ಮೋಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
ಚು →ಷಡ್ದರ್ಶನಗಳಲ್ಲಿ ಮೋಕ್ಷ: ಮುಂದುವರೆದಿದೆ. |
→ಷಡ್ದರ್ಶನಗಳಲ್ಲಿ ಮೋಕ್ಷ: ಮುಂದುವರೆದಿದೆ |
||
೩೦ ನೇ ಸಾಲು: | ೩೦ ನೇ ಸಾಲು: | ||
:ಕರ್ಮವಾದಿಗಳಾದ ಪೂರ್ವ ಮೀಮಾಂಸಕರ ಪ್ರಕಾರ ಜಗತ್ತಿನೊಡನೆ, ಆತ್ಮ ಸಂಬಂಧ ನಾಶವೇ ಮೋಕ್ಷ. ಭೋಗಾಯತ ನವಾದ ಶರೀರ, ಭೋಗ ಸಾಧನವಾದ ಇಂದ್ರಿಯಗಳು ಭೋಗ ವಿಷಯಗಳಾದ ಪದಾರ್ಥಗಳು ,ಈ ಮೂರೂ ಸಂಸಾರದ ಬಂಧನಕ್ಕೆ ಆತ್ಮವನ್ನು ಸಿಲುಕಿಸಿವೆ. , ಇವುಗಳಾತ್ಯಂತಿಕ ನಾಶವೇ ಮೋಕ್ಷ . ಪ್ರಭಾಕರ ಮುಂತಾದವರುನಿಯೋಗ ಸಿದ್ಧಿಯೇ ಮೋಕ್ಷವೆನ್ನುತ್ತಾರೆ. ಎಂದರೆ ಫಲಾಪೇಕ್ಷೆಯಿಲ್ಲದ ನಿತ್ಯಕರ್ಮ,ಕರ್ತವ್ಯ ದೃಷ್ಟಿಯಿಂದ ಮಾಡುವುದು , -ಕರ್ತವ್ಯ ಕ್ರಿಯೆಯಿಂದ ಮೋಕ್ಷ. ಆನಂದಾನುಭವದ ವಿಚಾರವಿಲ್ಲ. ನ್ಯಾಯ ದರ್ಶನದಂತೆ ಚೈತನ್ಯವು ಆತ್ಮನ ಸ್ವಭಾವ ಗುಣವಲ್ಲ. ಮೋಕ್ಷಕ್ಕೆ ಕರ್ಮ ಮತ್ತು ಜ್ಞಾನ ಎರಡೂ ಅವಶ್ಯ . ಇದು ಜ್ಞಾನ ಕರ್ಮ ಸಮುಚ್ಚಯ ವಾದ. ಪ್ರಾಚೀನ ಮೀಮಾಂಸಕರು ಸ್ವರ್ಗವೇ ಕೊನೆಯ ಹಂತವೆನ್ನುವರು. ನಂತರದವರು ಮೋಕ್ಷ ವಿಚಾರವನ್ನು ಸೇರಿಸಿದರು. |
:ಕರ್ಮವಾದಿಗಳಾದ ಪೂರ್ವ ಮೀಮಾಂಸಕರ ಪ್ರಕಾರ ಜಗತ್ತಿನೊಡನೆ, ಆತ್ಮ ಸಂಬಂಧ ನಾಶವೇ ಮೋಕ್ಷ. ಭೋಗಾಯತ ನವಾದ ಶರೀರ, ಭೋಗ ಸಾಧನವಾದ ಇಂದ್ರಿಯಗಳು ಭೋಗ ವಿಷಯಗಳಾದ ಪದಾರ್ಥಗಳು ,ಈ ಮೂರೂ ಸಂಸಾರದ ಬಂಧನಕ್ಕೆ ಆತ್ಮವನ್ನು ಸಿಲುಕಿಸಿವೆ. , ಇವುಗಳಾತ್ಯಂತಿಕ ನಾಶವೇ ಮೋಕ್ಷ . ಪ್ರಭಾಕರ ಮುಂತಾದವರುನಿಯೋಗ ಸಿದ್ಧಿಯೇ ಮೋಕ್ಷವೆನ್ನುತ್ತಾರೆ. ಎಂದರೆ ಫಲಾಪೇಕ್ಷೆಯಿಲ್ಲದ ನಿತ್ಯಕರ್ಮ,ಕರ್ತವ್ಯ ದೃಷ್ಟಿಯಿಂದ ಮಾಡುವುದು , -ಕರ್ತವ್ಯ ಕ್ರಿಯೆಯಿಂದ ಮೋಕ್ಷ. ಆನಂದಾನುಭವದ ವಿಚಾರವಿಲ್ಲ. ನ್ಯಾಯ ದರ್ಶನದಂತೆ ಚೈತನ್ಯವು ಆತ್ಮನ ಸ್ವಭಾವ ಗುಣವಲ್ಲ. ಮೋಕ್ಷಕ್ಕೆ ಕರ್ಮ ಮತ್ತು ಜ್ಞಾನ ಎರಡೂ ಅವಶ್ಯ . ಇದು ಜ್ಞಾನ ಕರ್ಮ ಸಮುಚ್ಚಯ ವಾದ. ಪ್ರಾಚೀನ ಮೀಮಾಂಸಕರು ಸ್ವರ್ಗವೇ ಕೊನೆಯ ಹಂತವೆನ್ನುವರು. ನಂತರದವರು ಮೋಕ್ಷ ವಿಚಾರವನ್ನು ಸೇರಿಸಿದರು. |
