ವಿಷಯಕ್ಕೆ ಹೋಗು

ಲಾರ್ಡ್ ಕಾರ್ನ್‍ವಾಲಿಸ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
His Excellency General The Most Honourable
The Marquess Cornwallis
KG
The Marquess Cornwallis
Portrait by John Singleton Copley, circa 1795

ಅಧಿಕಾರ ಅವಧಿ
12 September 1786 – 28 October 1793
Monarch George III
ಪೂರ್ವಾಧಿಕಾರಿ Sir John Macpherson, Bt
As Acting Governor-General
ಉತ್ತರಾಧಿಕಾರಿ Sir John Shore
ಅಧಿಕಾರ ಅವಧಿ
30 July 1805 – 5 October 1805
Monarch George III
ಪೂರ್ವಾಧಿಕಾರಿ The Marquess Wellesley
ಉತ್ತರಾಧಿಕಾರಿ Sir George Barlow, Bt
As Acting Governor-General

ಅಧಿಕಾರ ಅವಧಿ
14 June 1798 – 27 April 1801
Monarch George III
ಪ್ರಧಾನ ಮಂತ್ರಿ William Pitt the Younger
ಪೂರ್ವಾಧಿಕಾರಿ The Earl Camden
ಉತ್ತರಾಧಿಕಾರಿ The Earl Hardwicke
ವೈಯಕ್ತಿಕ ಮಾಹಿತಿ
ಜನನ Charles Edward Cornwallis V
(೧೭೩೮-೧೨-೩೧)೩೧ ಡಿಸೆಂಬರ್ ೧೭೩೮
Grosvenor Square
Mayfair, ಲಂಡನ್, England
ಮರಣ 5 October 1805(1805-10-05) (aged 66)
Gauspur, Ghazipur
Kingdom of Kashi
ರಾಷ್ಟ್ರೀಯತೆ British
ಸಂಗಾತಿ(ಗಳು) Jemima Tullekin Jones
ಮಕ್ಕಳು Mary, Charles
ಅಭ್ಯಸಿಸಿದ ವಿದ್ಯಾಪೀಠ Eton College
Clare College, Cambridge
ವೃತ್ತಿ Military officer, Colonial administrator
ಧರ್ಮ Church of England
ಸಹಿ Signature of the Marquess Cornwallis
ಮಿಲಿಟರಿ ಸೇವೆ
Allegiance  Kingdom of Great Britain (1757–1801)
 United Kingdom (1801–1805)
ಸೇವೆ/ಶಾಖೆ  British Army
British East India Company
ವರ್ಷಗಳ ಸೇವೆ 1757–1805
Rank General
Commands India
Ireland
Battles/wars Seven Years' War
American War of Independence
Third Mysore War
Irish Rebellion of 1798
ಪ್ರಶಸ್ತಿಗಳು Knight Companion of The Most Noble Order of the Garter


ಲಾರ್ಡ್ ಕಾರ್ನ್‍ವಾಲಿಸ್ (೩೧ ಡಿಸೆಂಬರ್ ೧೭೩೮ – ೫ ಒಕ್ಟೋಬರ್ ೧೮೦೫),ಪ್ರಥಮ ಮಾಕ್ರ್ವಿಸ್ ಬ್ರಿಟಿಷ್ ದಂಡನಾಯಕ ಮತ್ತು ಆಡಳಿತಗಾರ. ೧೭೮೬ ರಿಂದ ೧೭೯೩ರ ವರೆಗೆ ಭಾರತದ ಗವರ್ನರ್-ಜನರಲ್ ಆಗಿದ್ದ.

ಬಾಲ್ಯ ಮತ್ತು ಜೀವನ

[ಬದಲಾಯಿಸಿ]

ಲಂಡನಿನಲ್ಲಿ ೧೭೩೮ರ ಡಿಸೆಂಬರ್ ೩೧ರಂದು ಪ್ರಥಮ ಅರ್ಲ್ ಕಾರ್ನ್‍ವಾಲಿಸನ ಹಿರಿಯ ಮಗನಾಗಿ ಜನಿಸಿದ. ೧೭೫೭ರಲ್ಲಿ ಸೈನ್ಯವನ್ನು ಸೇರಿ ಜರ್ಮನಿಯಲ್ಲಿ ಏಳು ವರ್ಷಗಳ ಯುದ್ಧದಲ್ಲಿ ಭಾಗವಹಿಸಿದ. ೧೭೬೫ರ ಅನಂತರ ಕೆಲಕಾಲ ರಾಜಕಾರಣಕ್ಕಿಳಿದು ವಸಾಹತುಗಳ ತೆರಿಗೆಯ ನೀತಿಯನ್ನು ವಿರೋಧಿಸುತ್ತಿದ್ದ.

