ವಿಷಯಕ್ಕೆ ಹೋಗು

ಮಣಿರತ್ನಂ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಮಣಿರತ್ನಂ
Mani Ratnam at the premiere of Raavan in 2010
ಜನನ
Gopala Ratnam Subramaniam

(1956-06-02) 2 June 1956 (age 69)
ಮದುರೈ, ತಮಿಳು ನಾಡು, India
ವೃತ್ತಿಚಿತ್ರ ನಿರ್ದೇಶಕ
ನಿರ್ಮಾಪಕ
Screenwriter
ಸಕ್ರಿಯರಾಗಿದ್ದ ವರ್ಷಗಳು1983–present
ಸಂಗಾತಿಸುಹಾಸಿನಿ (1988–present)

ಮಣಿರತ್ನಂ (೧೯೫೬-) - ದಕ್ಷಿಣ ಭಾರತದ ಸಿನಿಮಾ ದಿಗ್ಗಜರಲ್ಲಿ ಮಣಿರತ್ನಂ ಪ್ರಮುಖರು. ತಮಿಳು ಸಿನಿಮಾ ರಂಗದಲ್ಲಿ ಕ್ರಾಂತಿ ಮಾಡಿ, ಅದರ ಛಾಪನ್ನು ಭಾರತದಾದ್ಯಂತ ಹರಡಿದರು. ತಮ್ಮ ಚಿತ್ರಗಳಲ್ಲಿ ಛಾಯಾಚಿತ್ರಣಕ್ಕೆ ಮತ್ತು ಬೆಳಕಿಗೆ ಮಹತ್ವ ನೀಡಿ ಅದರಿಂದ ವಿಶಿಷ್ಟ ಶೈಲಿಯನ್ನು ಸೃಷ್ಟಿಸಿರುವ ಇವರು ಹುಟ್ಟಿದ್ದು ತಮಿಳುನಾಡಿನ ಮದರಾಸಿನಲ್ಲಿ.

೧೯೮೩ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ತಮ್ಮ ಮೊದಲ ಚಿತ್ರವನ್ನು ಕನ್ನಡದಲ್ಲಿ 'ಪಲ್ಲವಿ ಅನು ಪಲ್ಲವಿ' ಎಂಬ ಹೆಸರಿನಲ್ಲಿ ಚಿತ್ರಿಸಿದರು.

'ಮೌನರಾಗಂ', 'ನಾಯಗನ್', 'ಅಗ್ನಿ ನಕ್ಷತ್ರಂ', 'ಗೀತಾಂಜಲಿ', 'ಅಂಜಲಿ', 'ರೋಜಾ', 'ತಿರುಡಾ ತಿರುಡಾ', 'ಮುಂಬಯಿ', 'ಇರುವರ್', 'ದಿಲ್ ಸೇ', 'ಅಲೈ ಪಾಯುದೆ', 'ಕಣ್ಣತ್ತಿಲ್ ಮುತ್ತಮಿಟ್ಟಾಳ್' ಮತ್ತು 'ಯುವಾ' ಇವರು ನಿರ್ದೇಶಿಸಿದ ಚಿತ್ರಗಳು.