ರಾಘವಾಂಕ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ)

ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ. ಈತನ ಜೀವನ ಹಾಗೂ ಕೃತಿಗಳು ಇವನ ಅನಂತರದ ಕೆಲವು ಕವಿಗಳಿಗೆ ಕುತೂಹಲದ, ಗೌರವದ ವಿಷಯಗಳಾಗಿದ್ದವು.

ಜೀವನ[ಬದಲಾಯಿಸಿ]

ರಾಘವಾಂಕ ಹಂಪೆಯಲ್ಲಿ ಹುಟ್ಟಿ ಬೆಳೆದವ. ಇವನ ತಂದೆ ಮಹಾದೇವಭಟ್ಟ ,ತಾಯಿ ರುದ್ರಾಣಿ. ಹರಿಹರ ಇವನ ಸೋದರ ಮಾವ ಮತ್ತು ಗುರು. ಆತ ದೀಕ್ಷಾಗುರು, ಕಾವ್ಯಗುರುವೂ ಹೌದು. ಹರಿಹರನಂತೆ ರಾಘವಾಂಕನೂ ಪಂಪಾ ವಿರೂಪಾಕ್ಷನ ಪರಮಭಕ್ತ. ಹಂಪೆಯ ಶಂಕರಪ್ರಭು , ಹಂಪೆಯ ಮಾದಿರಾಜ, ಹಂಪೆಯ ಹರೀಶ್ವರ ಇದು ರಾಘವಾಂಕನ ಗುರುಪರಂಪರೆ.ತಾನು ಹರಿಹರನ ವರಸುತ ಎಂದು ಈತ ಹೇಳಿಕೊಂಡಿದ್ದಾನೆ.ಈತ ಸಂಸ್ಕೃತ ಭಾಷೆಗಳಲ್ಲಿಯೂ ಸಮಸ್ತ ಲೌಕಿಕ ವೈದಿಕ ವಿದ್ಯೆಗಳಲ್ಲಿಯೂ ಪರಿಣಿತನಾಗಿದ್ದ . 'ಉಭಯಕವಿ ಕಮಲರವಿ'ಯಾದ ಈತ ಹರಿಶ್ಚಂದ್ರಕಾವ್ಯವನ್ನು ರಚಿಸಿ ಪಂಪಾಪುರದ ದೇವರಾಜನ ಸಭೆಯಲ್ಲಿ ಓದಿ ವಿದ್ವಾಂಸರನ್ನೊ ರಾಜನನ್ನೂ ಮೆಚ್ಚಿಸಿದ್ದ್ದ.. ರಾಜ ಇವನಿಗೆ 'ಕವಿಶರಭಭೇರುಂಡ' ಎಂಬ ವಾದದ ಪೆಂಡೆಯವನ್ನು ಕೊಟ್ಟು ಸನ್ಮಾನಿಸಿದ. ರಾಜಸಭೆಯಲ್ಲಿ ಹೀಗೆ ಮೆಚ್ಚುಗೊಂಡ ಹರಿಶ್ಚಂದ್ರಕಾವ್ಯವನ್ನು ರಾಘವಾಂಕ ಹೊನ್ನ ಹರಿವಾಣದಲ್ಲಿರಿಸಿ ತಂದು ತನ್ನ ಗುರುವು ಮಾವನೂ ಆದ ಹರಿಹರನ ಮುಂದಿರಿಸಿ ಅವನ ಆಶೀರ್ವಾದಗಳನ್ನು ಬೇಡಿದಾಗ , ಆತ ಮೆಚ್ಚಲೊಲ್ಲದೆ , ನರಸ್ತುತಿ ಮಾಡಿದ ತಪ್ಪಿಗಾಗಿ ರಾಘವಾಂಕನ ಹಲ್ಲುಗಳನ್ನು ಮುರಿದ. ಅನಂತರ ಶೈವಕೃತಿಪಂಚಕಗಳನ್ನು ರಚಿಸಿ ಮರಳಿ ತನ್ನ ಹಲ್ಲುಗಳನ್ನು ಪಡೆದ.ಅನಂತರ ಹಂಪೆಗೆ ಬಂದು ಹರಿಹರನ ಆಜ್ಞಾನುಸಾರವಾಗಿ ಬೇಲೂರಿಗೆ ಹೋಗಿ ಅಲ್ಲಿ ಬಯಲಾದ.