||
::'''ಅದ್ವೈತ ದರ್ಶನ''' |
::'''ಅದ್ವೈತ ದರ್ಶನ''' |
||
:ಅದ್ವೈತದ ಪ್ರಕಾರ ಮೋಕ್ಷವು ,ಸತ್-ಚಿತ್-ಆನಂದದ ಸ್ಥಿತಿ/ ಸ್ವರೂಪಿ. ಅವಿದ್ಯೆಯ (ಮಾಯೆಯ) ಕಾರಣ ,ಆತ್ಮನಿಗೆ ಬಂಧನವಾಗಿದೆ ;ಎಂದರೆ ಅವನು ಸ್ವಸ್ವರೂಪವನ್ನು ತಿಳಿದಿಲ್ಲ. ಮಿಥ್ಯಾಭಾಸದ ನಿವಾರಣೆಯಾಗಿ ನಾನೇ ಬ್ರಹ್ಮವೆಂದು ಜ್ಞಾನ ಉದಯವಾದಾಗ ಮುಕ್ತಿ. '''ಬ್ರಹ್ಮವನ್ನು ತಿಳಿದವನು ಬ್ರಹ್ಮವೇಆಗುತ್ತಾನೆ''' ಎಂದು [[ಶ್ರುತಿ]]ಯು ಹೇಳುತ್ತದೆ . ಅಜ್ಞಾನದ ನಿವಾರಣೆಯು ದೇಹವಿದ್ದಾಗಲೂ , ಬಿಡುವಾಗಲೂ ಯಾವಾಗ ಬೇಕಾದರೂ ಆಗಬಹುದು. 'ಜೀವನ್ಮುಕ್ತಿ' ಯೂ ಉಂಟು , 'ವಿದೇಹಮುಕ್ತಿ'ಯೂ ಉಂಟು. ಕರ್ಮದಿಂದ** ಮುಕ್ತಿಯಿಲ್ಲ -ಚಿತ್ತ ಶುದ್ದಿಯಿಂದ ಮಾತ್ರಾ ಮುಕ್ತಿಯನ್ನು ಪಡೆಯಬಹುದು . [[ಜ್ಞಾನ]]ದಿಂದ ಮಾತ್ರಾ ಮುಕ್ತಿ ಪಡೆಯಯಬಹುದು (**ಹೋಮ,ಹವನ, ಯೋಗ ಪ್ರಾಣಯಾಮ, ಜಪ,ತಪ, ಪಾರಾಯಣ.ಭಕ್ತಿ-ಭಜನೆ, ಪೂಜೆ, ಯಾತ್ರೆ. ಸೇವೆ-ದಾನ-ಧರ್ಮ ಇತ್ಯಾದಿ ಕರ್ಮಗಳು ; ಜ್ಞಾನವೆಂದರೆ ತಾನೇ ಆತ್ಮನೆಂಬ -ಬ್ರಹ್ಮವೆಂಬ ಅರಿವು-ಅನುಭವ ; ಆತ್ಮವು ಮೂಲ ಚೈತನ್ಯದಲ್ಲಿ ಸೇರಿಹೋಗುವುದು.). (ಮೋಕ್ಷದ ವ್ಯಾಖ್ಯೆಯು ಉಳಿದ ದರ್ಶನಕ್ಕಿಂತ ಬೇರೆ ಮತ್ತು ಸ್ಪಷ್ಟ) |
|||
== ಭಕ್ತಿಪಂಥದಲ್ಲಿ ಮೋಕ್ಷ == |
|||
::'''ವಿಶಿಷ್ಟಾದ್ವೈತ ಮತ್ತು ಮೋಕ್ಷ''' |
|||
:ವಿಶಿಷಾದ್ವೈತದ ಪ್ರಕಾರ ವೈಕುಂಠವೆಂಬ ಅಪ್ರಾಕೃತ ಲೋಕದಲ್ಲಿ ಪರಮಾತ್ಮನಿಗೆ ಸಮನಾದ ಆನಂದವನ್ನು ಪಡೆಯುವುದೇ ಮುಕ್ತಿ. ಜೀವನು ದೇವಯಾನವೆಂಬ , ಜ್ಯೋತಿರ್ಮಾರ್ಗವನ್ನು ಹಿಡಿದು ಆನಂದಮಯವಾದ ವೈಕುಂಠವನ್ನು ಸೇರುತ್ತಾನೆ . ಸರ್ವಜ್ಞತ್ವಾದಿ ಗುಣಗಳನ್ನು ಪಡೆಯುತ್ತಾನೆ. ಕರ್ಮಸಂಬಂಧದಿಂದ ಪಾರಾಗಿ ಅಪ್ರಾಕೃತ (ದಿವ್ಯ) ದೇಹ ಪಡೆದು 'ಸಾಲೋಕ್ಯ ; ಸಾಮೀಪ್ಯ ; ಸಾರೂಪ್ಯ ; ಸಾಯುಜ್ಯ'ಗಳೆಂಬ ಮುಕ್ತಿಯನ್ನು ಪಡೆಯುತ್ತಾನೆ . ವಿಶ್ವೇಶ್ವರತ್ವ , ಜಗತ್ಕೃತ್ವ ಬಿಟ್ಟು ಉಳಿದ ಎಲ್ಲಾ ಈಶ್ವರನ-ಶಕ್ತಿ ಪಡೆಯುತ್ತಾನೆ. ಆದರೆ ಪರಮಾತ್ಮನಲ್ಲಿ ಸೇರಲಾರ ; ಅವನ ಕೈಂಕರ್ಯದಿಂದ ಆನಂದ ಪಡೆಯುತ್ತಾನೆ. ಇದನ್ನು ಪಡೆಯಲು , ಜ್ಞಾನ ಕರ್ಮ ಭಕ್ತಿ, ಮಾರ್ಗಗಳನ್ನು ಅನುಸರಿಸಬೇಕು. ಭಕ್ತಿ ಶ್ರೇಷ್ಠವಾದುದು. ಇದನ್ನು ಪಡೆಯಲು ಈಶ್ವರನ ಅನುಗ್ರಹವೂ ಬೇಕು. '''ಜೀವನ್ಮಕ್ತಿ''' ಎಂಬುದಿಲ್ಲ ; ಇದು ರಾಮಾನುಜರ ಸಿದ್ಧಾಂತ. |
|||
::'''ಮಾಧ್ವಮತ-ದ್ವೈತ''' |
|||
ಮುಂದುವರಯುವುದು / ಮುಂದುವರೆದಿದೆ. |
ಮುಂದುವರಯುವುದು / ಮುಂದುವರೆದಿದೆ. |
||
೧೭:೨೩, ೧೬ ಮಾರ್ಚ್ ೨೦೧೪ ನಂತೆ ಪರಿಷ್ಕರಣೆ
ಮೋಕ್ಷ - ಪೀಠಿಕೆ
ಮೋಕ್ಷವೆಂದರೆ, ಹಿಂದೂ ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು-ಮೋಕ್ಷ ಕೊನೆಯದು. ಧರ್ಮ,ಅರ್ಥ ಮತ್ತು ಕಾಮ ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ ಪರಮಾತ್ಮನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ. ಎಕೆಂದರೆ ಸ್ವರ್ಗ ಪ್ರಾಪ್ತಿ ಕೇವಲ ಮನುಷ್ಯನ ಪಾಪ ಪುಣ್ಯಗಳನ್ನು ಆಧರಿಸಿದ್ದು ಅದು ಮುಗಿದ ಮೇಲೆ ಕರ್ಮಾನುಸಾರ ಮರು ಹುಟ್ಟು ಪಡೆಯಬೇಕಾಗುತ್ತದೆ.ಆದರೆ ಮುಕ್ತಿ ಅಥವಾ ಮೋಕ್ಷದ ಸ್ಥಿತಿ ಅನಂತಕಾಲ ಅನಂದಾತಿಶಯದಲ್ಲಿ ಇರುವಂತಹ ಸ್ಥಿತಿ.ಈ ವಿಚಾರಸಲ್ಲಿ ಭಾರತೀಯ ದರ್ಶನಗಳಲ್ಲಿ ಒಮ್ಮತವಿಲ್ಲ ; ಒಂದೊಂದು ದರ್ಶನದಲ್ಲಿ ಒಂದೊಂದು ರೀತಿ ಹೇಳಿದೆ. (ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ);ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷವು ಒಂದು ಚರ್ಚಾವಿಷಯವಾಗಿದೆ.
ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷ
- ಮೋಕ್ಷವೆಂದರೆ ಬಿಡುಗಡೆ; ಜನ್ಮಾಂತರ ಚಕ್ರದ ಅಂತ್ಯ.ಅಂತ್ಯವಿಲ್ಲದ ಆನಂದ ಮಯ ಸ್ಥಿತಿ . ಭಾರತೀಯ ತಾತ್ವಿಕ -ಧಾರ್ಮಿಕ ಜೀವನದ ಅಂತಿಮ ಗುರಿ. ಅದು ಪರಮ (ಅಂತಿಮ) ಪುರುಷಾರ್ಥ.
