ರಾಮನಗರ
ರಾಮನಗರ
ರೇಷ್ಮೆ ನಗರ | |
|---|---|
ನಗರ | |
| English transcription(s) | |
ರಾಮನಗರದ ಪ್ರದೇಶವೊಂದರ ಹಕ್ಕಿನೋಟ | |
| ಒಕ್ಕೂಟ | |
| ನಾಡು/ದೇಶ | ಕರ್ನಾಟಕ |
| ಜಿಲ್ಲೆ | ಬೆಂಗಳೂರು ದಕ್ಷಿಣ |
| Elevation | ೭೪೭ m (೨೪೫೧ ft) |
| Population (2011) | |
• Total | ೯೫,೧೬೭[೧] |
| Languages | |
| • Official | ಕನ್ನಡ |
| Time zone | UTC+5:30 (IST) |
| Website | www.ramanagaracity.mrc.gov.in |
ರಾಮನಗರ : ಕರ್ನಾಟಕದ ಒಂದು ನಗರ, ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರ, ಕಸಬಾ ಹೋಬಳಿಯ ಕೇಂದ್ರವಾಗಿದೆ. ರಾಮನಗರ ಜಿಲ್ಲೆಯ ಹೆಸರುನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಬೆಂಗಳೂರು ಜಿಲ್ಲೆಯ ಭಾಗವಾಗಿದ್ದು 1986ರಲ್ಲಿ ಬೆಂಗಳೂರು ಗ್ರಾಮಾಂತರ ಪ್ರತ್ಯೇಕ ಜಿಲ್ಲೆಯಾಗಿ ರಚನೆಯಾಯಿತು. ನಂತರ 2007ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿದ್ದ ರಾಮನಗರ ಪ್ರತ್ಯೇಕ ಜಿಲ್ಲೆಯಾಯಿತು. ರಾಮನಗರವು ರೇಷ್ಮೆ ನಾಡು, ಕ್ಷೀರ ನಗರ, ಸಪ್ತಗಿರಿ ನಾಡು ಎಂದು ಖ್ಯಾತಿಗಳಿಸಿದೆ. ರಾಮನಗರ ತಾಲೂಕು ವಿಸ್ತೀರ್ಣ 630 ಚ.ಕಿ.ಮೀ ಹೊಂದಿದೆ.
ರಾಮನಗರ ನಗರ ಪ್ರದೇಶ ವ್ಯಾಪ್ತಿಯಲ್ಲಿ ರಾಮನಗರ, ಕೊತ್ತಿಪುರ, ಸಿಡ್ಲುಕಲ್ಲು, ಚನ್ನಮಾನಹಳ್ಳಿ, ಅರ್ಚಕರಹಳ್ಳಿ, ಐಜೂರು, ರಂಗರಾಯರ ದೊಡ್ಡಿ, ಬೋಳಪ್ಪನಹಳ್ಳಿ, ಚನ್ನೇನಹಳ್ಳಿ, ಕೇಶವಪುರ, ಚಾಮುಂಡಿಪುರ, ಜಿಗೇನಹಳ್ಳಿ, ರಾಯರದೊಡ್ಡಿ, ಕೆಂಪೇಗೌಡನ ದೊಡ್ಡಿ, ಅಂಚೆಕೆಂಪಯ್ಯನ ದೊಡ್ಡಿ, ದೇವರೆಸೆಗೌಡನ ದೊಡ್ಡಿ, ವಡೇರಹಳ್ಳಿ, ರಾಮಗಿರಿ, ರಾಮದುರ್ಗ ಎಂಬ 20 ಗ್ರಾಮಗಳನ್ನು ಕೂಡಿ ರಾಮನಗರ ನಗರವಾಗಿದೆ.
ರಾಮನಗರದ ವಿಶೇಷತೆ
[ಬದಲಾಯಿಸಿ]- ಕರ್ನಾಟಕಕ್ಕೆ ಮೂವರು ಮುಖ್ಯಮಂತ್ರಿಗಳನ್ನು ನೀಡಿದ ಜಿಲ್ಲೆಯಾಗಿದೆ. ಅವರೆಂದರೆ ವಿಧಾನ ಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ, ಮೊಟ್ಟ ಮೊದಲ ಕನ್ನಡದ ಪ್ರಧಾನಿಯೆಂಬ ಹೆಗ್ಗಳಿಕೆಗೆ ಪಾತ್ರವಾದ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪುತ್ರ ಹೆಚ್.ಡಿ.ಕುಮಾರಸ್ವಾಮಿ.