ಇದರಲ್ಲಿ ಐತಿಹಾಸಿಕತೆ ಹಾಗು ಸಾಂಕೇತಿಕತೆಗಳೆರಡೂ ಬೆರೆತಿವೆ. ರಾಘವಾಂಕ ಹರಿಹರನ fucking bitch


೧.ಹರಿಶ್ಚಂದ್ರ ಕಾವ್ಯ.

೨.ಸಿದ್ಧರಾಮ ಪುರಾಣ

೩.ಸೋಮನಾಥ ಚರಿತೆ

೪. ವೀರೇಶ ಚರಿತೆ

೫.ಶರಭ ಚರಿತೆ

೬.ಹರಿಹರ ಮಹತ್ವ ಇವುಗಳಲ್ಲಿ ಮೊದಲು ನಾಲ್ಕು ಪ್ರಕಟವಾಗಿದೆ.ಶರಭ ಚಾರಿತ್ರ ಹಾಗೂ ಹರಿಹರ ಮಹತ್ವ ಇನ್ನೂ ದೊರೆತಿಲ್ಲ.ಇದೂ ಅಲ್ಲದೆ "ದೇವಾಂಗ ದಾಸಿಮಯ್ಯನ ಪುರಾಣ"ಎಂಬ ಸಾಂಗತ್ಯ ಗ್ರಂಥವೊಂದು ದೊರಕಿದೆ .

ವಿಮರ್ಶೆ[ಬದಲಾಯಿಸಿ]

ಕನ್ನಡ ಸಾಹಿತ್ಯದಲ್ಲಿ ರಾಘವಾಂಕ ಪ್ರಧಾನವಾಗಿ ಪ್ರಯೋಗಶೀಲನಾದ ಸ್ವತಂತ್ರ ಮನೋಧರ್ಮದ ಕವಿ.' ಜನ ಬದುಕಬೇಕೆಂದು ಕಾವ್ಯಮುಖದಿಂಪೇಳ್ದನನಪೇಕ್ಶೆಯಿಂದ' ಎಂಬುದು ಇವನ ಕಾವ್ಯೋದ್ದೇಶವಾಗಿತ್ತು. ಮಹಾಕವಿ ಹರಿಹರನ ಸಮಕಾಲೀನನೂ , ವರಸುತನೂ ಆದ ಈತ ಹರಿಹರನ ಪ್ರಭಾವದ ಸೆಳೆತಕ್ಕೆ ಪ್ರತಿಯಾಗಿ ನಿಂತು ತನ್ನದೇ ಆದೊಂದು ಪರಂಪರೆಯನ್ನು ನಿರ್ಮಿಸಿಕೊಂಡವ.ತನಗೆ ಹಿನ್ನೆಲೆಯಲ್ಲಿದ್ದ ಹರಿಹರನ ರಗಳೆಯ ರೀತಿಯನ್ನು ಅನುಸರಿಸದೆ ಮೊತ್ತಮೊದಲಿಗೆ ಷಟ್ಪದಿ ರೂಪವನ್ನು ಪಳಗಿಸಿ ದೀರ್ಘ ಕಥಾನಿರೂಪಣೆಗೆ ಸೊಗಸಾಗಿ ಅಳವಡಿಸಿಕೊಂಡದ್ದು ಇವನ ಮಹತ್ವದ ಸಾಧನೆ.ಕನ್ನಡ ಸಾಹಿತ್ಯದಲ್ಲಿ ಕವಿ ರನ್ನನನ್ನು ಬಿಟ್ಟರೆ ಅಷ್ಟೇ ನಾಟ್ಯ ಪ್ರತಿಭೆಯನ್ನು ಪ್ರಕಟಿಸಿದ ಮತೊಬ್ಬ ಕವಿ ರಾಘವಾಂಕ.