ನಿರೀಶ್ವರವಾದಿಗಳಲ್ಲಿ ಮೋಕ್ಷ
- ಚರ್ವಾಕರು ಮೋಕ್ಷವೆನ್ನುವುದು ಕೇವಲ ಕಲ್ಪನೆ ಎನ್ನುತ್ತಾರೆ . ಅವರ ದೃಷ್ಟಿಯಲ್ಲಿ ಸಾವೇ ಬಿಡುಗಡೆ . ಏಕೆಂದರೆ ಅವರಿಗೆ ಪುನರ್ಜನ್ಮದಲ್ಲಿ ಮತ್ತು ದೇವರಲ್ಲಿ ನಂಬುಗೆ ಇಲ್ಲ.
- ಜೈನರು
- ಜೈನರು ದೇವರು ಅಥವಾ ಮೂಲಚೈತನ್ಯ ಪರಬ್ರಹ್ಮವನುಪ್ಪುವುದಿಲ್ಲ . ಅವರ ಮೋಕ್ಷದ ವ್ಯಾಖ್ಯೆ ಬೇರೆಯೇ ಇದೆ.
- ಜೈನರು ಕರ್ಮ ಕ್ಷಯವೇ ಮೋಕ್ಷವೆನ್ನುತ್ತಾರೆ. ಕರ್ಮ ಒಂದು ಭೌತವಸ್ತು -ಪುದ್ಗಲ. ರಾಗ, ದ್ವೇಷ, ಅಜ್ಞಾನ , 'ಆಶ್ರವ' ರೀತಿಯಲ್ಲಿ (ಕೊಳವೆ ನೀರಿನಂತೆ ) ಜೀವ ನಲ್ಲಿ ತುಂಬುವುದು. 'ಸಮ್ಯಕ್ ಜ್ಞಾನ' , 'ಸಮ್ಯಕ್ ದರ್ಶನ' , 'ಸಮ್ಯಕ್ ಚಾರಿತ್ರ್ಯ'ದಿಂದ ಈ ಕರ್ಮದ ಆಸ್ರವ ನಿಂತು (ನೀರು ತುಂಬುವುದು ನಿಂತಂತೆ.) 'ಸಂವರ' ಸ್ಥಿತಿ ತಲುಪುವುದು. ನಂತರ 'ನಿರ್ಜರಾ'ದಿಂದ -ಕಾಯ ಕ್ಲೇಶಗಳಿಂದ , ಒಳಗಿರುವ ಕರ್ಮವನ್ನು ಹೊರಹಾಕಿ ಕರ್ಮ ಕ್ಷಯವಾದ ಮೇಲೆ ಮುಕ್ತಿ . ಈ ಮುಕ್ತ ಜೀವವು ಲೋಕಾಕಾಶದಲ್ಲಿ 'ಶಿದ್ಧಶಿಲೆ' ಯೆಂಬ ಅತ್ಯುನ್ನತ ಸ್ಥಾನವನ್ನು ಪಡೆಯುತ್ತದೆ. ಅಲ್ಲಿ 'ಅನಂತ ಜ್ಞಾನ' , 'ಅನಂತ ದರ್ಶನ' , 'ಅನಂತ ವೀರ್ಯ(ಶಕ್ತಿ)' , ಸಂಪನ್ನರಾಗಿ ಜೀವವು, ಅನಂತ ಶಾಂತಿ ಪಡೆಯುತ್ತದೆ. ಸಾಧನೆಯಿಂದ ಇದನ್ನು ಎಲ್ಲರೂ ಪಡೆಯಬಹುದು.
- ಬೌದ್ಧರು
- ಬೌದ್ಧರು ಜೈನರಂತೆ ದೇವರು ಅಥವಾ ಮೂಲಚೈತನ್ಯ ಪರಬ್ರಹ್ಮವನುಪ್ಪುವುದಿಲ್ಲ . ಅವರ ಮೋಕ್ಷದ ವ್ಯಾಖ್ಯೆಯೂ ಬೇರೆಯೇ ಇದೆ.
- ಬೌದ್ಧರು ನೋಕ್ಷವನ್ನು 'ನಿರ್ವಾಣ' ಎನ್ನುತ್ತಾರೆ. ನಿರ್ವಾಣನ್ನುವುದಕ್ಕೆ ಅಕ್ಷರಾರ್ಥ -ಅಳಿಸಿಹೋಗುವುದು / ನಂದಿಹೋಗುವುದು.
