ಎಂ. ಕೆ. ಇಂದಿರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
No edit summary |
No edit summary |
||
೩ ನೇ ಸಾಲು: | ೩ ನೇ ಸಾಲು: | ||
ಕನ್ನಡಸಾಹಿತ್ಯ ಕ್ಷೇತ್ರದಲ್ಲಿ ಪ್ರಸಿದ್ದ ಕಾದಂಬರಿಗಾರ್ತಿಯರಲ್ಲಿ ಒಬ್ಬರಾದ ಎಂ.ಕೆ.ಇಂದಿರ ಹುಟ್ಟಿದ್ದು (೧೯೧೭) ಮಲೆನಾಡಿನ ತೀರ್ಥಹಳ್ಳಿಯಲ್ಲಿ. ತಂದೆ |
ಕನ್ನಡಸಾಹಿತ್ಯ ಕ್ಷೇತ್ರದಲ್ಲಿ ಪ್ರಸಿದ್ದ ಕಾದಂಬರಿಗಾರ್ತಿಯರಲ್ಲಿ ಒಬ್ಬರಾದ ಎಂ.ಕೆ.ಇಂದಿರ ಹುಟ್ಟಿದ್ದು (೧೯೧೭) ಮಲೆನಾಡಿನ ತೀರ್ಥಹಳ್ಳಿಯಲ್ಲಿ. ತಂದೆ ತರೀಕೆರೆ ಸೂರ್ಯನರಾಯಣ ತಾಯಿ ಬನಶಂಕರಮ್ಮ.ಮಕ್ಕಳ ಸಾಹಿತ್ಯದ ಪ್ರಸಿದ್ದರಾದ ಹೊಯ್ಸಳ, ಇವರ ಸೋದರಮಾವ. ಮಲೆನಾಡಿನ ಸಹ್ಯಾದ್ರಿಶ್ರೇಣಿ, ಭೀಮವೃಕ್ಷರಾಜಿ, ಹಕ್ಕಿಗಳ ಇಂಚರ, ಹಸಿರು .......ಇವೆಲ್ಲವೂ ಇಂದಿರ ಅವರ ಕಾದಂಬರಿಗಳಲ್ಲಿ ರಾರಾಜಿಸಿರುತ್ತವೆ. ಅವರ ಮೊಟ್ಟಮೊದಲ ಕಾದಂಬರಿ "ತುಂಗಭದ್ರ"."ತುಂಗಭದ್ರೆ"ಯನ್ನು ಮೆಚ್ಚಿಕೊಂಡು ಕೀರ್ತಿನಾಥ ಕುರ್ತುಕೋಟೆಯವರು ಒಂದು ಧೀರ್ಘವಾದ ಮುನ್ನುಡಿ ಬರೆದರು.ಈ ಕಾದಂಬರಿ ವಿಶ್ವವಿದ್ಯಾನಿಲಯದ ಪದವಿ ತರಗತಿಗೆ ಪಠ್ಯವಾಗಿತ್ತು.ನಂತರ "ಗೆಜ್ಜೆಪೂಜೆ", "ಸದಾನಂದ", "ನವರತ್ನ".....ಹೀಗೆ ಹಲವಾರು ಅವರ ಲೇಖನಿಯಿಂದ ಹೊರಬಂದವು. |
||
ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಸ್ಥಿತಿ, ವಿಧವಾವಿವಾಹ, ಬಾಲ್ಯವಿವಾಹ, ವಿಧವೆಯ ಗೋಳು, ಜಾತಿ ಪದ್ದತಿ ಇವೆಲ್ಲವೂ ಅವರ ಕಾದಂಬರಿಗಳಲ್ಲಿ ವ್ಯಕ್ತವಾಗುತ್ತಿತ್ತು.ಇವರ ಹಲವಾರು ಕೃತಿಗಳು ಅನ್ಯ ಭಾಷೆಗೂ ಅನುವಾದವಾಗಿದೆ. ಕಾದಂಬರಿಗಳಲ್ಲದೇ ಸುಮಾರು ನೂರೈವತ್ತು ಸಣ್ಣಕಥೆಗಳನ್ನೂ ಬರೆದಿದ್ದಾರೆ.ಇವರು |
ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಸ್ಥಿತಿ, ವಿಧವಾವಿವಾಹ, ಬಾಲ್ಯವಿವಾಹ, ವಿಧವೆಯ ಗೋಳು, ಜಾತಿ ಪದ್ದತಿ ಇವೆಲ್ಲವೂ ಅವರ ಕಾದಂಬರಿಗಳಲ್ಲಿ ವ್ಯಕ್ತವಾಗುತ್ತಿತ್ತು.ಇವರ ಹಲವಾರು ಕೃತಿಗಳು ಅನ್ಯ ಭಾಷೆಗೂ ಅನುವಾದವಾಗಿದೆ. ಕಾದಂಬರಿಗಳಲ್ಲದೇ ಸುಮಾರು ನೂರೈವತ್ತು ಸಣ್ಣಕಥೆಗಳನ್ನೂ ಬರೆದಿದ್ದಾರೆ.ಇವರು ಒಟ್ಟು ಸುಮಾರು ನಲವತ್ತೊಂಬತ್ತು ಕಾದಂಬರಿಗಳು, ಹನ್ನೊಂದು ಕಥಾಸಂಕಲಗಳನ್ನು ಬರೆದಿದ್ದಾರೆ. "ಬಿಂದು" ಅರ್ಧಕ್ಕೇ ನಿಂತುಹೋದ ಆತ್ಮಕಥೆ. |