- ರಾಮನಗರ ಜಿಲ್ಲೆಯ ಪ್ರಮುಖ ಸ್ಥಳಗಳೆಂದರೆ ಜಾನಪದ ಲೋಕ , ಕೆಂಗಲ್, ದೊಡ್ಡ ಮಳೂರು , ರಂಗರಾಯರದೊಡ್ಡಿ ಕೆರೆ.
- ರಾಮನಗರ ಮಿನಿ ವಿಧಾನ ಸೌಧ ವನ್ನು ಹೊಂದಿದೆ. ಹೆಚ್ಚಾಗಿ ಬೆಟ್ಟ ಗುಡ್ಡಗಳಿಂದ ಕೂಡಿದ ಪ್ರದೇಶವಾಗಿದೆ. ರಾಮನಗರ - ಇದು ಹಿಂದಿಯ 'ಶೋಲೆ' ಖ್ಯಾತಿಯ ರೇಷ್ಮೆ ಸೀಮೆ! ರೇಷ್ಮೆ ನಗರ ರಾಮನಗರ ಬೆಂಗಳೂರಿನಿಂದ ೪೭ ಕಿಲೋಮೀಟರು ದೂರದಲಿದ್ದು, ನೈರುತ್ಯ ದಿಕ್ಕಿನಲ್ಲಿದೆ.
- ಇದು ರಾಮನಗರ ಜಿಲ್ಲೆಯ ಜಿಲ್ಲಾಕೇಂದ್ರ. ಕರ್ನಾಟಕ ರಾಜ್ಯದ ಇತರೆ ಭಾಗಗಳಂತೆ ಇದೂ ಕೂಡ ಗಂಗ, ಚೋಳ, ಹೊಯ್ಸಳ ಹಾಗು ಮೈಸೂರು ರಾಜರ ಆಳ್ವಿಕೆಗೆ ಒಳಪಟ್ಟಿತ್ತು ಆದರೆ ಈ ಪಟ್ಟಣ ಏಕಾಏಕಿ ಪ್ರಸಿದ್ದಿಗೆ ಬಂದದ್ದು ಸುಮಾರು 70ರ ದಶಕದಲ್ಲಿ ಇಲ್ಲಿ ನಡೆದ 'ಶೋಲೆ' ಚಲನ ಚಿತ್ರದ ಚಿತ್ರೀಕರಣದಿಂದ.
- ರಾಮನಗರ ಜಿಲ್ಲೆಯು ಪ್ರಮುಖ ಧಾರ್ಮಿಕ ನಾಯಕರುಗಳಾದ ಆದಿ ಚುಂಚನಗಿರಿ ಕ್ಷೇತ್ರದ ಶ್ರೀ ಬಾಲಗಂಗಾಧರನಾಥ ಸ್ವಾಮಿಗಳು ಮತ್ತು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ ತವರು ಜಿಲ್ಲೆ, ರಾಮನಗರ ತಾಲೂಕಿನ ಬಿಡದಿಯ ಬಾನಂದೂರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ತವರಾದರೆ ಮಾಗಡಿ ತಾಲೂಕಿನ ವೀರಾಪುರ ಶ್ರೀ ಶಿವಕುಮಾರ ಸ್ವಾಮೀಜಿಗಳ ತವರು
ರಾಮನಗರದ ಬೆಟ್ಟ ಪ್ರದೇಶ
[ಬದಲಾಯಿಸಿ]- ರಾಮನಗರವು, ಶಿವರಾಮಗಿರಿ, ಸೋಮಗಿರಿ, ಕೃಷ್ಣಗಿರಿ, ಯತಿರಾಜಗಿರಿ, ರೇವಣ ಸಿದ್ದೇಶ್ವರ, ಸಿಡಿಲಕಲ್ಲು ಹಾಗು ಜಲ ಸಿದ್ದೇಶ್ವರ ಎಂಬ 7 ಭವ್ಯ ಬೆಟ್ಟಗಳಿಂದ ಸುತ್ತುವರಿದಿದೆ. ಇಲ್ಲಿ ರೇಷ್ಮೆಯನ್ನು ಹೆಚ್ಚಾಗಿ ಬೆಳೆಯುವುದರಿಂದ ಈ ಊರು ರೇಷ್ಮೆ ನಗರವೆಂದೂ ಹೆಸರುವಾಸಿ. ವಿಶ್ವ ವಿಖ್ಯಾತ ಮೈಸೂರು ರೇಷ್ಮೆ ಸೀರೆಗಳನ್ನು ರಾಮನಗರದ ರೇಷ್ಮೆಯನ್ನು ಬಳಸಿಯೇ ನೇಯಲಾಗುತ್ತದೆ.