- ಆರ್ಯಸತ್ಯ ಗಳಲ್ಲಿ 'ಅಜ್ಞಾನ'ವೇ ಬಂಧಕ್ಕೆ ಕಾರಣ. ದುಃಖ , ದುಃಖಮೂಲ, ದುಃಖ ನಿವಾರಣಾ ಮಾರ್ಗ , ದುಃಖ ನಿವಾರಣ- 'ಈ ನಾಲ್ಕನ್ನು' ಚೆನ್ನಾಗಿ ತಿಳಿದು -'ಆರ್ಯ ಅಷ್ಟಾಂಗ ಮಾರ್ಗ'ವನ್ನು ಅನುಸರಿಸಿದರೆ ದುಃಖದಿಂದ ಬಿಡುಗಡೆ ದೊರೆಯುತ್ತದೆ. ಸಂಸಾರಕ್ಕೆ ಕಾರಣವಾದ , ವಾಸನೆಗಳೆಲ್ಲಾ ಅಳಿದು ಜ್ಞಾನೋದಯವಾಗುತ್ತದೆ . ಈ ಹಂತ ಪಡೆದವನು ಅರ್ಹತ್ ಆಗುತ್ತಾನೆ. ವೈಬಾಷಿಕರು ಅರ್ಹತನು ಆಸ್ರವ ಕ್ಷಯ ನಂತರ ಜೀವಿಸಿದ್ದರೆ ಅದು 'ಸೋಪಧಿಶೇಷ ಸ್ಥಿತಿ' ; ಮರಣಾನಂತರದ್ದು 'ನಿರುಪಧಿಶೇಷ ಸ್ಥಿತಿ'. ಹೀಗೆ ಎರಡು ಬಗೆ 'ಮೋಕ್ಷ' ವಿದೆ ಎನ್ನುತ್ತಾರೆ. ವಿಜ್ಞಾನವಾದಿಗಳು 'ಕ್ಲೇಷಾವರಣ', 'ಜ್ಞೇಯಾವರಣ' , ನಾಶವೇ ಮೋಕ್ಷ ವೆನ್ನುತ್ತಾರೆ ; ಮಾದ್ಯಮಿಕರು 'ಶೂನ್ಯತಾ ಪ್ರಾಪ್ತಿ'ಯೇ ಮೋಕ್ಷವೆನ್ನುತ್ತಾರೆ.
ಷಡ್ದರ್ಶನಗಳಲ್ಲಿ ಮೋಕ್ಷ
- ಸಾಂಖ್ಯದರ್ಶನ
- ಸಾಂಖ್ಯದರ್ಶನದ ಪ್ರಕಾರ ಪುರುಷನು ಪ್ರಕೃತಿಯ ಸಂಪರ್ಕವನ್ನು ಪೂರ್ತಿಯಾಗಿ ಕಳೆದು ಕೊಳ್ಳುವುದೇ ಮೋಕ್ಷ . ಪ್ರಕೃತಿಸಂಬಂಧದಿಂದ ಬದ್ಧತೆ ಯಾಗುತ್ತದೆ ; ಕರ್ತೃತ್ವ ಭೋರ್ಕ್ತೃತ್ವ ದಿಂದ ದುಃಖ ; ಪ್ರಕೃತಿಯೇ ಬಂಧಕ್ಕೆ ಕಾರಣವೆಂಬ ಅರಿವೇ ಅಪವರ್ಗ ಅಥವಾ ಕೈವಲ್ಯಕ್ಕೆ ದಾರಿ. ಕೈವಲ್ಯ ಪುರುಷನ ನಿಜ ಸ್ವರೂಪ ಸ್ಥಿತಿ . ದುಃಖದ ಲೇಶವೂ ಇಲ್ಲರ ಸ್ಥಿತಿ. ಅಲ್ಲಿ ಆನಂದವೂಇಲ್ಲ ದುಃಖವೂ ಇಲ್ಲ. ಜೀವನ್ಮುಕ್ತಿ ವಿದೇಹ ಮುಕ್ತಿ ಎಂಬ ಅರಡೂ ಬಗೆಯ ಮುಕ್ತಿ ಇದೆ.
- ಯೋಗ ದರ್ಶನ
- ಯೋಗ ದರ್ಶನವೂ ಸಾಂಖ್ಯ ಮತವನ್ನೊಪ್ಪುತ್ತದೆ.Sದರೆ ಧ್ಯಾನ ಮಾಡುವ ವಸ್ತುವಿನಲ್ಲಿ ಮನಸ್ಸು ಲೀನವಾದರೆ -ಅದು ಸಂಪ್ರಜ್ಞಾತ ಸಮಾಧಿ -ಅದೇ ಕೈವಲ್ಯ. ವಿಶುದ್ಧ ಚೈತನ್ಯವು ತಾನೇತಾನಾಗಿರುವುದು -ಅಸಂಪ್ರಜ್ಞಾತ ಸಮಾಧಿ . ಇದು ನಿಜವಾದ ಕೈವಲ್ಯ ಸ್ಥಿತಿ. ಇದು ಯೋಗದ ಗುರಿ. ಇದಕ್ಕೆ ಯಮ, ನಿಯಮಾದಿಗಳು ಸಾಧನೆಯ ದಾರಿ.