ಅಮೆರಿಕದಲ್ಲಿ

[ಬದಲಾಯಿಸಿ]
Surrender of Lord Cornwallis by John Trumbull
House where Cornwallis completed the surrender to George Washington, located near Yorktown, Virginia

೧೭೭೬ರಲ್ಲಿ ಮೇಜರ್ ಜನರಲ್ ಹುದ್ದೆಯನ್ನು ವಹಿಸಿಕೊಂಡು ಅಮೆರಿಕಕ್ಕೆ ತೆರಳಿದ. ಮರುವರ್ಷವೇ ಅಲ್ಲಿಯ ಸೈನ್ಯದ ಉಪಮುಖ್ಯಾಧಿಕಾರಿಯ ಪದವಿ ದೊರಕಿತು. ಅಮೆರಿಕದಲ್ಲಿದ್ದ ಬ್ರಿಟಿಷ್ ಅಧಿಕಾರಿಗಳಲ್ಲಿ ಶ್ರೇಷ್ಠನಾಗಿದ್ದು ೧೭೮೦-೮೧ರಲ್ಲಿ ದಕ್ಷಿಣ ಭಾಗದಲ್ಲಿ ಗಮನಾರ್ಹ ಜಯಗಳಿಸಿದರೂ ೧೭೮೧ರ ಅಕ್ಟೋಬರಿನಲ್ಲಿ ಯಾರ್ಕ್‍ಟೌನ್ ಕದನದಲ್ಲಿ ಶರಣಾಗತನಾಗಬೇಕಾಯಿತು. ಇದರಿಂದಾಗಿ ಅಮೆರಿಕದಲ್ಲಿ ಬ್ರಿಟಿಷರ ಅಧಿಕಾರ ಕೊನೆಗೊಳ್ಳುವಂತಾಯಿತು.

ಭಾರತದ ಗವರ್ನರ್ ಜನರಲ್

[ಬದಲಾಯಿಸಿ]

