ಮಯೂರವರ್ಮ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
The Talagunda pillar inscription provides insights into the life of Mayurasharma and the Kadamba lineage

ಕದಂಬ ರಾಜ್ಯವನ್ನು ಕರ್ನಾಟಕದ ಪ್ರಥಮ ರಾಜ್ಯವೆಂದು ವರ್ಣಿಸಲಾಗುತ್ತಿದೆ. ಈ ರಾಜ್ಯದ ಸ್ಥಾಪಕ ಮಯೂರವರ್ಮ ( ಕ್ರಿ.ಶ. ೩೨೫-೩೪೫). ಈತನ ರಾಜಧಾನಿ ಬನವಾಸಿ. ತಾಳಗುಂದ ಗ್ರಾಮದಲ್ಲಿ ಹುಟ್ಟಿ ಬೆಳೆದ ಯುವಕನೊಬ್ಬ ಉನ್ನತ ವ್ಯಾಸಂಗಕ್ಕಾಗಿ ಕಂಚಿ ಪಟ್ಟಣಕ್ಕೆ ತೆರಳಿದ್ದಾಗ ಪಲ್ಲವರಿಂದ ಅವಮಾನಿತ­ನಾಗುತ್ತಾನೆ. ತನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದ ಪಲ್ಲವರ ವಿರುದ್ದ ಖಡ್ಗ ಹಿಡಿದು, ಅವರ ಸೊಲ್ಲಡಗಿಸಿ ಸ್ವಾಭಿಮಾನದ ಸಂಕೇತವಾಗಿ ಕದಂಬ ಸಾಮ್ರಾಜ್ಯ ನಿರ್ಮಾಣ ಮಾಡುತ್ತಾನೆ ಎಂಬುದು ಇತಿಹಾಸ.

ಈತನ ಕುರಿತಾಗಿ ವರನಟ ರಾಜಕುಮಾರ್ ಅವರ ಅಭಿನಯದಲ್ಲಿ "ಮಯೂರ" ಚಲನಚಿತ್ರವು ತಯಾರಾಗಿದೆ .


ಹೊರಗಿನ ಕೊಂಡಿಗಳು[ಬದಲಾಯಿಸಿ]

  1. , ಪ್ರಜಾವಾಣಿಯಲ್ಲಿನ ಬರಹ -[೧]
  2. ಮಯೂರ ಚಲನಚಿತ್ರಕ್ಕೆ ಆಧಾರವಾದ ದೇವುಡು ಅವರ ಕಾದಂಬರಿ ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾ ತಾಣದಲ್ಲಿ ಇಲ್ಲಿದೆ [೨][ಶಾಶ್ವತವಾಗಿ ಮಡಿದ ಕೊಂಡಿ]