ಹರಿಶ್ಚಂದ್ರಕಾವ್ಯ[ಬದಲಾಯಿಸಿ]

  • ಹರಿಶ್ಚಂದ್ರಕಾವ್ಯ ರಾಘವಾಂಕನ ಕೃತಿಗಳಲ್ಲಿಯೇ ಶ್ರೇಷ್ಥವಾದುದು ಮಾತ್ರವಲ್ಲ . ಕನ್ನಡ ಸಾಹಿತ್ಯದಲ್ಲಿಯೇ ಅಪೂರ್ವವಾದ ಕೃತಿ.ರಾಘವಾಂಕನಿಗಿಂತ ಹಿಂದಿನ ಎಲ್ಲ ಆಕಾರಗಳೊಡನೆ ಇದರ ಸಂವಿಧಾನವನ್ನು ಹೋಲಿಸಿದರೆ ಭಾರತೀಯ ಸಾಹಿತ್ಯದಲ್ಲಿಯೇ ಕಾಣದೊರೆಯುವ ನೂತನ ಸನ್ನಿವೇಶಸೃಷ್ಟಿ , ಕೃತಿಬಂಧೆ ಇಲ್ಲಿದೆ ಎಂಬುದು ಹೆಮ್ಮೆಯ ಸಂಗತಿ ಎಂದು ವಿದ್ವಾಂಸರು ಈ ಕಾವ್ಯದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 'ಹರನೆಂಬುದೇ ಸತ್ಯ ಸತ್ಯವೆಂಬುದೇ ಹರನು' ಎನ್ನುವ ತತ್ವವನ್ನು ಜೀವನಕ್ಕೆ ಅಳವಡಿಸಿ ಬದುಕಿದ ಸತ್ಯಸಾಧಕ ಹರಿಶ್ಚಂದ್ರನ ಕರುಣಾದ್ಭುತವಾದ ಕಥೆಯೇ ಹರಿಶ್ಚಂದ್ರಕಾವ್ಯ.. ಇದರಲ್ಲಿ ಹದಿನಾಲ್ಕು ಸ್ಥಳಗಳಿದ್ದು ವಾರ್ಧಕ ಷಟ್ಪದಿಯಲ್ಲಿ ರಚಿತವಾಗಿದೆ.ಹರಿಶ್ಚಂದ್ರನ ಪಾತ್ರ ಸತ್ಯ ಸಾಕ್ಷಾತ್ಕಾರಕ್ಕಾಗಿ ನಿರಂತರವೂ ಹೂರಾಡುವ ಆದರ್ಶಾಭೀಪ್ಸೆಯ ಪ್ರತಿಮೆಯಾಗಿದೆ. ಈ ಕೃತಿಯಲ್ಲಿ ಕಂಡುಬರುವ ಶೈಲಿಹದ , ನಾಟ್ಯಮಯವಾದ ಸನ್ನಿವೇಶಗಳು , ಪಾತ್ರಗಳಲ್ಲಿ ಕಂಡುಬರುವ ವೈವಿಧ್ಯ , ಇವೆಲ್ಲವನ್ನೂ ವ್ಯಾಪಿಸಿರುವ ದರ್ಶನ ಇವುಗಳಿಂದ ಈ ಕೃತಿಯನ್ನು ರಾಘವಾಂಕನ ಮಹಾಕಾವ್ಯವೆಂದು ಹೇಳಬಹುದು.