||
ಕರ್ನಾಟಕ ಸಾಹಿತ್ಯ ಅಕೆಡಮಿ ಪುರಸ್ಕಾರ ಪಡೆದ ಇಂದಿರಾ ಅವರ ಕಾದಂಬರಿಗಳು: |
ಕರ್ನಾಟಕ ಸಾಹಿತ್ಯ ಅಕೆಡಮಿ ಪುರಸ್ಕಾರ ಪಡೆದ ಇಂದಿರಾ ಅವರ ಕಾದಂಬರಿಗಳು: |
೦೪:೩೨, ೨೪ ಮಾರ್ಚ್ ೨೦೦೬ ನಂತೆ ಪರಿಷ್ಕರಣೆ
ಎಂ ಕೆ ಇಂದಿರ ಅವರು ಕನ್ನಡದ ಹೆಸರಾಂತ ಲೇಖಕಿ, ಕಾದಂಬರಿಗಾರ್ತಿ. ಇವರ ಕಾದಂಬರಿಗಳಲ್ಲಿ ಮಲೆನಾಡಿನ ವರ್ಣನೆ ಸುಂದರವಾಗಿ ಮೂಡಿ ಬಂದಿದೆ. ಎಂ.ಕೆ.ಇಂದಿರಾ ಅವರ ಗೆಜ್ಜೆ ಪೂಜೆ ಫಣಿಯಮ್ಮ ಮತ್ತು ಪೂರ್ವಾಪರ ಎಂಬ ಕಾದಂಬರಿಗಳು ಚಲನಚಿತ್ರವಾಗಿವೆ. ಫಣಿಯಮ್ಮ ಚಿತ್ರವನ್ನು ನಿರ್ದೇಶಿಸಿದವರು ಶ್ರೀಮತಿ ಪ್ರೇಮಾ ಕಾರಂತ್. ಈ ಚಿತ್ರ ಅನೇಕ ಪ್ರಶಸ್ತಿಗಳನ್ನು ಗಳಿಸಿಕೊಂಡಿತು. ನಟಿ. ಎಲ್. ವಿ.ಶಾರದಾ ಈ ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿದ್ದರು. ಗೆಜ್ಜೆಪೂಜೆ ಕಾದಂಬರಿಯನ್ನು ದಿವಂಗತ ಪುಟ್ಟಣ್ಣ ಕಣಗಾಲ್ ನಿರ್ದೇಶಿಸಿದ್ದರು.
ಕನ್ನಡಸಾಹಿತ್ಯ ಕ್ಷೇತ್ರದಲ್ಲಿ ಪ್ರಸಿದ್ದ ಕಾದಂಬರಿಗಾರ್ತಿಯರಲ್ಲಿ ಒಬ್ಬರಾದ ಎಂ.ಕೆ.ಇಂದಿರ ಹುಟ್ಟಿದ್ದು (೧೯೧೭) ಮಲೆನಾಡಿನ ತೀರ್ಥಹಳ್ಳಿಯಲ್ಲಿ. ತಂದೆ ತರೀಕೆರೆ ಸೂರ್ಯನರಾಯಣ ತಾಯಿ ಬನಶಂಕರಮ್ಮ.ಮಕ್ಕಳ ಸಾಹಿತ್ಯದ ಪ್ರಸಿದ್ದರಾದ ಹೊಯ್ಸಳ, ಇವರ ಸೋದರಮಾವ. ಮಲೆನಾಡಿನ ಸಹ್ಯಾದ್ರಿಶ್ರೇಣಿ, ಭೀಮವೃಕ್ಷರಾಜಿ, ಹಕ್ಕಿಗಳ ಇಂಚರ, ಹಸಿರು .......ಇವೆಲ್ಲವೂ ಇಂದಿರ ಅವರ ಕಾದಂಬರಿಗಳಲ್ಲಿ ರಾರಾಜಿಸಿರುತ್ತವೆ. ಅವರ ಮೊಟ್ಟಮೊದಲ ಕಾದಂಬರಿ "ತುಂಗಭದ್ರ"."ತುಂಗಭದ್ರೆ"ಯನ್ನು ಮೆಚ್ಚಿಕೊಂಡು ಕೀರ್ತಿನಾಥ ಕುರ್ತುಕೋಟೆಯವರು ಒಂದು ಧೀರ್ಘವಾದ ಮುನ್ನುಡಿ ಬರೆದರು.ಈ ಕಾದಂಬರಿ ವಿಶ್ವವಿದ್ಯಾನಿಲಯದ ಪದವಿ ತರಗತಿಗೆ ಪಠ್ಯವಾಗಿತ್ತು.ನಂತರ "ಗೆಜ್ಜೆಪೂಜೆ", "ಸದಾನಂದ", "ನವರತ್ನ".....ಹೀಗೆ ಹಲವಾರು ಅವರ ಲೇಖನಿಯಿಂದ ಹೊರಬಂದವು.
ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಸ್ಥಿತಿ, ವಿಧವಾವಿವಾಹ, ಬಾಲ್ಯವಿವಾಹ, ವಿಧವೆಯ ಗೋಳು, ಜಾತಿ ಪದ್ದತಿ ಇವೆಲ್ಲವೂ ಅವರ ಕಾದಂಬರಿಗಳಲ್ಲಿ ವ್ಯಕ್ತವಾಗುತ್ತಿತ್ತು.ಇವರ ಹಲವಾರು ಕೃತಿಗಳು ಅನ್ಯ ಭಾಷೆಗೂ ಅನುವಾದವಾಗಿದೆ. ಕಾದಂಬರಿಗಳಲ್ಲದೇ ಸುಮಾರು ನೂರೈವತ್ತು ಸಣ್ಣಕಥೆಗಳನ್ನೂ ಬರೆದಿದ್ದಾರೆ.ಇವರು ಒಟ್ಟು ಸುಮಾರು ನಲವತ್ತೊಂಬತ್ತು ಕಾದಂಬರಿಗಳು, ಹನ್ನೊಂದು ಕಥಾಸಂಕಲಗಳನ್ನು ಬರೆದಿದ್ದಾರೆ. "ಬಿಂದು" ಅರ್ಧಕ್ಕೇ ನಿಂತುಹೋದ ಆತ್ಮಕಥೆ.
ಕರ್ನಾಟಕ ಸಾಹಿತ್ಯ ಅಕೆಡಮಿ ಪುರಸ್ಕಾರ ಪಡೆದ ಇಂದಿರಾ ಅವರ ಕಾದಂಬರಿಗಳು:
- ಸದಾನಂದ
- ನವರತ್ನ
- ಫಣಿಯಮ್ಮ
ಚಲನಚಿತ್ರವಾಗಿರುವ ಕಾದಂಬರಿಗಳು:
- ಗೆಜ್ಜೆಪೂಜೆ
- ಮುಸುಕು
- ಪೂರ್ವಾಪರ
- ಗಿರಿಬಾಲೆ
- ಹೂಬಾಣ
- ಫಣಿಯಮ್ಮ
ಫಣಿಯಮ್ಮ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ದೊರೆಯಿತು. ಹಾಗೂ ಈ ಕೃತಿಯನ್ನು ತೇಜಸ್ವಿನಿ ನಿರಂಜನ ಇಂಗ್ಲಿಷ್ ಗೆ ಅನುವಾದ ಮಾಡಿದಾರೆ.
ಕಥಾಸಂಕಲನಗಳು:
- ಅಂಬರದ ಅಪ್ಸರೆ
- ನವರತ್ನ
ಇನ್ನಿತರ ಕಾದಂಬರಿಗಳು :
- ಕೂಚುಬಟ್ಟ
- ಟೂ-ಲೇಟ್
- ತಗ್ಗಿನ ಮನೆ ಸೀತೆ
- ಮನ ತುಂಬಿದ ಮಡದಿ
- ಕಲಾದರ್ಶಿ
ಸಾವಿತ್ರಮ್ಮ ದೇಜಗೌ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕೆಡಮಿ ಪ್ರಶಸ್ತಿ, 'ಸುರಗಿ' ಅಭಿನಂದನಾ ಗ್ರಂಥ ಸಮರ್ಪಣೆ, ಹೀಗೆ ಪ್ರೀತಿಯ ಗೌರವದ ಉಡುಗೊರೆಗಳನ್ನು ಪಡೆದ ಎಂ.ಕೆ.ಇಂದಿರಾ ಅಂಥಹ ಲೇಖಕಿಯನ್ನು ಪಡೆದ ನಮ್ಮ ಕನ್ನಡ ಸಾಹಿತ್ಯ ನಿಜಕ್ಕೂ ಧನ್ಯ.