ಬೆಳ್ಳಾವೆ ವೆಂಕಟನಾರಣಪ್ಪ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ರಾಜಸೇವಾಸಕ್ತ ಬೆಳ್ಳಾವೆ ವೆಂಕಟನಾರಣಪ್ಪನವರು ತುಮಕೂರು ತಾಲೂಕಿನ ಬೆಳ್ಳಾವೆಯಲ್ಲಿ ೧೦-೨-೧೮೭೨ರಲ್ಲಿ ಜನಿಸಿದರು.ಇವರ ತಂದೆ ವೆಂಕಟ ಕೃಷ್ಣಯ್ಯ ಮತ್ತು ತಾಯಿ ಲಕ್ಷ್ಮೀದೇವಿ.

ವಿದ್ಯಾಭ್ಯಾಸ[ಬದಲಾಯಿಸಿ]

ವಿದ್ಯಾಭ್ಯಾಸ ಪ್ರಾರಂಭವಾದುದು ಕೂಲಿ ಮಠದಲ್ಲಿ. ತುಮಕೂರು ಹಾಗು ಬೆಂಗಳೂರುಗಳಲ್ಲಿ ವ್ಯಾಸಂಗ ಮಾಡಿ, ಎಮ್.ಎ. ಪದವಿ ಪಡೆದರು.

ಕೆಲಸ[ಬದಲಾಯಿಸಿ]

ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಭೌತಶಾಸ್ತ್ರದ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು .[೧] ಮುಲಕನಾಡು ಸಂಘದ ಅಧ್ಯಕ್ಷರಾಗಿ, ಅಗ್ರಿಕಲ್ಚರ್ ಅಂಡ್ ಎಕ್ಟಿವ್‌ಮೆಂಟ್ ಯೂನಿಯನ್ ಸದಸ್ಯರಾಗಿ, ಮೈಸೂರು-ತಮಿಳುನಾಡಿನ ಕಾವೇರಿ ನೀರಿನ ಹಂಚಿಕೆಯ ನಿಷ್ಪಕ್ಷಪಾತ ತೀರ್ಪು ಕೊಡಲು ನೇಮಿಸಿದ ಸಮಿತಿಯ ಸದಸ್ಯರಾಗಿ, ಬೆಂಗಳೂರಿನ ಸಿಟಿ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.ಇವರು ೧೯೩೭ರಲ್ಲಿ ಜಮಖಂಡಿಯಲ್ಲಿ ಜರುಗಿದ ೨೨ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ವಿಶೇಷ ಸಾಧನೆ[ಬದಲಾಯಿಸಿ]

ಕನ್ನಡದ ಮೊದಲ ವಿಜ್ಞಾನ ಪತ್ರಿಕೆ “ವಿಜ್ಞಾನ”ವನ್ನು ಹೊರತಂದ ಹೆಗ್ಗಳಿಕೆ ಇವರದು. ಕನ್ನಡ ಸಾಹಿತ್ಯ ಪರಿಷತ್ತಿನ “ಪರಿಷತ್ ಪತ್ರಿಕೆ’’ಯಲ್ಲಿ ಸಹ ಇವರು ಗಣನೀಯ ಸೇವೆ ಸಲ್ಲಿಸಿದ್ದಾರೆ. ಕೆಳಕಂಡ ಪ್ರಾಚೀನ ಕೃತಿಗಳ ಸಂಪಾದನೆಯಲ್ಲಿ ಇವರು ಸಲ್ಲಿಸಿದ ಸೇವೆ ಅಪಾರ.

  • ಪಂಪರಾಮಾಯಣ
  • ಪಂಪಭಾರತ
  • ಚಾವುಂಡರಾಯ ಪುರಾಣ
  • ಸೋಮೇಶ್ವರ ಶತಕ
  • ಕುಸುಮಾವಳಿ ಕಾವ್ಯ
  • ಶಬ್ದಮಣಿ ದರ್ಪಣ

ನಿಧನ[ಬದಲಾಯಿಸಿ]

ಬೆಳ್ಳಾವೆ ವೆಂಕಟನಾರಣಪ್ಪನವರು ೩-೮-೧೯೪೩ರಲ್ಲಿ ನಿಧನರಾದರು.

ಉಲ್ಲೇಖಗಳು[ಬದಲಾಯಿಸಿ]

  1. "ಆರ್ಕೈವ್ ನಕಲು". Archived from the original on 2016-06-10. Retrieved 2021-08-10.