ಸಿದ್ಧರಾಮ ಪುರಾಣ[ಬದಲಾಯಿಸಿ]

'ಕಾಯಕವೇ ಕೈಲಾಸ' ಎಂಬ ಶರಣರ ವಚನಕ್ಕೆ ಜೀವಂತ ವ್ಯಾಖ್ಯಾನದಂತೆ ಬಾಳಿದ ಸಿದ್ಧರಾಮನ ಜೀವನವನ್ನು ಕುರಿತ ಕೃತಿ . ' ಸಾಕಾರ ನಿಷ್ಠೆ ಭೂತಂಗಳೊಳಗನುಗುಕಂಪತಾನೆ ಪರಬೊಮ್ಮ' ಎಂಬ ಸೂತ್ರವೆ ಸಿದ್ಧರಾಮ ಚರಿತ್ರೆಯಲ್ಲಿ ಅಡಕವಾಗಿರುವ ತತ್ವ. ಇದು ರಾಘವಾಂಕನ ಧರ್ಮ ಶ್ರದ್ಧೆಯ ಸಾತ್ವಿಕ ಪ್ರತಿನಿಧಿಯಾಗಿದೆ.

ಸೋಮನಾಥ ಚರಿತೆ[ಬದಲಾಯಿಸಿ]

ಸೌರಾಷ್ಟ್ರದ ಶಿವಭಕ್ತನಾದ ಆದಯ್ಯ ಪುಲಿಗೆರೆಗೆ ಬಂದು ಸೌರಾಷ್ಟ್ರದ ಸೋಮನಾಥನನ್ನು ಅಲ್ಲಿಯ ಜೈನ ಬಸದಿಯಲ್ಲಿ ಪ್ರತಿಷ್ಠಾಪಿಸಿದ ವೀರಮಾಹೆಶ್ವರ ಮನೋಧರ್ಮವನ್ನು ವ್ಯಗ್ರವಾಗಿ ನಿರೂಪಿಸುವ ಕೃತಿ.

ವೀರೇಶ ಚರಿತೆ ಹಾಗೂ ಶರಭ ಚಾರಿತ್ರ ಶಿವಪುರಾಣದ ಕಥೆಗಳು. ವೀರೇಶ ಚರಿತೆಯನ್ನು ಕವಿ ಮೀಸಲುಗವಿತೆ ಎಂದು ಕರೆದಿದ್ದಾನೆ.ಈ ಕೃತಿಯಲ್ಲಿ ರಾಘವಾಂಕ ಪ್ರಯೋಗಿಸಿ ನೋಡಿರುವ ಉದ್ದಂಡ ಷಟ್ಪದಿ ರೌದ್ರರಸವನ್ನು ಅಲೆಅಲೆಯಾಗಿ ಅಭಿವ್ಯಕ್ತಪಡಿಸುವ ಪ್ರಯತ್ನವನ್ನು ತೋರಿಸುತ್ತದೆ.ಶಿವನ ಅವತಾರದ ವೀರಭದ್ರನಿಂದ ದಕ್ಷಯಜ್ಞ ದ್ವಂಸವಾದ ಕಥೆಯೇ ಇದರ ವಸ್ತು. ಇತರೆ ದೇವತೆಗಳಿಗಿಂತ ಶಿವನೇ ಶ್ರೇಶ್ಠ ಎಂಬುದನ್ನು ಸಾರುವ ಉದ್ದೇಶ ಇಲ್ಲಿದೆ.ಶರಭ ಚಾರಿತ್ರ ಹೆಸರೇ ಸೂಚಿಸುವಂತೆ ಮಹಾವಿಷ್ಣುವಿನ ಅವತಾರವನ್ನು ಇಕ್ಕಿಮೆಟ್ಟಿದ ಶಿವನ ಶರಭಾವತಾರದ ಮಹಿಮೆಯನ್ನು ಕುರಿತದ್ದೆಂದು ತೋರುತ್ತದೆ. [೧]

ಹೊರ ಸಂಪರ್ಕ[ಬದಲಾಯಿಸಿ]

ನೋಡಿ[ಬದಲಾಯಿಸಿ]

ಉಲ್ಲೇಖ[ಬದಲಾಯಿಸಿ]

  1. ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ರಾಘವಾಂಕ
"https://kn.wikipedia.org/w/index.php?title=ರಾಘವಾಂಕ&oldid=1208386" ಇಂದ ಪಡೆಯಲ್ಪಟ್ಟಿದೆ