ವಯನಾಡು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ವಯನಾಡು (ಮಲಯಾಳಂ: വയനാട്) ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾದ ಪ್ರಮುಖ ಪ್ರವಾಸಿತಾಣ. ತನ್ನ ಶುಭ್ರ ಪರಿಸರವನ್ನುಳಿಸಿಕೊಂಡಿರುವ ಕೇರಳದ ಕೆಲವೇ ಜಿಲ್ಲೆಗಳಲ್ಲಿ ಒಂದು. ಈ ಜಿಲ್ಲೆಯ ಕೆಲವು ಪ್ರದೇಶದಲ್ಲಿ ನಾಗರಿಕತೆಯನ್ನೇ ಕಾಣದ ಕೆಲ ಬುಡಕಟ್ಟು ಜನಾಂಗದವರು ವಾಸಿಸುತ್ತಿದ್ದಾರೆ. ಅಂಬಲಕುತಿಮಲ ಮತ್ತು ಎಡಕ್ಕಲ್ಲಿನ ಕೆಳಬೆಟ್ಟಗಳಲ್ಲಿ ಪೂರ್ವೇತಿಹಾಸದ ಕಾಲದ ಮೊಟ್ಟಮೊದಲಿನ ಕೆತ್ತನೆಗಳು ದೊರಕಿವೆ.

ಪ್ರಮುಖ ಪ್ರವಾಸಿ ತಾಣಗಳು[ಬದಲಾಯಿಸಿ]

ಎಡಕಲ್ಲು ಗುಹೆಯ ಒಳಗೆ ಕಂಡು ಬರುವ ಶಿಲಾ ಮಾನವನ ಬರಹ-೨
ಎಡಕಲ್ಲು ಗುಹೆಯ ಒಳಗೆ ಕಂಡು ಬರುವ ಶಿಲಾ ಮಾನವನ ಬರಹ-೧
ಬಾಣಾಸುರ ಅಣೆಕಟ್ಟಿನಿಂದ ಕಾಣುವ ಒಂದು ನೋಟ
ಮೀನ್ ಮುಟ್ಟಿ ಜಲಪಾತ
  • ಚೆಂಬ್ರ ಶಿಖರ - ಚಾರಣಕ್ಕೆ ಸೂಕ್ತವಾದದ್ದು.
  • ಎಡಕಲ್ಲು ಗುಡ್ಡ ಅಥವಾ ಎಡಕಲ್ಲು ಗುಹೆ - ಇಲ್ಲಿ ೧೦೦೦ ಮೀಟರ್ ಎತ್ತರದ ಗುಡ್ಡದ ಮೇಲೆ ಮೂರು ಗುಹೆಗಳು ಒಟ್ಟಾಗಿವೆ. ಮಧ್ಯಪ್ರಾಚೀನ ಶಿಲಾಯುಗದ ನಾಗರೀಕತೆಯ ಕುರುಹಾಗಿ ಈ ಗುಹೆಗಳ ಗೋಡೆಗಳ ಮೇಲೆ ಅನೇಕ ಕೆತ್ತನೆಗಳನ್ನು ಕಾಣಬಹುದು. ಇದನ್ನು ತಲುಪಲು ೧ ಕಿ.ಮೀ ಎತ್ತರದ ಗುಡ್ಡ ಹತ್ತಬೇಕಾಗುತ್ತದೆ.
  • ಸುಲ್ತಾನ್ ಬತೇರಿ - ಟಿಪ್ಪುವಿನ ಕೋಟೆ ಎಂದೂ ಪ್ರಸಿದ್ಢ . ಇಲ್ಲಿ ಒಂದು ಹಳೆಯ ಜೈನ ದೇವಾಲಯವಿದೆ. ಟಿಪ್ಪು ಸುಲ್ತಾನನು ಇಲ್ಲಿ ತನ್ನ ಮದ್ದುಗುಂಡುಗಳನ್ನು ಸಂಗ್ರಹಿಸಿಡುತ್ತಿದ್ದ.
  • ಮೀನುಮುಟ್ಟಿ ಜಲಪಾತ - ಇದನ್ನು ೨ ಕಿ.ಮೀ ಚಾರಣ ಹಾದಿಯ ಮೂಲಕ ತಲುಪಬೇಕು. ಇದು ವಯನಾಡ್ ಜಿಲ್ಲೆಯ ಅತಿ ದೊಡ್ಡ ಜಲಪಾತವಾಗಿದ್ದು, ೩೦೦ ಮೀಟರ್ ಎತ್ತರದಿಂದ ಮೂರು ಹಂತಗಳಲ್ಲಿ ಬೀಳುತ್ತದೆ.
  • ಬಾಣಾಸುರಸಾಗರ ಅಣೆಕಟ್ಟು - ಬಾಣಾಸುರಸಾಗರದಲ್ಲಿರುವ ಅಣೆಕಟ್ಟನ್ನು ಭಾರತದಲ್ಲಿಯೇ ಅತಿದೊಡ್ಡ ಮಣ್ಣಿನ ಅಣೆಕಟ್ಟೆಂದು ಪರಿಗಣಿಸಲಾಗಿದೆ.
  • ಪೂಕೋಟೆ ಅಥವಾ ಪೂಕೊಡೆ ಸರೋವರ - ಇದೊಂದು ಪ್ರಾಕೃತಿಕ ಸಿಹಿನೀರಿನ ಸರೋವರ. ವನಭೋಜನಕ್ಕೆ (ಪಿಕ್ನಿಕ್) ಗೆ ಹೇಳಿ ಮಾಡಿಸಿದ ತಾಣ.

ಪರಿಶೀಲಿಸಿದ ಕೊಂಡಿಗಳು[ಬದಲಾಯಿಸಿ]

"https://kn.wikipedia.org/w/index.php?title=ವಯನಾಡು&oldid=1127976" ಇಂದ ಪಡೆಯಲ್ಪಟ್ಟಿದೆ