- ಪ್ರಕೃತಿ ಪ್ರೇಮಿಗಳಿಗೆ ಖುಷಿ ಕೊಡುವ ವಿಚಾರವೆಂದರೆ ಇಲ್ಲಿರುವ ಬೆಟ್ಟಗಳು ಈಗ ಅಳಿವಿನಂಚಿನಲ್ಲಿರುವ ಹಳದಿ ಕುತ್ತಿಗೆಯ ಬುಲ್ ಬುಲ್ ಹಾಗು ಉದ್ದ ಕೊಕ್ಕಿನ ರಣಹದ್ದುಗಳಿಗೆ ಮನೆಯಾಗಿರುವುದು. ಇಲ್ಲೇ ಜಾನಪದ ಲೋಕವಿದ್ದು ಕರ್ನಾಟಕದ ಜಾನಪದ ಕಲೆ ಹಾಗು ಸಂಸೃತಿಗೆ ಸಂಬಂದ್ದಪಟ್ಟ ಸಣ್ಣ ವಸ್ತು ಸಂಗ್ರಹಾಲಯವನ್ನು ಇಲ್ಲಿ ನೋಡಬಹುದು.
- ಈ ಪ್ರದೇಶ ಬೆಟ್ಟಗಳಿಂದ ಸುತ್ತುವರಿದಿದ್ದು ಪರ್ವತಾರೋಹಣ ಪ್ರಿಯರಿಗೆ ಹೇಳಿ ಮಾಡಿಸಿದ ತಾಣವಾಗಿದೆ ಹಾಗೂ ಇದು ಈ ಪ್ರದೇಶದ ಪ್ರವಾಸೋದ್ಯಮಕ್ಕೂ ಆಸರೆಯಾಗಿದೆ. ರಾಮನಗರ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವುದರಿಂದ ಇಲ್ಲಿಗೆ ಈ ಎರಡೂ ನಗರಗಳಿಂದ ರಸ್ತೆಯ ಮೂಲಕ ಸುಲಭವಾಗಿ ತಲುಪಬಹುದು.
ರಾಮನಗರ ಜಿಲ್ಲೆಯ ಕಲೆ
[ಬದಲಾಯಿಸಿ]ರಾಮನಗರ ಜಿಲ್ಲೆಯು ವಿಶೇಷವಾಗಿ ಜಾನಪದ ಕಲೆಗೆ ಹೆಸರು ವಾಸಿಯಾದ ಜಿಲ್ಲೆ. ಇಲ್ಲಿ ಅನೇಕ ಪ್ರಕಾರದ ಜಾನಪದ ಕಲೆಗಳು ಅನಾವರಣಗೊಂಡಿವೆ. ಅದಕ್ಕಾಗಿಯೇ ವಿಶೇಷವಾಗಿ ಜಾನಪದ ಲೋಕವನ್ನು ಕಾಣಬಹುದು. ಜಾನಪದ ಕಲೆಗಳ ಸಂಗ್ರಹ ಇಲ್ಲಿದೆ. ಜಾನಪದ ಗಾಯನದಲ್ಲಿ ಬಾನಂದೂರು ಕೆಂಪಯ್ಯನವರು ಹೆಸರುವಾಸಿಯಾಗಿದ್ದಾರೆ. ಅನೇಕ ಹಳ್ಳಿಗಳಲ್ಲಿ ತಾಸು ಗಟ್ಟಲೆಯಲ್ಲದೆ, ದಿನಗಟ್ಟಲೆ ವಿವಿಧ ಕೆಲಸ ಕಾರ್ಯಗಳು, ಸಂಪ್ರದಾಯ ಆಚರಣೆಯ ಜಾನಪದ ವಿವಿಧ ಪ್ರಕಾರದ ಗೀತೆಗಳನ್ನು ಹಾಡುವ ಹಿರಿಯ ತಲೆಗಳು ಜಿಲ್ಲೆಯಲ್ಲಿವೆ. ಹಾಗೆಯೇ ಚನ್ನಪಟ್ಟಣದ ಗೊಂಬೆಗಳಿಗೆ ಪ್ರಸಿದ್ದಿಯಾಗಿದೆ.