ಉತ್ತಮ ಆಡಳಿತಗಾರ ಮತ್ತು ದಕ್ಷಯೋಧನೆಂದು ಹೆಸರಾಗಿದ್ದುದರಿಂದ ಇವನನ್ನು ೧೭೮೬ರಲ್ಲಿ ಭಾರತದ ಬ್ರಿಟಿಷ್ ಗವರ್ನರ್-ಜನರಲ್ ಆಗಿ ನೇಮಿಸಲಾಯಿತು. ಉತ್ತಮ ಅಧಿಕಾರಿಗಳ ಸಹಾಯದಿಂದ ಭಾರತದಲ್ಲಿ ಕೆಲವು ಸುಧಾರಣೆಗಳನ್ನು ಮಾಡಿ, ರಾಜ್ಯಾಡಳಿತವನ್ನೀತ ಉತ್ತಮಗೊಳಿಸಿದ. ಇತರರ ಪ್ರಯತ್ನಗಳ ಫಲವಾಗಿ ಇವನ ಕಾಲದಲ್ಲಿ ಸುಧಾರಣೆಗಳು ಜಾರಿಗೆ ಬಂದರೂ ಅವನ್ನು ಸುವ್ಯವಸ್ಥಿತ ರೀತಿಯಲ್ಲಿ ಕಾರ್ಯಗತಗೊಳಿಸಿದುದು ಇವನ ದಕ್ಷತೆಯನ್ನು ಸೂಚಿಸುತ್ತದೆ. ಬಂಗಾಳದ ಖಾಯಂ ಗುತ್ತಾ ಪದ್ಧತಿ (ಪರ್ಮನೆಂಟ್ ಲ್ಯಾಂಡ್ ರೆವೆನ್ಯೂ ಸೆಟ್ಲ್‍ಮೆಂಟ್) ಮತ್ತು ಭೂಕಂದಾಯ ಆಡಳಿತ ಸುಧಾರಣೆಗಳು ಕಟುಟೀಕೆಯನ್ನು ಎದುರಿಸಬೇಕಾಯಿತು. ಆದರೆ ಈತ ದೇಶೀಯ ಮತ್ತು ಬ್ರಿಟಿಷ್ ಆಡಳಿತವರ್ಗಗಳ ನಡುವಣ ಅಂತರಗಳನ್ನು ನಿವಾರಿಸಿ ಅವರಲ್ಲಿ ಸಮತೆಯನ್ನುಂಟುಮಾಡಲು ಪ್ರಯತ್ನಿಸಿದ. ಬ್ರಿಟಿಷ್ ಅಧಿಕಾರಿಗಳು ಆಡಳಿತದಲ್ಲಿ ವ್ಯಾಪಾರೀ ಮನೋಭಾವವನ್ನು ತೋರುತ್ತಿದ್ದುದು ಇದರಿಂದ ಕೊನೆಗೊಳ್ಳುವಂತಾಯಿತು. ನ್ಯಾಯಾಡಳಿತದಲ್ಲೂ ಹಲವಾರು ಸುಧಾರಣೆಗಳನ್ನು ತಂದ. ಇದಕ್ಕಾಗಿ ಹಿಂದೂ ನ್ಯಾಯಶಾಸ್ತ್ರ ಗ್ರಂಥಗಳನ್ನು ಇಂಗ್ಲಿಷಿಗೆ ತರ್ಜುಮೆ ಮಾಡಿಸಿದನಲ್ಲದೆ.೧೭೯೧ ಪೋಲೀಸ್ ದಳವನ್ನು ಏರ್ಪಡಿಸಿದ.

ಮೈಸೂರು ಯುದ್ಧ

[ಬದಲಾಯಿಸಿ]
Tipu Sultan, ruler of the Kingdom of Mysore
General Lord Cornwallis receiving Tipoo Sultan's sons as hostages, by Robert Home, c. 1793

೩ನೆಯ ಮೈಸೂರು ಯುದ್ಧ ನಡೆದದ್ದು ಇವನ ಕಾಲದಲ್ಲಿ. ೧೭೯೦ರಲ್ಲಿ ಮೈಸೂರಿನ ಟಿಪ್ಪುಸುಲ್ತಾನ್ ಬ್ರಿಟಿಷರ ಸ್ನೇಹವನ್ನು ಸಂಪಾದಿಸಿದ್ದ. ತಿರುವಾಂಕೂರು ರಾಜ್ಯವನ್ನು ಮುತ್ತಿದುದರಿಂದ ಕಾರ್ನ್‍ವಾಲಿಸ್ ಮರಾಠರ ಮತ್ತು ಹೈದರಾಬಾದಿನ ನಿಜಾಮನ ಸಹಾಯದಿಂದ ಮೈಸೂರಿನ ಮೇಲೆ ದಂಡೆತ್ತಿಹೋಗಿ ಟಿಪ್ಪುವಿನ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣವನ್ನು ಮುತ್ತಲಾಗಿ, ಟಿಪ್ಪು ಶರಣಾಗತನಾಗಿ ಬ್ರಿಟಿಷರ ಷರತ್ತುಗಳಿಗೆ ಒಪ್ಪಿಕೊಂಡ. ಬ್ರಿಟಿಷ್ ಚಕ್ರವರ್ತಿ ಕಾರ್ನ್‍ವಾಲಿಸನ ಕಾರ್ಯವನ್ನು ಮೆಚ್ಚಿಕೊಂಡ. ಈತ ಲಂಡನಿಗೆ ಮರಳಿದಾಗ ೧೭೯೩ರಲ್ಲಿ ಇವನಿಗೆ ಮಾಕ್ರ್ವಿಸ್ ಎಂಬ ಬಿರುದನ್ನು ನೀಡಲಾಯಿತು[೧] ಮತ್ತು ಸಚಿವಮಂಡಳಿಯ ದರ್ಜೆಯಲ್ಲಿ ಮಾಸ್ಟರ್-ಜನರಲ್ ಆಫ್ ಆರ್ಡ್‍ನೆನ್ಸ್ ಹುದ್ದೆಗೆ ನೇಮಿಸಲಾಯಿತು.[೨] [೩]

