ರಾಮಚಂದ್ರ ಕುಲಕರ್ಣಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

"ರಾಕು" ಎಂದೇ ಪ್ರಸಿದ್ಧರಾದ ರಾಮಚಂದ್ರ ವೆಂಕಟೇಶ ಕುಲಕರ್ಣಿಯವರು ಮೂಲತ: ಗದಗ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದವರು. ಹಾವೇರಿಯಲ್ಲಿಯ ಮುನಸಿಪಲ್ ಹೈಸ್ಕೂಲಿನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದರು.


ರಾಕು ಅವರು ದೇವಕನ್ಯೆ, ಗಾಳಿಪಟ, ಶೇಷ ವಿಶೇಷ ಮೊದಲಾದ ಲಲಿತ ಪ್ರಬಂಧಗಳ ಸಂಕಲನಗಳನ್ನು ಹೊರತಂದಿದ್ದಾರೆ.


ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ನಿಘಂಟು ರಚನೆಯ ಸಂಪಾದಕ ಮಂಡಳಿಯಲ್ಲಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.


ರಾಕು ೨೩ ಡಿಸೆಂಬರ ೨೦೦೬ರಂದು ನಿಧನರಾದರು.