ಅನಂತಶಯನ ದೇವಸ್ಥಾನ, ಕಾರ್ಕಳ ಪಡುತಿರುಪತಿ ವೆಂಕಟರಮಣ ದೇವಸ್ಥಾನ.
  • ಕಾರ್ಕಳ: ಅತ್ತೂರು ಸೈಂಟ್ ಲಾರೆನ್ಸ್ ಚರ್ಚ್.
  • ಪುತ್ತಿಗೆ: ಮಹಾತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ.
  • ಕೊಡ್ಯಡ್ಕ:ಹೊಸನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ.
  • ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನ.
  • ಬಪ್ಪನಾಡು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ.
  • ಸೋಮೇಶ್ವರ: ಶ್ರೀ ಸೋಮನಾಥೇಶ್ವರ ದೇವಸ್ಥಾನ.
  • ಕೃಷ್ಣಾಪುರ:ಇಲ್ಲಿ ಅಷ್ಟಮಠಗಳಲ್ಲಿ ಒಂದಾದ ಕೃಷ್ಣಾಪುರ ಮಠದ ಶಾಖೆ ಇಲ್ಲಿ ಇದೆ.
  • ವೇಣೂರು: ವೇಣೂರು ೩೪ ಅಡಿ ಎತ್ತರದ ಏಕಶಿಲಾ ಬಾಹುಬಲಿ
  • ವಿಠಲ ಶ್ರೀ ಸೋಮನಾಥೇಶ್ವರ ದೇವಸ್ಥಾನ, ದರೆಗುಡ್ಡೆ.
  • ಶ್ರೀ ಶಂಭುಲಿಂಗೇಶ್ವರ ದೇವಸ್ಥಾನ, ದರೆಗುಡ್ಡೆ.
  • ಕೊಕ್ಕಡ :ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಕೊಕ್ಕಡ ವಿಷ್ಣುಮೂರ್ತಿ ವೈದ್ಯನಾಥೇಶ್ವರ ದೇವಸ್ಥಾನ
  • ಮಠಂತಬೆಟ್ಟು.ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು,
  • ಪುತ್ತೂರು: ಎಣ್ಮೂರು ಬೈದರ್ಕಳ ಗರಡಿ
  • ಬಂಟ್ವಾಳ : ನವದುರ್ಗಾ ಶ್ರೀ ಲಕ್ಷ್ಮೀ ಜನಾರ್ದನ ಮಠ ಸಾನಿಧ್ಯ ಪಂಬತ್ತಜೆ ಕರೋಪಾಡಿ ಗ್ರಾಮ ಬಂಟ್ವಾಳ ತಾಲೂಕು
  • ಉಳ್ಳಾಲ: ಸಯ್ಯದ್ ಮದನಿ ದರ್ಗಾ ಶರೀಫ್.
  • ಅಡ್ಯಾರ್ ಕಣ್ಣೂರು: ಶೈಖ್ ಯೂಸುಫ್ ಸಿದ್ದೀಕ್ ದರ್ಗಾ ಶರೀಫ್.
  • ಅಜಿಲಮೊಗರು: ಬಾಬಾ ಫಕ್ರುದ್ದೀನ್ ದರ್ಗಾ ಶರೀಫ್.
  • ಕಾಜೂರು: ಹಯಾತುಲ್ ಅವುಲಿಯಾ ದರ್ಗಾ ಶರೀಫ್.
  • ದುಗ್ಗಲಡ್ಕ: ಸಯ್ಯದ್ ಫಕ್ರುದ್ದೀನ್ ದರ್ಗಾ ಶರೀಫ್.
  • ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನ.
  • ಸುಳ್ಯ ಚೆನ್ನಕೇಶವ ದೇವಸ್ಥಾನ
  • ಅಡ್ಕಾರು ಸುಬ್ರಮಣ್ಯ ದೇವಸ್ಥಾನ.
  • ಇರಾ ಶ್ರೀ ಸೋಮನಾಥ ದೇವಸ್ಥಾನ.
  • ನೀಟಿಲಾಕ್ಷ ದೇವಸ್ಥಾನ ( netla.)
  • ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ
  • ವಿಟ್ಲ ಅರಮನೆ
  • ಕೇಪು ಉಳ್ಳಾಲ್ತಿ ದೈವಸ್ತಾನ
  • ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ.

ಇವನ್ನೂ ನೋಡಿ[ಬದಲಾಯಿಸಿ]

ಉಲ್ಲೇಖಗಳು[ಬದಲಾಯಿಸಿ]

  1. http://www.censusindia.gov.in/pca/default.aspx
  2. Sturrock, John (1894). Madras District Manuals, South Canara (in ಇಂಗ್ಲಿಷ್). Chief editor, Karnataka Gazetteer Department.
  3. "Census of India - Language". censusindia.gov.in. Retrieved 22 April 2022.