ಐರ್ಲೆಂಡ್ ನಲ್ಲಿ

[ಬದಲಾಯಿಸಿ]

ಈತ ೧೭೯೮ರಿಂದ ೧೮೦೧ರ ವರೆಗೆ ಐರ್ಲೆಂಡಿನಲ್ಲಿ ರಾಜಪ್ರತಿನಿಧಿಯಾಗಿ (ವೈಸ್‍ರಾಯ್) ಕೆಲಸಮಾಡಿದ. ೧೭೯೮ರಲ್ಲಿ ಅಲ್ಲಿ ನಡೆದ ದಂಗೆಯನ್ನು ಯಶಸ್ವಿಯಾಗಿ ಅಡಗಿಸಿದ. ಪ್ರಧಾನಮಂತ್ರಿ ವಿಲಿಯಂ ಪಿಟ್ಟನ ಏಕತಾನೀತಿಗೆ ಬೆಂಬಲ ನೀಡಿ, ಕೆಥೊಲಿಕ್ ಮತ್ತು ಆರೆಂಜ್ ಜನರ ಬೆಂಬಲದಿಂದ ಅದನ್ನು ಕಾರ್ಯಗತಗೊಳಿಸಿದ. 3ನೆಯ ಜಾರ್ಜ್ ದೊರೆ ಕೆಥೊಲಿಕರಿಗೆ ಮತೀಯ ಸ್ವಾತಂತ್ರ್ಯ ನೀಡಲು ನಿರಾಕರಿಸಿದಾಗ ಈತ ೧೮೦೧ರಲ್ಲಿ ತನ್ನ ಹುದ್ದೆಗೆ ರಾಜೀನಾಮೆ ನೀಡಿದ. ಏಮಿಯನ್ ಶಾಂತಿ ಸಂಧಾನಕ್ಕೆ ಬ್ರಿಟನಿನ ಮುಖ್ಯ ಸಂಧಾನಕಾರನಾಗಿ ಇವನು ನೇಮಕವಾದ್ದು ಅದೇ ವರ್ಷದಲ್ಲಿ.

೧೮೦೫ರಲ್ಲಿ ಮರಳಿ ಭಾರತದ ಗೌರ್ನರ್-ಜನರಲ್ ಆಗಿ ನೇಮಕವಾದಾಗ ಮನಸ್ಸಿಲ್ಲದಿದ್ದರೂ ಈತ ಭಾರತಕ್ಕೆ ಮರಳಿ ಅದೇ ವರ್ಷದ ಅಕ್ಟೋಬರ್ ೫ರಂದು ಘಾಜೀಪುರದಲ್ಲಿ ಮೃತ ಹೊಂದಿದ..[೪] ಅಲ್ಲಿ ಇವನ ಸ್ಮಾರಕವೊಂದನ್ನು ನಿರ್ಮಿಸಲಾಗಿದೆ[೫] .

ಉಲ್ಲೇಖಗಳು

[ಬದಲಾಯಿಸಿ]
  1. The London Gazette: no. 13450. p. 635. 14 August 1792.
  2. ಹಿಂದೂದೇಶದ ಚರಿತ್ರೆ ಲೇಖಕರು:ಇ.ಡಬ್ಳ್ಯು.ಥಾಂಸನ್. ಅನುವಾದಕರರು: ಕೆ.ವಿ.ದೊರೆಸ್ವಾಮಿ ಲೆಕ್ಚರರ್ ಮೈಸೂರು.
  3. History of India: R.C.mujumdar and Raychoudhry S.C
  4. Wickwire (1980), p. 265
  5. Wickwire (1980), p. 267

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]
ವಿಕಿಸೋರ್ಸ್ ನಲ್ಲಿ ಲಭ್ಯವಿರುವ ಲೇಖನದ ವಿಷಯವನ್ನು ಇಲ್ಲಿ ಅಳವಡಿಸಲಾಗಿದೆ: