ವಿಕಿಪೀಡಿಯ:ಇಂದಿನ ವಿಶೇಷ ಬರಹ/October 1, 2004

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕೂಡ್ಲಿ
ಕೂಡ್ಲಿ

ಕೂಡ್ಲಿ ಶಿವಮೊಗ್ಗ ಜಿಲ್ಲೆಯ, ಒಂದು ಪುಟ್ಟ ಊರು. ಈ ಊರು ಭಾರತ ದೇಶದ ಕರ್ನಾಟಕ ರಾಜ್ಯಕ್ಕೆ ಸೇರುತ್ತದೆ.

ತುಂಗಾ ಮತ್ತು ಭದ್ರಾ - ಇವೆರಡು ಜೀವನದಿಗಳು ಸಂಗಮವಾಗುವಲ್ಲಿರುವ ಈ ಊರು ತುಂಗಭದ್ರಾ ನದಿಗೆ ಜನ್ಮ ನಿಡುವ ಸ್ಥಳ.

  • ಪ್ರಾಮುಖ್ಯತೆ

ಆದಿ ಕಾಲದ ಸಂಗಮೇಶ್ವರ ದೇವಾಲಯ, ಸಂಗಮ ಹಾಗೂ ಪರಿಸರದ ವಿಹಂಗಮ ನೋಟ ಈ ಪ್ರದೇಶವನ್ನು ಸುಂದರಗೊಳಿಸಿದೆ. ಮಗದೊಂದು ಪ್ರವಾಸಿ ತಾಣವೆಂದೂ ಹೇಳಿದರೆ ತಪ್ಪಾಗದು. ಇಲ್ಲಿಯ 'ರಂಗನಾಥ ಸ್ವಾಮಿ' ದೇವಾಲಯವೂ ಜನಪ್ರಿಯ. ಸಂಗಮ ಸ್ಥಳದಲ್ಲಿ ನಂದಿಯ ಗುಡಿ ಇರುವುದುಂಟು. ಈ ಪುಟ್ಟ ಗುಡಿ ಸಂಗಮ ಸ್ಥಳವನ್ನು ಪ್ರತಿಪಾದಿಸುತ್ತದೆ. ಸಂಗಮೇಶ್ವರ ದೇವಾಲಯಕ್ಕೆ ಮಹತ್ತರ ಇತಿಹಾಸವಿರುವುದು. ಈ ದೇವಾಲಯ ಹೊಯ್ಸಳರ ಕಾಲದ್ದೆಂದು ಹೇಳಲಾಗುತ್ತದೆ. ಪ್ರಾಚೀನ ಶಿಲ್ಪಕಲೆಗಳಿಂದ ರಾರಾಜಿಸುವ ಈ ದೇವಾಲಯ ಕೂಡ್ಲಿಯ ಪ್ರಮುಖ ಆಕಷಣೆಗಳಲ್ಲೊಂದು.

  • ಇತಿಹಾಸ

ಇಲ್ಲಿಯ ಪ್ರಾಚೀನ ಸಂಗಮೇಶ್ವರ ದೇವಾಲಯ ಹೊಯ್ಸಳರ ಕಾಲದ್ದೆಂದು ಹೇಳಲಾಗುತ್ತದೆ. ಇಲ್ಲಿ ಕೆಲವು ಪ್ರಾಚೀನ ಶಾಸನಗಳಿರುವುದುಂಟು. ದೇವಾಲಯದ ಸುಂದರ ಶಿಲ್ಪಕಲೆ ಜನರ ಮನ ಸೂರೆಗೊಳಿಸುತ್ತದೆ. ಇದಲ್ಲದೆ ಇನ್ನೂ ಕೆಲವು ಚಿಕ್ಕ ಪುಟ್ಟ ಪ್ರಾಚೀನ ದೇವಾಲಯಗಳು ಇಲ್ಲಿ ಇರುವುದುಂಟು.

  • ಭೂಗೋಳ

ಶಿವಮೊಗ್ಗದಿಂದ ಕೆಲವೇ ಕಿ.ಮೀ. ದೂರದಲ್ಲಿರುವ ಈ ಊರಿಗೆ ಸುಲಭ ಬಸ್ಸು ಸೌಕರ್ಯವಿರುವುದುಂಟು. ಪ್ರಕೃತಿಯ ಮಡಿಲಾದ ಮಲೆನಾಡಿನ ಗಡಿಯಿದು - ಕೂಡ್ಲಿ.