ರಾಜಾರಾಮ ಗಿರಿಧರಲಾಲ ದುಬೆ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ರಾಜಾರಾಮ ಗಿರಿಧರಲಾಲ ದುಬೆ
ಜನನ30ನೇ ಜೂನ್ 1913
ಸೊಲ್ಲಾಪುರ, ಮಹಾರಾಷ್ಟ್ರ
ವೃತ್ತಿರಾಜಕೀಯ
ರಾಷ್ಟ್ರೀಯತೆಭಾರತೀಯ

ರಾಜಾರಾಮ ಗಿರಿಧರಲಾಲ ದುಬೆಯವರು ಸ್ವಾತಂತ್ರ್ಯ ಹೋರಾಟಗಾರರು, ಮಾಜಿ ಸಂಸದರು ಹಾಗೂ ರಾಜಕೀಯ ಧುರೀಣರು.

ಜನನ[ಬದಲಾಯಿಸಿ]

ದುಬೆಯವರು 30ನೇ ಜೂನ್ 1913ರಂದು ಮಹಾರಾಷ್ಟ್ರಸೊಲ್ಲಾಪುರ ಜನಿಸಿದರು.

ಹಿನ್ನಲೆ[ಬದಲಾಯಿಸಿ]

ರಾಜಾರಾಮ ಗಿರಿಧರಲಾಲ ದುಬೆಯವರು ಉತ್ತರ ಪ್ರದೇಶ ರಾಜ್ಯದ ಮೊಲದವರು.

ನಿರ್ವಹಿಸಿದ ಖಾತೆಗಳು[ಬದಲಾಯಿಸಿ]

  • 1951ರಲ್ಲಿ 1ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದರು.
  • 1951ರಲ್ಲಿ ಜವಾಹರಲಾಲ್ ನೆಹರುರವರ ಸಂಸದೀಯ ಕಾರ್ಯಾದರ್ಶಿಯಾಗಿದ್ದರು.
  • 1957ರಲ್ಲಿ 2ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸೋಲು.
  • 1962ರಲ್ಲಿ 3ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಯ್ಕೆಯಾಗಿದ್ದರು.
  • 1967ರಲ್ಲಿ 4ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸೋಲು.
  • 1939-41ರಲ್ಲಿ ವಿಜಯಪುರ ನಗರ ಸಭೆಯ ಅಧ್ಯಕ್ಷರಾಗಿದ್ದರು.
  • 1944-48 ಹಾಗೂ 1957-1959ರಲ್ಲಿ ವಿಜಯಪುರ ಜಿಲ್ಲಾ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾಗಿದ್ದರು.
  • 1953-57ರಲ್ಲಿ ಸಂಸತ್ತಿನ ಉತ್ಪಾದನೆ ಸಚಿವಾಲಯದ ಕಾರ್ಯದರ್ಶಿಯಾಗಿದ್ದರು.
  • 1951-1953ರಲ್ಲಿ ಕಾರ್ಮಿಕ ಸಹಕಾರ ಸಮಿತಿಯ ಸದಸ್ಯರಾಗಿದ್ದರು.
  • 1950-1952ರಲ್ಲಿ ಜಿಲ್ಲಾ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾಗಿದ್ದರು.
  • 1960 ರಿಂದ ಮೈಸೂರು ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದರು.[೧]
  • 1968-1970ವರೆಗೆ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿದ್ದರು.
  • ಎಐಸಿಸಿ ಹಾಗೂ ಕೆಪಿಸಿಸಿ ಸದಸ್ಯರಾಗಿದ್ದರು.

ಉಲ್ಲೇಖಗಳು[ಬದಲಾಯಿಸಿ]

  1. "ಆರ್ಕೈವ್ ನಕಲು". Archived from the original on 2019-04-01. Retrieved 2019-04-01.