- ನ್ಯಾಯ ದರ್ಶನ
- ನ್ಯಾಯದರ್ಶನವೂ ಯೋಗ ದರ್ಶನದ ಸಾಧನೆಗಳನ್ನು ಒಪ್ಪಿದೆ ; ದುಃಖದ ನಿವೃತ್ತಿಯನ್ನು -ಅಪವರ್ಗ ಅಥವಾ ಮೋಕ್ಷವೆನ್ನುತ್ತದೆ. ಇದು-ಮೋಕ್ಷ , ಅಜ್ಞಾನದ ನಿವೃತ್ತಿ ಅಥವಾ ಜ್ಞಾನ ಪ್ರಾಪ್ತಿಯಿಂದ ಸಾಧ್ಯ. ಮುಕ್ತಾವಸ್ಥೆಯಲ್ಲಿ ಆತ್ಮನಲ್ಲಿ ಯಾವ ಗೂಣಗಳೂ ಇರುವುದಿಲ್ಲ. ಎಲ್ಲಾ ಸಂಸ್ಕಾರ , ಭಾವನೆಗಳಿಂದ ಅತೀತವಾಗಿದ್ದು -ಆತ್ಮನ ವಿಶುದ್ಧ ರೂಪ. ಆನಂದವೂ ಇಲ್ಲ -ದುಃಖವೂ ಇಲ್ಲ. ಆತ್ಮನಲ್ಲಿ ಚೈತನ್ಯವುಂಟಾಗುವುದು ಶರೀರ ಸಂಪರ್ಕದಿಂದ ಮಾತ್ರಾ .
- ವೈಶೇಷಿಕ ದರ್ಶನ
- ವೈಶೇಷಿಕ ದರ್ಶನವೂ ಮೋಕ್ಷ ವಿಚಾರದಲ್ಲಿ , ನ್ಯಾಯ ದರ್ಶನದ ಮತವನ್ನೇ ಅನುಸರಿಸುತ್ತದೆ. ಆತ್ಮನಲ್ಲಿ ಆನಂದವೂ ಇಲ್ಲ , ದುಃಖವೂ ಇಲ್ಲ. ಆದರೆ ಈ ಅಭಿಪ್ರಾಯವು ಟೀಕೆಗೆ ಒಳಗಾದ್ದರಿಂದ ನಂತರದ ವೈಶೇಷಿಕರು ಮೋಕ್ಷದಲ್ಲಿ ನಿರತಿಶಯ ಸುಖವಿದೆಯೆಂದು ಹೇಳಿದ್ದಾರೆ.
- ಪೂರ್ವ ಮೀಮಾಂಸಕರು (ಕರ್ಮವಾದಿಗಳು)
- ಕರ್ಮವಾದಿಗಳಾದ ಪೂರ್ವ ಮೀಮಾಂಸಕರ ಪ್ರಕಾರ ಜಗತ್ತಿನೊಡನೆ, ಆತ್ಮ ಸಂಬಂಧ ನಾಶವೇ ಮೋಕ್ಷ. ಭೋಗಾಯತ ನವಾದ ಶರೀರ, ಭೋಗ ಸಾಧನವಾದ ಇಂದ್ರಿಯಗಳು ಭೋಗ ವಿಷಯಗಳಾದ ಪದಾರ್ಥಗಳು ,ಈ ಮೂರೂ ಸಂಸಾರದ ಬಂಧನಕ್ಕೆ ಆತ್ಮವನ್ನು ಸಿಲುಕಿಸಿವೆ. , ಇವುಗಳಾತ್ಯಂತಿಕ ನಾಶವೇ ಮೋಕ್ಷ . ಪ್ರಭಾಕರ ಮುಂತಾದವರುನಿಯೋಗ ಸಿದ್ಧಿಯೇ ಮೋಕ್ಷವೆನ್ನುತ್ತಾರೆ. ಎಂದರೆ ಫಲಾಪೇಕ್ಷೆಯಿಲ್ಲದ ನಿತ್ಯಕರ್ಮ,ಕರ್ತವ್ಯ ದೃಷ್ಟಿಯಿಂದ ಮಾಡುವುದು , -ಕರ್ತವ್ಯ ಕ್ರಿಯೆಯಿಂದ ಮೋಕ್ಷ. ಆನಂದಾನುಭವದ ವಿಚಾರವಿಲ್ಲ. ನ್ಯಾಯ ದರ್ಶನದಂತೆ ಚೈತನ್ಯವು ಆತ್ಮನ ಸ್ವಭಾವ ಗುಣವಲ್ಲ. ಮೋಕ್ಷಕ್ಕೆ ಕರ್ಮ ಮತ್ತು ಜ್ಞಾನ ಎರಡೂ ಅವಶ್ಯ . ಇದು ಜ್ಞಾನ ಕರ್ಮ ಸಮುಚ್ಚಯ ವಾದ. ಪ್ರಾಚೀನ ಮೀಮಾಂಸಕರು ಸ್ವರ್ಗವೇ ಕೊನೆಯ ಹಂತವೆನ್ನುವರು. ನಂತರದವರು ಮೋಕ್ಷ ವಿಚಾರವನ್ನು ಸೇರಿಸಿದರು.
