ವಿಕಿಪೀಡಿಯ:ವಿಶೇಷ ಬರಹ/ಸಂಚಿಕೆ - ೪೭

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಮೂರನೆಯ ಪಾಣಿಪತ್ ಯುದ್ಧ ೧೭೬೧ಜನವರಿ ೧೪ರಂದು ಇಂದಿನ ಹರ್ಯಾಣದಲ್ಲಿರುವ ಪಾಣಿಪತ್‍ನಲ್ಲಿ (29.39° N 76.97° E) ಮರಾಠ ಸಾಮ್ರಾಜ್ಯ ಮತ್ತು ಅಹ್ಮದ್ ಶಾಹ್ ದುರ್ರಾನಿ (ಅಹ್ಮದ್ ಶಾಹ್ ಅಬ್ದಾಲಿ) ನೇತೃತ್ವದ ಅಫ್ಘಾನಿ ಪಾಶ್ತುನ್ ಜನರ ಸೇನೆಯ ಮಧ್ಯೆ ನಡೆದ ಯುದ್ಧ. ಇದು ಪಾಣಿಪತ್ ಅಲ್ಲಿ ನಡೆದ ಮೂರನೆಯ ಯುದ್ಧ. ಈ ಯುದ್ಧದಲ್ಲಿ ಫ್ರೆಂಚರಿಂದ ಮದ್ದು ಗುಂಡು ಮತ್ತಿ ತರಬೇತಿ ಗಳಿಸಿದ್ದ ಮರಾಠರಿಗೂ, ಅಹಮದ್ ಶಾ ಅಬ್ದಾಲಿಯ ಸಬಲ ಕುದುರೆ ಕಾಳಗ ನಿಪುಣರ ಮಧ್ಯೆ ಮುಖಾಮುಖಿಯಾಯಿತು.

ಮುಘಲ ಸಾಮ್ರಾಜ್ಯ ಶಿಥಿಲವಾಗುತ್ತಿರುವುದರ ಲಾಭ ಪಡೆದ ಮರಾಠರ ಒಕ್ಕೂಟವು ತನ್ನ ರಾಜ್ಯವನ್ನು ವಿಸ್ತರಿಸತೊಡಗಿತು. ಇದರಿಂದ ಅಸಮಾಧಾನಗೊಂಡ ಅಹಮದ್ ಶಾ ಅಬ್ದಾಲಿಯೂ ೧೭೫೯ರಲ್ಲಿ ಮರಾಠರ ಸಣ್ಣ ಪುಟ್ಟ ಸೈನ್ಯಗಳ ಮೇಲೆ ವಿಜಯ ಸಾಧಿಸಿದ. ಇದರಿಂದ ಕುಪಿತರಾದ ಮರಾಠರು ಸದಾಶಿವರಾವ್ ಭಾವುವಿನ ಮುಖಂಡತ್ವದಲ್ಲಿ ೧೦೦,೦೦೦ ಜನರ ಸೈನ್ಯದೊಂದಿಗೆ ದೆಹಲಿಯನ್ನು ದಾಳಿ ಮಾಡಿ ನಗರವನ್ನು ಹಾಳುಗೆಡವಿದರು. ಇದರ ನಂತರ ಕರ್ನಾಲ್ ಮತ್ತು ಕುಂಜುಪುರಗಳ ಯಮುನಾ ನದಿಯ ದಂಡೆಯ ಮೇಲೆ ಮರಾಠರಿಗೂ ಅಹಮದ್ ಶಾಹನಿಗೂ ಸಣ್ಣಪುಟ್ಟ ತಿಕ್ಕಾಟಗಳು ಆದವು. ಅನೇಕ ದಿನಗಳ ಕಾಲ ನಡೆದ ಈ ಯುದ್ಧದಲ್ಲಿ ೧೨೫,೦೦೦ ಸೈನಿಕರು ಪಾಲ್ಗೊಂಡಿದ್ದರು. ಮರಾಠರ ಅನೇಕ ತುಕಡಿಗಳನ್ನು ಧ್ವಂಸ ಮಾಡಿದ ಅಬ್ದಾಳಿಯ ಸೈನ್ಯ ವಿಜಯಶಾಲಿಯಾಯಿತು. ಯುದ್ಧದಲ್ಲಿ ಸುಮಾರು ೬೦,೦೦೦-೭೦,೦೦೦ ಜನ ಸತ್ತಿರಬೇಕು ಎಂದು ಅಂದಾಜಿದೆ. ಸದಾಶಿವರಾವರಾವ್ ಭಾವು ಈ ಯುದ್ಧದಲ್ಲಿ ಮಡಿದನು. ಈ ಯುದ್ಧದ ಅತ್ಯಂತ ಮಹತ್ವದ ಪರಿಣಾಮವಾಗಿ ಮರಾಠರ ಉತ್ತರ ಭಾರತದತ್ತ ರಾಜ್ಯ ವಿಸ್ತಾರ ಕೊನೆಗೊಂಡಿತು.