ಶಾಸ್ತ್ರೀಯ ಸಂಗೀತ
[ಬದಲಾಯಿಸಿ]ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸಾತನೂರಿನ ಗ್ರಾಮದಲ್ಲಿ ಪುಂಡರೀಕ ವಿಠಲನೆಂಬ ಶ್ರೇಷ್ಠ ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕನಿದ್ದದ್ದು ತಿಳಿದುಬರುತ್ತದೆ. ಈತ ಅಕ್ಬರನ ಆಸ್ಥಾನದಲ್ಲಿ, ತಾನ್ ಸೇನನ ಸಮಕಾಲೀನನಾಗಿದ್ದನಂತೆ. ಈತ ಅಕ್ಬರನ ಬಿರುದಿನೊಂದಿಗೆ ಗೌರವಿಸಲ್ಪಟ್ಟವನೆಂದು ಹೇಳಲಾಗಿದೆ. ಇವನು ಆಗಿನ ಕಾಲಕ್ಕೆ ದಕ್ಷಿಣ ಭಾರತದ ಖ್ಯಾತ ಹಿಂದೂಸ್ಥಾನಿ ಗಾಯಕನಾಗಿದ್ದನೆಂದು ಹೇಳಲಾಗಿದೆ. ರಾಮನಗರದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಡುವ ವಿದ್ವಾನ್ ನಾರಾಯಣ ಅಯ್ಯಂಗಾರ್ ಅವರ ಹೆಸರು ಕೇಳಿಬರುತ್ತದೆ.[ಸೂಕ್ತ ಉಲ್ಲೇಖನ ಬೇಕು]
-
ರಾಮನಗರದ ಮಾಯಗಾನಹಳ್ಳಿಯ ಬಳಿಯ ಒಂದು ಸುಂದರ ತೋಟದಲ್ಲಿ ತೆಗೆದ ಚಿತ್ರ
-
ರಾಮನಗರ ರೇಷ್ಮೆ ಗೂಡಿನ ಮಾರುಕಟ್ಟೆ
-
ರಾಮದೇವರ ಬೆಟ್ಟದಿಂದ ರಾಮನಗರದ ನೋಟ
-
ಕ್ಲೋಸ್ಪೆಟ್ ಗ್ರಾನೈಟ್ ಗಳ ಹರಡಿರುವಿಕೆ
-
ಪ್ರಣಯಾಚರಣೆಯಲ್ಲಿರುವ ಉದ್ದ ಕೊಕ್ಕಿನ ರಣಹದ್ದುಗಳು
-
ಉದ್ದ ಕೊಕ್ಕಿನ ರಣಹದ್ದು
-
ಈಜಿಪ್ಟಿನ ರಣಹದ್ದು
ಹೆಚ್ಚಿನ ಮಾಹಿತಿ
[ಬದಲಾಯಿಸಿ]- ರಾಮನಗರದ ಇತಿಹಾಸ:ರಾಮನಗರದ ಇತಿಹಾಸ -- ಸಂಪತ್. ಎಸ್;d: 06 ಜನವರಿ 2020,
ಉಲ್ಲೇಖಗಳು
[ಬದಲಾಯಿಸಿ]- Pages with script errors
- Pages with non-numeric formatnum arguments
- Articles with short description
- Short description is different from Wikidata
- Pages using infobox settlement with bad settlement type
- Pages using infobox settlement with infobox mapframe errors
- Pages using infobox settlement with no map
- Pages using infobox settlement with no coordinates
- Articles with unsourced statements
- ಇಂಡಿ ತಾಲ್ಲೂಕಿನ ಹಳ್ಳಿಗಳು
- ಕರ್ನಾಟಕದ ಜಿಲ್ಲೆಗಳು
- ರಾಮನಗರ ಜಿಲ್ಲೆಯ ತಾಲೂಕುಗಳು
- ರಾಮನಗರ ಜಿಲ್ಲೆ