- ಅದ್ವೈತ ದರ್ಶನ
- ಅದ್ವೈತದ ಪ್ರಕಾರ ಮೋಕ್ಷವು ,ಸತ್-ಚಿತ್-ಆನಂದದ ಸ್ಥಿತಿ/ ಸ್ವರೂಪಿ. ಅವಿದ್ಯೆಯ (ಮಾಯೆಯ) ಕಾರಣ ,ಆತ್ಮನಿಗೆ ಬಂಧನವಾಗಿದೆ ;ಎಂದರೆ ಅವನು ಸ್ವಸ್ವರೂಪವನ್ನು ತಿಳಿದಿಲ್ಲ. ಮಿಥ್ಯಾಭಾಸದ ನಿವಾರಣೆಯಾಗಿ ನಾನೇ ಬ್ರಹ್ಮವೆಂದು ಜ್ಞಾನ ಉದಯವಾದಾಗ ಮುಕ್ತಿ. ಬ್ರಹ್ಮವನ್ನು ತಿಳಿದವನು ಬ್ರಹ್ಮವೇಆಗುತ್ತಾನೆ ಎಂದು ಶ್ರುತಿಯು ಹೇಳುತ್ತದೆ . ಅಜ್ಞಾನದ ನಿವಾರಣೆಯು ದೇಹವಿದ್ದಾಗಲೂ , ಬಿಡುವಾಗಲೂ ಯಾವಾಗ ಬೇಕಾದರೂ ಆಗಬಹುದು. 'ಜೀವನ್ಮುಕ್ತಿ' ಯೂ ಉಂಟು , 'ವಿದೇಹಮುಕ್ತಿ'ಯೂ ಉಂಟು. ಕರ್ಮದಿಂದ** ಮುಕ್ತಿಯಿಲ್ಲ -ಚಿತ್ತ ಶುದ್ದಿಯಿಂದ ಮಾತ್ರಾ ಮುಕ್ತಿಯನ್ನು ಪಡೆಯಬಹುದು . ಜ್ಞಾನದಿಂದ ಮಾತ್ರಾ ಮುಕ್ತಿ ಪಡೆಯಯಬಹುದು (**ಹೋಮ,ಹವನ, ಯೋಗ ಪ್ರಾಣಯಾಮ, ಜಪ,ತಪ, ಪಾರಾಯಣ.ಭಕ್ತಿ-ಭಜನೆ, ಪೂಜೆ, ಯಾತ್ರೆ. ಸೇವೆ-ದಾನ-ಧರ್ಮ ಇತ್ಯಾದಿ ಕರ್ಮಗಳು ; ಜ್ಞಾನವೆಂದರೆ ತಾನೇ ಆತ್ಮನೆಂಬ -ಬ್ರಹ್ಮವೆಂಬ ಅರಿವು-ಅನುಭವ ; ಆತ್ಮವು ಮೂಲ ಚೈತನ್ಯದಲ್ಲಿ ಸೇರಿಹೋಗುವುದು.). (ಮೋಕ್ಷದ ವ್ಯಾಖ್ಯೆಯು ಉಳಿದ ದರ್ಶನಕ್ಕಿಂತ ಬೇರೆ ಮತ್ತು ಸ್ಪಷ್ಟ)
ಭಕ್ತಿಪಂಥದಲ್ಲಿ ಮೋಕ್ಷ
- ವಿಶಿಷ್ಟಾದ್ವೈತ ಮತ್ತು ಮೋಕ್ಷ
- ವಿಶಿಷಾದ್ವೈತದ ಪ್ರಕಾರ ವೈಕುಂಠವೆಂಬ ಅಪ್ರಾಕೃತ ಲೋಕದಲ್ಲಿ ಪರಮಾತ್ಮನಿಗೆ ಸಮನಾದ ಆನಂದವನ್ನು ಪಡೆಯುವುದೇ ಮುಕ್ತಿ. ಜೀವನು ದೇವಯಾನವೆಂಬ , ಜ್ಯೋತಿರ್ಮಾರ್ಗವನ್ನು ಹಿಡಿದು ಆನಂದಮಯವಾದ ವೈಕುಂಠವನ್ನು ಸೇರುತ್ತಾನೆ . ಸರ್ವಜ್ಞತ್ವಾದಿ ಗುಣಗಳನ್ನು ಪಡೆಯುತ್ತಾನೆ. ಕರ್ಮಸಂಬಂಧದಿಂದ ಪಾರಾಗಿ ಅಪ್ರಾಕೃತ (ದಿವ್ಯ) ದೇಹ ಪಡೆದು 'ಸಾಲೋಕ್ಯ ; ಸಾಮೀಪ್ಯ ; ಸಾರೂಪ್ಯ ; ಸಾಯುಜ್ಯ'ಗಳೆಂಬ ಮುಕ್ತಿಯನ್ನು ಪಡೆಯುತ್ತಾನೆ . ವಿಶ್ವೇಶ್ವರತ್ವ , ಜಗತ್ಕೃತ್ವ ಬಿಟ್ಟು ಉಳಿದ ಎಲ್ಲಾ ಈಶ್ವರನ-ಶಕ್ತಿ ಪಡೆಯುತ್ತಾನೆ. ಆದರೆ ಪರಮಾತ್ಮನಲ್ಲಿ ಸೇರಲಾರ ; ಅವನ ಕೈಂಕರ್ಯದಿಂದ ಆನಂದ ಪಡೆಯುತ್ತಾನೆ. ಇದನ್ನು ಪಡೆಯಲು , ಜ್ಞಾನ ಕರ್ಮ ಭಕ್ತಿ, ಮಾರ್ಗಗಳನ್ನು ಅನುಸರಿಸಬೇಕು. ಭಕ್ತಿ ಶ್ರೇಷ್ಠವಾದುದು. ಇದನ್ನು ಪಡೆಯಲು ಈಶ್ವರನ ಅನುಗ್ರಹವೂ ಬೇಕು. ಜೀವನ್ಮಕ್ತಿ ಎಂಬುದಿಲ್ಲ ; ಇದು ರಾಮಾನುಜರ ಸಿದ್ಧಾಂತ.
- ಮಾಧ್ವಮತ-ದ್ವೈತ
ಮುಂದುವರಯುವುದು / ಮುಂದುವರೆದಿದೆ.
ನೋಡಿ
ಚಾರ್ವಾಕ ದರ್ಶನ ;ಜೈನ ಧರ್ಮ- ಜೈನ ದರ್ಶನ ;ಬೌದ್ಧ ಧರ್ಮ ;ಸಾಂಖ್ಯ-ಸಾಂಖ್ಯ ದರ್ಶನ ;(ಯೋಗ)->ರಾಜಯೋಗ ;ನ್ಯಾಯ ದರ್ಶನ ;ವೈಶೇಷಿಕ ದರ್ಶನ;;ಮೀಮಾಂಸ ದರ್ಶನ - ;ವೇದಾಂತ ದರ್ಶನ / ಉತ್ತರ ಮೀಮಾಂಸಾ ;ಅದ್ವೈತ ;ಆದಿ ಶಂಕರರು ಮತ್ತು ಅದ್ವೈತ ;ವಿಶಿಷ್ಟಾದ್ವೈತ ದರ್ಶನ ;ದ್ವೈತ ದರ್ಶನ - ಮಾಧ್ವ ಸಿದ್ಧಾಂತ ;ಪಂಚ ಕೋಶ--ಶ್ರೀಮನ್ಮಹಾಭಾರತಮ್ ಮತ್ತು ದ್ವೈತ ದರ್ಶನ ;ವೀರಶೈವ;ಬಸವಣ್ಣ;ಭಾರತೀಯ ತತ್ವಶಾಸ್ತ್ರ ಸಮೀಕ್ಷೆ;ಭಗವದ್ಗೀತಾ ತಾತ್ಪರ್ಯ ;ಕರ್ಮ ಸಿದ್ಧಾಂತ ;ಗೀತೆ;.ಭಾರತೀಯ ತತ್ವಶಾಸ್ತ್ರ ಸಮೀಕ್ಷೆವೇದಗಳು--ಕರ್ಮ ಸಿದ್ಧಾಂತ--ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರುಭಾರತೀಯ ತತ್ತ್ವಶಾಸ್ತ್ರದಲ್ಲಿ ಜಗತ್ತು-ಅಸ್ತಿತ್ವ-ಸತ್ಯವೇ-ಮಿಥ್ಯವೇ -ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ-ಮೋಕ್ಷ-ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷ
ಉಲ್ಲೇಖಗಳು
- ↑ see:
- Mircea Eliade (1958, Reprinted: 2009), Yoga: Immortality and Freedom, Princeton University Press, ISBN 978-0691142036, pp 33-34;
- Sarah Strauss (2005), Positioning Yoga, Berg/Oxford International, ISBN 1-85973-739-0, pp 15
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |